Homeಅಂಕಣಗಳುಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ...

ಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ…

- Advertisement -
- Advertisement -

ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಇವುಗಳ ಸಂಯುಕ್ತ ಸರ್ಕಾರ ಈಗ ಅಸ್ತಿತ್ವಕ್ಕೆ ಬಂದಿದೆ. ಜಾತ್ಯಾತಿತ ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ವಿನಂತಿಸಿಕೊಂಡಿತು. ಈ ಕರಾರಿನ ಪ್ರಕಾರವೇ ಈಗ ಸರ್ಕಾರ ನಡೆಯುತ್ತಿದೆ.
‘ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು’ ಎಂಬಂತೆ ಭಾಜಪ ಈ ಸಂಯುಕ್ತ ಸರಕಾರದ ಬಗೆಗೆ ವಿಷ ಕಾರುತ್ತಿದೆ. ಅದು ಭಾಜಪಗೆ ಸಹಜ. ಯಡಿಯುರಪ್ಪನವರು ‘ತೀನ್‍ದಿನ್‍ಕಾ ಸುಲ್ತಾನ್’ ಆಗಿ ಬಹುಮತವಿಲ್ಲದೆ, ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಹೋಗಬೇಕಾದ ದುಸ್ಥಿತಿ ಬಂದಿದ್ದರಿಂದ ಅವರಿಗೆ ಮುಖ ಭಂಗವಾಗಿದೆ. ಅದಕ್ಕಾಗಿ ಯಡಿಯುರಪ್ಪನವರೂ, ಭಾಜಪದ ಇತರ ಶಾಸಕರೂ ಹೊಸ ಸರ್ಕಾರದ ಬಗೆಗೆ ಮನಸೋ ಇಚ್ಛೆ ಮಾತಾನಾಡುತ್ತಿದ್ದಾರೆ. ಅದೂ ಅವರಿಗೆ ಸಹಜ.
ಆದರೆ ಆಡಳಿತ ಪಕ್ಷಗಳ ಶಾಸಕರೇ ಸರ್ಕಾರದ ಕಾಲು ಹಿಡಿದು ಎಳೆಯುವ ಕಾರ್ಯದಲ್ಲಿ ತೊಡಗಿರುವುದು ಅವರ ಬೇಜವಾಬ್ದಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಮಾದ್ಯಮಗಳು ಕೂಡ ಈ ಸರ್ಕಾರದ ವಿರುದ್ಧದ ಅನವಶ್ಯಕ ಟೀಕೆಗಳಿಗೆ ಹೆಚ್ಚಿನ ಮಹತ್ವ ನೀಡಿ ಪ್ರಚಾರ ಮಾಡುತ್ತಿರುವುದು ಅಪೇಕ್ಷಣೀಯವಲ್ಲ.
‘ಕುಮಾರಸ್ವಾಮಿಯವರು ಸರ್ಕಾರವನ್ನು ರಚಿಸಲಿ, ಅವರಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಎಲ್ಲ ಅಧಿಕಾರ ನೀಡಬೇಕು, ಕಾಂಗ್ರೆಸ್ ನಿಷ್ಕ್ರಿಯವಾಗಬೇಕು ಎಂಬಂತೆ ಅರ್ಥೈಸಬಾರದು. ಮೈತ್ರಿ ಧರ್ಮಕ್ಕೆ ಪಾಲಿಸುತ್ತಾ ಎರಡೂ ಪಕ್ಷಗಳ ಮ್ಯಾನಿಫೆಸ್ಟೋಗಳಿಗೆ ಮನ್ನಣೆ ನೀಡಬೇಕು. ಎರಡೂ ಪಕ್ಷಗಳು ಚುನಾವಣಾ ವೇಳೆಯಲ್ಲಿ ಘೋಷಿಸಿರುವ ಮುಖ್ಯ ಭರವಸೆಗಳನ್ನು ಕಾರ್ಯರೂಪಕ್ಕಿಳಿಸುವ ಮಾರ್ಗಗಳನ್ನು ಹುಡುಕಬೇಕು. ಎರಡೂ ಪಕ್ಷಗಳೂ ಜನರ ಮನ್ನಣೆ ಪಡೆಯಬೇಕು ಎಂಬ ಧ್ಯೇಯ ಇಟ್ಟುಕೊಂಡು ಸರ್ಕಾರ ಮುನ್ನಡೆಯಬೇಕಾಗುತ್ತದೆ.
