Homeಸಿನಿಮಾಸಿನಿ ಸುದ್ದಿಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

ಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

- Advertisement -
- Advertisement -

ರಂಗಿತರಂಗ, ಕಳೆದ ವರ್ಷದ ಅತ್ಯದ್ಭುತ ಸಿನಿಮಾಗಳಲ್ಲಿ ಒಂದು. ಆ ತಂಡದ ಮೇಲೆ ಭರವಸೆಯನ್ನೂ ಹೆಚ್ಚಿಸಿದ್ದ ಸಿನಿಮಾ ಅದು. ಆದರೀಗ ರೇಡಿಯೋ ಆಂಕರಮ್ಮ ಮಾಡಿದ ಯಡವಟ್ಟಿಗೆ ಇಡೀ ತಂಡ ತಮ್ಮ ಪ್ರತಿಭೆಯ ಕ್ವಾಲಿಟಿಗೆ ಮಸಿ ಬಳಿಸಿಕೊಂಡು ಮರುಗುತ್ತಿದೆ. ಆಕ್ಚುಯಲಿ ಏನಾಗಿದೆ ಅಂದ್ರೆ, ಮೊನ್ನೆ ಈ ತಂಡದ ಹೊಸ ಸಿನಿಮಾ ರಾಜರಥಾ ಬಿಡುಗಡೆಯಾಗಿತ್ತು. ಸಿನಿಮಾದ ಪ್ರಚಾರಕ್ಕೆಂದು ರಪರಪ ರ್ಯಾಪಿಡಮ್ಮ ಅರ್ಥಾತ್ ರ್ಯಾಪಿಡ್ ರಶುಮಮ್ಮನ ರೇಡಿಯೋ ಶೋನಲ್ಲಿ ತಂಡ ಕೂತಿತ್ತು. ಉಸಿರು ಬಿಗಿಹಿಡಿದಂತೆ ಒಂದೇಸಮನೆ ಮಾತಾಡೋದು ಬಿಟ್ಟು ತಮಗೊಂದು ಸೆನ್ಸಿಬಲ್ ಹೊಣೆ ಇದೆ ಅನ್ನೋದನ್ನೇ ಮರೆತ ಆ್ಯಂಕರ್ ಪರಂಪರೆಯ ರ್ಯಾಪಿಡ್ ರಶ್ಮಿ `ನಿಮ್ಮ ರಾಜರಥಾ ಸಿನಿಮಾವನ್ನು ನೋಡದಿರೋ ಪ್ರೇಕ್ಷಕರನ್ನು ನೀವು ಏನಂತ ಕರೀತೀರಾ?’ ಅನ್ನೋ ಅಸಂಬಂದ್ಧ ಪ್ರಶ್ನೆ ಎಸೆದಿದ್ದಳು. ಒಂದು ಸಿನಿಮಾ ರಿಲೀಸ್ ಆಯ್ತು ಅಂದ್ರೆ ಅದನ್ನು ಎಲ್ಲರು ನೋಡ್ಲೇಬೇಕಾ, ಹಾಗೊಮ್ಮೆ ನೋಡದೆ ಇದ್ರೆ ಅವರಲ್ಲಿ ಏನೊ ಡಿಫೆಕ್ಟ್ ಇದೆ ಅಂತ ಅಂದ್ಕೋಬೇಕಾ… ವಿಚಿತ್ರವಾಗಿದೆ ಆಯಮ್ಮನ ವಾದ. ಹೋಗ್ಲಿ, ಚಿತ್ರತಂಡವಾದರು ಈ ಪ್ರಶ್ನೆಯ ಅಸಂಬದ್ಧತೆಯನ್ನ ಅರ್ಥ ಮಾಡಿಕೊಂಡು ಆಂಕಂರಮ್ಮನನ್ನ ತಿದ್ದಬಹುದಿತ್ತು. ಅದರ ಬದಲಿಗೆ `ಈ ಸಿನಿಮಾ ನೋಡ್ದೇ ಇರೋರು ಕಚಡಾ ನನ್ಮಕ್ಕಳು’ ಅಂದುಬಿಡೋದಾ?.

