Homeಸಿನಿಮಾಸಿನಿ ಸುದ್ದಿಹಲೋ ಐ ಆಮ್ ಅಂಬಿ

ಹಲೋ ಐ ಆಮ್ ಅಂಬಿ

- Advertisement -
- Advertisement -

ಸಂಗ್ರಹ ನಿರೂಪಣೆ: ಗಿರೀಶ್ ತಾಳಿಕಟ್ಟೆ |

ಇತ್ತೀಚೆಗೆ ನಿಧನರಾದ ಅಂಬರೀಷ್‍ರು ತಮ್ಮ ಬದುಕಿನ ಕುರಿತು ತಾವೇ ಆಪ್ತರ ಬಳಿ ಹೇಳಿಕೊಂಡಿದ್ದ ಕೆಲ ಸ್ವಾರಸ್ಯ ಘಟನೆಗಳ ಮೆಲುಕು ಇಲ್ಲಿದೆ.

 

ಬಾಡಿಗೆ ಅಣ್ಣ, ಬಾಯ್ತುಂಬ ಬೈಗುಳ

“ನಾನು ಪಿಯುಸಿ ಓದಿದ್ದು ಮೈಸೂರಿನ ಶಾರದಾ ವಿಲಾಸ ಕಾಲೇಜಿನಲ್ಲಿ. ಕಾಲೇಜಿನ ಪ್ರಿನ್ಸಿಪಾಲ್ ನಾರಾಯಣ ರಾವ್ ಅಂತ. ಬಲು ಸ್ಟ್ರಿಕ್ಟ್ ಮನುಷ್ಯ. ಒಮ್ಮೆ ತಪ್ಪು ಮಾಡಿದ ಅಂತ ತಮ್ಮ ಮಗನನ್ನೇ ಕಾಲೇಜಿಂದ ಸಸ್ಪೆಂಡು ಮಾಡಿಬಿಟ್ಟಿದ್ದ್ರು. ಅಂತಾ ಆಸಾಮಿ. ಎಸ್ಸೆಲ್ಸಿವರೆಗೂ ನಂ.1 ಸ್ಟೂಡೆಂಟಾಗಿದ್ದ ನಾನು ಪಿಯುಸಿನಲ್ಲಿ ಫಸ್ಟ್ ಟೈಮು ಕೆಮಿಸ್ಟ್ರಿ ಸಬ್ಜೆಕ್ಟ್‍ನಲ್ಲಿ ಫೇಲಾಗ್ಬಿಟ್ಟೆ. ತಕೋಳ್ಳಿ, ಆ ಪ್ರಿನ್ಸಿಪಾಲು ಅಪ್ಪನಿಗೆ ಲೆಟರು ಬರೆದುಬಿಟ್ರು. ಅಪ್ಪನಿಗೆ ವಿಷಯ ಗೊತ್ತಾದ್ರೆ, ನನ್ನ ಕಥೆ ಅಷ್ಟೇ ಅಂತ, ದಿನಾ ಬೆಳಿಗ್ಗೆ ಮನೆ ಮುಂದೆ ಪೋಸ್ಟ್‍ಮ್ಯಾನಿಗೋಸ್ಕರ ಕಾಯ್ಕೊಂಡು ನಿಂತ್ಕಂತಿದ್ದೆ. ಒಂದು ದಿನ ಆ ಲೆಟ್ರು ಬಂತು. ಅದುನ್ನ ನಾನೇ ಈಸ್ಕೊಂಡು ಹರಿದು ಹಾಕ್ಬುಟ್ಟೆ. ಅಲ್ಲಿಗೆ ಪ್ರಾಬ್ಲಂ ಸಾಲ್ವ್ ಆಯ್ತು ಅಂದ್ಕಂಡೆ. ಆದ್ರೆ ಒಂದಿನ ಇದ್ದುಕ್ಕಿದ್ದಂಗೆ ಪ್ರಿನ್ಸಿಪಾಲು ನನ್ನನ್ನು ಕರೆಯೋಕ್ಕೆ ಕಳ್ಸಿದ್ರು. ಅವರ ಚೇಂಬರಿಗೆ ಹೋಗ್ತಿದ್ದಂಗೆ, `ಯಾಕೋ ಲೆಟರ್ ಹರಿದು ಹಾಕ್ದೆ? ನಿಮ್ಮಪ್ಪನಿಗೆ ಯಾಕೆ ತೋರಿಸ್ಲಿಲ್ಲ?’ ಅಂತ ಕೇಳಿಬುಟ್ರು. ನನಿಗೆ ಶಾಕ್. ಇವರಿಗೆ ಹೆಂಗೆ ಗೊತ್ತಾಯ್ತು ಅಂತ. `ನಾಳೆ ನಿಮ್ಮಪ್ಪುನ್ನೇ ಕರ್ಕೊಂಡು ಬಾ’ ಅಂತ ಹೇಳಿದ್ರು. ನನ್ನ ಕೈಕಾಲೆಲ್ಲ ಗಡಗಡ ನಡುಗೋಕ್ಕೆ ಶುರುವಾದ್ವು. ಕೊನೆಗೆ ನನ್ನ ಫ್ರೆಂಡ್ಸ್ ಬಡ್ಡಿಮಕ್ಕಳು ಒಂದು ಐಡಿಯಾ ಕೊಟ್ರು. ನನ್ನ ಅಣ್ಣನ ಹೈಟು, ಪರ್ಸನಾಲ್ಟಿ ಇರೋ ಒಬ್ಬ ಬಾಡಿಗೆ ಅಣ್ಣನನ್ನು ರೆಡಿ ಮಾಡಿಕೊಂಡು ಮಾರನೇ ದಿನ ಪ್ರಿನ್ಸಿಯ ಬಳಿ ಕರೆದೊಯ್ದೆ. ಅವನು ನಿಜಕ್ಕೂ ನನ್ನ ಅಣ್ಣನೆಂದೇ ನಂಬಿದ ಅವರು ನನ್ನನ್ನು ಚೆನ್ನಾಗಿಯೇ ಬಯ್ದರು. ಸಿಕ್ಕಿದ್ದೇ ಚಾನ್ಸು ಅಂತ ನನ್ನ ಬಾಡಿಗೆ ಅಣ್ಣನೂ, `ನೋಡಿ ಸಾ, ಅಪ್ಪ ಇವುನನ್ನ ಡಾಕ್ಟ್ರು ಮಾಡ್ಬೇಕು ಅಂತ ಆಸೆ ಇಟ್ಟುಗೊಂಡವುರೆ. ಇವನು ಹಿಂಗೆ ಪೋಲಿ ಬಿದ್ದವುನೆ’ ಅಂತ ಬಯ್ದ. ಅವನ ರೇಗಾಟ ಕಂಡು ಪ್ರಾಂಶುಪಾಲರಿಗೇ ಅಯ್ಯೋ ಪಾಪಾ ಅನ್ನಿಸಿ, `ಪರವಾಗಿಲ್ಲ ಬಿಡಿ. ನಿಮ್ಮ ತಂದೆಯವರಿಗೆ ಇದನ್ನು ತಿಳಿಸಿ ಅವರನ್ನು ಕರೆದುಕೊಂಡು ಬರೋದೇನೂ ಬೇಡ. ಆದ್ರೆ ಇನ್ಮುಂದೆ ಇವನ ಮೇಲೆ ಗಮನ ಇರಿಸಿ’ ಅಂತ ಹೇಳಿದ್ರು. ನಾನು ತಲೆ ತಗ್ಗಿಸಿಕೊಂಡೇ ನಿಂತಿದ್ದೆ. ಯಾಕಂದ್ರೆ, ತಲೆ ಎತ್ತಿ ಪ್ರಿನ್ಸಿಯ ಮುಖವನ್ನೇನಾದರು ನೋಡಿದ್ದರೆ, ನನಗೆ ನಗು ತಡೆದುಕೊಳ್ಳಲಾಗುತ್ತಿರಲಿಲ್ಲ”

