HomeUncategorizedಹೂಗಳ ಶವಯಾತ್ರೆಯಲಿ

ಹೂಗಳ ಶವಯಾತ್ರೆಯಲಿ

- Advertisement -
- Advertisement -
   –ಡಾ. ವಿನಯಾ ಒಕ್ಕುಂದ

‘ನಂಗೆ ತಡ ಆಗ್ತಿದೆ. ಏನ್ ನೀನು.. ಬೆಳಿಗ್ಗೆ ಬೆಳಿಗ್ಗೆಯೇ ಫೇಸ್‍ಬುಕ್ಕಾ$’ ಎಂದು ಒಂದಿಷ್ಟು ಜರ್ಬಿನಲ್ಲಿಯೇ ಮಗಳ ರೂಂ ಹೊಕ್ಕಿದ್ದೆ. ಅವಳು ತಾನು ನೋಡುತ್ತಿದ್ದ ಮೊಬೈಲ್‍ನ್ನು ನನ್ನೆದುರು ಹಿಡಿದಳು. ಅಲ್ಲಿ ಮುದ್ದಾದ ಹುಡುಗಿಯೊಬ್ಬಳಿದ್ದಳು. ‘ಹೂಂ ಚಂದಿದ್ದಾಳೆ’ ಅಂದೆ. ಅವಳ ರೇಪ್ ಆಗಿ ಮರ್ಡರ್ ಆಗಿದೆಯಂತಮ್ಮಾ- ಅಂದಳು. ಏನು ಎಲ್ಲಿ ಎಲ್ಲ ಅರೆಬರೆ. ಯಾರೋ ಅಂಟುರಾಳ ಕುದಿಸಿ ಗಂಟಲಿಗೆ ಹೊಯ್ದಿದ್ದಾರೆ ಅನ್ನುವಂತೆ ನೋವಿನ ಅಮಲೇರಿತ್ತು. ತೊಡೆಗುಂಟ ನಡುಕ. ಯಾಕೆ ಇಷ್ಟು ದುರ್ಬಲವಾಗುತ್ತಿದ್ದೇನೆ ಎಂದೂ ತಿಳಿಯದಷ್ಟು. ಸಂಜೆಯಷ್ಟೊತ್ತಿಗೆ ಮಗಳು ಕಥುವಾದ 8 ವರ್ಷದ ಮುದ್ದು ಮಗು ಆಸೀಫಾಳ ಚಿತ್ರ ಬರೆಯುತ್ತ ಕೂತಿದ್ದಳು. ಸ್ನಾನವನ್ನೂ ಮಾಡಿರಲಿಲ್ಲ. ಕೇಳಿದರೆ ‘ಮಾಡಬೇಕು ಅನ್ನಿಸಲಿಲ್ಲ’ ಎಂದಳು. ಯಾತನೆಯನ್ನು ಅದುಮಿಡುವ ಒರಟುತನದಲ್ಲಿ. ಈಗ ಸಂಭಾಳಿಸಿಕೊಂಡಿದ್ದೇವೆ. ನಮನಮಗೆ ನಾವೇ. ಅವಳು ಫೇಸ್‍ಬುಕ್ ವಿಷಯಗಳನ್ನು ಮುಂದೆ ಹಿಡಿಯುತ್ತ ನಾನು ಪೇಪರ್‍ನ ಸುದ್ದಿಗಳನ್ನು ತೋರಿಸುತ್ತ…. ಅಂತ್ಯವೇ ಇಲ್ಲದ ಜುಗಲ್‍ಬಂದಿಯ ತಡಬಡಿಕೆಯಲ್ಲಿ.
