Homeರಾಜಕೀಯಹಾಸನ: ಇಲ್ಲಿ ಜೆಡಿಎಸ್ ಭದ್ರ

ಹಾಸನ: ಇಲ್ಲಿ ಜೆಡಿಎಸ್ ಭದ್ರ

- Advertisement -
- Advertisement -
  • ಆಕಾಶ್ ಕೆರೆಕಟ್ಟೆ |

ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹಾಸನದಲ್ಲಿ ಕಾವು ಹೆಚ್ಚುತ್ತಿವೆ. ಏಳು ಕ್ಷೇತ್ರಗಳ ಪೈಕಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇರ ಎದುರಾಳಿಗಳಾಗಿರುವುದು ನಾಲ್ಕು ಕ್ಷೇತ್ರಗಳಲ್ಲಿ. ಇನ್ನು ಮೂರು ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ತೀವ್ರ ಪೈಪೋಟಿ ಕೊಡುವ ಮಟ್ಟಿಗೆ ತನ್ನ ಪಡೆಯನ್ನು ಸಿದ್ಧಪಡಿಸಿಕೊಂಡಿದೆ.

ರೇವಣ್ಣ

ಮಾಜಿ ಪ್ರಧಾನಿ ದೇವೇಗೌಡರು ಆರು ಬಾರಿ ಪ್ರತಿನಿಧಿಸಿದ್ದ ಹೊಳೆನರಸೀಪುರ ಕ್ಷೇತ್ರ ಇಬ್ಬರು ಪ್ರಬಲ ಎದುರಾಳಿಗಳ ಕಾರಣದಿಂದ ರಾಜ್ಯದ ಗಮನ ಸೆಳೆದಿದೆ. ದೇವೇಗೌಡರ ಮಗ ಹಾಗೂ ಮಾಜಿ ಮಂತ್ರಿ ಎಚ್.ಡಿ.ರೇವಣ್ಣ, ಕಾಂಗ್ರೆಸ್‍ನ ಬಿ.ಪಿ.ಮಂಜೇಗೌಡರ ವಿರುದ್ಧ ಸೆಣೆಸುತ್ತಿದ್ದಾರೆ. ಕ್ಷೇತ್ರಕ್ಕೆ ಹೊಸಮುಖವಾದ ಮಂಜೇಗೌಡ ಪಕ್ಷದ ಹಿರಿಯ ನೇತಾರರ ಬೆಂಬಲದಿಂದ ಪ್ರಬಲ ಪೈಪೋಟಿ ಕೊಡುತ್ತಿದ್ದಾರೆ. ಅವರ ಸ್ಪರ್ಧೆಗೆ ಮಹತ್ವ ಸಿಕ್ಕಿದ್ದೇ ರೇವಣ್ಣನ ಪ್ರತಿಕ್ರಿಯೆಗಳಿಂದ. ಸಾರಿಗೆ ಇಲಾಖೆಯ ನೌಕರನಾಗಿದ್ದ ಮಂಜೇಗೌಡ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣಾ ಕಣ ಪ್ರವೇಶಿಸುವ ಮೊದಲೇ, ರೇವಣ್ಣ ಆತನ ವಿರುದ್ಧ ಟೀಕೆಗೆ ಇಳಿದರು. ಆತನ ರಾಜೀನಾಮೆಯನ್ನು ಸರಕಾರ ಒಪ್ಪಬಾರದು ಎಂದು ಒತ್ತಾಯಿಸಿದರು. ಕೊನೆಗೆ ಸರಕಾರ ರಾಜೀನಾಮೆ ಒಪ್ಪಿದ ಮೇಲೆ, ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಹಾಗಾಗಿ, ಮಂಜೇಗೌಡ ಅಂಕಣ ಪ್ರವೇಶಿಸುವ ಮೊದಲೇ ರೇವಣ್ಣ ಆತನಿಗೆ ‘ಪ್ರಬಲ ಪ್ರತಿಸ್ಪರ್ಧಿ’ ಎಂಬ ಪಟ್ಟ ದಯಪಾಲಿಸಿದ್ದರು.

