Homeಕರೋನಾ ತಲ್ಲಣಹದಿಹರೆಯದವರು ವಿದ್ಯಾರ್ಥಿ ID ಬಳಸಿಕೊಂಡು ಕೊರೊನಾ ಲಸಿಕೆಗೆ ನೋಂದಾಯಿಸಬಹುದು: ಸರ್ಕಾರ

ಹದಿಹರೆಯದವರು ವಿದ್ಯಾರ್ಥಿ ID ಬಳಸಿಕೊಂಡು ಕೊರೊನಾ ಲಸಿಕೆಗೆ ನೋಂದಾಯಿಸಬಹುದು: ಸರ್ಕಾರ

- Advertisement -
- Advertisement -

ಜನವರಿ 1 ರಿಂದ ಕೊರೊನಾ ಲಸಿಕೆಯ ಮೊದಲ ಡೋಸ್‌‌ಗೆ 15-18 ವರ್ಷ ವಯಸ್ಸಿನ ಮಕ್ಕಳು ತಮ್ಮ ವಿದ್ಯಾರ್ಥಿ ಗುರುತಿನ ಚೀಟಿಯನ್ನು ಬಳಸಿಕೊಂಡು ಕೋವಿನ್‌‌ ಆಪ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಕೋವಿನ್ ಮುಖ್ಯಸ್ಥ ಡಾ.ಆರ್.ಎಸ್. ಶರ್ಮಾ ಪತ್ರಿಕಾ ಸಂಸ್ಥೆ ANI ಗೆ ಸೋಮವಾರ ತಿಳಿಸಿದ್ದಾರೆ. ಶಾಲೆಗಳು ಸಾಮಾನ್ಯ ಕಾರ್ಯಚಟುವಟಿಕೆಗೆ ಮರಳಲು ಶಾಲಾ ಮಕ್ಕಳಿಗೆ ಲಸಿಕೆಯನ್ನು ನೀಡಲು ಪ್ರಧಾನಿ ನಿರ್ಧಾರದ ತೆಗೆದುಕೊಂಡ ಹಿನ್ನಲೆಯಲ್ಲಿ ಈ ಘೋಷಣೆ ಹೊರ ಬಿದ್ದಿದೆ.

ಎಲ್ಲಾ ವಿದ್ಯಾರ್ಥಿಗಳು ಆಧಾರ್ ಹೊಂದಿರದ ಕಾರಣ ಗುರುತಿನ ಚೀಟಿಗಳು ಆದ್ಯತೆಯ ಆಯ್ಕೆಯಾಗಿದೆ ಎಂದು ಸರ್ಕಾರ ಹೇಳಿದೆ. ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಅವಕಾಶ ನೀಡಲಾಗುವುದು ಎಂದು ಪ್ರಧಾನಿ ಮೋದಿ ಶನಿವಾರ ಘೋಷಿಸಿದ್ದರು.

ಇದನ್ನೂ ಓದಿ:ಲಸಿಕೆ ಪಡೆದ ಮೂರು ತಿಂಗಳ ನಂತರ ಕೋವಿಶೀಲ್ಡ್ ರಕ್ಷಣೆ ಕ್ಷೀಣಿಸುತ್ತದೆ- ದಿ ಲ್ಯಾನ್ಸೆಟ್ ಅಧ್ಯಯನದ ವರದಿ

ಭಾರತದಲ್ಲಿನ ಮಕ್ಕಳಿಗೆ ಎರಡು ಕೊರೊನಾ ಲಸಿಕೆಗಳ ಆಯ್ಕೆಯನ್ನು ನೀಡಲಾಗುತ್ತದೆ. ಒಂದು ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ ಆಗಿದ್ದು, ಇದು ಎರಡು ಡೋಸ್‌ಗಳಲ್ಲಿ ಪಡೆಯಬೇಕಾಗುತ್ತದೆ. ಇನ್ನೊಂದು ಝೈಡಸ್ ಕ್ಯಾಡಿಲಾದ ‘ಝಿಕೋವ್‌ ಡಿ’(ZyCoV-D) ಆಗಿದ್ದು ಇದು ಮೂರು ಡೋಸ್‌ಗಳನ್ನು ಒಳಗೊಂಡಿದೆ. ಇವೆರಡನ್ನೂ 12 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅನುಮತಿಸಲಾಗಿದೆ. ZyCov-D ಅನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, DNA ಆಧಾರಿತವಾಗಿ ತಯಾರಿಸಲಾದ ಪ್ರಪಂಚದ ಮೊದಲನೆಯ ಲಸಿಕೆಯಾಗಿದೆ. ಜೊತೆಗೆ ಸೂಜಿ ಇಲ್ಲದ ಕೊರೊನಾ ಲಸಿಕೆಯಾಗಿದ್ದು, ಅದರ ಮೂರು ಡೋಸ್‌ಗಳನ್ನು 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗುತ್ತದೆ.

ಸೀರಮ್ ಇನ್ಸ್ಟಿಟ್ಯೂಟ್‌ನ ‘ನೊವೊವಾಕ್ಸ್’ ಮತ್ತು ಬಯೋಲಾಜಿಕಲ್‌‌ಇ ನ ‘ಕಾರ್ಬೆವಾಕ್ಸ್’ ಲಸಿಕೆಗಳು ಕೂಡಾ ಮಕ್ಕಳಿಗಾಗಿ ತಯಾರಿಸಲಾಗಿದ್ದು, ಆದರೂ ಅವುಗಳು ಇನ್ನೂ ಅನುಮೋದನೆಯನ್ನು ಪಡೆದಿಲ್ಲ. ಪ್ರಸ್ತುತ, ನೋವಾವಾಕ್ಸ್‌‌ 11 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಕ್ಕಳ ಮೇಲೆ ಪ್ರಯೋಗಗಳನ್ನು ನಡೆಸುತ್ತಿದೆ ಆದರೆ ಕಾರ್ಬೆವಾಕ್ಸ್‌‌ ಅನ್ನು 5 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಕ್ಕಳನ್ನು ಒಳಗೊಂಡ ಪ್ರಯೋಗಗಳಿಗೆ ಅನುಮತಿ ನೀಡಲಾಗಿದೆ.

ದೇಶದಲ್ಲಿ 141.7 ಕೋಟಿ ಲಸಿಕೆಗಳನ್ನು ನೀಡಲಾಗಿದ್ದು, ಸರಿಸುಮಾರು 58 ಕೋಟಿ ಜನರು ಮಾತ್ರ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ಪ್ರಶ್ನಿಸಿದ್ದ ಅರ್ಜಿ ವಜಾ; 1 ಲಕ್ಷ ರೂ. ದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...