ಇದು ಆರಂಭವೂ ಅಲ್ಲ. ಅಂತ್ಯವು ಅಲ್ಲ. ದೇಶದಲ್ಲಿ ಸಹಬಾಳ್ವೆಯ ಬಗ್ಗೆ ಆಕಾರಣ ತ್ವೇಷಮಯ ಸ್ಥಿತಿ ಉಲ್ಬಣಿಸತೊಡಗಿದಂತೆ ಆ ಉರಿಕೆನ್ನಾಲಿಗೆಗೆ ಹೆಣ್ಣುಮಕ್ಕಳು ಬಲಿಯಾಗುತ್ತಾರೆ.  ಅಸಹನೆ ವೈಯಕ್ತಿಕವಾಗಿರಲಿ, ಕೌಟುಂಬಿಕವಾಗಿರಲಿ, ಮತೀಯವಾಗಿರಲಿ, ರಾಷ್ಟ್ರೀಯವಾಗಿರಲಿ… ಅದರ ವಿಷಫಲವನ್ನು ಹೆಣ್ಣು ಅನುಭವಿಸಬೇಕಿದೆ. ದುರಂತವೆಂದರೆ, ದಿನದಿಂದ ದಿನಕ್ಕೆ ವಿಕೃತತೆ ಬೆಳೆಯುತ್ತಲೂ ಇದೆ. ನಾಗರಿಕ ಸಮಾಜದಲ್ಲಿ ಬಾಳುತ್ತಿದ್ದೇವೆಯೇ ಎಂದು ಅನುಮಾನಿಸಿಕೊಳ್ಳುವಂತೆ. ಕಥುವಾದ ಮಗುವನ್ನು ದೇವಸ್ಥಾನದಲ್ಲಿ ಬಂಧಿಸಿಟ್ಟು ನಿರಂತರ ಅತ್ಯಾಚಾರ ಮಾಡಿದವರು, ಹಿಂದೂ ಧರ್ಮದ ಭಾರತವನ್ನು ರಕ್ಷಿಸುತ್ತಿದ್ದೇವೆ- ಎಂದು ಭ್ರಮಿಸಿದವರು. ದೇವಸ್ಥಾನದ ಪಾವಿತ್ರ್ಯ, ತಮ್ಮ ನೀಚ ಕೆಲಸ ಹೇಗೆ ತಾಳೆಯಾದೀತೆಂಬ ಅನುಮಾನವೂ ಅವರನ್ನು ಕಾಡಲಿಲ್ಲ. ಈ ಆರೋಪಿಗಳು ಸಮಾಜದ ಮುಖ್ಯವಾಹಿನಿಯಲ್ಲಿರುವ ಸಭ್ಯ ನಾಗರಿಕರು. ಆ ಮಗುವಿನಂಥದೇ ಹೆಣ್ಣು ಮಕ್ಕಳಿರುವ ತಂದೆಯಂದಿರು. ದೂರದ ಊರಿನ ಸಂಬಂಧಿಗೆ- ಹೀಗೊಂದು ರೇಪ್ ಅವಕಾಶವಿದೆ ಬರುತ್ತೀಯಾ? – ಎಂದು ಹಂಚಿಕೊಂಡು ಅನುಭವಿಸುವ ಸಂಸ್ಕøತಿವಂತರು. ಕಡೆಯ ಬಾರಿ ಒಮ್ಮೆ ರೇಪ್ ಮಾಡಿ ಆಮೇಲೆ ಪ್ರಾಣ ತೆಗೆದರಾಯಿತು ಎಂದು ಪೂರ್ಣ ಪ್ರಯೋಜನ ಪಡೆದುಕೊಳ್ಳುವ ತಿಳಿವಳಿಕಸ್ಥರು. ಅವರು ಮಗುವನ್ನು ಹಸಿವಿನಿಂದ ನೀರಡಿಕೆಯಿಂದ ಬಳಲಿಸಿದರು. ಬಲವಂತವಾಗಿ ಮದ್ಯಪಾನ ಮಾಡಿಸಿ ಆ ಪುಟ್ಟ ದೇಹವನ್ನು ಛಿದ್ರ ಮಾಡಿದರು. ಮಗುವಿನ ದೇಹದ ಒಳಹೊರಗುಗಳನ್ನು ರಣಗಾಯವಾಗಿರಿಸಿದರು. ಆ ಪೈಶಾಚಿಕ ವರ್ತನೆಯನ್ನು ಕೇಳಿದರೆ ‘ಸದ್ಯ ಮಗು ಉಳಿಯಲಿಲ್ಲವಲ್ಲ. ಅಷ್ಟು ಸಾಕು’ – ಎಂದು ಉಸಿರಿಡುವಂತಾಗುತ್ತದೆ. ಜಮ್ಮು-ಕಾಶ್ಮೀರದಲ್ಲಿ ಹಿಂದೂ-ಮುಸ್ಲಿಂರ ನಡುವೆ ಹೆಚ್ಚುತ್ತಿರುವ ಜನಾಂಗೀಯ ದ್ವೇಷದ ಉರಿಯಿದು ಈ ಮಗು ಬಕ್ರೆವಾಲಾ ಎಂಬ ಕುರಿಗಾಹಿ ಅಲೆಮಾರಿ ಕುಟುಂಬಕ್ಕೆ ಸೇರಿದ್ದು. ಅವರು ಮುಸ್ಲಿಂ ಮತಾನುಯಾಯಿಗಳು. ಭಾರತದ ಯಾವ ಮೂಲೆಯಲ್ಲಿರುವ ಮುಸ್ಲಿಂರನ್ನೂ ಪಾಕಿಸ್ತಾನದ ಏಜೆಂಟರು ಎಂದು ಗುಲ್ಲೆಬ್ಬಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವುದು ಕೋಮುವಾದಿಗಳಿಗೆ ಸಾಧ್ಯವಾಗಿರುವಾಗ ಪಾಕಿಸ್ತಾನದ ಗಡಿಯ ಬಡ ಮುಸ್ಲಿಮರ ಮೇಲೆ ಈ ಆರೋಪ ಹೊರಿಸುವುದು ಅಲ್ಲಿಯ ಹಿಂದೂ ಏಕತಾ ಮಂಚ್ ಮತ್ತು ಭಾರತ ಬಚಾವೊ ರಥಯಾತ್ರೆಯ ಸಂಘಟನೆಗಳಿಗೆ ಕಷ್ಟವಲ್ಲ. ಒಮ್ಮೆ ದೊಡ್ಡದನಿಯಲ್ಲಿ ಆರೋಪವನ್ನು ಹೊರೆಸಿ, ಪ್ರಚಾರಕ್ಕೆ ತಂದರೆ ಮುಕ್ಕಾಲು ಕೆಲಸ ಆಯಿತೆಂದೇ ಲೆಕ್ಕ. ಪ್ರಚಾರವೇ ಅಧಿಕೃತತೆಯಾದ ಕಾಲದಲ್ಲಿ ಶಿಕ್ಷಿಸುವ ಅಧಿಕಾರ ದತ್ತವಾಗುತ್ತದೆ. ಸಂವಿಧಾನಾತ್ಮಕ ಕಾನೂನು ಏನೇ ಹೇಳಲಿ, ಮತೀಯತೆಯೇ ಕಾನೂನಾದವರಿಗೆ ಅದರ ಹಂಗೇ ಇಲ್ಲ. ತಮ್ಮೊಳಗಿನ ಧರ್ಮಾಂಧತೆ ಮತ್ತು ಕಾಮುಕ ವಿಕೃತಿಗೆ ರಾಷ್ಟ್ರಭಕ್ತಿಯ ತೆಳು ಪರದೆ ಹೊದ್ದು ರಕ್ಷಣಾತ್ಮಕ ಯುದ್ಧದ ವರಸೆಗಳನ್ನು ಹಾಕುತ್ತಲೇ ಇದ್ದಾರೆ. ಕಟುವಾದ ಘಟನೆಗೆ ಏನೆಲ್ಲ ಮೊನಚುಗಳಿವೆ. ಎಳೆಯ ಹೂವಿನಂತಹ ಮಗುವಿನ ದೇಹ ಅನುಭವಿಸಿರಬಹುದಾದ ಯಾತನೆಯ ವಿದ್ರಾವಕತೆ, ಮತೀಯ ಭ್ರಮೆ ಮನುಷ್ಯರನ್ನು ಅದೆಷ್ಟು ಕ್ರೂರಿಗಳನ್ನಾಗಿಸಬಹುದೆಂಬ ಭೀಕರತೆ, ದೇಶದ ನ್ಯಾಯಾಂಗವನ್ನು ರಕ್ಷಿಸುವ ಹೊಣೆ ಹೊತ್ತ ವಕೀಲರು, ರಕ್ಷಕರಾಗಿರಬೇಕಿದ್ದ ಪೋಲಿಸರು, ಶಾಸಕಾಂಗದ ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಗಳು ಆರೋಪಿಗಳ ರಕ್ಷಣೆಗೆ ಪಣತೊಟ್ಟಿರುವ ಅಧಃಪತಗಳೆಲ್ಲ ಸೇರಿದ ಜಟಿಲ ಹೆಣಿಗೆಯಿದು. ರಾಜ್ಯದಲ್ಲಿ ನ್ಯಾಯಸಿಗದು, ಮಗುವಿನ ಸಮಾಧಿಯೂ ಸುರಕ್ಷಿತವಲ್ಲ – ಎಂದು ಬಡ ಕುಟುಂಬ ಕಣ್ಣೀರು ಹಾಕುತ್ತಿದ್ದರೆ; ಇಂತಹ ಹೇಯ ಘಟನೆಗಳಿಗೆ ಮೌನದಿಂದಲೇ ಸ್ಪಂದಿಸುವ, ಕಡೆಗೊಂದು ತೇಪೆಯ ಮಾತು ಹಚ್ಚುವ ಜನನಾಯಕರಿರುವ ರಾಷ್ಟ್ರವಿದು. ಅಲೆಮಾರಿ ಜನಾಂಗದ ಮಗುವಿನ ಈ ಬರ್ಬರ ಹಿಂಸೆಯ ಪಾಪವನ್ನು ಮಾನ್ಯ ಪ್ರಧಾನಿಗಳು ಬುಡಕಟ್ಟು ಮಹಿಳೆಯೊಬ್ಬರ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಪರಿಹರಿಸಿಕೊಳ್ಳಲು ಬಯಸಿದರೇನೋ. ಪಾಪ ಪರಿಹಾರವಾಯಿತೇ? ಗೊತ್ತಿಲ್ಲ. ಜನರ ಮನಸ್ಥಿತಿಯನ್ನು ಸ್ವಲ್ಪ ಮಟ್ಟಿಗಾದರೂ ವಿಚಲಿತಗೊಳಿಸಿ ತಮ್ಮ ಉದಾರ ವ್ಯಕ್ತಿತ್ವದ ನಾಟಕ ಮುಂದುವರಿಸುವಲ್ಲಿಯಂತೂ ಆ ದೃಶ್ಯ ಸಹಾಯ ಮಾಡಿರಬಹುದು. ಒಬ್ಬರು ಸಂವಿಧಾನದ ಸಾಧ್ಯತೆಯನ್ನು ಪ್ರಶ್ನಿಸುತ್ತಾರೆ. ಇನ್ನೊಬ್ಬರು ಅಂಬೇಡ್ಕರರನ್ನು ಸಂತ – ಋಷಿ ಎಂದೆಲ್ಲ ಕರೆದು ಹೂ ಏರಿಸಿ ಮತಬೇಟೆಗೆ ಯತ್ನಿಸುತ್ತಾರೆ. ಎರಡೂ ಕೆಲಸ ಒಂದೇ ಚಿಂತನೆಯ ಜನರದ್ದೇ. ಜನ ಬರೀ ಪ್ರೇಕ್ಷಕರು. ಗೋಣಾಡಿಸುವವರು.