ಮಂಜೇಗೌಡ

ಪ್ರಚಾರದ ವೇಳೆ ಅಲ್ಲಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖಾಮುಖಿಯಾಗುತ್ತಿದ್ದಾರೆ. ಬಿರುಸಿನ ಮಾತುಕತೆ, ಕೈ ಮಿಲಾಯಿಸುವ ಮಟ್ಟಕ್ಕೆ ಘಟನೆಗಳು ನಡೆದಿವೆ. ರೇವಣ್ಣನ ಮಡದಿ ಭವಾನಿ, ಮಕ್ಕಳು ಪ್ರಜ್ವಲ್ ಹಾಗೂ ಸೂರಜ್ ಕ್ಷೇತ್ರದಲ್ಲಿ ಬಿಡುವಿಲ್ಲದೆ ಓಡಾಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪ್ರಜ್ವಲ್ ಅಪ್ಪನ ಕ್ಷೇತ್ರ ಅಷ್ಟೇ ಅಲ್ಲದೆ ಬೇರೆಡೆಯೂ ಪ್ರಚಾರ ಮಾಡಿದ್ದರು. ಆದರೆ ಈಗ ಅವರು ತಮ್ಮ ಶ್ರಮವನ್ನು ಸಂಪೂರ್ಣವಾಗಿ ಅಪ್ಪನ ಕ್ಷೇತ್ರಕ್ಕೆ ಸೀಮಿತಗೊಳಿಸಿದಂತೆ ಕಾಣುತ್ತಿದೆ. ಅತ್ತ ಕಾಂಗ್ರೆಸ್ ಪಾಳಯದಲ್ಲಿ ಪಕ್ಷದ ಬೆಂಬಲದ ಜೊತೆಗೆ ಈ ಹಿಂದೆ ಎರಡು ಬಾರಿ ಸ್ಪರ್ಧಿಸಿ ಗಮನಾರ್ಹ ಮತ ಗಳಿಸಿದ್ದ ಮಾಜಿ ಮಂತ್ರಿ ಜಿ.ಪುಟ್ಟಸ್ವಾಮಿಗೌಡರ ಸೊಸೆ ಅನುಪಮ ಮಹೇಶ್ ಅವರ ಬೆಂಬಲ ಕೂಡ ಮಂಜೇಗೌಡರಿಗಿದೆ. ಆದರೂ ರೇವಣ್ಣನ ಪ್ರಾಬಲ್ಯಕ್ಕೇ ಮತದಾರರು ಜೈ ಎನ್ನುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿ ಲೆಕ್ಕಕ್ಕೂ ಇಲ್ಲ, ಆಟಕ್ಕೂ ಇಲ್ಲ.

ಎ ಮಂಜು

ಜಿಲ್ಲಾ ಮಂತ್ರಿ ಎ.ಮಂಜು (ಕಾಂಗ್ರೆಸ್) ಪ್ರತಿನಿಧಿಸುವ ಅರಕಲಗೂಡು ಕ್ಷೇತ್ರದಲ್ಲಿ ಎರಡು ಬಾರಿ ಸೋಲು ಅನುಭವಿಸಿದ್ದ ಎ.ಟಿ.ರಾಮಸ್ವಾಮಿ (ಜೆಡಿಎಸ್) ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ‘ಒಳ್ಳೆಯ ಮನುಷ್ಯ’ ಎಂಬ ಮೆಚ್ಚುಗೆಯ ಮಾತುಗಳಿಗೆ ಪಾತ್ರರಾಗಿರುವ ರಾಮಸ್ವಾಮಿ ಎದುರಾಳಿಯ ತಂತ್ರಗಳಿಗೆ ಸೆಡ್ಡು ಹೊಡೆಯುತ್ತಾರಾ ಎನ್ನುವುದೇ ಪ್ರಶ್ನೆ. ಇವರಿಬ್ಬರ ಜೊತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಯೋಗಾರಮೇಶ್ ಕೂಡಾ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂವತ್ತೆರಡು ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಅವರು ಅಂದಿನಂತೆ ಈ ಬಾರಿಯೂ ಪ್ರಬಲ ಪೈಪೋಟಿ ನೀಡಿ ಸಾಂಪ್ರದಾಯಿಕ ಜೆಡಿಎಸ್ ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ.

ಎಚ್.ಎಸ್. ಪ್ರಕಾಶ್

ಹಾಸನದಲ್ಲಿ ಮೂವರು ಗಂಭೀರ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್‍ನ ಎಚ್.ಎಸ್.ಪ್ರಕಾಶ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಂದ ಪೈಪೋಟಿ ಎದುರಿಸುತ್ತಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಮಹೇಶ್ ಮತ್ತು ಬಿಜೆಪಿಯ ಪ್ರೀತಂ ಗೌಡ ಅವರ ಪ್ರಬಲ ಪೈಪೋಟಿಯಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ. ಬಿಜೆಪಿ ಅಭ್ಯರ್ಥಿ ಗೆಲುವಿನ ಹಂತಕ್ಕೆ ತಲುಪುತ್ತಾರೋ ಇಲ್ಲವೋ, ಆದರೆ ಗಮನಾರ್ಹ ಮತಗಳನ್ನಂತೂ ಪಡೆಯುತ್ತಾರೆ ಎನ್ನುವುದು ಸದ್ಯದ ಲೆಕ್ಕಾಚಾರ. ಅವರ ಮತಗಳಿಕೆ ಫಲಿತಾಂಶ ನಿರ್ಧರಿಸಲಿದೆ. ಕಾಂಗ್ರೆಸ್ ತನ್ನ ರಾಜ್ಯಮಟ್ಟದ ತಂತ್ರಗಾರಿಕೆಯ ಕಾರಣಕ್ಕೆ ಮುಸ್ಲಿಂ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಸಾಧ್ಯತೆ ಇದೆ. ಆದರೆ ದೇವೇಗೌಡರು ಮತದಾನದ ಹಿಂದಿನ ಎರಡು ದಿನಗಳ ಕಾಲ ಒಂದು ಸುತ್ತು ಬಂದು ಬದಲಾವಣೆ ಮಾಡುವ ಸಾಮಥ್ರ್ಯ ಉಳ್ಳವರು. ಎಲ್ಲಾ ಅಭ್ಯರ್ಥಿಗಳು ಆ ಎರಡು ದಿನಗಳಿಗಾಗಿ ಕಾಯುತ್ತಿದ್ದಾರೆ. ಹಿಂದಿನಂತೆ ದೇವೇಗೌಡರು ಪ್ರಭಾವ ಬೀರುವಲ್ಲಿ ಯಶಸ್ವಿಯಾದರೆ ಜೆಡಿಎಸ್ ಮತ್ತೆ ಬಾವುಟ ಹಾರಿಸುವಲ್ಲಿ ಸಂಶಯವಿಲ್ಲ.

ಎ.ಟಿ.ರಾಮಸ್ವಾಮಿ

ಶ್ರವಣಬೆಳಗೊಳ ಮತ್ತು ಅರಸೀಕೆರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ಇದ್ದಂತಿಲ್ಲ. ಅರಸೀಕೆರೆಯಲ್ಲಿ ಕುಡಿವ ನೀರು ಪೂರೈಕೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮಾಡಿ ಖ್ಯಾತಿ ಹೊಂದಿರುವ ಕೆ.ಎಂ.ಶಿವಲಿಂಗೇಗೌಡರ ಎದುರು ಕಾಂಗ್ರೆಸ್ ಅಭ್ಯರ್ಥಿ ಶಶಿಧರ್ ದುರ್ಬಲರಾಗಿ ಕಾಣುತ್ತಾರೆ. ಶ್ರವಣಬೆಳಗೊಳದಲ್ಲಿ ಕಾಂಗ್ರೆಸ್‍ನ ಸಿ.ಎಸ್.ಪುಟ್ಟೇಗೌಡರು ಕಳೆದ ಬಾರಿಯಂತೆಯೇ ಸೋಲು ಅನುಭವಿಸಬಹುದು. ಜೆಡಿಎಸ್‍ನ ಸಿ.ಎನ್.ಬಾಲಕೃಷ್ಣ ಗೆಲ್ಲುವ ಸಾಧ್ಯತೆಗಳಿವೆ.

ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್ ಚುನಾವಣೆ ಘೋಷಣೆಗೆ ಮೊದಲೇ ಅಲೆ ಎಬ್ಬಿಸಿದ್ದರು. ಹೇರಳವಾಗಿ ಹಣ ಖರ್ಚು ಮಾಡಿ ಪಾರ್ಟಿ ಮಾಡಿದ್ದರು. ಅವರ ಕ್ರಿಮಿನಲ್ ಹಿನ್ನೆಲೆ ಹೊರತಾಗಿಯೂ ಈ ಮೀಸಲು ಕ್ಷೇತ್ರದ ಮೇಲ್ವರ್ಗಗಳು ಅವರನ್ನು ಬೆಂಬಲಿಸುತ್ತಿವೆ. ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರು ‘ಸ್ಪೃಶ್ಯ’ ಸಮುದಾಯಕ್ಕೆ ಸೇರಿದವರು. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಸ್ಪೃಶ್ಯರು ಅವರನ್ನು ಬೆಂಬಲಿಸುವುದು ಅಷ್ಟಕಷ್ಟೆ. ಕಾಂಗ್ರೆಸ್ ಕೊನೆಕ್ಷಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯನವರನ್ನು ಕಣಕ್ಕೆ ತಂದರು. ಅವರು ಬಂದಿದ್ದು ತಡವಾಯ್ತು, ಹಾಗಾಗಿ ಕ್ಷೇತ್ರವನ್ನು ಪರಿಚಯ ಮಾಡಿಕೊಳ್ಳುವುದರಲ್ಲಿಯೇ ಅವರಿಗೆ ಸಾಕಷ್ಟು ಸಮಯ ಬೇಕಾಗಿದೆ. ಈ ಎಲ್ಲಾ ಕಾರಣಗಳಿಗೆ ಮತದಾರ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿಯವರನ್ನು ಬೆಂಬಲಿಸುವ ಸಾಧ್ಯತೆ ಇದೆ. ಹೇಗೂ ದೇವೇಗೌಡರ ಕಾರಣಕ್ಕೆ ಮೇಲ್ವರ್ಗದ ಮತಗಳಲ್ಲಿ ದೊಡ್ಡ ಮೊತ್ತ ಅವರ ಪಾಲಾಗಬಹುದು.

ಜೆಡಿಎಸ್ ಪಕ್ಷ ಬಿಎಸ್‍ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರೂ, ಹಾಸನದ ಮಟ್ಟಿಗೆ ಅದರ ಪರಿಣಾಮ ನಗಣ್ಯ. ಮೇಲಾಗಿ ಈ ಜಿಲ್ಲೆಯಲ್ಲಿ ಬಿಎಸ್‍ಪಿ ಪ್ರತಿನಿಧಿಸುವ ದಲಿತರು ದಬ್ಬಾಳಿಕೆ ಅನುಭವಿಸುತ್ತಿರುವುದೇ ಜೆಡಿಎಸ್ ಜೊತೆ ಪ್ರಬಲವಾಗಿ ಗುರುತಿಸಿಕೊಂಡಿರುವ ಸಮುದಾಯದಿಂದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...