Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...