HomeUncategorizedಹೂಗಳ ಶವಯಾತ್ರೆಯಲಿ

ಹೂಗಳ ಶವಯಾತ್ರೆಯಲಿ

- Advertisement -
- Advertisement -
   –ಡಾ. ವಿನಯಾ ಒಕ್ಕುಂದ

‘ನಂಗೆ ತಡ ಆಗ್ತಿದೆ. ಏನ್ ನೀನು.. ಬೆಳಿಗ್ಗೆ ಬೆಳಿಗ್ಗೆಯೇ ಫೇಸ್‍ಬುಕ್ಕಾ$’ ಎಂದು ಒಂದಿಷ್ಟು ಜರ್ಬಿನಲ್ಲಿಯೇ ಮಗಳ ರೂಂ ಹೊಕ್ಕಿದ್ದೆ. ಅವಳು ತಾನು ನೋಡುತ್ತಿದ್ದ ಮೊಬೈಲ್‍ನ್ನು ನನ್ನೆದುರು ಹಿಡಿದಳು. ಅಲ್ಲಿ ಮುದ್ದಾದ ಹುಡುಗಿಯೊಬ್ಬಳಿದ್ದಳು. ‘ಹೂಂ ಚಂದಿದ್ದಾಳೆ’ ಅಂದೆ. ಅವಳ ರೇಪ್ ಆಗಿ ಮರ್ಡರ್ ಆಗಿದೆಯಂತಮ್ಮಾ- ಅಂದಳು. ಏನು ಎಲ್ಲಿ ಎಲ್ಲ ಅರೆಬರೆ. ಯಾರೋ ಅಂಟುರಾಳ ಕುದಿಸಿ ಗಂಟಲಿಗೆ ಹೊಯ್ದಿದ್ದಾರೆ ಅನ್ನುವಂತೆ ನೋವಿನ ಅಮಲೇರಿತ್ತು. ತೊಡೆಗುಂಟ ನಡುಕ. ಯಾಕೆ ಇಷ್ಟು ದುರ್ಬಲವಾಗುತ್ತಿದ್ದೇನೆ ಎಂದೂ ತಿಳಿಯದಷ್ಟು. ಸಂಜೆಯಷ್ಟೊತ್ತಿಗೆ ಮಗಳು ಕಥುವಾದ 8 ವರ್ಷದ ಮುದ್ದು ಮಗು ಆಸೀಫಾಳ ಚಿತ್ರ ಬರೆಯುತ್ತ ಕೂತಿದ್ದಳು. ಸ್ನಾನವನ್ನೂ ಮಾಡಿರಲಿಲ್ಲ. ಕೇಳಿದರೆ ‘ಮಾಡಬೇಕು ಅನ್ನಿಸಲಿಲ್ಲ’ ಎಂದಳು. ಯಾತನೆಯನ್ನು ಅದುಮಿಡುವ ಒರಟುತನದಲ್ಲಿ. ಈಗ ಸಂಭಾಳಿಸಿಕೊಂಡಿದ್ದೇವೆ. ನಮನಮಗೆ ನಾವೇ. ಅವಳು ಫೇಸ್‍ಬುಕ್ ವಿಷಯಗಳನ್ನು ಮುಂದೆ ಹಿಡಿಯುತ್ತ ನಾನು ಪೇಪರ್‍ನ ಸುದ್ದಿಗಳನ್ನು ತೋರಿಸುತ್ತ…. ಅಂತ್ಯವೇ ಇಲ್ಲದ ಜುಗಲ್‍ಬಂದಿಯ ತಡಬಡಿಕೆಯಲ್ಲಿ.
