Homeಕರ್ನಾಟಕಹಿಂದಿ ಹೇರಿಕೆಯ ವಿರುದ್ಧ ಜೂನ್ 4ರಂದು ಟ್ವಿಟ್ಟರ್ ಅಭಿಯಾನಕ್ಕೆ ಕರೆ

ಹಿಂದಿ ಹೇರಿಕೆಯ ವಿರುದ್ಧ ಜೂನ್ 4ರಂದು ಟ್ವಿಟ್ಟರ್ ಅಭಿಯಾನಕ್ಕೆ ಕರೆ

ಹೊಸ ಶಿಕ್ಷಣ ನೀತಿಯ ಮೂಲಕ ಹಿಂದಿ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ಅಭಿಯಾನ ನಡೆಸಲು ಕನ್ನಡಪರ ಹೋರಾಟಗಾರರು ನಿರ್ಧರಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಶಿಕ್ಷಣ ನೀತಿಯ ಮೂಲಕ ಹಿಂದಿ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ಅಭಿಯಾನ ನಡೆಸಲು ಕನ್ನಡಪರ ಹೋರಾಟಗಾರರು ನಿರ್ಧರಿಸಿದ್ದಾರೆ. ಇದೇ ಮಂಗಳವಾರ ಜೂನ್ 4 ರಂದು ಸಂಜೆ 6 ಗಂಟೆಗೆ #KarnatakaAgainstHindiImposition ಹ್ಯಾಷ್ ಟ್ಯಾಗ್ ಬಳಸಿ ಟ್ವಿಟ್ಟರ್ ಟ್ರೆಂಡ್ ಮಾಡಲು ಕರೆ ನೀಡಲಾಗಿದೆ.

ಈ ಹೊತ್ತಿನವರೆಗೆ ಆರನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಮಾತ್ರ ಹಿಂದಿ ಕಲಿಕೆ ಇದೆ. ಹತ್ತನೇ ತರಗತಿಯ ಮೂರು ಭಾಷೆಗಳಲ್ಲಿ ಯಾವುದೇ ಎರಡು ಭಾಷೆಗಳಲ್ಲಿ ಮಗು ಉತ್ತೀರ್ಣವಾದರೆ ಮೂರನೇ (ಅದು ಬಹುತೇಕ ಹಿಂದಿಯೇ ಆಗಿರುತ್ತದೆ) ಭಾಷೆಯಲ್ಲಿ ಫೇಲಾದರೂ ಉತ್ತೀರ್ಣವೆಂದೇ ಪರಿಗಣಿಸುವ ನಿಯಯವೊಂದಿತ್ತು. (ಈಗ ಕಳೆದೆರಡು- ಮೂರು ವರ್ಷಗಳಲ್ಲಿ ಈ ನಿಯಮವನ್ನೂ ಬದಲಿಸಿದ್ದಾರೆಂದು ಹೇಳಲಾಗುತ್ತಿದೆ) ಈಗಿನ ಕರಡು ಹೇಳುವ ಪ್ರಕಾರ ಕೆಜಿಯಿಂದ ಹಿಡಿದು 12ನೇ ವಯಸ್ಸಿನವರೆಗೆ ಹಿಂದಿ ಕಡ್ಡಾಯ.

