Homeಅಂಕಣಗಳುಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ...

ಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ…

- Advertisement -
- Advertisement -

ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಇವುಗಳ ಸಂಯುಕ್ತ ಸರ್ಕಾರ ಈಗ ಅಸ್ತಿತ್ವಕ್ಕೆ ಬಂದಿದೆ. ಜಾತ್ಯಾತಿತ ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ವಿನಂತಿಸಿಕೊಂಡಿತು. ಈ ಕರಾರಿನ ಪ್ರಕಾರವೇ ಈಗ ಸರ್ಕಾರ ನಡೆಯುತ್ತಿದೆ.
‘ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು’ ಎಂಬಂತೆ ಭಾಜಪ ಈ ಸಂಯುಕ್ತ ಸರಕಾರದ ಬಗೆಗೆ ವಿಷ ಕಾರುತ್ತಿದೆ. ಅದು ಭಾಜಪಗೆ ಸಹಜ. ಯಡಿಯುರಪ್ಪನವರು ‘ತೀನ್‍ದಿನ್‍ಕಾ ಸುಲ್ತಾನ್’ ಆಗಿ ಬಹುಮತವಿಲ್ಲದೆ, ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಹೋಗಬೇಕಾದ ದುಸ್ಥಿತಿ ಬಂದಿದ್ದರಿಂದ ಅವರಿಗೆ ಮುಖ ಭಂಗವಾಗಿದೆ. ಅದಕ್ಕಾಗಿ ಯಡಿಯುರಪ್ಪನವರೂ, ಭಾಜಪದ ಇತರ ಶಾಸಕರೂ ಹೊಸ ಸರ್ಕಾರದ ಬಗೆಗೆ ಮನಸೋ ಇಚ್ಛೆ ಮಾತಾನಾಡುತ್ತಿದ್ದಾರೆ. ಅದೂ ಅವರಿಗೆ ಸಹಜ.
ಆದರೆ ಆಡಳಿತ ಪಕ್ಷಗಳ ಶಾಸಕರೇ ಸರ್ಕಾರದ ಕಾಲು ಹಿಡಿದು ಎಳೆಯುವ ಕಾರ್ಯದಲ್ಲಿ ತೊಡಗಿರುವುದು ಅವರ ಬೇಜವಾಬ್ದಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಮಾದ್ಯಮಗಳು ಕೂಡ ಈ ಸರ್ಕಾರದ ವಿರುದ್ಧದ ಅನವಶ್ಯಕ ಟೀಕೆಗಳಿಗೆ ಹೆಚ್ಚಿನ ಮಹತ್ವ ನೀಡಿ ಪ್ರಚಾರ ಮಾಡುತ್ತಿರುವುದು ಅಪೇಕ್ಷಣೀಯವಲ್ಲ.
‘ಕುಮಾರಸ್ವಾಮಿಯವರು ಸರ್ಕಾರವನ್ನು ರಚಿಸಲಿ, ಅವರಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಎಲ್ಲ ಅಧಿಕಾರ ನೀಡಬೇಕು, ಕಾಂಗ್ರೆಸ್ ನಿಷ್ಕ್ರಿಯವಾಗಬೇಕು ಎಂಬಂತೆ ಅರ್ಥೈಸಬಾರದು. ಮೈತ್ರಿ ಧರ್ಮಕ್ಕೆ ಪಾಲಿಸುತ್ತಾ ಎರಡೂ ಪಕ್ಷಗಳ ಮ್ಯಾನಿಫೆಸ್ಟೋಗಳಿಗೆ ಮನ್ನಣೆ ನೀಡಬೇಕು. ಎರಡೂ ಪಕ್ಷಗಳು ಚುನಾವಣಾ ವೇಳೆಯಲ್ಲಿ ಘೋಷಿಸಿರುವ ಮುಖ್ಯ ಭರವಸೆಗಳನ್ನು ಕಾರ್ಯರೂಪಕ್ಕಿಳಿಸುವ ಮಾರ್ಗಗಳನ್ನು ಹುಡುಕಬೇಕು. ಎರಡೂ ಪಕ್ಷಗಳೂ ಜನರ ಮನ್ನಣೆ ಪಡೆಯಬೇಕು ಎಂಬ ಧ್ಯೇಯ ಇಟ್ಟುಕೊಂಡು ಸರ್ಕಾರ ಮುನ್ನಡೆಯಬೇಕಾಗುತ್ತದೆ.