ಇದು ಆರಂಭವೂ ಅಲ್ಲ. ಅಂತ್ಯವು ಅಲ್ಲ. ದೇಶದಲ್ಲಿ ಸಹಬಾಳ್ವೆಯ ಬಗ್ಗೆ ಆಕಾರಣ ತ್ವೇಷಮಯ ಸ್ಥಿತಿ ಉಲ್ಬಣಿಸತೊಡಗಿದಂತೆ ಆ ಉರಿಕೆನ್ನಾಲಿಗೆಗೆ ಹೆಣ್ಣುಮಕ್ಕಳು ಬಲಿಯಾಗುತ್ತಾರೆ.  ಅಸಹನೆ ವೈಯಕ್ತಿಕವಾಗಿರಲಿ, ಕೌಟುಂಬಿಕವಾಗಿರಲಿ, ಮತೀಯವಾಗಿರಲಿ, ರಾಷ್ಟ್ರೀಯವಾಗಿರಲಿ… ಅದರ ವಿಷಫಲವನ್ನು ಹೆಣ್ಣು ಅನುಭವಿಸಬೇಕಿದೆ. ದುರಂತವೆಂದರೆ, ದಿನದಿಂದ ದಿನಕ್ಕೆ ವಿಕೃತತೆ ಬೆಳೆಯುತ್ತಲೂ ಇದೆ. ನಾಗರಿಕ ಸಮಾಜದಲ್ಲಿ ಬಾಳುತ್ತಿದ್ದೇವೆಯೇ ಎಂದು ಅನುಮಾನಿಸಿಕೊಳ್ಳುವಂತೆ. ಕಥುವಾದ ಮಗುವನ್ನು ದೇವಸ್ಥಾನದಲ್ಲಿ ಬಂಧಿಸಿಟ್ಟು ನಿರಂತರ ಅತ್ಯಾಚಾರ ಮಾಡಿದವರು, ಹಿಂದೂ ಧರ್ಮದ ಭಾರತವನ್ನು ರಕ್ಷಿಸುತ್ತಿದ್ದೇವೆ- ಎಂದು ಭ್ರಮಿಸಿದವರು. ದೇವಸ್ಥಾನದ ಪಾವಿತ್ರ್ಯ, ತಮ್ಮ ನೀಚ ಕೆಲಸ ಹೇಗೆ ತಾಳೆಯಾದೀತೆಂಬ ಅನುಮಾನವೂ ಅವರನ್ನು ಕಾಡಲಿಲ್ಲ. ಈ ಆರೋಪಿಗಳು ಸಮಾಜದ ಮುಖ್ಯವಾಹಿನಿಯಲ್ಲಿರುವ ಸಭ್ಯ ನಾಗರಿಕರು. ಆ ಮಗುವಿನಂಥದೇ ಹೆಣ್ಣು ಮಕ್ಕಳಿರುವ ತಂದೆಯಂದಿರು. ದೂರದ ಊರಿನ ಸಂಬಂಧಿಗೆ- ಹೀಗೊಂದು ರೇಪ್ ಅವಕಾಶವಿದೆ ಬರುತ್ತೀಯಾ? – ಎಂದು ಹಂಚಿಕೊಂಡು ಅನುಭವಿಸುವ ಸಂಸ್ಕøತಿವಂತರು. ಕಡೆಯ ಬಾರಿ ಒಮ್ಮೆ ರೇಪ್ ಮಾಡಿ ಆಮೇಲೆ ಪ್ರಾಣ ತೆಗೆದರಾಯಿತು ಎಂದು ಪೂರ್ಣ ಪ್ರಯೋಜನ ಪಡೆದುಕೊಳ್ಳುವ ತಿಳಿವಳಿಕಸ್ಥರು. ಅವರು ಮಗುವನ್ನು ಹಸಿವಿನಿಂದ ನೀರಡಿಕೆಯಿಂದ ಬಳಲಿಸಿದರು. ಬಲವಂತವಾಗಿ ಮದ್ಯಪಾನ ಮಾಡಿಸಿ ಆ ಪುಟ್ಟ ದೇಹವನ್ನು ಛಿದ್ರ ಮಾಡಿದರು. ಮಗುವಿನ ದೇಹದ ಒಳಹೊರಗುಗಳನ್ನು ರಣಗಾಯವಾಗಿರಿಸಿದರು. ಆ ಪೈಶಾಚಿಕ ವರ್ತನೆಯನ್ನು ಕೇಳಿದರೆ ‘ಸದ್ಯ ಮಗು ಉಳಿಯಲಿಲ್ಲವಲ್ಲ. ಅಷ್ಟು ಸಾಕು’ – ಎಂದು ಉಸಿರಿಡುವಂತಾಗುತ್ತದೆ. ಜಮ್ಮು-ಕಾಶ್ಮೀರದಲ್ಲಿ ಹಿಂದೂ-ಮುಸ್ಲಿಂರ ನಡುವೆ ಹೆಚ್ಚುತ್ತಿರುವ ಜನಾಂಗೀಯ ದ್ವೇಷದ ಉರಿಯಿದು ಈ ಮಗು ಬಕ್ರೆವಾಲಾ ಎಂಬ ಕುರಿಗಾಹಿ ಅಲೆಮಾರಿ ಕುಟುಂಬಕ್ಕೆ ಸೇರಿದ್ದು. ಅವರು ಮುಸ್ಲಿಂ ಮತಾನುಯಾಯಿಗಳು. ಭಾರತದ ಯಾವ ಮೂಲೆಯಲ್ಲಿರುವ ಮುಸ್ಲಿಂರನ್ನೂ ಪಾಕಿಸ್ತಾನದ ಏಜೆಂಟರು ಎಂದು ಗುಲ್ಲೆಬ್ಬಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವುದು ಕೋಮುವಾದಿಗಳಿಗೆ ಸಾಧ್ಯವಾಗಿರುವಾಗ ಪಾಕಿಸ್ತಾನದ ಗಡಿಯ ಬಡ ಮುಸ್ಲಿಮರ ಮೇಲೆ ಈ ಆರೋಪ ಹೊರಿಸುವುದು ಅಲ್ಲಿಯ ಹಿಂದೂ ಏಕತಾ ಮಂಚ್ ಮತ್ತು ಭಾರತ ಬಚಾವೊ ರಥಯಾತ್ರೆಯ ಸಂಘಟನೆಗಳಿಗೆ ಕಷ್ಟವಲ್ಲ. ಒಮ್ಮೆ ದೊಡ್ಡದನಿಯಲ್ಲಿ ಆರೋಪವನ್ನು ಹೊರೆಸಿ, ಪ್ರಚಾರಕ್ಕೆ ತಂದರೆ ಮುಕ್ಕಾಲು ಕೆಲಸ ಆಯಿತೆಂದೇ ಲೆಕ್ಕ. ಪ್ರಚಾರವೇ ಅಧಿಕೃತತೆಯಾದ ಕಾಲದಲ್ಲಿ ಶಿಕ್ಷಿಸುವ ಅಧಿಕಾರ ದತ್ತವಾಗುತ್ತದೆ. ಸಂವಿಧಾನಾತ್ಮಕ ಕಾನೂನು ಏನೇ ಹೇಳಲಿ, ಮತೀಯತೆಯೇ ಕಾನೂನಾದವರಿಗೆ ಅದರ ಹಂಗೇ ಇಲ್ಲ. ತಮ್ಮೊಳಗಿನ ಧರ್ಮಾಂಧತೆ ಮತ್ತು ಕಾಮುಕ ವಿಕೃತಿಗೆ ರಾಷ್ಟ್ರಭಕ್ತಿಯ ತೆಳು ಪರದೆ ಹೊದ್ದು ರಕ್ಷಣಾತ್ಮಕ ಯುದ್ಧದ ವರಸೆಗಳನ್ನು ಹಾಕುತ್ತಲೇ ಇದ್ದಾರೆ. ಕಟುವಾದ ಘಟನೆಗೆ ಏನೆಲ್ಲ ಮೊನಚುಗಳಿವೆ. ಎಳೆಯ ಹೂವಿನಂತಹ ಮಗುವಿನ ದೇಹ ಅನುಭವಿಸಿರಬಹುದಾದ ಯಾತನೆಯ ವಿದ್ರಾವಕತೆ, ಮತೀಯ ಭ್ರಮೆ ಮನುಷ್ಯರನ್ನು ಅದೆಷ್ಟು ಕ್ರೂರಿಗಳನ್ನಾಗಿಸಬಹುದೆಂಬ ಭೀಕರತೆ, ದೇಶದ ನ್ಯಾಯಾಂಗವನ್ನು ರಕ್ಷಿಸುವ ಹೊಣೆ ಹೊತ್ತ ವಕೀಲರು, ರಕ್ಷಕರಾಗಿರಬೇಕಿದ್ದ ಪೋಲಿಸರು, ಶಾಸಕಾಂಗದ ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಗಳು ಆರೋಪಿಗಳ ರಕ್ಷಣೆಗೆ ಪಣತೊಟ್ಟಿರುವ ಅಧಃಪತಗಳೆಲ್ಲ ಸೇರಿದ ಜಟಿಲ ಹೆಣಿಗೆಯಿದು. ರಾಜ್ಯದಲ್ಲಿ ನ್ಯಾಯಸಿಗದು, ಮಗುವಿನ ಸಮಾಧಿಯೂ ಸುರಕ್ಷಿತವಲ್ಲ – ಎಂದು ಬಡ ಕುಟುಂಬ ಕಣ್ಣೀರು ಹಾಕುತ್ತಿದ್ದರೆ; ಇಂತಹ ಹೇಯ ಘಟನೆಗಳಿಗೆ ಮೌನದಿಂದಲೇ ಸ್ಪಂದಿಸುವ, ಕಡೆಗೊಂದು ತೇಪೆಯ ಮಾತು ಹಚ್ಚುವ ಜನನಾಯಕರಿರುವ ರಾಷ್ಟ್ರವಿದು. ಅಲೆಮಾರಿ ಜನಾಂಗದ ಮಗುವಿನ ಈ ಬರ್ಬರ ಹಿಂಸೆಯ ಪಾಪವನ್ನು ಮಾನ್ಯ ಪ್ರಧಾನಿಗಳು ಬುಡಕಟ್ಟು ಮಹಿಳೆಯೊಬ್ಬರ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಪರಿಹರಿಸಿಕೊಳ್ಳಲು ಬಯಸಿದರೇನೋ. ಪಾಪ ಪರಿಹಾರವಾಯಿತೇ? ಗೊತ್ತಿಲ್ಲ. ಜನರ ಮನಸ್ಥಿತಿಯನ್ನು ಸ್ವಲ್ಪ ಮಟ್ಟಿಗಾದರೂ ವಿಚಲಿತಗೊಳಿಸಿ ತಮ್ಮ ಉದಾರ ವ್ಯಕ್ತಿತ್ವದ ನಾಟಕ ಮುಂದುವರಿಸುವಲ್ಲಿಯಂತೂ ಆ ದೃಶ್ಯ ಸಹಾಯ ಮಾಡಿರಬಹುದು. ಒಬ್ಬರು ಸಂವಿಧಾನದ ಸಾಧ್ಯತೆಯನ್ನು ಪ್ರಶ್ನಿಸುತ್ತಾರೆ. ಇನ್ನೊಬ್ಬರು ಅಂಬೇಡ್ಕರರನ್ನು ಸಂತ – ಋಷಿ ಎಂದೆಲ್ಲ ಕರೆದು ಹೂ ಏರಿಸಿ ಮತಬೇಟೆಗೆ ಯತ್ನಿಸುತ್ತಾರೆ. ಎರಡೂ ಕೆಲಸ ಒಂದೇ ಚಿಂತನೆಯ ಜನರದ್ದೇ. ಜನ ಬರೀ ಪ್ರೇಕ್ಷಕರು. ಗೋಣಾಡಿಸುವವರು.