ಉನ್ನಾವ್‍ದ ಘಟನೆಯಂತೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನ ಸಂಪುಟ ಸಚಿವರಿಗೆ ನೇರ ಸಂಬಂಧಿಸಿದ್ದು. ಸುಮಾರು ಒಂದು ವರ್ಷದ ಹಿಂದಿನ ಪ್ರಕರಣವನ್ನು ಮುಚ್ಚಿಹಾಕುವ ರಾಜಕಾರಣ ನಿಚ್ಚಳವಾಗಿದೆ. ಈ ಘಟನೆಗಳಲ್ಲಿ ಭಾರತದ ಆತ್ಮಗೌರವವನ್ನು ಎತ್ತಿಹಿಡಿದ ಎರಡು ಉಳಿಕೆಗಳಿವೆ. ಉನ್ನಾವ್ ಘಟನೆಯನ್ನು ನಿರ್ವಹಿಸುತ್ತಿರುವ ಹೈಕೋರ್ಟ್ ಮತ್ತು ಕಟುವಾ ಪ್ರಕರಣವನ್ನು ತನಿಖೆ ನಡೆಸಿದ್ದ ಉನ್ನತ ಅಧಿಕಾರಿ ರಮೇಶ ಜಾಲ ಅವರು ತಮ್ಮೆಲ್ಲ ಒತ್ತಡಗಳ ನಡುವೆಯೂ ಮಗುವಿನ ನ್ಯಾಯಕ್ಕಾಗಿ ಪ್ರಯತ್ನಿಸಿದ ರೀತಿ. ಅವರು ಉಗ್ರವಾದಿಗಳ ದಾಳಿಗೆ ಒಳಗಾಗಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿದ್ದರು ಮತ್ತು ಅವರು ಹುಟ್ಟಿನಿಂದ ಕಾಶ್ಮೀರಿ ಪಂಡಿತ ಸಮುದಾಯದವರು ಎನ್ನುವುದು ಕಣ್ಣಿವೆಯನ್ನು ಒದ್ದೆಯಾಗಿಸುತ್ತದೆ. ಆದಿತ್ಯನಾಥನನ್ನು ನಾಥ ಪಂಥದಯೋಗಿ ಎನ್ನುವವರಿಗೆ, ನಾಥ ಪಂಥದ ಮೂಲಸತ್ವದ ಅರಿವಿದೆಯೋ? ಎಂದು ಕೇಳಬೇಕೆನಿಸುತ್ತದೆ. ಶಾಲೆ, ಕಾಲೇಜು, ಅಂಗಡಿ, ಮುಂಗಟ್ಟು, ಮಸೀದಿ ಕಡೆಗೆ ಅಂಬೇಡ್ಕರ ಮೂರ್ತಿಗೂ ಕೇಸರಿ ಬಣ್ಣ ಬಳಿವ ದಾಷ್ಟ್ರ್ಯವನ್ನು ತೋರುವ ಸರ್ವಾಧಿಕಾರಿ ಯಾವ ಸಾಧಕ ಸಂಪ್ರದಾಯ ಸೇರಲು ಸಾಧ್ಯ? ನನಗಂತೂ ಆ ವ್ಯಕ್ತಿಯ ಹೆಸರು ಕೇಳಿದಾಗೆಲ್ಲ ಗೋರಖಪುರವೇ ನೆನಪಾಗುತ್ತದೆ. “ನಾನು ಶವಯಾತ್ರೆಯಲಿ ಹೂಗಳನು ಕಂಡಿದ್ದೆ. ನಿನ್ನೆ ಗೋರಖಪುರದಲ್ಲಿ ಹೂಗಳ ಶವಯಾತ್ರೆ ಕಂಡೆ” – ಎಂಬ ಗುಲ್ಜಾರರ ಕವಿತೆಯೂ. ಅದ್ಯಾಕೆ ಒಂದು ನಿರ್ದಿಷ್ಟ ಸಮುದಾಯದ ಬಡವರೇ ಹೆಚ್ಚಿರುವ ಪ್ರದೇಶದ ಆಸ್ಪತ್ರೆಯಲ್ಲಿ ವಿದ್ಯುತ್ ಕೈಕೊಟ್ಟುಬಿಟ್ಟಿತು? ಎಂದು ಕೇಳಬೇಕೆನಿಸುತ್ತದೆ. ರಾಜೇಂದ್ರ ಚೆನ್ನಿಯವರು ಉಲ್ಲೇಖಿಸುವ ನಾಓಮಿಕ್ಲೀನ್ ಬರೆದ ಖಿhe shoಛಿಞ ಜoಛಿಣಡಿiಟಿe ಕೃತಿಯಲ್ಲಿ
ಅಮೆರಿಕದ ನಗರವೊಂದನ್ನು ಚಂಡಮಾರುತ ಅಪ್ಪಳಿಸಿ ಕೆಳಮಧ್ಯಮ ವರ್ಗದ ಬಡಾವಣೆಗಳನ್ನು ಗುಡಿಸಿಹಾಕುತ್ತದೆ. ಜನ ಬೀದಿಗೆ ಬೀಳುತ್ತಾರೆ. ರಾಜಕೀಯ ಧುರೀಣರು ಮಾತ್ರ ‘ನಾವು ಮಾಡಲಾಗದ್ದನ್ನು ದೇವರೇ ಮಾಡಿದ’ ಎಂದು ಸಂತಸಪಡುತ್ತಾರೆ. ಅಲ್ಲಿ ಕಾರ್ಪೊರೇಟ್ ಕಂಪನಿಗಳಿಂದ ಟೂರಿಸ್ಟ ರೆಸಾರ್ಟುಗಳ ಯೋಜನೆ ಸಿದ್ಧವಾಗುತ್ತದೆ. “ಒಂದು ಅತ್ಯಾಚಾರವನ್ನು ದೊಡ್ಡದು ಮಾಡಬೇಡಿ ದೇಶದ ಪ್ರವಾಸೋದ್ಯಮಕ್ಕೆ ಧಕ್ಕೆ ಆಗುತ್ತದೆ- ಎಂದು ‘ಅಧಿಕಾರಸ್ಥರು’ ಮಾತಾಡುವಾಗ ಈ ಎಲ್ಲವುಗಳಿಗೆ ಇರುವ ಸಹ ಸಂಬಂಧ ಮನಸ್ಸನ್ನು ಚುಚ್ಚತೊಡಗುತ್ತಿದೆ.
ಇಂದಿನ ಬೆಳಗು, ಸೂರತ್ ಪೊದೆಯಲ್ಲಿ ಹೆಣ್ಣು ಮಗುವೊಂದರ ಮೃತದೇಹ ಪತ್ತೆಯಾಗಿದ್ದು 86 ಗಾಯಗಳಿದ್ದ ಮತ್ತು ಸತತ ಭೀಕರ ಅತ್ಯಾಚಾರಕ್ಕೊಳಗಾದ ದೇಹ ಎನ್ನಲಾಗಿದೆ. ಮಗುವಿನ ದಾತಾರರೂ ಗುರುತಿಲ್ಲ. – ಮನಸ್ಸು ನಡುಗುತ್ತಿದೆ. ನನ್ನ ಮಗಳೀಗ ಚಿತ್ರದ ಯಾವ ರೇಖೆಯಲ್ಲಿದ್ದಾಳೋ, ಅದೇನು ಕೇಳುತ್ತಾಳೋ…. ಅಥವಾ ಜೀವ ರೋಸಿ ವಾಸ್ತವದ ನಿಷ್ಠುರತೆಗೆ ಬೆನ್ನುಹಾಕಿ ಅದೆಂಥದೋ ಮನರಂಜನೆಯ ಚೆನಲ್‍ಗೆ ಕಣ್ಣು ಕೀಲಿಸಿದರೆ…. ಗುಲ್ಜಾರ್, ಹೂಗಳ ಶವಯಾತ್ರೆ ಎಂದು ಕರೆದದ್ದು ಯಾವೆಲ್ಲದ್ದಕ್ಕೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...