Homeಸಿನಿಮಾಸಿನಿ ಸುದ್ದಿಹಲೋ ಐ ಆಮ್ ಅಂಬಿ

ಹಲೋ ಐ ಆಮ್ ಅಂಬಿ

- Advertisement -
- Advertisement -

ಸಂಗ್ರಹ ನಿರೂಪಣೆ: ಗಿರೀಶ್ ತಾಳಿಕಟ್ಟೆ |

ಇತ್ತೀಚೆಗೆ ನಿಧನರಾದ ಅಂಬರೀಷ್‍ರು ತಮ್ಮ ಬದುಕಿನ ಕುರಿತು ತಾವೇ ಆಪ್ತರ ಬಳಿ ಹೇಳಿಕೊಂಡಿದ್ದ ಕೆಲ ಸ್ವಾರಸ್ಯ ಘಟನೆಗಳ ಮೆಲುಕು ಇಲ್ಲಿದೆ.

 

ಬಾಡಿಗೆ ಅಣ್ಣ, ಬಾಯ್ತುಂಬ ಬೈಗುಳ

“ನಾನು ಪಿಯುಸಿ ಓದಿದ್ದು ಮೈಸೂರಿನ ಶಾರದಾ ವಿಲಾಸ ಕಾಲೇಜಿನಲ್ಲಿ. ಕಾಲೇಜಿನ ಪ್ರಿನ್ಸಿಪಾಲ್ ನಾರಾಯಣ ರಾವ್ ಅಂತ. ಬಲು ಸ್ಟ್ರಿಕ್ಟ್ ಮನುಷ್ಯ. ಒಮ್ಮೆ ತಪ್ಪು ಮಾಡಿದ ಅಂತ ತಮ್ಮ ಮಗನನ್ನೇ ಕಾಲೇಜಿಂದ ಸಸ್ಪೆಂಡು ಮಾಡಿಬಿಟ್ಟಿದ್ದ್ರು. ಅಂತಾ ಆಸಾಮಿ. ಎಸ್ಸೆಲ್ಸಿವರೆಗೂ ನಂ.1 ಸ್ಟೂಡೆಂಟಾಗಿದ್ದ ನಾನು ಪಿಯುಸಿನಲ್ಲಿ ಫಸ್ಟ್ ಟೈಮು ಕೆಮಿಸ್ಟ್ರಿ ಸಬ್ಜೆಕ್ಟ್‍ನಲ್ಲಿ ಫೇಲಾಗ್ಬಿಟ್ಟೆ. ತಕೋಳ್ಳಿ, ಆ ಪ್ರಿನ್ಸಿಪಾಲು ಅಪ್ಪನಿಗೆ ಲೆಟರು ಬರೆದುಬಿಟ್ರು. ಅಪ್ಪನಿಗೆ ವಿಷಯ ಗೊತ್ತಾದ್ರೆ, ನನ್ನ ಕಥೆ ಅಷ್ಟೇ ಅಂತ, ದಿನಾ ಬೆಳಿಗ್ಗೆ ಮನೆ ಮುಂದೆ ಪೋಸ್ಟ್‍ಮ್ಯಾನಿಗೋಸ್ಕರ ಕಾಯ್ಕೊಂಡು ನಿಂತ್ಕಂತಿದ್ದೆ. ಒಂದು ದಿನ ಆ ಲೆಟ್ರು ಬಂತು. ಅದುನ್ನ ನಾನೇ ಈಸ್ಕೊಂಡು ಹರಿದು ಹಾಕ್ಬುಟ್ಟೆ. ಅಲ್ಲಿಗೆ ಪ್ರಾಬ್ಲಂ ಸಾಲ್ವ್ ಆಯ್ತು ಅಂದ್ಕಂಡೆ. ಆದ್ರೆ ಒಂದಿನ ಇದ್ದುಕ್ಕಿದ್ದಂಗೆ ಪ್ರಿನ್ಸಿಪಾಲು ನನ್ನನ್ನು ಕರೆಯೋಕ್ಕೆ ಕಳ್ಸಿದ್ರು. ಅವರ ಚೇಂಬರಿಗೆ ಹೋಗ್ತಿದ್ದಂಗೆ, `ಯಾಕೋ ಲೆಟರ್ ಹರಿದು ಹಾಕ್ದೆ? ನಿಮ್ಮಪ್ಪನಿಗೆ ಯಾಕೆ ತೋರಿಸ್ಲಿಲ್ಲ?’ ಅಂತ ಕೇಳಿಬುಟ್ರು. ನನಿಗೆ ಶಾಕ್. ಇವರಿಗೆ ಹೆಂಗೆ ಗೊತ್ತಾಯ್ತು ಅಂತ. `ನಾಳೆ ನಿಮ್ಮಪ್ಪುನ್ನೇ ಕರ್ಕೊಂಡು ಬಾ’ ಅಂತ ಹೇಳಿದ್ರು. ನನ್ನ ಕೈಕಾಲೆಲ್ಲ ಗಡಗಡ ನಡುಗೋಕ್ಕೆ ಶುರುವಾದ್ವು. ಕೊನೆಗೆ ನನ್ನ ಫ್ರೆಂಡ್ಸ್ ಬಡ್ಡಿಮಕ್ಕಳು ಒಂದು ಐಡಿಯಾ ಕೊಟ್ರು. ನನ್ನ ಅಣ್ಣನ ಹೈಟು, ಪರ್ಸನಾಲ್ಟಿ ಇರೋ ಒಬ್ಬ ಬಾಡಿಗೆ ಅಣ್ಣನನ್ನು ರೆಡಿ ಮಾಡಿಕೊಂಡು ಮಾರನೇ ದಿನ ಪ್ರಿನ್ಸಿಯ ಬಳಿ ಕರೆದೊಯ್ದೆ. ಅವನು ನಿಜಕ್ಕೂ ನನ್ನ ಅಣ್ಣನೆಂದೇ ನಂಬಿದ ಅವರು ನನ್ನನ್ನು ಚೆನ್ನಾಗಿಯೇ ಬಯ್ದರು. ಸಿಕ್ಕಿದ್ದೇ ಚಾನ್ಸು ಅಂತ ನನ್ನ ಬಾಡಿಗೆ ಅಣ್ಣನೂ, `ನೋಡಿ ಸಾ, ಅಪ್ಪ ಇವುನನ್ನ ಡಾಕ್ಟ್ರು ಮಾಡ್ಬೇಕು ಅಂತ ಆಸೆ ಇಟ್ಟುಗೊಂಡವುರೆ. ಇವನು ಹಿಂಗೆ ಪೋಲಿ ಬಿದ್ದವುನೆ’ ಅಂತ ಬಯ್ದ. ಅವನ ರೇಗಾಟ ಕಂಡು ಪ್ರಾಂಶುಪಾಲರಿಗೇ ಅಯ್ಯೋ ಪಾಪಾ ಅನ್ನಿಸಿ, `ಪರವಾಗಿಲ್ಲ ಬಿಡಿ. ನಿಮ್ಮ ತಂದೆಯವರಿಗೆ ಇದನ್ನು ತಿಳಿಸಿ ಅವರನ್ನು ಕರೆದುಕೊಂಡು ಬರೋದೇನೂ ಬೇಡ. ಆದ್ರೆ ಇನ್ಮುಂದೆ ಇವನ ಮೇಲೆ ಗಮನ ಇರಿಸಿ’ ಅಂತ ಹೇಳಿದ್ರು. ನಾನು ತಲೆ ತಗ್ಗಿಸಿಕೊಂಡೇ ನಿಂತಿದ್ದೆ. ಯಾಕಂದ್ರೆ, ತಲೆ ಎತ್ತಿ ಪ್ರಿನ್ಸಿಯ ಮುಖವನ್ನೇನಾದರು ನೋಡಿದ್ದರೆ, ನನಗೆ ನಗು ತಡೆದುಕೊಳ್ಳಲಾಗುತ್ತಿರಲಿಲ್ಲ”