ರೈತರ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಘೋಷಣೆ ಮಾಡಿದ್ದಾರೆ. ಅದು ಕಷ್ಟ ಸಾಧ್ಯವಾದ ಕೆಲಸ ಎಂಬುದು ಉಭಯ ಪಕ್ಷಗಳಿಗೂ ಗೊತ್ತು. ರೈತರ ಆಗ್ರಹಕ್ಕೆ ತುತ್ತಾಗಲು ಕುಮಾರಸ್ವಾಮಿಗಳು ತಯಾರಿಲ್ಲವಾದ್ದರಿಂದ ಅವರ ಮಾತನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳೂ ಇದಕ್ಕೆ ಒಪ್ಪಿಕೊಂಡಿವೆ. ಅದರಂತೆಯೇ ಕಾಂಗ್ರೆಸ್ ತಾನು ಆರಂಭಿಸಿದ ಜನಪ್ರಿಯ ಕಾರ್ಯಕ್ರಮಗಳನ್ನು ಈ ಸರ್ಕಾರ ಮುಂದುವರೆಸಬೇಕು ಎಂದು ಒತ್ತಾಯ ಹಾಕುತ್ತಿದೆ. ಅದನ್ನು ಕಾರ್ಯಗತಗೊಳಿಸುವುದು ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿCommon Minimum Programme ಏನಿರಬೇಕು ಎಂಬುದನ್ನು ಗೊತ್ತುಮಾಡಿ ಅದರಂತೆ ನಡೆಯುವುದು ಸೂಕ್ತ.
ಕುಮಾರಸ್ವಾಮಿ ತಾವು ಹೇಗೊ ಅಧಿಕಾರಕ್ಕೆ ಬರುವುದಿಲ್ಲವೆಂದು ತಿಳಿದು ರೈತರ ಸಾಲಮನ್ನಾ ವಿಚಾರವನ್ನು ಚುನಾವಣಾ ಪ್ರಚಾರ ಕಾಲದಲ್ಲಿ ಪ್ರಸ್ತಾಪಿಸಿರಬಹುದು. ಅಕಸ್ಮಾತ್ ಅಧಿಕಾರಕ್ಕೆ ಬಂದಿರುವುದರಿಂದ ಅದನ್ನು ಕಾರ್ಯಗತ ಮಾಡಿ ತೋರಿಸಲೇಬೇಕಾದ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ. ಇದನ್ನು ಹೇಗೆ ನಿಭಾಯಿಸುವರೆಂಬುದನ್ನು ಕುತೂಹಲದಿಂದ ಕರ್ನಾಟಕದ ಜನತೆ ಎದುರು ನೋಡುತ್ತಿದೆ.
‘ಎತ್ತು ಏರಿಗೆ ಎಳೆಯಿತು, ಎಮ್ಮೆ ನೀರಿಗಿಳಿಯಿತು’. ಎಂಬ ರೀತಿ ಈ ಸಂಯುಕ್ತ ಸರ್ಕಾರ ಮೂರಾಬಟ್ಟೆ ಯಾಗಬೇಕೆಂದು ವಿರೋಧಪಕ್ಷ ಆಶಿಸುತ್ತದೆ. ವಿರೋಧ ಪಕ್ಷದ ಈ ಆಶಯವನ್ನು ಸುಳ್ಳು ಮಾಡುವುದಾಗಿ ಅಧಿಕಾರಾರೂಢ ಪಕ್ಷಗಳು ಶಪಥ ತೊಡಬೇಕು. ಎಲ್ಲ ಶಾಸಕರಿಗೂ, ಮಂತ್ರಿಗಳಿಗೂ ಒಳ್ಳೆಯ ಆಡಳಿತ ನೀಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಬೇಕು, ಭ್ರಷ್ಟಾಚಾರರಹಿತ ಆಡಳಿತವನ್ನು ಜಾರಿಗೆ ತರಬೇಕು ಎಂಬ ಕಾತರ ಇರಬೇಕು. ಯಾವುದೇ ಕಾರಣದಿಂದ ಈ ಉಭಯ ಪಕ್ಷಗಳು ಕಚ್ಚಾಡಿಕೊಂಡು ಬೀದಿಗೆ ಬೀಳಬಾರದು. ನಮ್ಮ ಶಾಸಕರಲ್ಲಿ, ಮಂತ್ರಿಗಳಾಗಿರುವವರಲ್ಲಿ ಅನೇಕರಿಗೆ ತಮ್ಮ ಹೊಣೆಗಾರಿಕೆ ಏನು ಎಂಬುದು ತಿಳಿದಿಲ್ಲ. ರಾಜ್ಯಾಡಳಿತ ಮಕ್ಕಳ ಆಟವಲ್ಲ ಎಂಬ ಅರಿವು ಅವರಲ್ಲಿ ಮೂಡಬೇಕು. ಅಧಿಕಾರ ಹಂಚಿಕೆಯೆಂಬುದು ಪಿತ್ರಾರ್ಜಿತ ಸ್ವತ್ತುಗಳ ಹಂಚಿಕೆಯಂತಲ್ಲ ಎಂಬುದನ್ನು ಉಭಯರೂ ಅರ್ಥಮಾಡಿಕೊಳ್ಳಬೇಕು.