ಸೆಕೆಂಡ್ ಹ್ಯಾಂಡ್ ಕಾರು ಯಾಮಾರಿಸಿದ್ದು

“ನನಿಗೆ ಕಾರು ತಗೋಬೇಕು ಅನ್ನೋ ಹುಚ್ಚಿತ್ತು. ಅಪ್ಪನ್ನ ಕೇಳಿದೆ. ಅದುಕ್ಕವುರು `ಕಾರು ಕೊಡ್ಸಿದ್ರೆ, ಆಮೇಲೆ ಪೆಟ್ರೋಲಿಗೂ ನನ್ನಾತ್ರನೇ ಕಾಸು ಕೇಳ್ತೀಯಾ. ಸುಮ್ಕಿರು ಮಾರಾಯಾ’ ಅಂತ ರೇಗಿದ್ರು. ಆದ್ರೆ ನಾನು ಹಠ ಬಿಡ್ಲಿಲ್ಲ. ಕೊನೆಗೆ `ಸರಿ ಒಂದು ಸೆಕೆಂಡ್ ಹ್ಯಾಂಡ್ ಕೊಡುಸ್ತೀನಿ. ಎಲ್ಲಾದ್ರು ಇದ್ದ್ರೆ ನೋಡು’ ಅಂತಂದ್ರು. ಸಿಕ್ಕಿದ್ದೇ ಚಾನ್ಸು ಅಂತ, ಕಾರು ಹುಡಿಕ್ಕ್ಯಂಡು ಮದ್ರಾಸಿಗೆ ಹೋಗಿ ಐದು ಸಾವಿರ ಖರ್ಚು ಮಾಡಿಬಂದೆ. ಆ ಕಾಲಕ್ಕೆ ಬರೀ ಕಾರು ಹುಡುಕೋಕ್ಕೇ ಐದು ಸಾವುರ ಖರ್ಚು ಮಾಡಿವ್ನಿ ಅಂದ್ರೆ ಬಡ್ಡೇತದು ನನ್ನ ಶೋಕಿ ಅದಿನ್ನೆಂತದ್ದಿರಬೇಡ ನೋಡಿ. ಕೊನೆಗೆ ನಮ್ಮ ಪರಿಚಯಸ್ತ ಡಾಕ್ಟ್ರು ಒಬ್ಬ್ರು ತಮ್ಮ ಫಿಯೆಟ್ ಕಾರು ಮಾರ್ತಾರೆ ಅನ್ನೋ ವಿಚಾರ ಗೊತ್ತಾಯ್ತು. ಹೋಗಿ ಕೇಳಿದೆ. `ಇದು ನನ್ನ ಹೆಂಡ್ತಿ ಗಿಫ್ಟ್ ಕೊಟ್ಟಿದ್ದು, ಅಲ್ಲದೇ ನನ್ನ ಮಗನಿಗೂ ಈ ಕಾರು ಅಂದ್ರೆ ತುಂಬಾ ಇಷ್ಟ. ಹಾಗಾಗಿ ಮೈಸೂರಿನಲ್ಲಿ ಇರೋರಿಗೆ ಮಾರಲ್ಲ. ಬೇರೆ ಊರಿನವರಿಗೆ ಮಾತ್ರ ಮಾರೋದು’ ಅಂದುಬಿಟ್ಟ್ರು. ಒಂದ್ ಸ್ವಲ್ಪ ದಿನ ಸುಮ್ಕಿದ್ದೆ. ಮತ್ತೆ ಅವುರತ್ರ ಹೋಗಿ `ಬೆಂಗಳೂರಿನಲ್ಲಿರೋ ವೀರಾಸ್ವಾಮಿಯವುರಿಗೆ ಬೇಕಂತೆ ಕೊಡ್ತೀರಾ’ ಅಂತ ಕೇಳಿದೆ. ಒಪ್ಕೊಂಡು ಒಂದು ಲಕ್ಷಕ್ಕೆ ವ್ಯಾಪಾರನೂ ಮುಗೀತು. ನಾನೇ ಕಾರನ್ನ ತಕೊಂಡು ಬೆಂಗಳೂರಿನ ಕೆಸಿಎನ್ ಚಂದ್ರು ಮನೇಲ್ಲಿ ಸ್ವಲ್ಪ ದಿನ ಬಿಟ್ಟಿದ್ದೆ. ಒಂದು ತಿಂಗಳಾದ ಮೇಲೆ ವಾಪಾಸು ಮೈಸೂರಿಗೆ ತಗೊಂಡೋಗಿ `ಸಾರ್ ಅವುರಿಗ್ಯಾಕೋ ಕಾರಿನ ರೇಟು ಜಾಸ್ತಿ ಆಯ್ತಂತೆ. ಅದುಕ್ಕೆ ಬೇಡ ಅಂತಿದಾರೆ. ನೀವು ವಾಪಾಸ್ ತಗೊಂಡು ಅವುರ ದುಡ್ಡು ಕೊಡ್ಬೇಕಂತೆ’ ಅಂದೆ. ಆದ್ರೆ ಅವರು ವಾಪಾಸ್ ತಗೋಳಕ್ಕೆ ಒಪ್ಪಲಿಲ್ಲ. ಆಗ `ಸರಿ, ನಿಮಗೆ ದುಡ್ಡು ಕೊಡೋಕೆ ಆಗಲ್ಲ ಅನ್ನೋದಾದ್ರೆ, ಈ ಕಾರನ್ನ ನಾನೇ ಇಟ್ಕೊಂಡು, ಅವುರಿಗೆ ನಾನೇ ದುಡ್ಡು ಕೊಡ್ತೀನಿ ಬಿಡಿ’ ಅಂದೆ. ಒಪ್ಕೊಂಡ್ರು. ಹೀಗೆ ಅವುರಿಗೆ ಯಾಮಾರಿಸಿ ನನ್ನ ಆಸೆ ಪಟ್ಟಿದ್ದ ಕಾರು ಕೊಂಡ್ಕೊಂಡೆ ಕಣ್ರೀ”

