Homeರಾಜಕೀಯಹೆಗಡೆ ಮಗಳು ಕೈ ಕ್ಯಾಂಡಿಡೇಟಾದರೆ ಅನಂತ್ಮಾಣಿಗೆ ಸೋಲು ಗ್ಯಾರಂಟಿ!

ಹೆಗಡೆ ಮಗಳು ಕೈ ಕ್ಯಾಂಡಿಡೇಟಾದರೆ ಅನಂತ್ಮಾಣಿಗೆ ಸೋಲು ಗ್ಯಾರಂಟಿ!

- Advertisement -
- Advertisement -

ಶುದ್ಧೋದನ |

ಉತ್ತರ ಕನ್ನಡದಲ್ಲಿ ಲೋಕಸಭೆ ಚುನಾವಣೆಯ ಸಂಭಾವ್ಯ ಪೈಲ್ವಾನಕುರಿತು ರಂಗು-ರಂಗಿನ ಮಾತುಕತೆ ನಡೆಯಲಾರಂಭಿಸಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾದ ಬ್ರಾಹ್ಮಣರೂ ಅಧಿಕ ಪ್ರಸಂಗಿ ಸಂಸದ ಅನಂತ್ಮಾಣಿಯ ಹಾವಳಿಗೆ ರೋಸತ್ತು ಹೋಗಿದ್ದಾರೆ. ಸ್ವಪಕ್ಷದೊಳಗಿನ ಬ್ರಾಹ್ಮಣ ಲಾಬಿಯೂ ಆತನಿಗೆ ತಿರುಗಿ ಬಿದ್ದಿರೋದು ಚುನಾವಣಾ ಕಣಕ್ಕೆ ರೋಚಕತೆಯನ್ನು ತಂದುಕೊಟ್ಟಿದೆ. ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ, ಶಿರಸಿ ಶಾಸಕ-ಕಾಗೇರಿ ಹೆಗಡೆ ವಗೈರೆ ವಿಪ್ರೋತ್ತಮರ ವಿರೋಧಿ ಪಡೆ ಅನಂತ್ಮಾಣಿಗೆ ಗೇಟ್‌ಪಾಸ್ ಕೊಡಿಸುವ ಹಠಕ್ಕೆ ಬಿದ್ದಿದೆ. ಈಚೆಗೆ ನಿಧನರಾದ ಕೇಂದ್ರ ಮಂತ್ರಿ ಅನಂತ ಕುಮಾರ್ ಶಾಸ್ತ್ರೀಯ ಇಂಗಿತವೂ ಇದೇ ಆಗಿತ್ತು. ಹಿಂದುತ್ವದ ಇತಿಹಾಸ ‘ತಜ್ಞ’ ಸೂಲಿಬೆಲೆ ಚಕ್ರವರ್ತಿಯನ್ನು ಉತ್ತರಕನ್ನಡದಲ್ಲಿ ಬಿಜೆಪಿ ಕ್ಯಾಂಡಿಡೇಟ್ ಮಾಡುವ ಪ್ರಯತ್ನ ಬಿರುಸಾಗಿ ನಡೆಯುತ್ತಿದೆ. ಇದು ಸಾಧ್ಯವಾಗದಿದ್ದರೆ ಅನಂತ್ಮಾಣಿಯ ಆಜನ್ಮ ಶತ್ರು ಕಾಗೇರಿ ಹೆಗಡೆಯನ್ನು ಕೇಸರಿ ಪಾಳೆಯದ ಕಪ್ಪುಕುದುರೆ ಮಾಡಿ ಯುದ್ಧಕ್ಕಿಳಿಸುವ ಪ್ಲಾನ್-ಬಿ ಕೂಡ ಹೆಣೆಯಲಾಗಿದೆ.

