Homeಅಂಕಣಗಳುಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ...

ಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ…

- Advertisement -
- Advertisement -

ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಇವುಗಳ ಸಂಯುಕ್ತ ಸರ್ಕಾರ ಈಗ ಅಸ್ತಿತ್ವಕ್ಕೆ ಬಂದಿದೆ. ಜಾತ್ಯಾತಿತ ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ವಿನಂತಿಸಿಕೊಂಡಿತು. ಈ ಕರಾರಿನ ಪ್ರಕಾರವೇ ಈಗ ಸರ್ಕಾರ ನಡೆಯುತ್ತಿದೆ.
‘ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು’ ಎಂಬಂತೆ ಭಾಜಪ ಈ ಸಂಯುಕ್ತ ಸರಕಾರದ ಬಗೆಗೆ ವಿಷ ಕಾರುತ್ತಿದೆ. ಅದು ಭಾಜಪಗೆ ಸಹಜ. ಯಡಿಯುರಪ್ಪನವರು ‘ತೀನ್‍ದಿನ್‍ಕಾ ಸುಲ್ತಾನ್’ ಆಗಿ ಬಹುಮತವಿಲ್ಲದೆ, ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಹೋಗಬೇಕಾದ ದುಸ್ಥಿತಿ ಬಂದಿದ್ದರಿಂದ ಅವರಿಗೆ ಮುಖ ಭಂಗವಾಗಿದೆ. ಅದಕ್ಕಾಗಿ ಯಡಿಯುರಪ್ಪನವರೂ, ಭಾಜಪದ ಇತರ ಶಾಸಕರೂ ಹೊಸ ಸರ್ಕಾರದ ಬಗೆಗೆ ಮನಸೋ ಇಚ್ಛೆ ಮಾತಾನಾಡುತ್ತಿದ್ದಾರೆ. ಅದೂ ಅವರಿಗೆ ಸಹಜ.
ಆದರೆ ಆಡಳಿತ ಪಕ್ಷಗಳ ಶಾಸಕರೇ ಸರ್ಕಾರದ ಕಾಲು ಹಿಡಿದು ಎಳೆಯುವ ಕಾರ್ಯದಲ್ಲಿ ತೊಡಗಿರುವುದು ಅವರ ಬೇಜವಾಬ್ದಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಮಾದ್ಯಮಗಳು ಕೂಡ ಈ ಸರ್ಕಾರದ ವಿರುದ್ಧದ ಅನವಶ್ಯಕ ಟೀಕೆಗಳಿಗೆ ಹೆಚ್ಚಿನ ಮಹತ್ವ ನೀಡಿ ಪ್ರಚಾರ ಮಾಡುತ್ತಿರುವುದು ಅಪೇಕ್ಷಣೀಯವಲ್ಲ.
‘ಕುಮಾರಸ್ವಾಮಿಯವರು ಸರ್ಕಾರವನ್ನು ರಚಿಸಲಿ, ಅವರಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಎಲ್ಲ ಅಧಿಕಾರ ನೀಡಬೇಕು, ಕಾಂಗ್ರೆಸ್ ನಿಷ್ಕ್ರಿಯವಾಗಬೇಕು ಎಂಬಂತೆ ಅರ್ಥೈಸಬಾರದು. ಮೈತ್ರಿ ಧರ್ಮಕ್ಕೆ ಪಾಲಿಸುತ್ತಾ ಎರಡೂ ಪಕ್ಷಗಳ ಮ್ಯಾನಿಫೆಸ್ಟೋಗಳಿಗೆ ಮನ್ನಣೆ ನೀಡಬೇಕು. ಎರಡೂ ಪಕ್ಷಗಳು ಚುನಾವಣಾ ವೇಳೆಯಲ್ಲಿ ಘೋಷಿಸಿರುವ ಮುಖ್ಯ ಭರವಸೆಗಳನ್ನು ಕಾರ್ಯರೂಪಕ್ಕಿಳಿಸುವ ಮಾರ್ಗಗಳನ್ನು ಹುಡುಕಬೇಕು. ಎರಡೂ ಪಕ್ಷಗಳೂ ಜನರ ಮನ್ನಣೆ ಪಡೆಯಬೇಕು ಎಂಬ ಧ್ಯೇಯ ಇಟ್ಟುಕೊಂಡು ಸರ್ಕಾರ ಮುನ್ನಡೆಯಬೇಕಾಗುತ್ತದೆ.
