Homeಅಂಕಣಗಳುಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ...

ಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ…

- Advertisement -
- Advertisement -

ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಇವುಗಳ ಸಂಯುಕ್ತ ಸರ್ಕಾರ ಈಗ ಅಸ್ತಿತ್ವಕ್ಕೆ ಬಂದಿದೆ. ಜಾತ್ಯಾತಿತ ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ವಿನಂತಿಸಿಕೊಂಡಿತು. ಈ ಕರಾರಿನ ಪ್ರಕಾರವೇ ಈಗ ಸರ್ಕಾರ ನಡೆಯುತ್ತಿದೆ.
‘ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು’ ಎಂಬಂತೆ ಭಾಜಪ ಈ ಸಂಯುಕ್ತ ಸರಕಾರದ ಬಗೆಗೆ ವಿಷ ಕಾರುತ್ತಿದೆ. ಅದು ಭಾಜಪಗೆ ಸಹಜ. ಯಡಿಯುರಪ್ಪನವರು ‘ತೀನ್‍ದಿನ್‍ಕಾ ಸುಲ್ತಾನ್’ ಆಗಿ ಬಹುಮತವಿಲ್ಲದೆ, ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಹೋಗಬೇಕಾದ ದುಸ್ಥಿತಿ ಬಂದಿದ್ದರಿಂದ ಅವರಿಗೆ ಮುಖ ಭಂಗವಾಗಿದೆ. ಅದಕ್ಕಾಗಿ ಯಡಿಯುರಪ್ಪನವರೂ, ಭಾಜಪದ ಇತರ ಶಾಸಕರೂ ಹೊಸ ಸರ್ಕಾರದ ಬಗೆಗೆ ಮನಸೋ ಇಚ್ಛೆ ಮಾತಾನಾಡುತ್ತಿದ್ದಾರೆ. ಅದೂ ಅವರಿಗೆ ಸಹಜ.
ಆದರೆ ಆಡಳಿತ ಪಕ್ಷಗಳ ಶಾಸಕರೇ ಸರ್ಕಾರದ ಕಾಲು ಹಿಡಿದು ಎಳೆಯುವ ಕಾರ್ಯದಲ್ಲಿ ತೊಡಗಿರುವುದು ಅವರ ಬೇಜವಾಬ್ದಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಮಾದ್ಯಮಗಳು ಕೂಡ ಈ ಸರ್ಕಾರದ ವಿರುದ್ಧದ ಅನವಶ್ಯಕ ಟೀಕೆಗಳಿಗೆ ಹೆಚ್ಚಿನ ಮಹತ್ವ ನೀಡಿ ಪ್ರಚಾರ ಮಾಡುತ್ತಿರುವುದು ಅಪೇಕ್ಷಣೀಯವಲ್ಲ.
‘ಕುಮಾರಸ್ವಾಮಿಯವರು ಸರ್ಕಾರವನ್ನು ರಚಿಸಲಿ, ಅವರಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಎಲ್ಲ ಅಧಿಕಾರ ನೀಡಬೇಕು, ಕಾಂಗ್ರೆಸ್ ನಿಷ್ಕ್ರಿಯವಾಗಬೇಕು ಎಂಬಂತೆ ಅರ್ಥೈಸಬಾರದು. ಮೈತ್ರಿ ಧರ್ಮಕ್ಕೆ ಪಾಲಿಸುತ್ತಾ ಎರಡೂ ಪಕ್ಷಗಳ ಮ್ಯಾನಿಫೆಸ್ಟೋಗಳಿಗೆ ಮನ್ನಣೆ ನೀಡಬೇಕು. ಎರಡೂ ಪಕ್ಷಗಳು ಚುನಾವಣಾ ವೇಳೆಯಲ್ಲಿ ಘೋಷಿಸಿರುವ ಮುಖ್ಯ ಭರವಸೆಗಳನ್ನು ಕಾರ್ಯರೂಪಕ್ಕಿಳಿಸುವ ಮಾರ್ಗಗಳನ್ನು ಹುಡುಕಬೇಕು. ಎರಡೂ ಪಕ್ಷಗಳೂ ಜನರ ಮನ್ನಣೆ ಪಡೆಯಬೇಕು ಎಂಬ ಧ್ಯೇಯ ಇಟ್ಟುಕೊಂಡು ಸರ್ಕಾರ ಮುನ್ನಡೆಯಬೇಕಾಗುತ್ತದೆ.
ರೈತರ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಘೋಷಣೆ ಮಾಡಿದ್ದಾರೆ. ಅದು ಕಷ್ಟ ಸಾಧ್ಯವಾದ ಕೆಲಸ ಎಂಬುದು ಉಭಯ ಪಕ್ಷಗಳಿಗೂ ಗೊತ್ತು. ರೈತರ ಆಗ್ರಹಕ್ಕೆ ತುತ್ತಾಗಲು ಕುಮಾರಸ್ವಾಮಿಗಳು ತಯಾರಿಲ್ಲವಾದ್ದರಿಂದ ಅವರ ಮಾತನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳೂ ಇದಕ್ಕೆ ಒಪ್ಪಿಕೊಂಡಿವೆ. ಅದರಂತೆಯೇ ಕಾಂಗ್ರೆಸ್ ತಾನು ಆರಂಭಿಸಿದ ಜನಪ್ರಿಯ ಕಾರ್ಯಕ್ರಮಗಳನ್ನು ಈ ಸರ್ಕಾರ ಮುಂದುವರೆಸಬೇಕು ಎಂದು ಒತ್ತಾಯ ಹಾಕುತ್ತಿದೆ. ಅದನ್ನು ಕಾರ್ಯಗತಗೊಳಿಸುವುದು ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿCommon Minimum Programme ಏನಿರಬೇಕು ಎಂಬುದನ್ನು ಗೊತ್ತುಮಾಡಿ ಅದರಂತೆ ನಡೆಯುವುದು ಸೂಕ್ತ.
ಕುಮಾರಸ್ವಾಮಿ ತಾವು ಹೇಗೊ ಅಧಿಕಾರಕ್ಕೆ ಬರುವುದಿಲ್ಲವೆಂದು ತಿಳಿದು ರೈತರ ಸಾಲಮನ್ನಾ ವಿಚಾರವನ್ನು ಚುನಾವಣಾ ಪ್ರಚಾರ ಕಾಲದಲ್ಲಿ ಪ್ರಸ್ತಾಪಿಸಿರಬಹುದು. ಅಕಸ್ಮಾತ್ ಅಧಿಕಾರಕ್ಕೆ ಬಂದಿರುವುದರಿಂದ ಅದನ್ನು ಕಾರ್ಯಗತ ಮಾಡಿ ತೋರಿಸಲೇಬೇಕಾದ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ. ಇದನ್ನು ಹೇಗೆ ನಿಭಾಯಿಸುವರೆಂಬುದನ್ನು ಕುತೂಹಲದಿಂದ ಕರ್ನಾಟಕದ ಜನತೆ ಎದುರು ನೋಡುತ್ತಿದೆ.
‘ಎತ್ತು ಏರಿಗೆ ಎಳೆಯಿತು, ಎಮ್ಮೆ ನೀರಿಗಿಳಿಯಿತು’. ಎಂಬ ರೀತಿ ಈ ಸಂಯುಕ್ತ ಸರ್ಕಾರ ಮೂರಾಬಟ್ಟೆ ಯಾಗಬೇಕೆಂದು ವಿರೋಧಪಕ್ಷ ಆಶಿಸುತ್ತದೆ. ವಿರೋಧ ಪಕ್ಷದ ಈ ಆಶಯವನ್ನು ಸುಳ್ಳು ಮಾಡುವುದಾಗಿ ಅಧಿಕಾರಾರೂಢ ಪಕ್ಷಗಳು ಶಪಥ ತೊಡಬೇಕು. ಎಲ್ಲ ಶಾಸಕರಿಗೂ, ಮಂತ್ರಿಗಳಿಗೂ ಒಳ್ಳೆಯ ಆಡಳಿತ ನೀಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಬೇಕು, ಭ್ರಷ್ಟಾಚಾರರಹಿತ ಆಡಳಿತವನ್ನು ಜಾರಿಗೆ ತರಬೇಕು ಎಂಬ ಕಾತರ ಇರಬೇಕು. ಯಾವುದೇ ಕಾರಣದಿಂದ ಈ ಉಭಯ ಪಕ್ಷಗಳು ಕಚ್ಚಾಡಿಕೊಂಡು ಬೀದಿಗೆ ಬೀಳಬಾರದು. ನಮ್ಮ ಶಾಸಕರಲ್ಲಿ, ಮಂತ್ರಿಗಳಾಗಿರುವವರಲ್ಲಿ ಅನೇಕರಿಗೆ ತಮ್ಮ ಹೊಣೆಗಾರಿಕೆ ಏನು ಎಂಬುದು ತಿಳಿದಿಲ್ಲ. ರಾಜ್ಯಾಡಳಿತ ಮಕ್ಕಳ ಆಟವಲ್ಲ ಎಂಬ ಅರಿವು ಅವರಲ್ಲಿ ಮೂಡಬೇಕು. ಅಧಿಕಾರ ಹಂಚಿಕೆಯೆಂಬುದು ಪಿತ್ರಾರ್ಜಿತ ಸ್ವತ್ತುಗಳ ಹಂಚಿಕೆಯಂತಲ್ಲ ಎಂಬುದನ್ನು ಉಭಯರೂ ಅರ್ಥಮಾಡಿಕೊಳ್ಳಬೇಕು.
ಕುಮಾರಸ್ವಾಮಿಯವರ ಸರ್ಕಾರ ರೈತರ ಸಾಲಮನ್ನಾದಂತಹ ಕ್ಲಿಷ್ಟವಾದ ಸಮಸ್ಯೆಗಳನ್ನು ತನ್ನ ಆಡಳಿತಾವಧಿಯಲ್ಲಿ ಮತ್ತೆ ಸೃಷ್ಟಿಸಬಾರದು. ರೈತ ಸಂಘಕ್ಕೆ ರೈತರ ಸಾಲಮನ್ನಾ ಧ್ಯಾನ ಬಿಟ್ಟರೆ ಇತರೆ ವಿಚಾರಗಳ ಬಗ್ಗೆ ಅವರು ಲಕ್ಷ್ಯ ಕೊಡುವುದಿಲ್ಲ. ರೈತರ ಸಂಘಟನೆಗಳ ನಾಯಕತ್ವದಲ್ಲಿ ಬಹಳಷ್ಟು ಮಂದಿ ಜಮೀನ್ದಾರರು. ಇವರು ರೈತಸಂಘಕ್ಕೂ ಸದಸ್ಯರು, ಬೇರೆ ಬೇರೆ ರಾಜಕೀಯ ಪಾರ್ಟಿಗಳಿಗೂ ಸದಸ್ಯರು. ರೈತ ಸಂಘಟನೆಗಳಲ್ಲಿ ನುಸುಳಿರುವ ಈ ಪಟ್ಟ ಭದ್ರ ಹಿತಾಸಕ್ತಿಗಳು, ರೈತ ಸಂಘಕ್ಕೆ ಸದಸ್ಯರಾಗುವ ಏಕೈಕ ಉದ್ದೇಶ, ಸಾಲಮನ್ನಾ ಮೊದಲುಗೊಂಡು ರೈತರ ಹೆಸರಿನಲ್ಲಿ ದೊರಕಬಹುದಾದ ಎಲ್ಲ ಸೌಕರ್ಯಗಳನ್ನೂ ತಮ್ಮದಾಗಿಸಿಕೊಳ್ಳುವುದಲ್ಲದೆ ಬೇರೇನೂ ಇಲ್ಲ. ಈ ವ್ಯವಸ್ಥೆಯಲ್ಲಿ ಸರ್ಕಾರದಿಂದ ಬಡ ರೈತರಿಗೆ ಪುಡಿಕಾಸು ಸಿಕ್ಕಿದರೆ ಈ ಛದ್ಮ ವೇಷದ ಸ್ವಾರ್ಥಿ ಜಮೀನ್ದಾರರಿಗೆ ದೊಚಲು ಸಿಗುವುದು ಸಿಂಹಪಾಲು.
ಪ್ರತಿವರ್ಷ ಸ್ವಾರ್ಥಿಗಳ ಕಿಸೆತುಂಬುವ ಈ ಸಾಲಮನ್ನಾ ಪ್ರಹಸನವನ್ನು ಈ ಸರ್ಕಾರ ಕೊನೆಗಾಣಿಸಿ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಲೆ ನಿರ್ಧರಿಸಬೇಕು. ರೈತರು ಬೆಳೆದ ಬೆಳೆ ನೇರವಾಗಿ ಗ್ರಾಹಕನಿಗೆ ದೊರಕುವಂತೆ ಮಾಡಿ ದಳ್ಳಾಳಿಗಳ ಹಾವಳಿಯಿಂದ ರೈತರನ್ನು ಪಾರು ಮಾಡಬೇಕು.
ರೈತ ಸಂಘಕ್ಕೆ ಒಂದು ಸೂಚನೆ. ರೈತ ಸಂಘ ಒಂದು ರಾಜಕೀಯ ಪಕ್ಷವಾಗಿಯೂ ಬೆಳೆಯಬೇಕು. ಹಾಗೆಯೇ ಅದು ಒಂದು ರೈತರ ಹಿತಕಾಯುವ ಹೋರಾಟ ಸಮಿತಿಯಾಗಿಯೂ ಕೆಲಸ ಮಾಡಬೇಕು. ರೈತ ಸಂಘಕ್ಕೆ ಸೇರುವವರು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸದಸ್ಯರಾಗಿರಬಾರದು ಎಂಬ ನಿಯಮವನ್ನು ಜಾರಿಗೆ ತರಬೇಕು. ಹೀಗಾದಾಗ ಒಂದಲ್ಲ ಒಂದು ದಿನ ಕರ್ನಾಟಕದಲ್ಲಿ ರೈತರ ರಾಜ್ಯ ಸ್ಥಾಪನೆಯಾಗುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ರಾಜ್ಯದ ರೈತ ಸಂಘ ಗಂಭೀರವಾಗಿ ವಿಚಾರ ಮಾಡಿ ಕೂಡಲೇ ಒಂದು ನಿರ್ಧಾರಕ್ಕೆ ಬರಬೇಕು.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...