Homeಕರೋನಾ ತಲ್ಲಣಹದಿಹರೆಯದವರು ವಿದ್ಯಾರ್ಥಿ ID ಬಳಸಿಕೊಂಡು ಕೊರೊನಾ ಲಸಿಕೆಗೆ ನೋಂದಾಯಿಸಬಹುದು: ಸರ್ಕಾರ

ಹದಿಹರೆಯದವರು ವಿದ್ಯಾರ್ಥಿ ID ಬಳಸಿಕೊಂಡು ಕೊರೊನಾ ಲಸಿಕೆಗೆ ನೋಂದಾಯಿಸಬಹುದು: ಸರ್ಕಾರ

- Advertisement -
- Advertisement -

ಜನವರಿ 1 ರಿಂದ ಕೊರೊನಾ ಲಸಿಕೆಯ ಮೊದಲ ಡೋಸ್‌‌ಗೆ 15-18 ವರ್ಷ ವಯಸ್ಸಿನ ಮಕ್ಕಳು ತಮ್ಮ ವಿದ್ಯಾರ್ಥಿ ಗುರುತಿನ ಚೀಟಿಯನ್ನು ಬಳಸಿಕೊಂಡು ಕೋವಿನ್‌‌ ಆಪ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಕೋವಿನ್ ಮುಖ್ಯಸ್ಥ ಡಾ.ಆರ್.ಎಸ್. ಶರ್ಮಾ ಪತ್ರಿಕಾ ಸಂಸ್ಥೆ ANI ಗೆ ಸೋಮವಾರ ತಿಳಿಸಿದ್ದಾರೆ. ಶಾಲೆಗಳು ಸಾಮಾನ್ಯ ಕಾರ್ಯಚಟುವಟಿಕೆಗೆ ಮರಳಲು ಶಾಲಾ ಮಕ್ಕಳಿಗೆ ಲಸಿಕೆಯನ್ನು ನೀಡಲು ಪ್ರಧಾನಿ ನಿರ್ಧಾರದ ತೆಗೆದುಕೊಂಡ ಹಿನ್ನಲೆಯಲ್ಲಿ ಈ ಘೋಷಣೆ ಹೊರ ಬಿದ್ದಿದೆ.

ಎಲ್ಲಾ ವಿದ್ಯಾರ್ಥಿಗಳು ಆಧಾರ್ ಹೊಂದಿರದ ಕಾರಣ ಗುರುತಿನ ಚೀಟಿಗಳು ಆದ್ಯತೆಯ ಆಯ್ಕೆಯಾಗಿದೆ ಎಂದು ಸರ್ಕಾರ ಹೇಳಿದೆ. ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಅವಕಾಶ ನೀಡಲಾಗುವುದು ಎಂದು ಪ್ರಧಾನಿ ಮೋದಿ ಶನಿವಾರ ಘೋಷಿಸಿದ್ದರು.

ಇದನ್ನೂ ಓದಿ:ಲಸಿಕೆ ಪಡೆದ ಮೂರು ತಿಂಗಳ ನಂತರ ಕೋವಿಶೀಲ್ಡ್ ರಕ್ಷಣೆ ಕ್ಷೀಣಿಸುತ್ತದೆ- ದಿ ಲ್ಯಾನ್ಸೆಟ್ ಅಧ್ಯಯನದ ವರದಿ

ಭಾರತದಲ್ಲಿನ ಮಕ್ಕಳಿಗೆ ಎರಡು ಕೊರೊನಾ ಲಸಿಕೆಗಳ ಆಯ್ಕೆಯನ್ನು ನೀಡಲಾಗುತ್ತದೆ. ಒಂದು ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ ಆಗಿದ್ದು, ಇದು ಎರಡು ಡೋಸ್‌ಗಳಲ್ಲಿ ಪಡೆಯಬೇಕಾಗುತ್ತದೆ. ಇನ್ನೊಂದು ಝೈಡಸ್ ಕ್ಯಾಡಿಲಾದ ‘ಝಿಕೋವ್‌ ಡಿ’(ZyCoV-D) ಆಗಿದ್ದು ಇದು ಮೂರು ಡೋಸ್‌ಗಳನ್ನು ಒಳಗೊಂಡಿದೆ. ಇವೆರಡನ್ನೂ 12 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅನುಮತಿಸಲಾಗಿದೆ. ZyCov-D ಅನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, DNA ಆಧಾರಿತವಾಗಿ ತಯಾರಿಸಲಾದ ಪ್ರಪಂಚದ ಮೊದಲನೆಯ ಲಸಿಕೆಯಾಗಿದೆ. ಜೊತೆಗೆ ಸೂಜಿ ಇಲ್ಲದ ಕೊರೊನಾ ಲಸಿಕೆಯಾಗಿದ್ದು, ಅದರ ಮೂರು ಡೋಸ್‌ಗಳನ್ನು 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗುತ್ತದೆ.

ಸೀರಮ್ ಇನ್ಸ್ಟಿಟ್ಯೂಟ್‌ನ ‘ನೊವೊವಾಕ್ಸ್’ ಮತ್ತು ಬಯೋಲಾಜಿಕಲ್‌‌ಇ ನ ‘ಕಾರ್ಬೆವಾಕ್ಸ್’ ಲಸಿಕೆಗಳು ಕೂಡಾ ಮಕ್ಕಳಿಗಾಗಿ ತಯಾರಿಸಲಾಗಿದ್ದು, ಆದರೂ ಅವುಗಳು ಇನ್ನೂ ಅನುಮೋದನೆಯನ್ನು ಪಡೆದಿಲ್ಲ. ಪ್ರಸ್ತುತ, ನೋವಾವಾಕ್ಸ್‌‌ 11 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಕ್ಕಳ ಮೇಲೆ ಪ್ರಯೋಗಗಳನ್ನು ನಡೆಸುತ್ತಿದೆ ಆದರೆ ಕಾರ್ಬೆವಾಕ್ಸ್‌‌ ಅನ್ನು 5 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಕ್ಕಳನ್ನು ಒಳಗೊಂಡ ಪ್ರಯೋಗಗಳಿಗೆ ಅನುಮತಿ ನೀಡಲಾಗಿದೆ.

ದೇಶದಲ್ಲಿ 141.7 ಕೋಟಿ ಲಸಿಕೆಗಳನ್ನು ನೀಡಲಾಗಿದ್ದು, ಸರಿಸುಮಾರು 58 ಕೋಟಿ ಜನರು ಮಾತ್ರ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ಪ್ರಶ್ನಿಸಿದ್ದ ಅರ್ಜಿ ವಜಾ; 1 ಲಕ್ಷ ರೂ. ದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...