ಈಗಾಗಲೇ ನಡೆದಿರುವ ಸಮೀಕ್ಷೆಗಳೆಲ್ಲವೂ ಮಾಣಿ ಗೆಲ್ಲುವುದು ಅನುಮಾನ ಎಂತಲೇ ಹೇಳಿವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಎಚ್ಚರಿಕೆಯ ಒಮ್ಮತದ ಗೇಮ್‌ಪ್ಲ್ಯಾನ್ ಹೆಣೆದರೆ ಅನಂತ್ಮಾಣಿಯನ್ನು ಮಾಜಿ ಮಾಡೋದು ಕಷ್ಟದ ಕೆಲಸವೇನೂ ಅಲ್ಲ. ಕಾಂಗ್ರೆಸ್-ಜೆಡಿಎಸ್ ಹೈಕಮಾಂಡ್ ಎರಡನ್ನು ಏಕಕಾಲದಲ್ಲಿ ನಿಭಾಯಿಸಬಲ್ಲ ಆರ್.ವಿ.ದೇಶಪಾಂಡೆ ದಗಲುಬಾಜಿತನ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮೈತ್ರಿಕೂಟದ ಹುರಿಯಾಳು ನಿರಾಯಾಸವಾಗಿ ಗೆಲ್ಲಬಹುದು. ಹಾಗಂತ ದೇಶಪಾಂಡೆ, ಕಳೆದ ಬಾರಿ ಬರೋಬ್ಬರಿ ಒಂದು ಮುಕ್ಕಾಲು ಲಕ್ಷ ಮತದಂತರದಲ್ಲಿ ಸೋತಿರುವ ತನ್ನ ಮಗ ಪ್ರಶಾಂತನನ್ನೇ ಮತ್ತೆ ಅಭ್ಯರ್ಥಿಯಾಗಿಸಿದರೆ ಅದು ಕಾಂಗ್ರೆಸ್ಸಿಗೇ ಲುಕ್ಸಾನು. ಯಾಕೆಂದರೆ ಜಿಲ್ಲೆಯ ಎರಡು ಪ್ರಬಲ ಜಾತಿಯಾದ ಹವ್ಯಕ ಬ್ರಾಹ್ಮಣರು ಮತ್ತು ದೀವರನ್ನು ದೇಶಪಾಂಡೆ ಎದುರು ಹಾಕಿಕೊಂಡಿರೋದು ಅವರಿಗೆ ಮುಳುವಾಗಲಿದೆ.

ಮಗನಲ್ಲದಿದ್ದರೆ, ಡಿಸಿಸಿ ಅಧ್ಯಕ್ಷನೂ ಕಳೆದ ಅಸೆಂಬ್ಲಿ ಇಲೆಕ್ಷನ್ನಲ್ಲಿ ಶಿರಸಿಯಲ್ಲಿ ಸೋತಿರುವ ಭೀಮಣ್ಣ ನಾಯ್ಕನನ್ನಾದರು ಅಭ್ಯರ್ಥಿಯಾಗಿಸುವ ಸಾಹಸಕ್ಕೆ ದೇಶಪಾಂಡೆ ಸಾಹೇಬರು ಕೈಹಾಕಬಹುದು. ಆದರೆ ಸ್ವಜಾತಿ ದೀವರ ನಡುವೆಯೇ ಲೀಡರ್‌ಗಿರಿ ಬೆಳೆಸಿಕೊಳ್ಳಲಾಗದ ಭೀಮಣ್ಣನಿಗೆ ಎಂಪಿಗಿರಿ ಕ್ಯಾಂಡಿಡೇಟಾಗುವ ವರ್ಚಸ್ಸಿಲ್ಲ ಅನ್ನೋದು ಮಾತ್ರ ಸತ್ಯ. ಇನ್ನು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್‌ರಿಗೆ ಉತ್ತರಕನ್ನಡದಿಂದ ಎಂಪಿಗಿರಿಗೆ ಸ್ಪರ್ಧಿಸುವ ಯೋಚನೆಯಿದ್ದಂತಿದೆ. ಆದರೆ ಈಡಿಗರ ನಾಯಕನೆಂಬ ಬ್ರ್ಯಾಂಡೇ ಹರಿಪ್ರಸಾದ್‌ಗೆ ಮುಳುವಾಗಿದೆ. ಯಾಕೆಂದರೆ ಜಿಲ್ಲೆಯಲ್ಲಿ ದೀವರ ವಿರುದ್ದ ಇತರ ಸಣ್ಣ ಪುಟ್ಟ ಜಾತಿಗಳು-ಬ್ರಾಹ್ಮಣರು ಒಂದಾಗುವ ದ್ವೇಷದ ವಾತಾವರಣವಿದೆ. ಇದು ಹಿಂದುತ್ವದ ಅಡ್ಡ ಪರಿಣಾಮ! ಬ್ರಾಹ್ಮಣಿಕೆಯ ತಂತ್ರಗಾರಿಕೆ!!