ಆ ಒಂದು ಹೇಳಿಕೆ ಹೊಸಬರ ತಂಡದ ಮೇಲಿದ್ದ ಸಭ್ಯತೆಯ ನಿರೀಕ್ಷೆಗಳನ್ನೆಲ್ಲ ಧ್ವಂಸ ಮಾಡಿದ್ದಲ್ಲದೆ, ಹೈಗ್ರೌಂಡ್ಸ್ ಪೊಲೀಸ್ ಸ್ಟೇಷನ್‍ನಲ್ಲಿ ಪುಕ್ಕಟೆ ಕೇಸ್ ಕೂಡಾ ಅವರ ಹೆಗಲೇರುವಂತೆ ಮಾಡಿದೆ. ಅದೊಂದು ವಿವಾದವಾಗಿ ಬೆಳೆದದ್ದು, ಸಾರಾ ಗೋವಿಂದು ರಾಜಿಪಂಚಾಯ್ತಿಯಲ್ಲಿ ಅವರೆಲ್ಲ `ಸೋ, ಸಾರಿ ಪ್ರೇಕ್ಷಕರೇ’ ಅಂತ ಅವಲತ್ತುಕೊಂಡದ್ದು, ಇವೆಲ್ಲ ಸುದ್ದಿಗಳಾಗಿ ರಾರಾಜಿಸಿದವು. ಆದ್ರೆ ಈ ಆಂಕರ್‍ಗಳ ಐಲುತನದ ಬಗ್ಗೆ ಹೆಚ್ಚು ಚರ್ಚೆಯೇ ಹುಟ್ಟಿಕೊಳ್ಳಲಿಲ್ಲ. ಅದೇ ದುರಂತದ ಸಂಗತಿ. ನಿರೂಪಣೆ ತನ್ನ ಸೊಗಸು ಕಳಕೊಂಡು ಅದ್ಯಾವ ಘಳಿಗೆಯಲ್ಲಿ ಆಂಕರಿಂಗ್‍ನ ಅರೆಬೆಂದ ರೂಪ ಪಡೆಯಿತೋ ಆಗಿನಿಂದ ಅವರ ಅಧ್ವಾನಗಳನ್ನು ನೋಡಲಾಗುತ್ತಿಲ್ಲ. ಇತ್ತೀಚೆಗೆ ಈ ಆಂಕರ್‍ಗಳಿಗೆ ಸ್ಟಾರ್‍ಗಿರಿಯ ಭ್ರಮೆಯೂ ಶುರುವಾಗಿದ್ದು ಅವರ ಅವತಾರಗಳಿಗೆ ಲಂಗು ಲಗಾಮೇ ಇಲ್ಲದಂತಾಗಿದೆ. ಆಂಕರ್‍ಗಳ ಇಂಥಾ ಅಸಂಬಂದ್ಧ ಐಲಾಟ ಇದೇ ಮೊದಲೇನಲ್ಲ. ಯುವನಟಿ ರಶ್ಮಿಕಾ ಮಂದಣ್ಣಗೆ `ಕನ್ನಡದಲ್ಲಿ ಶೋ ಆಫ್ ನಟ ಅಂತ ನೀವು ಯಾರನ್ನ ಕರೀತಿರಿ?’ ಅನ್ನೋ ಪ್ರಶ್ನೆ ಹಾಕಿದ್ದ ಆಂಕರ್, ಆಕೆಗೆ ಇಷ್ಟವಿಲ್ಲದಿದ್ದರೂ ಒತ್ತಾಯಿಸಿ `ಯಶ್’ ಎಂಬ ಉತ್ತರ ಹೊರಬರುವಂತೆ ಮಾಡಿದ್ದ. ಪಾಪಾ, ಆಕೆ ಆಮೇಲೆ ಹಲವರ ವಿರೋಧ ಎದುರಿಸಬೇಕಾಯ್ತು. ಅದೇರೀತಿ ಆ್ಯಂಕರಿಂಗ್ ದೊರೆ ಬಿಗ್‍ಬಾಸ್ ಸಂಜನಾಗೆ `ನಿಮ್ಮ ಪ್ರಕಾರ ‘ಬಿಲ್ಡಪ್’ ನಟ ಯಾರು?’ ಅಂತ ಕೇಳಿ, ಅವಳ ಬಾಯಿಂದ ದರ್ಶನ್ ಹೆಸರು ಹೊರಬರುವಂತೆ ಮಾಡಿದ್ದ. ಅದೂ ವಿವಾದವಾಗಿತ್ತು. ಇಂಥಾ ಅದೆಷ್ಟೊ ನಿದರ್ಶನಗಳು ಸಿಗುತ್ತವೆ.

ವಿವಾದ ಸೃಷ್ಟಿಸೋದು, ಮತ್ತೊಬ್ಬರನ್ನು ಹೀಗಳೆಯೋದೇ ಆ್ಯಂಕರಿಂಗ್ ಅಂದುಕೊಂಡಿರೋ ಇವರಿಗೆ ನಿರೂಪಣೆಯ ವ್ಯಾಕರಣ ಅರ್ಥವಾಗೋದು ಕಷ್ಟ. ಆದ್ರೆ, ಕಡೇಪಕ್ಷ ತಾವಾಡುವ ಮಾತುಗಳಲ್ಲಿ ಒಂದಷ್ಟು ಕಾಮನ್‍ಸೆನ್ಸ್ ಇರಬೇಕು ಅನ್ನೋ ಪ್ರಜ್ಞೇನಾದ್ರು ಇವರು ಬೆಳೆಸಿಕೊಳ್ಳಬೇಕಿದೆ. ಅಂದಹಾಗೆ, ಇದೆಲ್ಲಾ ನಮ್ಮ ಎಂಟರ್‍ಟೈನ್‍ಮೆಂಟ್ ಚಾನೆಲ್ ಆ್ಯಂಕರ್‍ಗಳ ಐಲಾಟವಾಯ್ತು. ಇನ್ನು ನ್ಯೂಸ್ ಚಾನೆಲ್ ಆ್ಯಂಕರ್‍ಗಳ ಐಲಾಟಕ್ಕೆ ಹೋದ್ರೆ, ಬೆಂಗ್ಳೂರಲ್ಲಿ ಪ್ರಳಯವೇ ಆಗ್ಬಿಡುತ್ತೆ. ಬೇಡ ಬಿಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...