HomeUncategorizedಹೂಗಳ ಶವಯಾತ್ರೆಯಲಿ

ಹೂಗಳ ಶವಯಾತ್ರೆಯಲಿ

- Advertisement -
- Advertisement -
   –ಡಾ. ವಿನಯಾ ಒಕ್ಕುಂದ

‘ನಂಗೆ ತಡ ಆಗ್ತಿದೆ. ಏನ್ ನೀನು.. ಬೆಳಿಗ್ಗೆ ಬೆಳಿಗ್ಗೆಯೇ ಫೇಸ್‍ಬುಕ್ಕಾ$’ ಎಂದು ಒಂದಿಷ್ಟು ಜರ್ಬಿನಲ್ಲಿಯೇ ಮಗಳ ರೂಂ ಹೊಕ್ಕಿದ್ದೆ. ಅವಳು ತಾನು ನೋಡುತ್ತಿದ್ದ ಮೊಬೈಲ್‍ನ್ನು ನನ್ನೆದುರು ಹಿಡಿದಳು. ಅಲ್ಲಿ ಮುದ್ದಾದ ಹುಡುಗಿಯೊಬ್ಬಳಿದ್ದಳು. ‘ಹೂಂ ಚಂದಿದ್ದಾಳೆ’ ಅಂದೆ. ಅವಳ ರೇಪ್ ಆಗಿ ಮರ್ಡರ್ ಆಗಿದೆಯಂತಮ್ಮಾ- ಅಂದಳು. ಏನು ಎಲ್ಲಿ ಎಲ್ಲ ಅರೆಬರೆ. ಯಾರೋ ಅಂಟುರಾಳ ಕುದಿಸಿ ಗಂಟಲಿಗೆ ಹೊಯ್ದಿದ್ದಾರೆ ಅನ್ನುವಂತೆ ನೋವಿನ ಅಮಲೇರಿತ್ತು. ತೊಡೆಗುಂಟ ನಡುಕ. ಯಾಕೆ ಇಷ್ಟು ದುರ್ಬಲವಾಗುತ್ತಿದ್ದೇನೆ ಎಂದೂ ತಿಳಿಯದಷ್ಟು. ಸಂಜೆಯಷ್ಟೊತ್ತಿಗೆ ಮಗಳು ಕಥುವಾದ 8 ವರ್ಷದ ಮುದ್ದು ಮಗು ಆಸೀಫಾಳ ಚಿತ್ರ ಬರೆಯುತ್ತ ಕೂತಿದ್ದಳು. ಸ್ನಾನವನ್ನೂ ಮಾಡಿರಲಿಲ್ಲ. ಕೇಳಿದರೆ ‘ಮಾಡಬೇಕು ಅನ್ನಿಸಲಿಲ್ಲ’ ಎಂದಳು. ಯಾತನೆಯನ್ನು ಅದುಮಿಡುವ ಒರಟುತನದಲ್ಲಿ. ಈಗ ಸಂಭಾಳಿಸಿಕೊಂಡಿದ್ದೇವೆ. ನಮನಮಗೆ ನಾವೇ. ಅವಳು ಫೇಸ್‍ಬುಕ್ ವಿಷಯಗಳನ್ನು ಮುಂದೆ ಹಿಡಿಯುತ್ತ ನಾನು ಪೇಪರ್‍ನ ಸುದ್ದಿಗಳನ್ನು ತೋರಿಸುತ್ತ…. ಅಂತ್ಯವೇ ಇಲ್ಲದ ಜುಗಲ್‍ಬಂದಿಯ ತಡಬಡಿಕೆಯಲ್ಲಿ.