ಜೆಡಿಎಸ್‌ನ ಆನಂದ ಅಸ್ನೋಟಿಕರ್ ತಾನೊಬ್ಬ ಹಿಂದುಳಿದ ವರ್ಗದ ನಾಯಕಾಗ್ರೇಸ ಎಂಬಂತೆ ಪೋಸು ಕೊಡುತ್ತಿದ್ದಾನೆ. ಆದರೆ ಅಸ್ನೋಟಿಕರ್‌ಗೆ ಕಾರವಾರದಾಚೆಗೆ ಮತ ಪಡೆಯುವ ಶಕ್ತಿಯಿಲ್ಲ. ಬಿಜೆಪಿಯ ಅನಂತ್ಮಾಣಿ ಸೋಲಿಸಲು ಮೈತ್ರಿಕೂಟ ಆತನದೇ ಜಾತಿಯ ಹವ್ಯಕ ಅಭ್ಯರ್ಥಿ ನಿಲ್ಲಿಸುವ ಸ್ಟಾçಟಜಿ ಮಾಡಬೇಕಾಗಿದೆ. ಅನಂತ್ಮಾಣಿ ಬಗ್ಗೆ ಬೇಸರದಲ್ಲಿರುವ ಹವ್ಯಕರ ಮತ ಈ ತಂತ್ರಗಾರಿಕೆಯಿಂದ ಸಲೀಸಾಗಿ ಪಡೆಯಬಹುದು. ದೇಶಪಾಂಡೆ ಖಾನ್‌ದಾನ್ ಇಲೆಕ್ಷನ್ ಕಣದಿಂದ ದೂರಾದರೆ ದೀವರು ಮತ್ತಿತರ ಹಿಂದುಳಿದ ಸಮುದಾಯದ ಮತವೂ ಮೈತ್ರಿಕೂಟಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್‌ನಲ್ಲಿ ಅಂಥ ದೈತ್ಯ(ಅನಂತ್ಮಾಣಿ) ಸಂಹಾರಕ ಹವ್ಯಕ ಕಾಣಿಸುತ್ತಿಲ್ಲ. ಜೆಡಿಎಸ್‌ನಲ್ಲಿರುವ ಶಶಿಭೂಷಣ ಹೆಗಡೆ ಇಡೀ ಜಿಲ್ಲೆಯಲ್ಲಿ ಪ್ರಭಾವಳಿಯಿದೆ. ಹೆಗಡೆಜೀ ಮೊಮ್ಮಗನೆಂಬ ಬಲವಿದೆ. ಹವ್ಯಕರ ಮತ ಪಡೆಯಬಲ್ಲ ಶಶಿಭೂಷಣ್‌ಗೆ ಇತರ ವರ್ಗದ ಮತಕ್ಕೆ ಹಸ್ತ ಚಿಹ್ನೆ ಅನಿವಾರ್ಯ. ತೆನೆಹೊತ್ತ ಮಹಿಳೆಯಿಂದ ಇದು ಸಾಧ್ಯವಾಗದು. ಅಂದರೆ ಶಶಿ ಕಾಂಗ್ರೆಸ್ ಕ್ಯಾಂಡಿಡೇಟ್ ಆಗಿ, ದೇಶಪಾಂಡೆ ಶುದ್ಧಿಯಿಂದ ಕೆಲಸ ಮಾಡಿದರೆ ಗೆಲುವು ಸಾಧ್ಯ.

ಇದಕ್ಕೆ ದೇಶಪಾಂಡೆ ಒಪ್ಪುವುದು ಅನುಮಾನ. ಹಾಗೆಯೇ ಅನಂತ್ಮಾಣಿ ಬಗ್ಗೆ ಏನೋ ಒಂಥರ ಸೆಳೆತವಿರುವ ಶಶಿ ಆತನ ವಿರುದ್ಧ ನಿಲ್ಲಲಾರನೆಂಬ ಅಭಿಪ್ರಾಯ ಕಾಂಗ್ರೆಸ್-ಜೆಡಿಎಸ್-ಬಿಜೆಪಿಯಲ್ಲಿದೆ. ಈ ಒಳರಾಜಕಾರಣದ ಸುಳಿ ಸಂಕಷ್ಟ, ಜಿಲ್ಲೆಯ ಸೋಷಲ್ ಇಂಜಿನಿಯರಿಂಗ್, ಕ್ಯಾಸ್ಟ್ ಕೆಮಿಸ್ಟ್ರಿ ಲೆಕ್ಕಹಾಕಿರುವ ಕಾಂಗ್ರೆಸ್‌ನ ಒಂದು ಬಣ ತಣ್ಣಗೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮಗಳು ಮಮತಾ ನಿಚ್ಚಾನಿಯನ್ನು ಮೈತ್ರಿಕೂಟದ ಅಭ್ಯರ್ಥಿಯಾಗಿಸುವ ಪ್ಲಾನು ಹಾಕಿಕೊಂಡು ಆಕೆಯ ಹೆಸರು ತೇಲಿ ಬಿಡಲಾರಂಭಿಸಿದೆ. ಇದು ಸೂಕ್ತ ಆಯ್ಕೆ ಮತ್ತು ರಣತಂತ್ರ ಎಂದು ಜನಸಾಮಾನ್ಯರೂ ಹೇಳುತ್ತಿದ್ದಾರೆ. ಬಿಜೆಪಿಯ ಅನಂತ್ಮಾಣಿಯನ್ನು ಮನೆಗೆ ಕಳಿಸುವ ಮೂಡ್‌ನಲ್ಲಿರುವ ಮತದಾರರಿಗೆ ಹೆಗಡೆಜೀ ಖಾನ್‌ದಾನ್ ಹೆಸರು ಕೇಳುತ್ತಿದ್ದಂತೆಯೇ ಮೈತ್ರಿಕೂಟದತ್ತ ನೋಟ ಹರಿದಿದೆ.

