Homeಮುಖಪುಟಹರ್ಯಾಣ ವಿಧಾನಸಭಾ ಚುನಾವಣೆ ಗೆಲುವಿಗಾಗಿ ಕಾಂಗ್ರೆಸ್ ತಂತ್ರ: ಜನತೆಗೆ ಭರಪೂರ ಭರವಸೆ

ಹರ್ಯಾಣ ವಿಧಾನಸಭಾ ಚುನಾವಣೆ ಗೆಲುವಿಗಾಗಿ ಕಾಂಗ್ರೆಸ್ ತಂತ್ರ: ಜನತೆಗೆ ಭರಪೂರ ಭರವಸೆ

- Advertisement -
- Advertisement -

ಹರ್ಯಾಣ ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಮತದಾರರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದೆ. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಹೀಗೆ ಭರವಸೆಗಳ ಮೇಲೆ ಭರವಸೆ ನೀಡಿದ್ದು ಪಕ್ಷ ಗೆಲುವು ಸಾಧಿಸಲು ನೂತನ ತಂತ್ರಗಳನ್ನು ಹೆಣೆದಿದೆ.

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಖಾಸಗೀ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದು, ಹರ್ಯಾಣ ರಾಜ್ಯಾದ್ಯಂತ ಸರ್ಕಾರಿ ಬಸ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದೆ.

ಸ್ಥಳೀಯ ಸಂಸ್ಥೆಗಳಾದ ಪಂಚಾಯತ್ ರಾಜ್, ಮುನಿಸಿಪಲ್ ಕಾರ್ಪೋರೇಷನ್, ಸಿಟಿ ಕೌನ್ಸಿಲ್ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ, ರಾಜ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಿರುದ್ಯೋಗಿಗಳಾಗಿರುವವರಿಗೆ ಪ್ರತಿ ತಿಂಗಳು 12 ಸಾವಿರ, ನಿರುದ್ಯೋಗಿ ಪದವೀಧರರಿಗೆ 7 ಸಾವಿರ ನಿರುದ್ಯೋಗ ಭತ್ಯೆ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಹರ್ಯಾಣ ಉಸ್ತುವಾರಿ ಗುಲಾಂ ನಬೀ ಅಜಾದ್, ಹರ್ಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜಾ, ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಹೂಡಾ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ರೈತರ ಎಲ್ಲಾ ರೀತಿಯ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬರ ಅಥವಾ ಪ್ರಕೃತಿ ವಿಕೋಪ ಬಂದೆರಗಿ ಬೆಳೆ ಹಾನಿಯಾದರೆ ಪ್ರತಿ ಎಕರೆಗೆ 12 ಸಾವಿರ ರೂಪಾಯಿ ಬೆಳೆ ನಷ್ಟ ಪರಿಹಾರ ನೀಡುವುದಾಗಿ ಹೇಳಿದ್ದು, ನಮ್ಮ ಸರ್ಕಾರ ರೈತರ ನೆರವಿಗೆ ಸದಾ ಸಿದ್ಧ ಎಂಬುದಾಗಿ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಹೂಡಾ ಮಾತನಾಡಿ, ಎರಡು ಎಕರೆ ನೀರಾವರಿ ಭೂಮಿ ಹೊಂದಿರುವ ಪ್ರತಿಯೊಬ್ಬ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು. ವಿದ್ಯುತ್ ಗಾಗಿ ಯಾವುದೇ ಶುಲ್ಕ ವಿಧಿಸುವುದಿಲ್ಲ. ದೆಹಲಿಯ ಆಮ್ ಆದ್ಮಿ ಪಕ್ಷ ಇತ್ತೀಚೆಗಷ್ಟೇ ಮಹಿಳೆಯರಿಗೆ ಮೆಟ್ರೋ ರೈಲು ಮತ್ತು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಈಗ ಇದೇ ಮಾದರಿಯನ್ನೂ ಕಾಂಗ್ರೆಸ್ ಸರ್ಕಾರ ಹರ್ಯಾಣ ರಾಜ್ಯದಲ್ಲಿ ಅನುಸರಿಸಲಿದೆ ಎಂದರು.

ಹರ್ಯಾಣದ ಹಾಲಿ ಮುಖ್ಯಮಂತ್ರಿ ಇತ್ತೀಚೆಗಷ್ಟೇ ರೈತರ 4,700 ಕೋಟಿ ರೂಪಾಯಿ ಮನ್ನಾ ಮಾಡುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇದೆಲ್ಲವನ್ನೂ ನೋಡಿದರೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಅನುಸರಿಸುತ್ತಿರುವ ನೀತಿ ಅನುಷ್ಠಾನಕ್ಕೆ ಬರಬೇಕಾಗಿದೆ. ಇಲ್ಲದಿದ್ದರೆ ಯಾವ ಭರವಸೆಗಳು ಜನರ ಕೈಹಿಡಿಯುವುದಿಲ್ಲ ಎಂಬುದಂತು ದಿಟ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...