Homeರಾಜಕೀಯಹಾಸನ: ಇಲ್ಲಿ ಜೆಡಿಎಸ್ ಭದ್ರ

ಹಾಸನ: ಇಲ್ಲಿ ಜೆಡಿಎಸ್ ಭದ್ರ

- Advertisement -
- Advertisement -
  • ಆಕಾಶ್ ಕೆರೆಕಟ್ಟೆ |

ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹಾಸನದಲ್ಲಿ ಕಾವು ಹೆಚ್ಚುತ್ತಿವೆ. ಏಳು ಕ್ಷೇತ್ರಗಳ ಪೈಕಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇರ ಎದುರಾಳಿಗಳಾಗಿರುವುದು ನಾಲ್ಕು ಕ್ಷೇತ್ರಗಳಲ್ಲಿ. ಇನ್ನು ಮೂರು ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ತೀವ್ರ ಪೈಪೋಟಿ ಕೊಡುವ ಮಟ್ಟಿಗೆ ತನ್ನ ಪಡೆಯನ್ನು ಸಿದ್ಧಪಡಿಸಿಕೊಂಡಿದೆ.

ರೇವಣ್ಣ

ಮಾಜಿ ಪ್ರಧಾನಿ ದೇವೇಗೌಡರು ಆರು ಬಾರಿ ಪ್ರತಿನಿಧಿಸಿದ್ದ ಹೊಳೆನರಸೀಪುರ ಕ್ಷೇತ್ರ ಇಬ್ಬರು ಪ್ರಬಲ ಎದುರಾಳಿಗಳ ಕಾರಣದಿಂದ ರಾಜ್ಯದ ಗಮನ ಸೆಳೆದಿದೆ. ದೇವೇಗೌಡರ ಮಗ ಹಾಗೂ ಮಾಜಿ ಮಂತ್ರಿ ಎಚ್.ಡಿ.ರೇವಣ್ಣ, ಕಾಂಗ್ರೆಸ್‍ನ ಬಿ.ಪಿ.ಮಂಜೇಗೌಡರ ವಿರುದ್ಧ ಸೆಣೆಸುತ್ತಿದ್ದಾರೆ. ಕ್ಷೇತ್ರಕ್ಕೆ ಹೊಸಮುಖವಾದ ಮಂಜೇಗೌಡ ಪಕ್ಷದ ಹಿರಿಯ ನೇತಾರರ ಬೆಂಬಲದಿಂದ ಪ್ರಬಲ ಪೈಪೋಟಿ ಕೊಡುತ್ತಿದ್ದಾರೆ. ಅವರ ಸ್ಪರ್ಧೆಗೆ ಮಹತ್ವ ಸಿಕ್ಕಿದ್ದೇ ರೇವಣ್ಣನ ಪ್ರತಿಕ್ರಿಯೆಗಳಿಂದ. ಸಾರಿಗೆ ಇಲಾಖೆಯ ನೌಕರನಾಗಿದ್ದ ಮಂಜೇಗೌಡ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣಾ ಕಣ ಪ್ರವೇಶಿಸುವ ಮೊದಲೇ, ರೇವಣ್ಣ ಆತನ ವಿರುದ್ಧ ಟೀಕೆಗೆ ಇಳಿದರು. ಆತನ ರಾಜೀನಾಮೆಯನ್ನು ಸರಕಾರ ಒಪ್ಪಬಾರದು ಎಂದು ಒತ್ತಾಯಿಸಿದರು. ಕೊನೆಗೆ ಸರಕಾರ ರಾಜೀನಾಮೆ ಒಪ್ಪಿದ ಮೇಲೆ, ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಹಾಗಾಗಿ, ಮಂಜೇಗೌಡ ಅಂಕಣ ಪ್ರವೇಶಿಸುವ ಮೊದಲೇ ರೇವಣ್ಣ ಆತನಿಗೆ ‘ಪ್ರಬಲ ಪ್ರತಿಸ್ಪರ್ಧಿ’ ಎಂಬ ಪಟ್ಟ ದಯಪಾಲಿಸಿದ್ದರು.