ರೈತರ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಘೋಷಣೆ ಮಾಡಿದ್ದಾರೆ. ಅದು ಕಷ್ಟ ಸಾಧ್ಯವಾದ ಕೆಲಸ ಎಂಬುದು ಉಭಯ ಪಕ್ಷಗಳಿಗೂ ಗೊತ್ತು. ರೈತರ ಆಗ್ರಹಕ್ಕೆ ತುತ್ತಾಗಲು ಕುಮಾರಸ್ವಾಮಿಗಳು ತಯಾರಿಲ್ಲವಾದ್ದರಿಂದ ಅವರ ಮಾತನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳೂ ಇದಕ್ಕೆ ಒಪ್ಪಿಕೊಂಡಿವೆ. ಅದರಂತೆಯೇ ಕಾಂಗ್ರೆಸ್ ತಾನು ಆರಂಭಿಸಿದ ಜನಪ್ರಿಯ ಕಾರ್ಯಕ್ರಮಗಳನ್ನು ಈ ಸರ್ಕಾರ ಮುಂದುವರೆಸಬೇಕು ಎಂದು ಒತ್ತಾಯ ಹಾಕುತ್ತಿದೆ. ಅದನ್ನು ಕಾರ್ಯಗತಗೊಳಿಸುವುದು ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿCommon Minimum Programme ಏನಿರಬೇಕು ಎಂಬುದನ್ನು ಗೊತ್ತುಮಾಡಿ ಅದರಂತೆ ನಡೆಯುವುದು ಸೂಕ್ತ.
ಕುಮಾರಸ್ವಾಮಿ ತಾವು ಹೇಗೊ ಅಧಿಕಾರಕ್ಕೆ ಬರುವುದಿಲ್ಲವೆಂದು ತಿಳಿದು ರೈತರ ಸಾಲಮನ್ನಾ ವಿಚಾರವನ್ನು ಚುನಾವಣಾ ಪ್ರಚಾರ ಕಾಲದಲ್ಲಿ ಪ್ರಸ್ತಾಪಿಸಿರಬಹುದು. ಅಕಸ್ಮಾತ್ ಅಧಿಕಾರಕ್ಕೆ ಬಂದಿರುವುದರಿಂದ ಅದನ್ನು ಕಾರ್ಯಗತ ಮಾಡಿ ತೋರಿಸಲೇಬೇಕಾದ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ. ಇದನ್ನು ಹೇಗೆ ನಿಭಾಯಿಸುವರೆಂಬುದನ್ನು ಕುತೂಹಲದಿಂದ ಕರ್ನಾಟಕದ ಜನತೆ ಎದುರು ನೋಡುತ್ತಿದೆ.
‘ಎತ್ತು ಏರಿಗೆ ಎಳೆಯಿತು, ಎಮ್ಮೆ ನೀರಿಗಿಳಿಯಿತು’. ಎಂಬ ರೀತಿ ಈ ಸಂಯುಕ್ತ ಸರ್ಕಾರ ಮೂರಾಬಟ್ಟೆ ಯಾಗಬೇಕೆಂದು ವಿರೋಧಪಕ್ಷ ಆಶಿಸುತ್ತದೆ. ವಿರೋಧ ಪಕ್ಷದ ಈ ಆಶಯವನ್ನು ಸುಳ್ಳು ಮಾಡುವುದಾಗಿ ಅಧಿಕಾರಾರೂಢ ಪಕ್ಷಗಳು ಶಪಥ ತೊಡಬೇಕು. ಎಲ್ಲ ಶಾಸಕರಿಗೂ, ಮಂತ್ರಿಗಳಿಗೂ ಒಳ್ಳೆಯ ಆಡಳಿತ ನೀಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಬೇಕು, ಭ್ರಷ್ಟಾಚಾರರಹಿತ ಆಡಳಿತವನ್ನು ಜಾರಿಗೆ ತರಬೇಕು ಎಂಬ ಕಾತರ ಇರಬೇಕು. ಯಾವುದೇ ಕಾರಣದಿಂದ ಈ ಉಭಯ ಪಕ್ಷಗಳು ಕಚ್ಚಾಡಿಕೊಂಡು ಬೀದಿಗೆ ಬೀಳಬಾರದು. ನಮ್ಮ ಶಾಸಕರಲ್ಲಿ, ಮಂತ್ರಿಗಳಾಗಿರುವವರಲ್ಲಿ ಅನೇಕರಿಗೆ ತಮ್ಮ ಹೊಣೆಗಾರಿಕೆ ಏನು ಎಂಬುದು ತಿಳಿದಿಲ್ಲ. ರಾಜ್ಯಾಡಳಿತ ಮಕ್ಕಳ ಆಟವಲ್ಲ ಎಂಬ ಅರಿವು ಅವರಲ್ಲಿ ಮೂಡಬೇಕು. ಅಧಿಕಾರ ಹಂಚಿಕೆಯೆಂಬುದು ಪಿತ್ರಾರ್ಜಿತ ಸ್ವತ್ತುಗಳ ಹಂಚಿಕೆಯಂತಲ್ಲ ಎಂಬುದನ್ನು ಉಭಯರೂ ಅರ್ಥಮಾಡಿಕೊಳ್ಳಬೇಕು.
