Homeರಾಜಕೀಯಹೆಗಡೆ ಮಗಳು ಕೈ ಕ್ಯಾಂಡಿಡೇಟಾದರೆ ಅನಂತ್ಮಾಣಿಗೆ ಸೋಲು ಗ್ಯಾರಂಟಿ!

ಹೆಗಡೆ ಮಗಳು ಕೈ ಕ್ಯಾಂಡಿಡೇಟಾದರೆ ಅನಂತ್ಮಾಣಿಗೆ ಸೋಲು ಗ್ಯಾರಂಟಿ!

- Advertisement -
- Advertisement -

ಶುದ್ಧೋದನ |

ಉತ್ತರ ಕನ್ನಡದಲ್ಲಿ ಲೋಕಸಭೆ ಚುನಾವಣೆಯ ಸಂಭಾವ್ಯ ಪೈಲ್ವಾನಕುರಿತು ರಂಗು-ರಂಗಿನ ಮಾತುಕತೆ ನಡೆಯಲಾರಂಭಿಸಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾದ ಬ್ರಾಹ್ಮಣರೂ ಅಧಿಕ ಪ್ರಸಂಗಿ ಸಂಸದ ಅನಂತ್ಮಾಣಿಯ ಹಾವಳಿಗೆ ರೋಸತ್ತು ಹೋಗಿದ್ದಾರೆ. ಸ್ವಪಕ್ಷದೊಳಗಿನ ಬ್ರಾಹ್ಮಣ ಲಾಬಿಯೂ ಆತನಿಗೆ ತಿರುಗಿ ಬಿದ್ದಿರೋದು ಚುನಾವಣಾ ಕಣಕ್ಕೆ ರೋಚಕತೆಯನ್ನು ತಂದುಕೊಟ್ಟಿದೆ. ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ, ಶಿರಸಿ ಶಾಸಕ-ಕಾಗೇರಿ ಹೆಗಡೆ ವಗೈರೆ ವಿಪ್ರೋತ್ತಮರ ವಿರೋಧಿ ಪಡೆ ಅನಂತ್ಮಾಣಿಗೆ ಗೇಟ್‌ಪಾಸ್ ಕೊಡಿಸುವ ಹಠಕ್ಕೆ ಬಿದ್ದಿದೆ. ಈಚೆಗೆ ನಿಧನರಾದ ಕೇಂದ್ರ ಮಂತ್ರಿ ಅನಂತ ಕುಮಾರ್ ಶಾಸ್ತ್ರೀಯ ಇಂಗಿತವೂ ಇದೇ ಆಗಿತ್ತು. ಹಿಂದುತ್ವದ ಇತಿಹಾಸ ‘ತಜ್ಞ’ ಸೂಲಿಬೆಲೆ ಚಕ್ರವರ್ತಿಯನ್ನು ಉತ್ತರಕನ್ನಡದಲ್ಲಿ ಬಿಜೆಪಿ ಕ್ಯಾಂಡಿಡೇಟ್ ಮಾಡುವ ಪ್ರಯತ್ನ ಬಿರುಸಾಗಿ ನಡೆಯುತ್ತಿದೆ. ಇದು ಸಾಧ್ಯವಾಗದಿದ್ದರೆ ಅನಂತ್ಮಾಣಿಯ ಆಜನ್ಮ ಶತ್ರು ಕಾಗೇರಿ ಹೆಗಡೆಯನ್ನು ಕೇಸರಿ ಪಾಳೆಯದ ಕಪ್ಪುಕುದುರೆ ಮಾಡಿ ಯುದ್ಧಕ್ಕಿಳಿಸುವ ಪ್ಲಾನ್-ಬಿ ಕೂಡ ಹೆಣೆಯಲಾಗಿದೆ.

ಈಗಾಗಲೇ ನಡೆದಿರುವ ಸಮೀಕ್ಷೆಗಳೆಲ್ಲವೂ ಮಾಣಿ ಗೆಲ್ಲುವುದು ಅನುಮಾನ ಎಂತಲೇ ಹೇಳಿವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಎಚ್ಚರಿಕೆಯ ಒಮ್ಮತದ ಗೇಮ್‌ಪ್ಲ್ಯಾನ್ ಹೆಣೆದರೆ ಅನಂತ್ಮಾಣಿಯನ್ನು ಮಾಜಿ ಮಾಡೋದು ಕಷ್ಟದ ಕೆಲಸವೇನೂ ಅಲ್ಲ. ಕಾಂಗ್ರೆಸ್-ಜೆಡಿಎಸ್ ಹೈಕಮಾಂಡ್ ಎರಡನ್ನು ಏಕಕಾಲದಲ್ಲಿ ನಿಭಾಯಿಸಬಲ್ಲ ಆರ್.ವಿ.ದೇಶಪಾಂಡೆ ದಗಲುಬಾಜಿತನ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮೈತ್ರಿಕೂಟದ ಹುರಿಯಾಳು ನಿರಾಯಾಸವಾಗಿ ಗೆಲ್ಲಬಹುದು. ಹಾಗಂತ ದೇಶಪಾಂಡೆ, ಕಳೆದ ಬಾರಿ ಬರೋಬ್ಬರಿ ಒಂದು ಮುಕ್ಕಾಲು ಲಕ್ಷ ಮತದಂತರದಲ್ಲಿ ಸೋತಿರುವ ತನ್ನ ಮಗ ಪ್ರಶಾಂತನನ್ನೇ ಮತ್ತೆ ಅಭ್ಯರ್ಥಿಯಾಗಿಸಿದರೆ ಅದು ಕಾಂಗ್ರೆಸ್ಸಿಗೇ ಲುಕ್ಸಾನು. ಯಾಕೆಂದರೆ ಜಿಲ್ಲೆಯ ಎರಡು ಪ್ರಬಲ ಜಾತಿಯಾದ ಹವ್ಯಕ ಬ್ರಾಹ್ಮಣರು ಮತ್ತು ದೀವರನ್ನು ದೇಶಪಾಂಡೆ ಎದುರು ಹಾಕಿಕೊಂಡಿರೋದು ಅವರಿಗೆ ಮುಳುವಾಗಲಿದೆ.

ಮಗನಲ್ಲದಿದ್ದರೆ, ಡಿಸಿಸಿ ಅಧ್ಯಕ್ಷನೂ ಕಳೆದ ಅಸೆಂಬ್ಲಿ ಇಲೆಕ್ಷನ್ನಲ್ಲಿ ಶಿರಸಿಯಲ್ಲಿ ಸೋತಿರುವ ಭೀಮಣ್ಣ ನಾಯ್ಕನನ್ನಾದರು ಅಭ್ಯರ್ಥಿಯಾಗಿಸುವ ಸಾಹಸಕ್ಕೆ ದೇಶಪಾಂಡೆ ಸಾಹೇಬರು ಕೈಹಾಕಬಹುದು. ಆದರೆ ಸ್ವಜಾತಿ ದೀವರ ನಡುವೆಯೇ ಲೀಡರ್‌ಗಿರಿ ಬೆಳೆಸಿಕೊಳ್ಳಲಾಗದ ಭೀಮಣ್ಣನಿಗೆ ಎಂಪಿಗಿರಿ ಕ್ಯಾಂಡಿಡೇಟಾಗುವ ವರ್ಚಸ್ಸಿಲ್ಲ ಅನ್ನೋದು ಮಾತ್ರ ಸತ್ಯ. ಇನ್ನು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್‌ರಿಗೆ ಉತ್ತರಕನ್ನಡದಿಂದ ಎಂಪಿಗಿರಿಗೆ ಸ್ಪರ್ಧಿಸುವ ಯೋಚನೆಯಿದ್ದಂತಿದೆ. ಆದರೆ ಈಡಿಗರ ನಾಯಕನೆಂಬ ಬ್ರ್ಯಾಂಡೇ ಹರಿಪ್ರಸಾದ್‌ಗೆ ಮುಳುವಾಗಿದೆ. ಯಾಕೆಂದರೆ ಜಿಲ್ಲೆಯಲ್ಲಿ ದೀವರ ವಿರುದ್ದ ಇತರ ಸಣ್ಣ ಪುಟ್ಟ ಜಾತಿಗಳು-ಬ್ರಾಹ್ಮಣರು ಒಂದಾಗುವ ದ್ವೇಷದ ವಾತಾವರಣವಿದೆ. ಇದು ಹಿಂದುತ್ವದ ಅಡ್ಡ ಪರಿಣಾಮ! ಬ್ರಾಹ್ಮಣಿಕೆಯ ತಂತ್ರಗಾರಿಕೆ!!