ಇದು ಆರಂಭವೂ ಅಲ್ಲ. ಅಂತ್ಯವು ಅಲ್ಲ. ದೇಶದಲ್ಲಿ ಸಹಬಾಳ್ವೆಯ ಬಗ್ಗೆ ಆಕಾರಣ ತ್ವೇಷಮಯ ಸ್ಥಿತಿ ಉಲ್ಬಣಿಸತೊಡಗಿದಂತೆ ಆ ಉರಿಕೆನ್ನಾಲಿಗೆಗೆ ಹೆಣ್ಣುಮಕ್ಕಳು ಬಲಿಯಾಗುತ್ತಾರೆ.  ಅಸಹನೆ ವೈಯಕ್ತಿಕವಾಗಿರಲಿ, ಕೌಟುಂಬಿಕವಾಗಿರಲಿ, ಮತೀಯವಾಗಿರಲಿ, ರಾಷ್ಟ್ರೀಯವಾಗಿರಲಿ… ಅದರ ವಿಷಫಲವನ್ನು ಹೆಣ್ಣು ಅನುಭವಿಸಬೇಕಿದೆ. ದುರಂತವೆಂದರೆ, ದಿನದಿಂದ ದಿನಕ್ಕೆ ವಿಕೃತತೆ ಬೆಳೆಯುತ್ತಲೂ ಇದೆ. ನಾಗರಿಕ ಸಮಾಜದಲ್ಲಿ ಬಾಳುತ್ತಿದ್ದೇವೆಯೇ ಎಂದು ಅನುಮಾನಿಸಿಕೊಳ್ಳುವಂತೆ. ಕಥುವಾದ ಮಗುವನ್ನು ದೇವಸ್ಥಾನದಲ್ಲಿ ಬಂಧಿಸಿಟ್ಟು ನಿರಂತರ ಅತ್ಯಾಚಾರ ಮಾಡಿದವರು, ಹಿಂದೂ ಧರ್ಮದ ಭಾರತವನ್ನು ರಕ್ಷಿಸುತ್ತಿದ್ದೇವೆ- ಎಂದು ಭ್ರಮಿಸಿದವರು. ದೇವಸ್ಥಾನದ ಪಾವಿತ್ರ್ಯ, ತಮ್ಮ ನೀಚ ಕೆಲಸ ಹೇಗೆ ತಾಳೆಯಾದೀತೆಂಬ ಅನುಮಾನವೂ ಅವರನ್ನು ಕಾಡಲಿಲ್ಲ. ಈ ಆರೋಪಿಗಳು ಸಮಾಜದ ಮುಖ್ಯವಾಹಿನಿಯಲ್ಲಿರುವ ಸಭ್ಯ ನಾಗರಿಕರು. ಆ ಮಗುವಿನಂಥದೇ ಹೆಣ್ಣು ಮಕ್ಕಳಿರುವ ತಂದೆಯಂದಿರು. ದೂರದ ಊರಿನ ಸಂಬಂಧಿಗೆ- ಹೀಗೊಂದು ರೇಪ್ ಅವಕಾಶವಿದೆ ಬರುತ್ತೀಯಾ? – ಎಂದು ಹಂಚಿಕೊಂಡು ಅನುಭವಿಸುವ ಸಂಸ್ಕøತಿವಂತರು. ಕಡೆಯ ಬಾರಿ ಒಮ್ಮೆ ರೇಪ್ ಮಾಡಿ ಆಮೇಲೆ ಪ್ರಾಣ ತೆಗೆದರಾಯಿತು ಎಂದು ಪೂರ್ಣ ಪ್ರಯೋಜನ ಪಡೆದುಕೊಳ್ಳುವ ತಿಳಿವಳಿಕಸ್ಥರು. ಅವರು ಮಗುವನ್ನು ಹಸಿವಿನಿಂದ ನೀರಡಿಕೆಯಿಂದ ಬಳಲಿಸಿದರು. ಬಲವಂತವಾಗಿ ಮದ್ಯಪಾನ ಮಾಡಿಸಿ ಆ ಪುಟ್ಟ ದೇಹವನ್ನು ಛಿದ್ರ ಮಾಡಿದರು. ಮಗುವಿನ ದೇಹದ ಒಳಹೊರಗುಗಳನ್ನು ರಣಗಾಯವಾಗಿರಿಸಿದರು. ಆ ಪೈಶಾಚಿಕ ವರ್ತನೆಯನ್ನು ಕೇಳಿದರೆ ‘ಸದ್ಯ ಮಗು ಉಳಿಯಲಿಲ್ಲವಲ್ಲ. ಅಷ್ಟು ಸಾಕು’ – ಎಂದು ಉಸಿರಿಡುವಂತಾಗುತ್ತದೆ. ಜಮ್ಮು-ಕಾಶ್ಮೀರದಲ್ಲಿ ಹಿಂದೂ-ಮುಸ್ಲಿಂರ ನಡುವೆ ಹೆಚ್ಚುತ್ತಿರುವ ಜನಾಂಗೀಯ ದ್ವೇಷದ ಉರಿಯಿದು ಈ ಮಗು ಬಕ್ರೆವಾಲಾ ಎಂಬ ಕುರಿಗಾಹಿ ಅಲೆಮಾರಿ ಕುಟುಂಬಕ್ಕೆ ಸೇರಿದ್ದು. ಅವರು ಮುಸ್ಲಿಂ ಮತಾನುಯಾಯಿಗಳು. ಭಾರತದ ಯಾವ ಮೂಲೆಯಲ್ಲಿರುವ ಮುಸ್ಲಿಂರನ್ನೂ ಪಾಕಿಸ್ತಾನದ ಏಜೆಂಟರು ಎಂದು ಗುಲ್ಲೆಬ್ಬಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವುದು ಕೋಮುವಾದಿಗಳಿಗೆ ಸಾಧ್ಯವಾಗಿರುವಾಗ ಪಾಕಿಸ್ತಾನದ ಗಡಿಯ ಬಡ ಮುಸ್ಲಿಮರ ಮೇಲೆ ಈ ಆರೋಪ ಹೊರಿಸುವುದು ಅಲ್ಲಿಯ ಹಿಂದೂ ಏಕತಾ ಮಂಚ್ ಮತ್ತು ಭಾರತ ಬಚಾವೊ ರಥಯಾತ್ರೆಯ ಸಂಘಟನೆಗಳಿಗೆ ಕಷ್ಟವಲ್ಲ. ಒಮ್ಮೆ ದೊಡ್ಡದನಿಯಲ್ಲಿ ಆರೋಪವನ್ನು ಹೊರೆಸಿ, ಪ್ರಚಾರಕ್ಕೆ ತಂದರೆ ಮುಕ್ಕಾಲು ಕೆಲಸ ಆಯಿತೆಂದೇ ಲೆಕ್ಕ. ಪ್ರಚಾರವೇ ಅಧಿಕೃತತೆಯಾದ ಕಾಲದಲ್ಲಿ ಶಿಕ್ಷಿಸುವ ಅಧಿಕಾರ ದತ್ತವಾಗುತ್ತದೆ. ಸಂವಿಧಾನಾತ್ಮಕ ಕಾನೂನು ಏನೇ ಹೇಳಲಿ, ಮತೀಯತೆಯೇ ಕಾನೂನಾದವರಿಗೆ ಅದರ ಹಂಗೇ ಇಲ್ಲ. ತಮ್ಮೊಳಗಿನ ಧರ್ಮಾಂಧತೆ ಮತ್ತು ಕಾಮುಕ ವಿಕೃತಿಗೆ ರಾಷ್ಟ್ರಭಕ್ತಿಯ ತೆಳು ಪರದೆ ಹೊದ್ದು ರಕ್ಷಣಾತ್ಮಕ ಯುದ್ಧದ ವರಸೆಗಳನ್ನು ಹಾಕುತ್ತಲೇ ಇದ್ದಾರೆ. ಕಟುವಾದ ಘಟನೆಗೆ ಏನೆಲ್ಲ ಮೊನಚುಗಳಿವೆ. ಎಳೆಯ ಹೂವಿನಂತಹ ಮಗುವಿನ ದೇಹ ಅನುಭವಿಸಿರಬಹುದಾದ ಯಾತನೆಯ ವಿದ್ರಾವಕತೆ, ಮತೀಯ ಭ್ರಮೆ ಮನುಷ್ಯರನ್ನು ಅದೆಷ್ಟು ಕ್ರೂರಿಗಳನ್ನಾಗಿಸಬಹುದೆಂಬ ಭೀಕರತೆ, ದೇಶದ ನ್ಯಾಯಾಂಗವನ್ನು ರಕ್ಷಿಸುವ ಹೊಣೆ ಹೊತ್ತ ವಕೀಲರು, ರಕ್ಷಕರಾಗಿರಬೇಕಿದ್ದ ಪೋಲಿಸರು, ಶಾಸಕಾಂಗದ ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಗಳು ಆರೋಪಿಗಳ ರಕ್ಷಣೆಗೆ ಪಣತೊಟ್ಟಿರುವ ಅಧಃಪತಗಳೆಲ್ಲ ಸೇರಿದ ಜಟಿಲ ಹೆಣಿಗೆಯಿದು. ರಾಜ್ಯದಲ್ಲಿ ನ್ಯಾಯಸಿಗದು, ಮಗುವಿನ ಸಮಾಧಿಯೂ ಸುರಕ್ಷಿತವಲ್ಲ – ಎಂದು ಬಡ ಕುಟುಂಬ ಕಣ್ಣೀರು ಹಾಕುತ್ತಿದ್ದರೆ; ಇಂತಹ ಹೇಯ ಘಟನೆಗಳಿಗೆ ಮೌನದಿಂದಲೇ ಸ್ಪಂದಿಸುವ, ಕಡೆಗೊಂದು ತೇಪೆಯ ಮಾತು ಹಚ್ಚುವ ಜನನಾಯಕರಿರುವ ರಾಷ್ಟ್ರವಿದು. ಅಲೆಮಾರಿ ಜನಾಂಗದ ಮಗುವಿನ ಈ ಬರ್ಬರ ಹಿಂಸೆಯ ಪಾಪವನ್ನು ಮಾನ್ಯ ಪ್ರಧಾನಿಗಳು ಬುಡಕಟ್ಟು ಮಹಿಳೆಯೊಬ್ಬರ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಪರಿಹರಿಸಿಕೊಳ್ಳಲು ಬಯಸಿದರೇನೋ. ಪಾಪ ಪರಿಹಾರವಾಯಿತೇ? ಗೊತ್ತಿಲ್ಲ. ಜನರ ಮನಸ್ಥಿತಿಯನ್ನು ಸ್ವಲ್ಪ ಮಟ್ಟಿಗಾದರೂ ವಿಚಲಿತಗೊಳಿಸಿ ತಮ್ಮ ಉದಾರ ವ್ಯಕ್ತಿತ್ವದ ನಾಟಕ ಮುಂದುವರಿಸುವಲ್ಲಿಯಂತೂ ಆ ದೃಶ್ಯ ಸಹಾಯ ಮಾಡಿರಬಹುದು. ಒಬ್ಬರು ಸಂವಿಧಾನದ ಸಾಧ್ಯತೆಯನ್ನು ಪ್ರಶ್ನಿಸುತ್ತಾರೆ. ಇನ್ನೊಬ್ಬರು ಅಂಬೇಡ್ಕರರನ್ನು ಸಂತ – ಋಷಿ ಎಂದೆಲ್ಲ ಕರೆದು ಹೂ ಏರಿಸಿ ಮತಬೇಟೆಗೆ ಯತ್ನಿಸುತ್ತಾರೆ. ಎರಡೂ ಕೆಲಸ ಒಂದೇ ಚಿಂತನೆಯ ಜನರದ್ದೇ. ಜನ ಬರೀ ಪ್ರೇಕ್ಷಕರು. ಗೋಣಾಡಿಸುವವರು.