ಇವತ್ತಿಗೂ ಉತ್ತರ ಕನ್ನಡದಲ್ಲಿ ಹೆಗಡೆಜೀ ಮತ್ತು `ಬಂ’ ನಾಮ ಬಿಲದ ವಿಚಿತ್ರ ಸೆಳೆತವಿದೆ. ಹೆಗಡೆಜೀ ಅಂದರೆ ಆತನ ಜಾತಿಬಂಧುಗಳಾದ ಹವ್ಯಕರಲ್ಲಿ ಕಮಲ-ಅನಂತ್ಮಾಣಿಯನ್ನು ಮರೆಸುವಷ್ಟು ಮೇನಿಯಾ ಇದೆ. ಹೆಗಡೆಜೀ ವಂಶದ ಮಮತಾ ಕಾಂಗ್ರೆಸ್ ಅಭ್ಯರ್ಥಿ ಅಂತಾದರೆ ಹವ್ಯಕರು ಕಣ್ಮುಚ್ಚಿ ಓಟು ಹಾಕೋದು ಖಂಡಿತ. ಹಾಗೆಯೇ ನಾಡಾವರು, ಪಟಗಾರರು.. ಮುಂತಾದ ಸಣ್ಣ-ಪುಟ್ಟ ಸಮುದಾಯಕ್ಕೆ ಹೆಗಡೆಜೀ ಬಗ್ಗೆ ಅಭಿಮಾನವಿದೆ. ಬಿಜೆಪಿಯಲ್ಲಿರುವ ಹೆಗಡೆಜೀ ಶಿಷ್ಯ ಬಳಗವೂ ‘ಗುರುಕಾಣಿಕೆ’ ನೀಡದೇ ಇರಲಾರದು. ದೇಶಪಾಂಡೆಗೂ ತನ್ನನ್ನು ಈ ಮಟ್ಟಕ್ಕೆ ಬೆಳೆಯಲು ಆರಂಭದಲ್ಲಿ ನೀರೆರೆದ ಹೆಗಡೆಜೀ ಋಣ ತೀರಿಸಲು ಇದೊಂದು ಅವಕಾಶ. ದೇಶಪಾಂಡೆ ತನ್ನ ಜನ್ಮಜಾತ ದ್ರೋಹ ಗುಣ-ಧರ್ಮ ಬಿಟ್ಟು ಕೃತಜ್ಞತೆಯಿಂದ ಕೆಲಸ ಮಾಡಿದರೆ ಮೈತ್ರಿಕೂಟದ ಮಮತಾ ನಿರಾಯಾಸವಾಗಿ ಗೆಲ್ಲುತ್ತಾರೆ. ಮಮತಾ ಹೆಗಡೆ(ನಿಚ್ಚಾನಿ)ಯನ್ನು ಹಠ ಹಿಡಿದು ಮೈತ್ರಿಕೂಟದ ಕ್ಯಾಂಡಿಡೇಟ್ ಮಾಡಿದರೆ ಆತ ಹೆಗಡೆಜೀಗೆ ಮಾಡಿದ ಅನ್ಯಾಯಕ್ಕೆ ಪ್ರಾಯಶ್ಚಿತ್ತವೂ ಆಗುತ್ತದೆಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...