ರಾಜಣ್ಣನ ನಮಸ್ಕಾರ, ಅಮ್ಮನ ಬೈಗುಳ

“1975ರಲ್ಲಿ `ದೇವರ ಕಣ್ಣು’ ಸಿನಿಮಾಗಾಗಿ ನನಿಗೆ ಅತ್ಯುತ್ತಮ ಖಳನಟನ ಪ್ರಶಸ್ತಿ ಬಂತು. ಅಮ್ಮನೂ ನೋಡಿ ಖುಷಿಪಡ್ಲಿ ಅಂತ ಟೌನ್‍ಹಾಲ್‍ನ ಕಾರ್ಯಕ್ರಮಕ್ಕೆ ಆಕೆಯನ್ನೂ ಕರೆದೊಯ್ದು ಮೊದಲ ಲೈನಿನಲ್ಲೇ ಕುಂತೆ. ಅಷ್ಟರಲ್ಲಾಗಲೇ ರಾಜ್‍ಕುಮಾರ್ ಮೊದಲಾದ ಅತಿಥಿಗಳೆಲ್ಲ ಸ್ಟೇಜ್ ಮ್ಯಾಲೆ ಕುಂತ್ಕಂಡಿದ್ದ್ರು. ನಮ್ಮಮ್ಮ ಭಾಳ ಮುಗ್ಧ ಹೆಂಗಸು. ರಾಜಣ್ಣನ್ನ ನೋಡಿದ್ದೇ ತಡ, ನನಗೆ ತಿವಿದು, `ಹೋಗು, ರಾಜ್‍ಕುಮಾರ್‍ರಿಗೆ ನಮುಸ್ಕಾರ ಮಾಡಿ ಬಾ’ ಅಂದ್ರು. ನಾನು ಸುಮ್ನಿರಮ್ಮ ಹಂಗೆಲ್ಲ ಸ್ಟೇಜ್ ಮೇಲೆ ಹೋಗಿ ಅವುರಿಗೆ ಕಿರಿಕಿರಿ ಮಾಡೋದು ಬೇಡ ಅಂತ ಹೇಳಿದ್ರೂ ಕೇಳದೆ ಹೋಗು, ಹೋಗು ಅಂತ ತಿವೀತಾನೆ ಇದ್ದರು. ಅಷ್ಟರಲ್ಲಿ ನನ್ನ ದುರಾದೃಷ್ಟಕ್ಕೆ ಯಾರಿಗೋ ಹಾರ ಹಾಕಿ ಸನ್ಮಾನ ಮಾಡೋಕೆ ಅಂತ ವೇದಿಕೆ ಮುಂದಕ್ಕೆ ಎದ್ದು ಬಂದ ರಾಜಣ್ಣ ನನ್ನನ್ನ ನೋಡಿ, `ಹಲೋ ಅಂಬರೀಷ್ ನಮಸ್ಕಾರ, ಹ್ಯೇಗಿದೀರಾ’ ಅಂತ ಕೇಳಿಬಿಟ್ಟ್ರು. ನಾನು ಚೆನ್ನಾಗಿದೀನಿ ಸರ್ ಅಂತ ಹೇಳಿ ಮುಜುಗರದ ಮುದ್ದೆಯಾದೆ. ತಗೋಳ್ಳಿ ನಮ್ಮಮ್ಮನ ಪಿತ್ತ ನೆತ್ತಿಗೇರಿತು. ಮನೆಗೆ ಹೊರಡಲು ಕಾರು ಹತ್ತಿದ್ದೇ ತಡ, `ಅಂಥಾ ದೊಡ್ಡೋರಿಗೆ ನೀನೇ ಹೋಗಿ ನಮಸ್ಕಾರ ಹೇಳಿಕ್ಕೆ ಆಗಲಿಲ್ಲವಾ, ಅವುರೇ ನಿನಿಗೆ ನಮುಸ್ಕಾರ ಹೇಳ್ಬೇಕಾ?’ ಅಂತ ಮನೆ ಮುಟ್ಟೋವರೆಗೂ ಬೈದು ಬಿಟ್ಟ್ರು”.