ಸೆಕೆಂಡ್ ಹ್ಯಾಂಡ್ ಕಾರು ಯಾಮಾರಿಸಿದ್ದು

“ನನಿಗೆ ಕಾರು ತಗೋಬೇಕು ಅನ್ನೋ ಹುಚ್ಚಿತ್ತು. ಅಪ್ಪನ್ನ ಕೇಳಿದೆ. ಅದುಕ್ಕವುರು `ಕಾರು ಕೊಡ್ಸಿದ್ರೆ, ಆಮೇಲೆ ಪೆಟ್ರೋಲಿಗೂ ನನ್ನಾತ್ರನೇ ಕಾಸು ಕೇಳ್ತೀಯಾ. ಸುಮ್ಕಿರು ಮಾರಾಯಾ’ ಅಂತ ರೇಗಿದ್ರು. ಆದ್ರೆ ನಾನು ಹಠ ಬಿಡ್ಲಿಲ್ಲ. ಕೊನೆಗೆ `ಸರಿ ಒಂದು ಸೆಕೆಂಡ್ ಹ್ಯಾಂಡ್ ಕೊಡುಸ್ತೀನಿ. ಎಲ್ಲಾದ್ರು ಇದ್ದ್ರೆ ನೋಡು’ ಅಂತಂದ್ರು. ಸಿಕ್ಕಿದ್ದೇ ಚಾನ್ಸು ಅಂತ, ಕಾರು ಹುಡಿಕ್ಕ್ಯಂಡು ಮದ್ರಾಸಿಗೆ ಹೋಗಿ ಐದು ಸಾವಿರ ಖರ್ಚು ಮಾಡಿಬಂದೆ. ಆ ಕಾಲಕ್ಕೆ ಬರೀ ಕಾರು ಹುಡುಕೋಕ್ಕೇ ಐದು ಸಾವುರ ಖರ್ಚು ಮಾಡಿವ್ನಿ ಅಂದ್ರೆ ಬಡ್ಡೇತದು ನನ್ನ ಶೋಕಿ ಅದಿನ್ನೆಂತದ್ದಿರಬೇಡ ನೋಡಿ. ಕೊನೆಗೆ ನಮ್ಮ ಪರಿಚಯಸ್ತ ಡಾಕ್ಟ್ರು ಒಬ್ಬ್ರು ತಮ್ಮ ಫಿಯೆಟ್ ಕಾರು ಮಾರ್ತಾರೆ ಅನ್ನೋ ವಿಚಾರ ಗೊತ್ತಾಯ್ತು. ಹೋಗಿ ಕೇಳಿದೆ. `ಇದು ನನ್ನ ಹೆಂಡ್ತಿ ಗಿಫ್ಟ್ ಕೊಟ್ಟಿದ್ದು, ಅಲ್ಲದೇ ನನ್ನ ಮಗನಿಗೂ ಈ ಕಾರು ಅಂದ್ರೆ ತುಂಬಾ ಇಷ್ಟ. ಹಾಗಾಗಿ ಮೈಸೂರಿನಲ್ಲಿ ಇರೋರಿಗೆ ಮಾರಲ್ಲ. ಬೇರೆ ಊರಿನವರಿಗೆ ಮಾತ್ರ ಮಾರೋದು’ ಅಂದುಬಿಟ್ಟ್ರು. ಒಂದ್ ಸ್ವಲ್ಪ ದಿನ ಸುಮ್ಕಿದ್ದೆ. ಮತ್ತೆ ಅವುರತ್ರ ಹೋಗಿ `ಬೆಂಗಳೂರಿನಲ್ಲಿರೋ ವೀರಾಸ್ವಾಮಿಯವುರಿಗೆ ಬೇಕಂತೆ ಕೊಡ್ತೀರಾ’ ಅಂತ ಕೇಳಿದೆ. ಒಪ್ಕೊಂಡು ಒಂದು ಲಕ್ಷಕ್ಕೆ ವ್ಯಾಪಾರನೂ ಮುಗೀತು. ನಾನೇ ಕಾರನ್ನ ತಕೊಂಡು ಬೆಂಗಳೂರಿನ ಕೆಸಿಎನ್ ಚಂದ್ರು ಮನೇಲ್ಲಿ ಸ್ವಲ್ಪ ದಿನ ಬಿಟ್ಟಿದ್ದೆ. ಒಂದು ತಿಂಗಳಾದ ಮೇಲೆ ವಾಪಾಸು ಮೈಸೂರಿಗೆ ತಗೊಂಡೋಗಿ `ಸಾರ್ ಅವುರಿಗ್ಯಾಕೋ ಕಾರಿನ ರೇಟು ಜಾಸ್ತಿ ಆಯ್ತಂತೆ. ಅದುಕ್ಕೆ ಬೇಡ ಅಂತಿದಾರೆ. ನೀವು ವಾಪಾಸ್ ತಗೊಂಡು ಅವುರ ದುಡ್ಡು ಕೊಡ್ಬೇಕಂತೆ’ ಅಂದೆ. ಆದ್ರೆ ಅವರು ವಾಪಾಸ್ ತಗೋಳಕ್ಕೆ ಒಪ್ಪಲಿಲ್ಲ. ಆಗ `ಸರಿ, ನಿಮಗೆ ದುಡ್ಡು ಕೊಡೋಕೆ ಆಗಲ್ಲ ಅನ್ನೋದಾದ್ರೆ, ಈ ಕಾರನ್ನ ನಾನೇ ಇಟ್ಕೊಂಡು, ಅವುರಿಗೆ ನಾನೇ ದುಡ್ಡು ಕೊಡ್ತೀನಿ ಬಿಡಿ’ ಅಂದೆ. ಒಪ್ಕೊಂಡ್ರು. ಹೀಗೆ ಅವುರಿಗೆ ಯಾಮಾರಿಸಿ ನನ್ನ ಆಸೆ ಪಟ್ಟಿದ್ದ ಕಾರು ಕೊಂಡ್ಕೊಂಡೆ ಕಣ್ರೀ”