ಮಂಜೇಗೌಡ

ಪ್ರಚಾರದ ವೇಳೆ ಅಲ್ಲಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖಾಮುಖಿಯಾಗುತ್ತಿದ್ದಾರೆ. ಬಿರುಸಿನ ಮಾತುಕತೆ, ಕೈ ಮಿಲಾಯಿಸುವ ಮಟ್ಟಕ್ಕೆ ಘಟನೆಗಳು ನಡೆದಿವೆ. ರೇವಣ್ಣನ ಮಡದಿ ಭವಾನಿ, ಮಕ್ಕಳು ಪ್ರಜ್ವಲ್ ಹಾಗೂ ಸೂರಜ್ ಕ್ಷೇತ್ರದಲ್ಲಿ ಬಿಡುವಿಲ್ಲದೆ ಓಡಾಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪ್ರಜ್ವಲ್ ಅಪ್ಪನ ಕ್ಷೇತ್ರ ಅಷ್ಟೇ ಅಲ್ಲದೆ ಬೇರೆಡೆಯೂ ಪ್ರಚಾರ ಮಾಡಿದ್ದರು. ಆದರೆ ಈಗ ಅವರು ತಮ್ಮ ಶ್ರಮವನ್ನು ಸಂಪೂರ್ಣವಾಗಿ ಅಪ್ಪನ ಕ್ಷೇತ್ರಕ್ಕೆ ಸೀಮಿತಗೊಳಿಸಿದಂತೆ ಕಾಣುತ್ತಿದೆ. ಅತ್ತ ಕಾಂಗ್ರೆಸ್ ಪಾಳಯದಲ್ಲಿ ಪಕ್ಷದ ಬೆಂಬಲದ ಜೊತೆಗೆ ಈ ಹಿಂದೆ ಎರಡು ಬಾರಿ ಸ್ಪರ್ಧಿಸಿ ಗಮನಾರ್ಹ ಮತ ಗಳಿಸಿದ್ದ ಮಾಜಿ ಮಂತ್ರಿ ಜಿ.ಪುಟ್ಟಸ್ವಾಮಿಗೌಡರ ಸೊಸೆ ಅನುಪಮ ಮಹೇಶ್ ಅವರ ಬೆಂಬಲ ಕೂಡ ಮಂಜೇಗೌಡರಿಗಿದೆ. ಆದರೂ ರೇವಣ್ಣನ ಪ್ರಾಬಲ್ಯಕ್ಕೇ ಮತದಾರರು ಜೈ ಎನ್ನುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿ ಲೆಕ್ಕಕ್ಕೂ ಇಲ್ಲ, ಆಟಕ್ಕೂ ಇಲ್ಲ.

ಎ ಮಂಜು

ಜಿಲ್ಲಾ ಮಂತ್ರಿ ಎ.ಮಂಜು (ಕಾಂಗ್ರೆಸ್) ಪ್ರತಿನಿಧಿಸುವ ಅರಕಲಗೂಡು ಕ್ಷೇತ್ರದಲ್ಲಿ ಎರಡು ಬಾರಿ ಸೋಲು ಅನುಭವಿಸಿದ್ದ ಎ.ಟಿ.ರಾಮಸ್ವಾಮಿ (ಜೆಡಿಎಸ್) ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ‘ಒಳ್ಳೆಯ ಮನುಷ್ಯ’ ಎಂಬ ಮೆಚ್ಚುಗೆಯ ಮಾತುಗಳಿಗೆ ಪಾತ್ರರಾಗಿರುವ ರಾಮಸ್ವಾಮಿ ಎದುರಾಳಿಯ ತಂತ್ರಗಳಿಗೆ ಸೆಡ್ಡು ಹೊಡೆಯುತ್ತಾರಾ ಎನ್ನುವುದೇ ಪ್ರಶ್ನೆ. ಇವರಿಬ್ಬರ ಜೊತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಯೋಗಾರಮೇಶ್ ಕೂಡಾ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂವತ್ತೆರಡು ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಅವರು ಅಂದಿನಂತೆ ಈ ಬಾರಿಯೂ ಪ್ರಬಲ ಪೈಪೋಟಿ ನೀಡಿ ಸಾಂಪ್ರದಾಯಿಕ ಜೆಡಿಎಸ್ ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ.