ಉನ್ನಾವ್‍ದ ಘಟನೆಯಂತೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನ ಸಂಪುಟ ಸಚಿವರಿಗೆ ನೇರ ಸಂಬಂಧಿಸಿದ್ದು. ಸುಮಾರು ಒಂದು ವರ್ಷದ ಹಿಂದಿನ ಪ್ರಕರಣವನ್ನು ಮುಚ್ಚಿಹಾಕುವ ರಾಜಕಾರಣ ನಿಚ್ಚಳವಾಗಿದೆ. ಈ ಘಟನೆಗಳಲ್ಲಿ ಭಾರತದ ಆತ್ಮಗೌರವವನ್ನು ಎತ್ತಿಹಿಡಿದ ಎರಡು ಉಳಿಕೆಗಳಿವೆ. ಉನ್ನಾವ್ ಘಟನೆಯನ್ನು ನಿರ್ವಹಿಸುತ್ತಿರುವ ಹೈಕೋರ್ಟ್ ಮತ್ತು ಕಟುವಾ ಪ್ರಕರಣವನ್ನು ತನಿಖೆ ನಡೆಸಿದ್ದ ಉನ್ನತ ಅಧಿಕಾರಿ ರಮೇಶ ಜಾಲ ಅವರು ತಮ್ಮೆಲ್ಲ ಒತ್ತಡಗಳ ನಡುವೆಯೂ ಮಗುವಿನ ನ್ಯಾಯಕ್ಕಾಗಿ ಪ್ರಯತ್ನಿಸಿದ ರೀತಿ. ಅವರು ಉಗ್ರವಾದಿಗಳ ದಾಳಿಗೆ ಒಳಗಾಗಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿದ್ದರು ಮತ್ತು ಅವರು ಹುಟ್ಟಿನಿಂದ ಕಾಶ್ಮೀರಿ ಪಂಡಿತ ಸಮುದಾಯದವರು ಎನ್ನುವುದು ಕಣ್ಣಿವೆಯನ್ನು ಒದ್ದೆಯಾಗಿಸುತ್ತದೆ. ಆದಿತ್ಯನಾಥನನ್ನು ನಾಥ ಪಂಥದಯೋಗಿ ಎನ್ನುವವರಿಗೆ, ನಾಥ ಪಂಥದ ಮೂಲಸತ್ವದ ಅರಿವಿದೆಯೋ? ಎಂದು ಕೇಳಬೇಕೆನಿಸುತ್ತದೆ. ಶಾಲೆ, ಕಾಲೇಜು, ಅಂಗಡಿ, ಮುಂಗಟ್ಟು, ಮಸೀದಿ ಕಡೆಗೆ ಅಂಬೇಡ್ಕರ ಮೂರ್ತಿಗೂ ಕೇಸರಿ ಬಣ್ಣ ಬಳಿವ ದಾಷ್ಟ್ರ್ಯವನ್ನು ತೋರುವ ಸರ್ವಾಧಿಕಾರಿ ಯಾವ ಸಾಧಕ ಸಂಪ್ರದಾಯ ಸೇರಲು ಸಾಧ್ಯ? ನನಗಂತೂ ಆ ವ್ಯಕ್ತಿಯ ಹೆಸರು ಕೇಳಿದಾಗೆಲ್ಲ ಗೋರಖಪುರವೇ ನೆನಪಾಗುತ್ತದೆ. “ನಾನು ಶವಯಾತ್ರೆಯಲಿ ಹೂಗಳನು ಕಂಡಿದ್ದೆ. ನಿನ್ನೆ ಗೋರಖಪುರದಲ್ಲಿ ಹೂಗಳ ಶವಯಾತ್ರೆ ಕಂಡೆ” – ಎಂಬ ಗುಲ್ಜಾರರ ಕವಿತೆಯೂ. ಅದ್ಯಾಕೆ ಒಂದು ನಿರ್ದಿಷ್ಟ ಸಮುದಾಯದ ಬಡವರೇ ಹೆಚ್ಚಿರುವ ಪ್ರದೇಶದ ಆಸ್ಪತ್ರೆಯಲ್ಲಿ ವಿದ್ಯುತ್ ಕೈಕೊಟ್ಟುಬಿಟ್ಟಿತು? ಎಂದು ಕೇಳಬೇಕೆನಿಸುತ್ತದೆ. ರಾಜೇಂದ್ರ ಚೆನ್ನಿಯವರು ಉಲ್ಲೇಖಿಸುವ ನಾಓಮಿಕ್ಲೀನ್ ಬರೆದ ಖಿhe shoಛಿಞ ಜoಛಿಣಡಿiಟಿe ಕೃತಿಯಲ್ಲಿ
ಅಮೆರಿಕದ ನಗರವೊಂದನ್ನು ಚಂಡಮಾರುತ ಅಪ್ಪಳಿಸಿ ಕೆಳಮಧ್ಯಮ ವರ್ಗದ ಬಡಾವಣೆಗಳನ್ನು ಗುಡಿಸಿಹಾಕುತ್ತದೆ. ಜನ ಬೀದಿಗೆ ಬೀಳುತ್ತಾರೆ. ರಾಜಕೀಯ ಧುರೀಣರು ಮಾತ್ರ ‘ನಾವು ಮಾಡಲಾಗದ್ದನ್ನು ದೇವರೇ ಮಾಡಿದ’ ಎಂದು ಸಂತಸಪಡುತ್ತಾರೆ. ಅಲ್ಲಿ ಕಾರ್ಪೊರೇಟ್ ಕಂಪನಿಗಳಿಂದ ಟೂರಿಸ್ಟ ರೆಸಾರ್ಟುಗಳ ಯೋಜನೆ ಸಿದ್ಧವಾಗುತ್ತದೆ. “ಒಂದು ಅತ್ಯಾಚಾರವನ್ನು ದೊಡ್ಡದು ಮಾಡಬೇಡಿ ದೇಶದ ಪ್ರವಾಸೋದ್ಯಮಕ್ಕೆ ಧಕ್ಕೆ ಆಗುತ್ತದೆ- ಎಂದು ‘ಅಧಿಕಾರಸ್ಥರು’ ಮಾತಾಡುವಾಗ ಈ ಎಲ್ಲವುಗಳಿಗೆ ಇರುವ ಸಹ ಸಂಬಂಧ ಮನಸ್ಸನ್ನು ಚುಚ್ಚತೊಡಗುತ್ತಿದೆ.
ಇಂದಿನ ಬೆಳಗು, ಸೂರತ್ ಪೊದೆಯಲ್ಲಿ ಹೆಣ್ಣು ಮಗುವೊಂದರ ಮೃತದೇಹ ಪತ್ತೆಯಾಗಿದ್ದು 86 ಗಾಯಗಳಿದ್ದ ಮತ್ತು ಸತತ ಭೀಕರ ಅತ್ಯಾಚಾರಕ್ಕೊಳಗಾದ ದೇಹ ಎನ್ನಲಾಗಿದೆ. ಮಗುವಿನ ದಾತಾರರೂ ಗುರುತಿಲ್ಲ. – ಮನಸ್ಸು ನಡುಗುತ್ತಿದೆ. ನನ್ನ ಮಗಳೀಗ ಚಿತ್ರದ ಯಾವ ರೇಖೆಯಲ್ಲಿದ್ದಾಳೋ, ಅದೇನು ಕೇಳುತ್ತಾಳೋ…. ಅಥವಾ ಜೀವ ರೋಸಿ ವಾಸ್ತವದ ನಿಷ್ಠುರತೆಗೆ ಬೆನ್ನುಹಾಕಿ ಅದೆಂಥದೋ ಮನರಂಜನೆಯ ಚೆನಲ್‍ಗೆ ಕಣ್ಣು ಕೀಲಿಸಿದರೆ…. ಗುಲ್ಜಾರ್, ಹೂಗಳ ಶವಯಾತ್ರೆ ಎಂದು ಕರೆದದ್ದು ಯಾವೆಲ್ಲದ್ದಕ್ಕೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...