ಕುಮಾರಸ್ವಾಮಿಯವರ ಸರ್ಕಾರ ರೈತರ ಸಾಲಮನ್ನಾದಂತಹ ಕ್ಲಿಷ್ಟವಾದ ಸಮಸ್ಯೆಗಳನ್ನು ತನ್ನ ಆಡಳಿತಾವಧಿಯಲ್ಲಿ ಮತ್ತೆ ಸೃಷ್ಟಿಸಬಾರದು. ರೈತ ಸಂಘಕ್ಕೆ ರೈತರ ಸಾಲಮನ್ನಾ ಧ್ಯಾನ ಬಿಟ್ಟರೆ ಇತರೆ ವಿಚಾರಗಳ ಬಗ್ಗೆ ಅವರು ಲಕ್ಷ್ಯ ಕೊಡುವುದಿಲ್ಲ. ರೈತರ ಸಂಘಟನೆಗಳ ನಾಯಕತ್ವದಲ್ಲಿ ಬಹಳಷ್ಟು ಮಂದಿ ಜಮೀನ್ದಾರರು. ಇವರು ರೈತಸಂಘಕ್ಕೂ ಸದಸ್ಯರು, ಬೇರೆ ಬೇರೆ ರಾಜಕೀಯ ಪಾರ್ಟಿಗಳಿಗೂ ಸದಸ್ಯರು. ರೈತ ಸಂಘಟನೆಗಳಲ್ಲಿ ನುಸುಳಿರುವ ಈ ಪಟ್ಟ ಭದ್ರ ಹಿತಾಸಕ್ತಿಗಳು, ರೈತ ಸಂಘಕ್ಕೆ ಸದಸ್ಯರಾಗುವ ಏಕೈಕ ಉದ್ದೇಶ, ಸಾಲಮನ್ನಾ ಮೊದಲುಗೊಂಡು ರೈತರ ಹೆಸರಿನಲ್ಲಿ ದೊರಕಬಹುದಾದ ಎಲ್ಲ ಸೌಕರ್ಯಗಳನ್ನೂ ತಮ್ಮದಾಗಿಸಿಕೊಳ್ಳುವುದಲ್ಲದೆ ಬೇರೇನೂ ಇಲ್ಲ. ಈ ವ್ಯವಸ್ಥೆಯಲ್ಲಿ ಸರ್ಕಾರದಿಂದ ಬಡ ರೈತರಿಗೆ ಪುಡಿಕಾಸು ಸಿಕ್ಕಿದರೆ ಈ ಛದ್ಮ ವೇಷದ ಸ್ವಾರ್ಥಿ ಜಮೀನ್ದಾರರಿಗೆ ದೊಚಲು ಸಿಗುವುದು ಸಿಂಹಪಾಲು.
ಪ್ರತಿವರ್ಷ ಸ್ವಾರ್ಥಿಗಳ ಕಿಸೆತುಂಬುವ ಈ ಸಾಲಮನ್ನಾ ಪ್ರಹಸನವನ್ನು ಈ ಸರ್ಕಾರ ಕೊನೆಗಾಣಿಸಿ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಲೆ ನಿರ್ಧರಿಸಬೇಕು. ರೈತರು ಬೆಳೆದ ಬೆಳೆ ನೇರವಾಗಿ ಗ್ರಾಹಕನಿಗೆ ದೊರಕುವಂತೆ ಮಾಡಿ ದಳ್ಳಾಳಿಗಳ ಹಾವಳಿಯಿಂದ ರೈತರನ್ನು ಪಾರು ಮಾಡಬೇಕು.
ರೈತ ಸಂಘಕ್ಕೆ ಒಂದು ಸೂಚನೆ. ರೈತ ಸಂಘ ಒಂದು ರಾಜಕೀಯ ಪಕ್ಷವಾಗಿಯೂ ಬೆಳೆಯಬೇಕು. ಹಾಗೆಯೇ ಅದು ಒಂದು ರೈತರ ಹಿತಕಾಯುವ ಹೋರಾಟ ಸಮಿತಿಯಾಗಿಯೂ ಕೆಲಸ ಮಾಡಬೇಕು. ರೈತ ಸಂಘಕ್ಕೆ ಸೇರುವವರು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸದಸ್ಯರಾಗಿರಬಾರದು ಎಂಬ ನಿಯಮವನ್ನು ಜಾರಿಗೆ ತರಬೇಕು. ಹೀಗಾದಾಗ ಒಂದಲ್ಲ ಒಂದು ದಿನ ಕರ್ನಾಟಕದಲ್ಲಿ ರೈತರ ರಾಜ್ಯ ಸ್ಥಾಪನೆಯಾಗುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ರಾಜ್ಯದ ರೈತ ಸಂಘ ಗಂಭೀರವಾಗಿ ವಿಚಾರ ಮಾಡಿ ಕೂಡಲೇ ಒಂದು ನಿರ್ಧಾರಕ್ಕೆ ಬರಬೇಕು.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...