ಉನ್ನಾವ್‍ದ ಘಟನೆಯಂತೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನ ಸಂಪುಟ ಸಚಿವರಿಗೆ ನೇರ ಸಂಬಂಧಿಸಿದ್ದು. ಸುಮಾರು ಒಂದು ವರ್ಷದ ಹಿಂದಿನ ಪ್ರಕರಣವನ್ನು ಮುಚ್ಚಿಹಾಕುವ ರಾಜಕಾರಣ ನಿಚ್ಚಳವಾಗಿದೆ. ಈ ಘಟನೆಗಳಲ್ಲಿ ಭಾರತದ ಆತ್ಮಗೌರವವನ್ನು ಎತ್ತಿಹಿಡಿದ ಎರಡು ಉಳಿಕೆಗಳಿವೆ. ಉನ್ನಾವ್ ಘಟನೆಯನ್ನು ನಿರ್ವಹಿಸುತ್ತಿರುವ ಹೈಕೋರ್ಟ್ ಮತ್ತು ಕಟುವಾ ಪ್ರಕರಣವನ್ನು ತನಿಖೆ ನಡೆಸಿದ್ದ ಉನ್ನತ ಅಧಿಕಾರಿ ರಮೇಶ ಜಾಲ ಅವರು ತಮ್ಮೆಲ್ಲ ಒತ್ತಡಗಳ ನಡುವೆಯೂ ಮಗುವಿನ ನ್ಯಾಯಕ್ಕಾಗಿ ಪ್ರಯತ್ನಿಸಿದ ರೀತಿ. ಅವರು ಉಗ್ರವಾದಿಗಳ ದಾಳಿಗೆ ಒಳಗಾಗಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿದ್ದರು ಮತ್ತು ಅವರು ಹುಟ್ಟಿನಿಂದ ಕಾಶ್ಮೀರಿ ಪಂಡಿತ ಸಮುದಾಯದವರು ಎನ್ನುವುದು ಕಣ್ಣಿವೆಯನ್ನು ಒದ್ದೆಯಾಗಿಸುತ್ತದೆ. ಆದಿತ್ಯನಾಥನನ್ನು ನಾಥ ಪಂಥದಯೋಗಿ ಎನ್ನುವವರಿಗೆ, ನಾಥ ಪಂಥದ ಮೂಲಸತ್ವದ ಅರಿವಿದೆಯೋ? ಎಂದು ಕೇಳಬೇಕೆನಿಸುತ್ತದೆ. ಶಾಲೆ, ಕಾಲೇಜು, ಅಂಗಡಿ, ಮುಂಗಟ್ಟು, ಮಸೀದಿ ಕಡೆಗೆ ಅಂಬೇಡ್ಕರ ಮೂರ್ತಿಗೂ ಕೇಸರಿ ಬಣ್ಣ ಬಳಿವ ದಾಷ್ಟ್ರ್ಯವನ್ನು ತೋರುವ ಸರ್ವಾಧಿಕಾರಿ ಯಾವ ಸಾಧಕ ಸಂಪ್ರದಾಯ ಸೇರಲು ಸಾಧ್ಯ? ನನಗಂತೂ ಆ ವ್ಯಕ್ತಿಯ ಹೆಸರು ಕೇಳಿದಾಗೆಲ್ಲ ಗೋರಖಪುರವೇ ನೆನಪಾಗುತ್ತದೆ. “ನಾನು ಶವಯಾತ್ರೆಯಲಿ ಹೂಗಳನು ಕಂಡಿದ್ದೆ. ನಿನ್ನೆ ಗೋರಖಪುರದಲ್ಲಿ ಹೂಗಳ ಶವಯಾತ್ರೆ ಕಂಡೆ” – ಎಂಬ ಗುಲ್ಜಾರರ ಕವಿತೆಯೂ. ಅದ್ಯಾಕೆ ಒಂದು ನಿರ್ದಿಷ್ಟ ಸಮುದಾಯದ ಬಡವರೇ ಹೆಚ್ಚಿರುವ ಪ್ರದೇಶದ ಆಸ್ಪತ್ರೆಯಲ್ಲಿ ವಿದ್ಯುತ್ ಕೈಕೊಟ್ಟುಬಿಟ್ಟಿತು? ಎಂದು ಕೇಳಬೇಕೆನಿಸುತ್ತದೆ. ರಾಜೇಂದ್ರ ಚೆನ್ನಿಯವರು ಉಲ್ಲೇಖಿಸುವ ನಾಓಮಿಕ್ಲೀನ್ ಬರೆದ ಖಿhe shoಛಿಞ ಜoಛಿಣಡಿiಟಿe ಕೃತಿಯಲ್ಲಿ
ಅಮೆರಿಕದ ನಗರವೊಂದನ್ನು ಚಂಡಮಾರುತ ಅಪ್ಪಳಿಸಿ ಕೆಳಮಧ್ಯಮ ವರ್ಗದ ಬಡಾವಣೆಗಳನ್ನು ಗುಡಿಸಿಹಾಕುತ್ತದೆ. ಜನ ಬೀದಿಗೆ ಬೀಳುತ್ತಾರೆ. ರಾಜಕೀಯ ಧುರೀಣರು ಮಾತ್ರ ‘ನಾವು ಮಾಡಲಾಗದ್ದನ್ನು ದೇವರೇ ಮಾಡಿದ’ ಎಂದು ಸಂತಸಪಡುತ್ತಾರೆ. ಅಲ್ಲಿ ಕಾರ್ಪೊರೇಟ್ ಕಂಪನಿಗಳಿಂದ ಟೂರಿಸ್ಟ ರೆಸಾರ್ಟುಗಳ ಯೋಜನೆ ಸಿದ್ಧವಾಗುತ್ತದೆ. “ಒಂದು ಅತ್ಯಾಚಾರವನ್ನು ದೊಡ್ಡದು ಮಾಡಬೇಡಿ ದೇಶದ ಪ್ರವಾಸೋದ್ಯಮಕ್ಕೆ ಧಕ್ಕೆ ಆಗುತ್ತದೆ- ಎಂದು ‘ಅಧಿಕಾರಸ್ಥರು’ ಮಾತಾಡುವಾಗ ಈ ಎಲ್ಲವುಗಳಿಗೆ ಇರುವ ಸಹ ಸಂಬಂಧ ಮನಸ್ಸನ್ನು ಚುಚ್ಚತೊಡಗುತ್ತಿದೆ.
ಇಂದಿನ ಬೆಳಗು, ಸೂರತ್ ಪೊದೆಯಲ್ಲಿ ಹೆಣ್ಣು ಮಗುವೊಂದರ ಮೃತದೇಹ ಪತ್ತೆಯಾಗಿದ್ದು 86 ಗಾಯಗಳಿದ್ದ ಮತ್ತು ಸತತ ಭೀಕರ ಅತ್ಯಾಚಾರಕ್ಕೊಳಗಾದ ದೇಹ ಎನ್ನಲಾಗಿದೆ. ಮಗುವಿನ ದಾತಾರರೂ ಗುರುತಿಲ್ಲ. – ಮನಸ್ಸು ನಡುಗುತ್ತಿದೆ. ನನ್ನ ಮಗಳೀಗ ಚಿತ್ರದ ಯಾವ ರೇಖೆಯಲ್ಲಿದ್ದಾಳೋ, ಅದೇನು ಕೇಳುತ್ತಾಳೋ…. ಅಥವಾ ಜೀವ ರೋಸಿ ವಾಸ್ತವದ ನಿಷ್ಠುರತೆಗೆ ಬೆನ್ನುಹಾಕಿ ಅದೆಂಥದೋ ಮನರಂಜನೆಯ ಚೆನಲ್‍ಗೆ ಕಣ್ಣು ಕೀಲಿಸಿದರೆ…. ಗುಲ್ಜಾರ್, ಹೂಗಳ ಶವಯಾತ್ರೆ ಎಂದು ಕರೆದದ್ದು ಯಾವೆಲ್ಲದ್ದಕ್ಕೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...