ರಾಜಣ್ಣನ ನಮಸ್ಕಾರ, ಅಮ್ಮನ ಬೈಗುಳ

“1975ರಲ್ಲಿ `ದೇವರ ಕಣ್ಣು’ ಸಿನಿಮಾಗಾಗಿ ನನಿಗೆ ಅತ್ಯುತ್ತಮ ಖಳನಟನ ಪ್ರಶಸ್ತಿ ಬಂತು. ಅಮ್ಮನೂ ನೋಡಿ ಖುಷಿಪಡ್ಲಿ ಅಂತ ಟೌನ್‍ಹಾಲ್‍ನ ಕಾರ್ಯಕ್ರಮಕ್ಕೆ ಆಕೆಯನ್ನೂ ಕರೆದೊಯ್ದು ಮೊದಲ ಲೈನಿನಲ್ಲೇ ಕುಂತೆ. ಅಷ್ಟರಲ್ಲಾಗಲೇ ರಾಜ್‍ಕುಮಾರ್ ಮೊದಲಾದ ಅತಿಥಿಗಳೆಲ್ಲ ಸ್ಟೇಜ್ ಮ್ಯಾಲೆ ಕುಂತ್ಕಂಡಿದ್ದ್ರು. ನಮ್ಮಮ್ಮ ಭಾಳ ಮುಗ್ಧ ಹೆಂಗಸು. ರಾಜಣ್ಣನ್ನ ನೋಡಿದ್ದೇ ತಡ, ನನಗೆ ತಿವಿದು, `ಹೋಗು, ರಾಜ್‍ಕುಮಾರ್‍ರಿಗೆ ನಮುಸ್ಕಾರ ಮಾಡಿ ಬಾ’ ಅಂದ್ರು. ನಾನು ಸುಮ್ನಿರಮ್ಮ ಹಂಗೆಲ್ಲ ಸ್ಟೇಜ್ ಮೇಲೆ ಹೋಗಿ ಅವುರಿಗೆ ಕಿರಿಕಿರಿ ಮಾಡೋದು ಬೇಡ ಅಂತ ಹೇಳಿದ್ರೂ ಕೇಳದೆ ಹೋಗು, ಹೋಗು ಅಂತ ತಿವೀತಾನೆ ಇದ್ದರು. ಅಷ್ಟರಲ್ಲಿ ನನ್ನ ದುರಾದೃಷ್ಟಕ್ಕೆ ಯಾರಿಗೋ ಹಾರ ಹಾಕಿ ಸನ್ಮಾನ ಮಾಡೋಕೆ ಅಂತ ವೇದಿಕೆ ಮುಂದಕ್ಕೆ ಎದ್ದು ಬಂದ ರಾಜಣ್ಣ ನನ್ನನ್ನ ನೋಡಿ, `ಹಲೋ ಅಂಬರೀಷ್ ನಮಸ್ಕಾರ, ಹ್ಯೇಗಿದೀರಾ’ ಅಂತ ಕೇಳಿಬಿಟ್ಟ್ರು. ನಾನು ಚೆನ್ನಾಗಿದೀನಿ ಸರ್ ಅಂತ ಹೇಳಿ ಮುಜುಗರದ ಮುದ್ದೆಯಾದೆ. ತಗೋಳ್ಳಿ ನಮ್ಮಮ್ಮನ ಪಿತ್ತ ನೆತ್ತಿಗೇರಿತು. ಮನೆಗೆ ಹೊರಡಲು ಕಾರು ಹತ್ತಿದ್ದೇ ತಡ, `ಅಂಥಾ ದೊಡ್ಡೋರಿಗೆ ನೀನೇ ಹೋಗಿ ನಮಸ್ಕಾರ ಹೇಳಿಕ್ಕೆ ಆಗಲಿಲ್ಲವಾ, ಅವುರೇ ನಿನಿಗೆ ನಮುಸ್ಕಾರ ಹೇಳ್ಬೇಕಾ?’ ಅಂತ ಮನೆ ಮುಟ್ಟೋವರೆಗೂ ಬೈದು ಬಿಟ್ಟ್ರು”.