ಗುಂಡು, ತುಂಡು ಇಲ್ಲದ ಊಟಕ್ಕೆ ಚಕ್ಕರ್

“ಒಂದ್ಸಾರಿ ಎಂಪಿ ಪ್ರಕಾಶ್ ಮಗಳ ಮದುವೆಗೆ ಹೋಗಿದ್ದೆ. ಅರ್ಜೆಂಟ್ ಇದ್ದಿದ್ದ್ರಿಂದ ಊಟ ಮಾಡದೆ ಬಂದುಬಿಟ್ಟೆ. ಅದು ಹೆಂಗೋ ಆ ಮನುಷ್ಯನಿಗೆ ಗೊತ್ತಾಗಿಬಿಟ್ಟಿದೆ. ಎರಡು ದಿನ ಆದ್ಮೇಲೆ ಒಂದು ಫೋನ್ ಬಂತು, `ಹಲೋ ನಾನು ಎಂಪಿ ಪ್ರಕಾಶ್ ಮಾತಾಡ್ತಾ ಇರೋದು. ಮದುವೆಗೆ ಬಂದು ಊಟ ಮಾಡದೆ ಹೋಗಿಬಿಟ್ಟ್ರಲ್ಲಾ ನೀವು ಖಂಡಿತ ನಮ್ಮ ಮನಿಗೆ ಊಟಕ್ಕೆ ಬರ್ಬೇಕು’ ಅಂದ್ರು. ಖಂಡಿತ ಬರ್ತೀನಿ, ನಾನೇ ನಿಮಗೆ ಫೋನ್ ಮಾಡ್ತೀನಿ ಅಂತ ಹೇಳಿದೆ. ನನಿಗೆ ಅಷ್ಟಾಗಿ ಅವರ ಪರಿಚಯ ಇರ್ಲಿಲ್ಲ. ಒಬ್ಬರನ್ನು ಕರೆದು ಈ ಎಂಪಿ ಪ್ರಕಾಶ್ ಹೆಂಗೆ, ಅಭ್ಯಾಸ ಏನಾದ್ರು (ಗುಂಡು, ಮಟನ್) ಉಂಟಾ ಅಂತ ಕೇಳಿದೆ. ಅದಕ್ಕವುರು `ಇಲ್ಲಾ ಸಾರ್ ಭಾರೀ ಸಿಂಪಲ್. ಗುಂಡು ಹಾಕೋಲ್ಲ, ಮಟನ್ ಚಿಕನ್ ಅಂದ್ರೇನೂ ಗೊತ್ತಿಲ್ಲ. ಸಾತ್ವಿಕ ಮನುಷ್ಯ’ ಅಂದ್ರು. ಓಹ್ ನನಿಗ್ಯಾಕೋ ಸರಿ ಬರಲ್ಲ ಅನ್ನಿಸ್ತು. ಗುಂಡು, ತುಂಡು ಇಲ್ಲದಿದ್ದ್ರೆ ಅದೂ ಒಂದು ಊಟಾನಾ? ವಾಪಾಸ್ ಫೋನ್ ಮಾಡಿದೆ. ಸಾರ್ ನಾನು ತುಂಬಾ ಬ್ಯುಸಿ, ಶೂಟಿಂಗ್ ಮುಗಿಸ್ಕೊಂಡು ರಾತ್ರಿ ಎಷ್ಟೊತ್ತಿಗೋ ಬರ್ತೀನಿ. ಅಲ್ಲದೇ ಜೊತೆಗೆ ಯಾರ್ಯಾರೋ ಇರ್ತಾರೆ. ನನಿಗೋಸ್ಕರ ನೀವು ಕಾದು ನಿರಾಸೆ ಆಗೋದು ಬೇಡ ಅಂತ ರೀಲು ಬಿಟ್ಟೆ. ಆದ್ರೂ ಬಲವಂತ ಮಾಡಿದ್ರು. ಸರಿ ಸಾರ್. ಊಟಕ್ಕೆ ಬರೋಲ್ಲ, ಆದ್ರೆ ತಿಂಡಿಗೆ ಬರ್ತೀನಿ ಅಂತ ಒಪ್ಕೊಂಡೆ. ಮಾರನೇ ದಿನ ಮುಖ್ಯಮಂತ್ರಿ ಚಂದ್ರೂನ ಕರ್ಕೊಂಡು ತಿಂಡಿಗೆ ಹೋದೆ. ಆಮೇಲೆ ಅವರಿಂದ ನಾನು ತುಂಬಾ ಪಾಠ ಕಲಿತೆ. ಅವರಿಂದಾನೇ ನಾನೊಬ್ಬ ಮನುಷ್ಯ ಅಂತಾದೆ. ಬೆಂಗಳೂರಲ್ಲಿ ಮನೆ ಕಟ್ಟಿಸಿದ್ದು ಕೂಡಾ ಅವರ ಸಹಕಾರದಿಂದಲೇ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...