ಕುಮಾರಸ್ವಾಮಿಯವರ ಸರ್ಕಾರ ರೈತರ ಸಾಲಮನ್ನಾದಂತಹ ಕ್ಲಿಷ್ಟವಾದ ಸಮಸ್ಯೆಗಳನ್ನು ತನ್ನ ಆಡಳಿತಾವಧಿಯಲ್ಲಿ ಮತ್ತೆ ಸೃಷ್ಟಿಸಬಾರದು. ರೈತ ಸಂಘಕ್ಕೆ ರೈತರ ಸಾಲಮನ್ನಾ ಧ್ಯಾನ ಬಿಟ್ಟರೆ ಇತರೆ ವಿಚಾರಗಳ ಬಗ್ಗೆ ಅವರು ಲಕ್ಷ್ಯ ಕೊಡುವುದಿಲ್ಲ. ರೈತರ ಸಂಘಟನೆಗಳ ನಾಯಕತ್ವದಲ್ಲಿ ಬಹಳಷ್ಟು ಮಂದಿ ಜಮೀನ್ದಾರರು. ಇವರು ರೈತಸಂಘಕ್ಕೂ ಸದಸ್ಯರು, ಬೇರೆ ಬೇರೆ ರಾಜಕೀಯ ಪಾರ್ಟಿಗಳಿಗೂ ಸದಸ್ಯರು. ರೈತ ಸಂಘಟನೆಗಳಲ್ಲಿ ನುಸುಳಿರುವ ಈ ಪಟ್ಟ ಭದ್ರ ಹಿತಾಸಕ್ತಿಗಳು, ರೈತ ಸಂಘಕ್ಕೆ ಸದಸ್ಯರಾಗುವ ಏಕೈಕ ಉದ್ದೇಶ, ಸಾಲಮನ್ನಾ ಮೊದಲುಗೊಂಡು ರೈತರ ಹೆಸರಿನಲ್ಲಿ ದೊರಕಬಹುದಾದ ಎಲ್ಲ ಸೌಕರ್ಯಗಳನ್ನೂ ತಮ್ಮದಾಗಿಸಿಕೊಳ್ಳುವುದಲ್ಲದೆ ಬೇರೇನೂ ಇಲ್ಲ. ಈ ವ್ಯವಸ್ಥೆಯಲ್ಲಿ ಸರ್ಕಾರದಿಂದ ಬಡ ರೈತರಿಗೆ ಪುಡಿಕಾಸು ಸಿಕ್ಕಿದರೆ ಈ ಛದ್ಮ ವೇಷದ ಸ್ವಾರ್ಥಿ ಜಮೀನ್ದಾರರಿಗೆ ದೊಚಲು ಸಿಗುವುದು ಸಿಂಹಪಾಲು.
ಪ್ರತಿವರ್ಷ ಸ್ವಾರ್ಥಿಗಳ ಕಿಸೆತುಂಬುವ ಈ ಸಾಲಮನ್ನಾ ಪ್ರಹಸನವನ್ನು ಈ ಸರ್ಕಾರ ಕೊನೆಗಾಣಿಸಿ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಲೆ ನಿರ್ಧರಿಸಬೇಕು. ರೈತರು ಬೆಳೆದ ಬೆಳೆ ನೇರವಾಗಿ ಗ್ರಾಹಕನಿಗೆ ದೊರಕುವಂತೆ ಮಾಡಿ ದಳ್ಳಾಳಿಗಳ ಹಾವಳಿಯಿಂದ ರೈತರನ್ನು ಪಾರು ಮಾಡಬೇಕು.
ರೈತ ಸಂಘಕ್ಕೆ ಒಂದು ಸೂಚನೆ. ರೈತ ಸಂಘ ಒಂದು ರಾಜಕೀಯ ಪಕ್ಷವಾಗಿಯೂ ಬೆಳೆಯಬೇಕು. ಹಾಗೆಯೇ ಅದು ಒಂದು ರೈತರ ಹಿತಕಾಯುವ ಹೋರಾಟ ಸಮಿತಿಯಾಗಿಯೂ ಕೆಲಸ ಮಾಡಬೇಕು. ರೈತ ಸಂಘಕ್ಕೆ ಸೇರುವವರು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸದಸ್ಯರಾಗಿರಬಾರದು ಎಂಬ ನಿಯಮವನ್ನು ಜಾರಿಗೆ ತರಬೇಕು. ಹೀಗಾದಾಗ ಒಂದಲ್ಲ ಒಂದು ದಿನ ಕರ್ನಾಟಕದಲ್ಲಿ ರೈತರ ರಾಜ್ಯ ಸ್ಥಾಪನೆಯಾಗುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ರಾಜ್ಯದ ರೈತ ಸಂಘ ಗಂಭೀರವಾಗಿ ವಿಚಾರ ಮಾಡಿ ಕೂಡಲೇ ಒಂದು ನಿರ್ಧಾರಕ್ಕೆ ಬರಬೇಕು.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...