ಅಂದರೆ ಮೊದಲು 12 ವಯಸ್ಸಿನಿಂದ ಆರಂಭವಾಗುತ್ತಿದ್ದ ಹಿಂದಿ ಕಲಿಕೆ ಈಗ ನಾಲ್ಕನೇ ವರ್ಷಕ್ಕೆ ಹಿಂತಳ್ಳಲ್ಪಡುತ್ತದೆ. ಹಾಗೆಯೇ 10ನೇ ತರಗತಿ ನಂತರ ಹಿಂದಿಯನ್ನು ಭಾಷೆಗಳ ಪಟ್ಟಿಯಲ್ಲಿ ಆಯ್ಕೆಯಾಗಿ ಮಾತ್ರ ಬೋಧಿಸಲಾಗುತ್ತಿತ್ತು. ಇನ್ನು ಮುಂದೆ ಕಡ್ಡಾಯವಾಗಿ ಬೋಧಿಸಬೇಕು ಎಂದಾಗುತ್ತದೆ. ಹಾಗೆ ಕಡ್ಡಾಯ ಮಾಡುವುದಾದರೆ ಪಿಯು ಹಂತದಲ್ಲಿ ಮೂರು ಭಾಷೆಗಳಾಗುತ್ತವೆ, ಇಲ್ಲವೇ ಈಗಿರುವ ಕನ್ನಡ, ಇಂಗ್ಲಿಷ್ ಎರಡರಲ್ಲಿ ಒಂದನ್ನು ಕೈ ಬಿಡಬೇಕಾಗುತ್ತದೆ. ಅಂಥ ಸಂದರ್ಭ ಬಂದರೆ ಖಂಡಿತವಾಗಿ ಕನ್ನಡವನ್ನೇ ಕೈಬಿಡಲಾಗುತ್ತದೆ. ಹಿಂದಿ ಆ ಸ್ಥಾನದಲ್ಲಿ ವಿರಾಜಮಾನವಾಗಲಿದೆ ಎಂದು ಫೇಸ್ ಬುಕ್ ನಲ್ಲಿ ರೋಹಿತ್ ಅಗಸರಹಳ್ಳಿ ವಿವರಿಸಿದ್ದಾರೆ.

ತಮಿಳುನಾಡಿನಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಂಡಿಲ್ಲ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಬಿಟ್ಟ ತಕ್ಷಣವೇ ಅವರು ಹಿಂದಿ ಹೇರಿಕೆಯ ವಿರುದ್ಧ ತೀವ್ರವಾಗಿ ಹೋರಾಟ ನಡೆಸಿದರು. ಜೂನ್ ಒಂದರಂದೆ ತಮಿಳುನಾಡಿನಲ್ಲಿ #StopHindiImposition ಹ್ಯಾಷ್ ಟ್ಯಾಗ್ ಬಳಸಿ ಟ್ವಿಟ್ಟರ್ ಟ್ರೆಂಡ್ ಮಾಡಲಾಗಿತ್ತು. ಇದಕ್ಕೆ ಬೆದರಿದ ಕೇಂದ್ರ ಸರ್ಕಾರ ನಾವು ಹಿಂದಿ ಹೇರುತ್ತಿಲ್ಲ, ಒಂದು ಆಯ್ಕೆಯಾಗಿ ಮುಂದಿಟ್ಟಿದ್ದೇವೆ ಎಂದು ಸಬೂಬು ಹೇಳಿತ್ತು.

ಈಗ ಕರ್ನಾಟಕದಲ್ಲಿ ಹಿಂದಿ ಹೇರಿಕೆಯ ವಿಚಾರ ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಸುದ್ದಿಯೆಬ್ಬಿಸಿದೆ. ಇದರ ಬೆನ್ನಲ್ಲೇ ಜೂನ್ 4ರ ಸಂಜೆ 6ಕ್ಕೆ ಟ್ವಿಟ್ಟರ್ ಟ್ರೆಂಡ್‍ಗೆ ಕರೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತ್ರಿಭಾಷಾ ಸೂತ್ರ ಕ್ಕೆ ಸಿಕ್ಕಿಯೇ ನಮ್ಮ ತ್ರೀ ಭಾಷೆಗಳೂ ಎಕ್ಕುಟ್ಟ ಹೋಗಿದ್ದು..ಆ ಕಡೆಗೆ ಇಂಗ್ಲೀಷು ಪರ್ಫೆಕ್ಟ್ ಇಲ್ಲ ಈ ಕಡೆಗೆ ಹಿಂದಿನೂ ಪರ್ಫೆಕ್ಟ ಆಗ್ಲಿಲ್ಲ.ಕೊನೆಗೆ ಉಳ್ಕೊಂಡಿದ್ದು ಒಂದೆ ಭಾಷೆ ಗಂಡು ಮೆಟ್ಟಿನ ಕನ್ನಡ..

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...