ಜೆಡಿಎಸ್‌ನ ಆನಂದ ಅಸ್ನೋಟಿಕರ್ ತಾನೊಬ್ಬ ಹಿಂದುಳಿದ ವರ್ಗದ ನಾಯಕಾಗ್ರೇಸ ಎಂಬಂತೆ ಪೋಸು ಕೊಡುತ್ತಿದ್ದಾನೆ. ಆದರೆ ಅಸ್ನೋಟಿಕರ್‌ಗೆ ಕಾರವಾರದಾಚೆಗೆ ಮತ ಪಡೆಯುವ ಶಕ್ತಿಯಿಲ್ಲ. ಬಿಜೆಪಿಯ ಅನಂತ್ಮಾಣಿ ಸೋಲಿಸಲು ಮೈತ್ರಿಕೂಟ ಆತನದೇ ಜಾತಿಯ ಹವ್ಯಕ ಅಭ್ಯರ್ಥಿ ನಿಲ್ಲಿಸುವ ಸ್ಟಾçಟಜಿ ಮಾಡಬೇಕಾಗಿದೆ. ಅನಂತ್ಮಾಣಿ ಬಗ್ಗೆ ಬೇಸರದಲ್ಲಿರುವ ಹವ್ಯಕರ ಮತ ಈ ತಂತ್ರಗಾರಿಕೆಯಿಂದ ಸಲೀಸಾಗಿ ಪಡೆಯಬಹುದು. ದೇಶಪಾಂಡೆ ಖಾನ್‌ದಾನ್ ಇಲೆಕ್ಷನ್ ಕಣದಿಂದ ದೂರಾದರೆ ದೀವರು ಮತ್ತಿತರ ಹಿಂದುಳಿದ ಸಮುದಾಯದ ಮತವೂ ಮೈತ್ರಿಕೂಟಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್‌ನಲ್ಲಿ ಅಂಥ ದೈತ್ಯ(ಅನಂತ್ಮಾಣಿ) ಸಂಹಾರಕ ಹವ್ಯಕ ಕಾಣಿಸುತ್ತಿಲ್ಲ. ಜೆಡಿಎಸ್‌ನಲ್ಲಿರುವ ಶಶಿಭೂಷಣ ಹೆಗಡೆ ಇಡೀ ಜಿಲ್ಲೆಯಲ್ಲಿ ಪ್ರಭಾವಳಿಯಿದೆ. ಹೆಗಡೆಜೀ ಮೊಮ್ಮಗನೆಂಬ ಬಲವಿದೆ. ಹವ್ಯಕರ ಮತ ಪಡೆಯಬಲ್ಲ ಶಶಿಭೂಷಣ್‌ಗೆ ಇತರ ವರ್ಗದ ಮತಕ್ಕೆ ಹಸ್ತ ಚಿಹ್ನೆ ಅನಿವಾರ್ಯ. ತೆನೆಹೊತ್ತ ಮಹಿಳೆಯಿಂದ ಇದು ಸಾಧ್ಯವಾಗದು. ಅಂದರೆ ಶಶಿ ಕಾಂಗ್ರೆಸ್ ಕ್ಯಾಂಡಿಡೇಟ್ ಆಗಿ, ದೇಶಪಾಂಡೆ ಶುದ್ಧಿಯಿಂದ ಕೆಲಸ ಮಾಡಿದರೆ ಗೆಲುವು ಸಾಧ್ಯ.

ಇದಕ್ಕೆ ದೇಶಪಾಂಡೆ ಒಪ್ಪುವುದು ಅನುಮಾನ. ಹಾಗೆಯೇ ಅನಂತ್ಮಾಣಿ ಬಗ್ಗೆ ಏನೋ ಒಂಥರ ಸೆಳೆತವಿರುವ ಶಶಿ ಆತನ ವಿರುದ್ಧ ನಿಲ್ಲಲಾರನೆಂಬ ಅಭಿಪ್ರಾಯ ಕಾಂಗ್ರೆಸ್-ಜೆಡಿಎಸ್-ಬಿಜೆಪಿಯಲ್ಲಿದೆ. ಈ ಒಳರಾಜಕಾರಣದ ಸುಳಿ ಸಂಕಷ್ಟ, ಜಿಲ್ಲೆಯ ಸೋಷಲ್ ಇಂಜಿನಿಯರಿಂಗ್, ಕ್ಯಾಸ್ಟ್ ಕೆಮಿಸ್ಟ್ರಿ ಲೆಕ್ಕಹಾಕಿರುವ ಕಾಂಗ್ರೆಸ್‌ನ ಒಂದು ಬಣ ತಣ್ಣಗೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮಗಳು ಮಮತಾ ನಿಚ್ಚಾನಿಯನ್ನು ಮೈತ್ರಿಕೂಟದ ಅಭ್ಯರ್ಥಿಯಾಗಿಸುವ ಪ್ಲಾನು ಹಾಕಿಕೊಂಡು ಆಕೆಯ ಹೆಸರು ತೇಲಿ ಬಿಡಲಾರಂಭಿಸಿದೆ. ಇದು ಸೂಕ್ತ ಆಯ್ಕೆ ಮತ್ತು ರಣತಂತ್ರ ಎಂದು ಜನಸಾಮಾನ್ಯರೂ ಹೇಳುತ್ತಿದ್ದಾರೆ. ಬಿಜೆಪಿಯ ಅನಂತ್ಮಾಣಿಯನ್ನು ಮನೆಗೆ ಕಳಿಸುವ ಮೂಡ್‌ನಲ್ಲಿರುವ ಮತದಾರರಿಗೆ ಹೆಗಡೆಜೀ ಖಾನ್‌ದಾನ್ ಹೆಸರು ಕೇಳುತ್ತಿದ್ದಂತೆಯೇ ಮೈತ್ರಿಕೂಟದತ್ತ ನೋಟ ಹರಿದಿದೆ.

