Homeಅಂಕಣಗಳುಹಿಂಸೆಯನ್ನು ವಿರೋಧಿಸೋಣ, ಜೊತೆಗೆ.....

ಹಿಂಸೆಯನ್ನು ವಿರೋಧಿಸೋಣ, ಜೊತೆಗೆ…..

- Advertisement -
- Advertisement -

ಗೌರಿ ಲಂಕೇಶ್
ನವೆಂಬರ್ 23, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಹಿಂಸೆ. ಈ ಪದ ವಾಸ್ತವದಲ್ಲಿ ಪಡೆಯುವ ನಾನಾ ಸ್ವರೂಪಗಳ ಬಗ್ಗೆ ಇತ್ತೀಚೆಗೆ ನಾನಾ ಚರ್ಚೆಗಳು ನಡೆದಿವೆ. ನಮ್ಮದು ಅಹಿಂಸಾವಾದವನ್ನು ನಂಬಿರುವ ದೇಶ ಎಂದೇ ಹೇಳಿಕೊಂಡು ಬಂದಿರುವ ಭಾರತದಲ್ಲಿ ಇವತ್ತಿಗೂ ದುರ್ಬಲರ ಮೇಲೆ ದೌರ್ಜನ್ಯ ನಡೆಯಿತ್ತಲೇ ಇದೆ. ಅದನ್ನೆಲ್ಲ ನಮ್ಮ ಸಮಾಜದ ಹುಳುಕುಗಳು ಎಂದು ಹೇಳುತ್ತಾ ಸುಮ್ಮನಿದ್ದವರೆಲ್ಲ, ಯಾವಾಗ ಹಲವರು ಆ ಹುಳುಕುಗಳನ್ನು ನಿವಾರಿಸಲು ಹಿಂಸೆಯೆನಿಸುವ ಮಾರ್ಗಕ್ಕಿಳಿದರೋ, ಆಗ ಈ ಹಿಂಸಾತ್ಮಕ ಮಾರ್ಗಕ್ಕೆ ನಮ್ಮ ಸಮಾಜದಲ್ಲಿ ಜಾಗವಿಲ್ಲ ಎಂದು ಸಿಡಿದೆದ್ದಿದ್ದಾರೆ.
ಹೌದು, ಹಿಂದೆಯನ್ನು ಎಂದಿಗೂ ಸಹಿಸಕೂಡದು. ಆದರೆ ನಮ್ಮ ಕಣ್ಣುಮುಂದೆಯೇ ನಮ್ಮ ಸುತ್ತಲು ನಡೆಯುತ್ತಿರುವ ಹಿಂಸೆಯ ಬಗ್ಗೆ ಯಾಕೆ ಎಲ್ಲರಿಗೂ ಜಾಣ ಕುರುಡು? ಇವತ್ತು ಪ್ರತಿನಿತ್ಯದ ಹಿಂಸೆ ಉದ್ಭವಿಸುತ್ತಿರುವುದು ಆ ಯುವಕರು ಹಿಡಿದಿರುವ ಬಂದೂಕುಗಳಿಂದಲ್ಲ, ಬದಲಾಗಿ ಸಮಾಜದ ಪುರುಷ ಪ್ರಧಾನ ಆಲೋಚನೆ, ಊಳಿಗಮಾನ್ಯ ವ್ಯವಸ್ಥೆ, ಉಳ್ಳವರ ಪರವಾಗಿರುವ ರಾಜಕೀಯ, ಜಾಗತೀಕರಣದಿಂದಾಗುತ್ತಿರುವ ಅನ್ಯಾಯ…. ಇಂಥದೆಲ್ಲ ವಿಭಿನ್ನ ಬಗೆಯ ಹಿಂಸೆಯ ರೂಪಗಳಿಂದ. ಇದು ನಮ್ಮ ಭಾರತೀಯ ಸಮಾಜಕ್ಕೆ ಮಾತ್ರ ಅನ್ವಯಿಸುವುದಿಲ್ಲ, ಬದಲಾಗಿ ಮೇಲೆ ಹೇಳಿದ ಅಂಶಗಳು ಜಾಗತಿಕ ಮಟ್ಟದಲ್ಲೂ ಹಿಂಸೆಯನ್ನು ಹುಟ್ಟುಹಾಕುತ್ತಿದೆ.
ಇತ್ತೀಚೆಗೆ ಪ್ಯಾರಿಸ್ ನಗರದಲ್ಲಿ ಒಂದು ಪ್ರಯೋಗವನ್ನು ನಡೆಸಲಾಯಿತು. ಎಲ್ಲ ರೀತಿಯಲ್ಲೂ ಸಮಾನವಾದ ಅರ್ಹತೆಗಳನ್ನುಳ್ಳ ಎರಡು ಅರ್ಜಿಗಳನ್ನು-ಒಂದರಲ್ಲಿ ಕ್ರಿಶ್ಚಿಯನ್ ಹೆಸರನ್ನು ಹಾಗೂ ಪ್ರತಿಷ್ಠಿತ ಬಡಾವಣೆಯ ವಿಳಾಸವನ್ನು, ಮತ್ತೊಂದರಲ್ಲಿ ಮುಸ್ಲಿಂ ಹೆಸರನ್ನು ಹಾಗೂ ಬಡ-ಮಧ್ಯಮ ವರ್ಗದವರು ವಾಸಿಸುವ ಏರಿಯಾದ ವಿಳಾಸವನ್ನು ನಮೂದಿಸಿ-ಕೆಲಸಕ್ಕೆ ಅಹ್ವಾನಿಸಿದ್ದ ಕಚೇರಿಗಳಿಗೆ ಕಳುಹಿಸಲಾಗಿತ್ತು. ಸ್ವರ್ಗದಂತಹ ಪ್ಯಾರಿಸ್‍ನಲ್ಲೂ ನರಕಗಳಿರುತ್ತವೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕ್ರಿಶ್ಚಿಯನ್ ಹೆಸರಿನ, ಪ್ರತಿಷ್ಠಿತ ಬಡಾವಣೆಯ ಅರ್ಜಿಗೆ ಐದು ಅಹ್ವಾನಗಳು ಬಂದರೆ, ಮುಸ್ಲಿಂ ಹೆಸರಿನ ಬಡವರ್ಗಗಳ ಏರಿಯಾದ ಅರ್ಜಿಗೆ ಒಂದೇ ಒಂದು ಆಹ್ವಾನ ಬಂದಿತ್ತು.
ಇಂಥಾ ಅಸಮಾನತೆಯೂ ಒಂದು ಬಗೆಯ ಹಿಂಸೆ. ಈ ಹಿಂಸೆಯನ್ನು ಅದೆಷ್ಟು ದಿನ ತಾನೆ ಅಹಿಂಸೆಯ ನೆಪದಿಂದ ಸಹಿಸಿಕೊಳ್ಳಲು ಸಾಧ್ಯ. ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಾದಾಗ ಪ್ಯಾರಿಸ್‍ನ ಬಿಸಿರಕ್ತದ ಹುಡುಗರು ಗಲಭೆಗಿಳಿದಿದ್ದಾರೆ. ಆ ಗಲಭೆಗಳನ್ನು ವಿರೋಧಿಸುವುದು ಎಷ್ಟು ಜರೂರೋ, ಆ ಗಲಭೆಗೆ ಕಾರಣವಾದ ನಮ್ಮ ಸಮಾಜದ ಅಂತರ್ಗತ ಹಿಂಸೆಗಳನ್ನು ಹೋಗಲಾಡಿಸಬೇಕಾದ್ದೂ ನಮ್ಮೆಲ್ಲರ ಮೇಲಿರುವ ಹೊಣೆ. ಇಲ್ಲವಾದಲ್ಲಿ ಹಿಂಸೆಯನ್ನು ವಿರೋಧಿಸುವ ಹಕ್ಕನ್ನೇ ನಾವೆಲ್ಲ ಕಳೆದುಕೊಂಡುಬಿಡುತ್ತೇವೆ.
ಅದಕ್ಕೆ ಮೊದಲೇ ಹೇಳಿದ್ದು. ‘ಹಿಂಸೆ’ ಎಂದ ಕೂಡಲೇ “ಸಹಿಸಕೂಡದು” ಎಂದು ಅರಚುವ ಬದಲಾಗಿ ಆ ಹಿಂಸೆಯ ಮೂಲ ಎಲ್ಲಿದೆ ಎಂದು ವಿಶ್ಲೇಷಿಸುವ ಅಗತ್ಯ ಇವತ್ತಿನ ತುರ್ತು ಎಂದು. ಏಕೆಂದರೆ ಪ್ಯಾರಿಸ್‍ಗೆ ಬೆಂಕಿ ಹಚ್ಚಿರುವವರು ಹಿಂಸಾವಾದಿಗಳೂ ಅಲ್ಲ, ಭಯೋತ್ಪಾದಕರೂ ಅಲ್ಲ, ಬದಲಾಗಿ ಅದು ಅಲ್ಲಿನ ವ್ಯವಸ್ಥೆಯಲ್ಲೇ ಅಡಗಿರುವ ಹಿಂಸೆಗೆ ಬಲಿಯಾದವರ ಪ್ರತಿಕ್ರಿಯೆ ಅಷ್ಟೇ. ಇಂತಹ ಪ್ರತಿಕ್ರಿಯೆಯನ್ನು ನಿಷೇಧಾಜ್ಞೆಯಿಂದಾಗಲಿ, ಸ್ಪೆಷಲ್ ಸ್ಕ್ವಾಡ್‍ಗಳಿಂದಾಗಲಿ, ಗೋಲಿಬಾರ್‍ನಿಂದಾಗಲಿ ತಡೆಯಲಾಗುವುದಿಲ್ಲ.
ಇದೆಲ್ಲ ನಾವು ಕೈಕಟ್ಟಿ ಕೂತಿರುವಷ್ಟು ಕಾಲ ನಡೆಯುತ್ತಲೇ ಇರುತ್ತೆ. ಜನರಿಗೆ ಅನ್ಯಾಯದ ಬಗ್ಗೆ ಅರಿವು ಮೂಡಿದ ನಂತರವೂ ಅವರು ಕೈಕಟ್ಟಿ ಕೂತಿರಬೇಕು ಎಂದು ನಿರೀಕ್ಷಿಸಲಾಗುವುದಿಲ್ಲ. ಹಾಗೊಮ್ಮೆ ಅವರು ಪ್ಯಾರಿಸ್ ಯುವಕರಂತೆ ಕಾರ್ಯೋನ್ಮುಖರಾದರೆ ಅವರಿಗೆ ಆಗ ಅಹಿಂಸೆಯ ಪಾಠ ಬೋಧಿಸಲಾಗುವುದಿಲ್ಲ. ಆದ್ದರಿಂದಲೇ ಹಿಂಸೆಯ ವಿವಿಧ ವ್ಯಾಖ್ಯಾನಗಳಿಗಿಂತ ಅದರ ಬೇರು ಎಲ್ಲಿದೆ ಎಂದು ಹುಡುಕಬೇಕಿದೆ. ಈ ಪ್ರಶ್ನೆಯನ್ನು ಗಾಂಧೀಜಿಯವರೂ ನಿರಾಕರಿಸಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...