ಗುಂಡು, ತುಂಡು ಇಲ್ಲದ ಊಟಕ್ಕೆ ಚಕ್ಕರ್

“ಒಂದ್ಸಾರಿ ಎಂಪಿ ಪ್ರಕಾಶ್ ಮಗಳ ಮದುವೆಗೆ ಹೋಗಿದ್ದೆ. ಅರ್ಜೆಂಟ್ ಇದ್ದಿದ್ದ್ರಿಂದ ಊಟ ಮಾಡದೆ ಬಂದುಬಿಟ್ಟೆ. ಅದು ಹೆಂಗೋ ಆ ಮನುಷ್ಯನಿಗೆ ಗೊತ್ತಾಗಿಬಿಟ್ಟಿದೆ. ಎರಡು ದಿನ ಆದ್ಮೇಲೆ ಒಂದು ಫೋನ್ ಬಂತು, `ಹಲೋ ನಾನು ಎಂಪಿ ಪ್ರಕಾಶ್ ಮಾತಾಡ್ತಾ ಇರೋದು. ಮದುವೆಗೆ ಬಂದು ಊಟ ಮಾಡದೆ ಹೋಗಿಬಿಟ್ಟ್ರಲ್ಲಾ ನೀವು ಖಂಡಿತ ನಮ್ಮ ಮನಿಗೆ ಊಟಕ್ಕೆ ಬರ್ಬೇಕು’ ಅಂದ್ರು. ಖಂಡಿತ ಬರ್ತೀನಿ, ನಾನೇ ನಿಮಗೆ ಫೋನ್ ಮಾಡ್ತೀನಿ ಅಂತ ಹೇಳಿದೆ. ನನಿಗೆ ಅಷ್ಟಾಗಿ ಅವರ ಪರಿಚಯ ಇರ್ಲಿಲ್ಲ. ಒಬ್ಬರನ್ನು ಕರೆದು ಈ ಎಂಪಿ ಪ್ರಕಾಶ್ ಹೆಂಗೆ, ಅಭ್ಯಾಸ ಏನಾದ್ರು (ಗುಂಡು, ಮಟನ್) ಉಂಟಾ ಅಂತ ಕೇಳಿದೆ. ಅದಕ್ಕವುರು `ಇಲ್ಲಾ ಸಾರ್ ಭಾರೀ ಸಿಂಪಲ್. ಗುಂಡು ಹಾಕೋಲ್ಲ, ಮಟನ್ ಚಿಕನ್ ಅಂದ್ರೇನೂ ಗೊತ್ತಿಲ್ಲ. ಸಾತ್ವಿಕ ಮನುಷ್ಯ’ ಅಂದ್ರು. ಓಹ್ ನನಿಗ್ಯಾಕೋ ಸರಿ ಬರಲ್ಲ ಅನ್ನಿಸ್ತು. ಗುಂಡು, ತುಂಡು ಇಲ್ಲದಿದ್ದ್ರೆ ಅದೂ ಒಂದು ಊಟಾನಾ? ವಾಪಾಸ್ ಫೋನ್ ಮಾಡಿದೆ. ಸಾರ್ ನಾನು ತುಂಬಾ ಬ್ಯುಸಿ, ಶೂಟಿಂಗ್ ಮುಗಿಸ್ಕೊಂಡು ರಾತ್ರಿ ಎಷ್ಟೊತ್ತಿಗೋ ಬರ್ತೀನಿ. ಅಲ್ಲದೇ ಜೊತೆಗೆ ಯಾರ್ಯಾರೋ ಇರ್ತಾರೆ. ನನಿಗೋಸ್ಕರ ನೀವು ಕಾದು ನಿರಾಸೆ ಆಗೋದು ಬೇಡ ಅಂತ ರೀಲು ಬಿಟ್ಟೆ. ಆದ್ರೂ ಬಲವಂತ ಮಾಡಿದ್ರು. ಸರಿ ಸಾರ್. ಊಟಕ್ಕೆ ಬರೋಲ್ಲ, ಆದ್ರೆ ತಿಂಡಿಗೆ ಬರ್ತೀನಿ ಅಂತ ಒಪ್ಕೊಂಡೆ. ಮಾರನೇ ದಿನ ಮುಖ್ಯಮಂತ್ರಿ ಚಂದ್ರೂನ ಕರ್ಕೊಂಡು ತಿಂಡಿಗೆ ಹೋದೆ. ಆಮೇಲೆ ಅವರಿಂದ ನಾನು ತುಂಬಾ ಪಾಠ ಕಲಿತೆ. ಅವರಿಂದಾನೇ ನಾನೊಬ್ಬ ಮನುಷ್ಯ ಅಂತಾದೆ. ಬೆಂಗಳೂರಲ್ಲಿ ಮನೆ ಕಟ್ಟಿಸಿದ್ದು ಕೂಡಾ ಅವರ ಸಹಕಾರದಿಂದಲೇ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....