ಇವತ್ತಿಗೂ ಉತ್ತರ ಕನ್ನಡದಲ್ಲಿ ಹೆಗಡೆಜೀ ಮತ್ತು `ಬಂ’ ನಾಮ ಬಿಲದ ವಿಚಿತ್ರ ಸೆಳೆತವಿದೆ. ಹೆಗಡೆಜೀ ಅಂದರೆ ಆತನ ಜಾತಿಬಂಧುಗಳಾದ ಹವ್ಯಕರಲ್ಲಿ ಕಮಲ-ಅನಂತ್ಮಾಣಿಯನ್ನು ಮರೆಸುವಷ್ಟು ಮೇನಿಯಾ ಇದೆ. ಹೆಗಡೆಜೀ ವಂಶದ ಮಮತಾ ಕಾಂಗ್ರೆಸ್ ಅಭ್ಯರ್ಥಿ ಅಂತಾದರೆ ಹವ್ಯಕರು ಕಣ್ಮುಚ್ಚಿ ಓಟು ಹಾಕೋದು ಖಂಡಿತ. ಹಾಗೆಯೇ ನಾಡಾವರು, ಪಟಗಾರರು.. ಮುಂತಾದ ಸಣ್ಣ-ಪುಟ್ಟ ಸಮುದಾಯಕ್ಕೆ ಹೆಗಡೆಜೀ ಬಗ್ಗೆ ಅಭಿಮಾನವಿದೆ. ಬಿಜೆಪಿಯಲ್ಲಿರುವ ಹೆಗಡೆಜೀ ಶಿಷ್ಯ ಬಳಗವೂ ‘ಗುರುಕಾಣಿಕೆ’ ನೀಡದೇ ಇರಲಾರದು. ದೇಶಪಾಂಡೆಗೂ ತನ್ನನ್ನು ಈ ಮಟ್ಟಕ್ಕೆ ಬೆಳೆಯಲು ಆರಂಭದಲ್ಲಿ ನೀರೆರೆದ ಹೆಗಡೆಜೀ ಋಣ ತೀರಿಸಲು ಇದೊಂದು ಅವಕಾಶ. ದೇಶಪಾಂಡೆ ತನ್ನ ಜನ್ಮಜಾತ ದ್ರೋಹ ಗುಣ-ಧರ್ಮ ಬಿಟ್ಟು ಕೃತಜ್ಞತೆಯಿಂದ ಕೆಲಸ ಮಾಡಿದರೆ ಮೈತ್ರಿಕೂಟದ ಮಮತಾ ನಿರಾಯಾಸವಾಗಿ ಗೆಲ್ಲುತ್ತಾರೆ. ಮಮತಾ ಹೆಗಡೆ(ನಿಚ್ಚಾನಿ)ಯನ್ನು ಹಠ ಹಿಡಿದು ಮೈತ್ರಿಕೂಟದ ಕ್ಯಾಂಡಿಡೇಟ್ ಮಾಡಿದರೆ ಆತ ಹೆಗಡೆಜೀಗೆ ಮಾಡಿದ ಅನ್ಯಾಯಕ್ಕೆ ಪ್ರಾಯಶ್ಚಿತ್ತವೂ ಆಗುತ್ತದೆಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...