ಎಚ್.ಎಸ್. ಪ್ರಕಾಶ್

ಹಾಸನದಲ್ಲಿ ಮೂವರು ಗಂಭೀರ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್‍ನ ಎಚ್.ಎಸ್.ಪ್ರಕಾಶ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಂದ ಪೈಪೋಟಿ ಎದುರಿಸುತ್ತಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಮಹೇಶ್ ಮತ್ತು ಬಿಜೆಪಿಯ ಪ್ರೀತಂ ಗೌಡ ಅವರ ಪ್ರಬಲ ಪೈಪೋಟಿಯಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ. ಬಿಜೆಪಿ ಅಭ್ಯರ್ಥಿ ಗೆಲುವಿನ ಹಂತಕ್ಕೆ ತಲುಪುತ್ತಾರೋ ಇಲ್ಲವೋ, ಆದರೆ ಗಮನಾರ್ಹ ಮತಗಳನ್ನಂತೂ ಪಡೆಯುತ್ತಾರೆ ಎನ್ನುವುದು ಸದ್ಯದ ಲೆಕ್ಕಾಚಾರ. ಅವರ ಮತಗಳಿಕೆ ಫಲಿತಾಂಶ ನಿರ್ಧರಿಸಲಿದೆ. ಕಾಂಗ್ರೆಸ್ ತನ್ನ ರಾಜ್ಯಮಟ್ಟದ ತಂತ್ರಗಾರಿಕೆಯ ಕಾರಣಕ್ಕೆ ಮುಸ್ಲಿಂ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಸಾಧ್ಯತೆ ಇದೆ. ಆದರೆ ದೇವೇಗೌಡರು ಮತದಾನದ ಹಿಂದಿನ ಎರಡು ದಿನಗಳ ಕಾಲ ಒಂದು ಸುತ್ತು ಬಂದು ಬದಲಾವಣೆ ಮಾಡುವ ಸಾಮಥ್ರ್ಯ ಉಳ್ಳವರು. ಎಲ್ಲಾ ಅಭ್ಯರ್ಥಿಗಳು ಆ ಎರಡು ದಿನಗಳಿಗಾಗಿ ಕಾಯುತ್ತಿದ್ದಾರೆ. ಹಿಂದಿನಂತೆ ದೇವೇಗೌಡರು ಪ್ರಭಾವ ಬೀರುವಲ್ಲಿ ಯಶಸ್ವಿಯಾದರೆ ಜೆಡಿಎಸ್ ಮತ್ತೆ ಬಾವುಟ ಹಾರಿಸುವಲ್ಲಿ ಸಂಶಯವಿಲ್ಲ.

ಎ.ಟಿ.ರಾಮಸ್ವಾಮಿ

ಶ್ರವಣಬೆಳಗೊಳ ಮತ್ತು ಅರಸೀಕೆರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ಇದ್ದಂತಿಲ್ಲ. ಅರಸೀಕೆರೆಯಲ್ಲಿ ಕುಡಿವ ನೀರು ಪೂರೈಕೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮಾಡಿ ಖ್ಯಾತಿ ಹೊಂದಿರುವ ಕೆ.ಎಂ.ಶಿವಲಿಂಗೇಗೌಡರ ಎದುರು ಕಾಂಗ್ರೆಸ್ ಅಭ್ಯರ್ಥಿ ಶಶಿಧರ್ ದುರ್ಬಲರಾಗಿ ಕಾಣುತ್ತಾರೆ. ಶ್ರವಣಬೆಳಗೊಳದಲ್ಲಿ ಕಾಂಗ್ರೆಸ್‍ನ ಸಿ.ಎಸ್.ಪುಟ್ಟೇಗೌಡರು ಕಳೆದ ಬಾರಿಯಂತೆಯೇ ಸೋಲು ಅನುಭವಿಸಬಹುದು. ಜೆಡಿಎಸ್‍ನ ಸಿ.ಎನ್.ಬಾಲಕೃಷ್ಣ ಗೆಲ್ಲುವ ಸಾಧ್ಯತೆಗಳಿವೆ.

ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್ ಚುನಾವಣೆ ಘೋಷಣೆಗೆ ಮೊದಲೇ ಅಲೆ ಎಬ್ಬಿಸಿದ್ದರು. ಹೇರಳವಾಗಿ ಹಣ ಖರ್ಚು ಮಾಡಿ ಪಾರ್ಟಿ ಮಾಡಿದ್ದರು. ಅವರ ಕ್ರಿಮಿನಲ್ ಹಿನ್ನೆಲೆ ಹೊರತಾಗಿಯೂ ಈ ಮೀಸಲು ಕ್ಷೇತ್ರದ ಮೇಲ್ವರ್ಗಗಳು ಅವರನ್ನು ಬೆಂಬಲಿಸುತ್ತಿವೆ. ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರು ‘ಸ್ಪೃಶ್ಯ’ ಸಮುದಾಯಕ್ಕೆ ಸೇರಿದವರು. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಸ್ಪೃಶ್ಯರು ಅವರನ್ನು ಬೆಂಬಲಿಸುವುದು ಅಷ್ಟಕಷ್ಟೆ. ಕಾಂಗ್ರೆಸ್ ಕೊನೆಕ್ಷಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯನವರನ್ನು ಕಣಕ್ಕೆ ತಂದರು. ಅವರು ಬಂದಿದ್ದು ತಡವಾಯ್ತು, ಹಾಗಾಗಿ ಕ್ಷೇತ್ರವನ್ನು ಪರಿಚಯ ಮಾಡಿಕೊಳ್ಳುವುದರಲ್ಲಿಯೇ ಅವರಿಗೆ ಸಾಕಷ್ಟು ಸಮಯ ಬೇಕಾಗಿದೆ. ಈ ಎಲ್ಲಾ ಕಾರಣಗಳಿಗೆ ಮತದಾರ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿಯವರನ್ನು ಬೆಂಬಲಿಸುವ ಸಾಧ್ಯತೆ ಇದೆ. ಹೇಗೂ ದೇವೇಗೌಡರ ಕಾರಣಕ್ಕೆ ಮೇಲ್ವರ್ಗದ ಮತಗಳಲ್ಲಿ ದೊಡ್ಡ ಮೊತ್ತ ಅವರ ಪಾಲಾಗಬಹುದು.

ಜೆಡಿಎಸ್ ಪಕ್ಷ ಬಿಎಸ್‍ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರೂ, ಹಾಸನದ ಮಟ್ಟಿಗೆ ಅದರ ಪರಿಣಾಮ ನಗಣ್ಯ. ಮೇಲಾಗಿ ಈ ಜಿಲ್ಲೆಯಲ್ಲಿ ಬಿಎಸ್‍ಪಿ ಪ್ರತಿನಿಧಿಸುವ ದಲಿತರು ದಬ್ಬಾಳಿಕೆ ಅನುಭವಿಸುತ್ತಿರುವುದೇ ಜೆಡಿಎಸ್ ಜೊತೆ ಪ್ರಬಲವಾಗಿ ಗುರುತಿಸಿಕೊಂಡಿರುವ ಸಮುದಾಯದಿಂದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...