Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...