ರೈತರ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಘೋಷಣೆ ಮಾಡಿದ್ದಾರೆ. ಅದು ಕಷ್ಟ ಸಾಧ್ಯವಾದ ಕೆಲಸ ಎಂಬುದು ಉಭಯ ಪಕ್ಷಗಳಿಗೂ ಗೊತ್ತು. ರೈತರ ಆಗ್ರಹಕ್ಕೆ ತುತ್ತಾಗಲು ಕುಮಾರಸ್ವಾಮಿಗಳು ತಯಾರಿಲ್ಲವಾದ್ದರಿಂದ ಅವರ ಮಾತನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳೂ ಇದಕ್ಕೆ ಒಪ್ಪಿಕೊಂಡಿವೆ. ಅದರಂತೆಯೇ ಕಾಂಗ್ರೆಸ್ ತಾನು ಆರಂಭಿಸಿದ ಜನಪ್ರಿಯ ಕಾರ್ಯಕ್ರಮಗಳನ್ನು ಈ ಸರ್ಕಾರ ಮುಂದುವರೆಸಬೇಕು ಎಂದು ಒತ್ತಾಯ ಹಾಕುತ್ತಿದೆ. ಅದನ್ನು ಕಾರ್ಯಗತಗೊಳಿಸುವುದು ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿCommon Minimum Programme ಏನಿರಬೇಕು ಎಂಬುದನ್ನು ಗೊತ್ತುಮಾಡಿ ಅದರಂತೆ ನಡೆಯುವುದು ಸೂಕ್ತ.
ಕುಮಾರಸ್ವಾಮಿ ತಾವು ಹೇಗೊ ಅಧಿಕಾರಕ್ಕೆ ಬರುವುದಿಲ್ಲವೆಂದು ತಿಳಿದು ರೈತರ ಸಾಲಮನ್ನಾ ವಿಚಾರವನ್ನು ಚುನಾವಣಾ ಪ್ರಚಾರ ಕಾಲದಲ್ಲಿ ಪ್ರಸ್ತಾಪಿಸಿರಬಹುದು. ಅಕಸ್ಮಾತ್ ಅಧಿಕಾರಕ್ಕೆ ಬಂದಿರುವುದರಿಂದ ಅದನ್ನು ಕಾರ್ಯಗತ ಮಾಡಿ ತೋರಿಸಲೇಬೇಕಾದ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ. ಇದನ್ನು ಹೇಗೆ ನಿಭಾಯಿಸುವರೆಂಬುದನ್ನು ಕುತೂಹಲದಿಂದ ಕರ್ನಾಟಕದ ಜನತೆ ಎದುರು ನೋಡುತ್ತಿದೆ.
‘ಎತ್ತು ಏರಿಗೆ ಎಳೆಯಿತು, ಎಮ್ಮೆ ನೀರಿಗಿಳಿಯಿತು’. ಎಂಬ ರೀತಿ ಈ ಸಂಯುಕ್ತ ಸರ್ಕಾರ ಮೂರಾಬಟ್ಟೆ ಯಾಗಬೇಕೆಂದು ವಿರೋಧಪಕ್ಷ ಆಶಿಸುತ್ತದೆ. ವಿರೋಧ ಪಕ್ಷದ ಈ ಆಶಯವನ್ನು ಸುಳ್ಳು ಮಾಡುವುದಾಗಿ ಅಧಿಕಾರಾರೂಢ ಪಕ್ಷಗಳು ಶಪಥ ತೊಡಬೇಕು. ಎಲ್ಲ ಶಾಸಕರಿಗೂ, ಮಂತ್ರಿಗಳಿಗೂ ಒಳ್ಳೆಯ ಆಡಳಿತ ನೀಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಬೇಕು, ಭ್ರಷ್ಟಾಚಾರರಹಿತ ಆಡಳಿತವನ್ನು ಜಾರಿಗೆ ತರಬೇಕು ಎಂಬ ಕಾತರ ಇರಬೇಕು. ಯಾವುದೇ ಕಾರಣದಿಂದ ಈ ಉಭಯ ಪಕ್ಷಗಳು ಕಚ್ಚಾಡಿಕೊಂಡು ಬೀದಿಗೆ ಬೀಳಬಾರದು. ನಮ್ಮ ಶಾಸಕರಲ್ಲಿ, ಮಂತ್ರಿಗಳಾಗಿರುವವರಲ್ಲಿ ಅನೇಕರಿಗೆ ತಮ್ಮ ಹೊಣೆಗಾರಿಕೆ ಏನು ಎಂಬುದು ತಿಳಿದಿಲ್ಲ. ರಾಜ್ಯಾಡಳಿತ ಮಕ್ಕಳ ಆಟವಲ್ಲ ಎಂಬ ಅರಿವು ಅವರಲ್ಲಿ ಮೂಡಬೇಕು. ಅಧಿಕಾರ ಹಂಚಿಕೆಯೆಂಬುದು ಪಿತ್ರಾರ್ಜಿತ ಸ್ವತ್ತುಗಳ ಹಂಚಿಕೆಯಂತಲ್ಲ ಎಂಬುದನ್ನು ಉಭಯರೂ ಅರ್ಥಮಾಡಿಕೊಳ್ಳಬೇಕು.
ಕುಮಾರಸ್ವಾಮಿಯವರ ಸರ್ಕಾರ ರೈತರ ಸಾಲಮನ್ನಾದಂತಹ ಕ್ಲಿಷ್ಟವಾದ ಸಮಸ್ಯೆಗಳನ್ನು ತನ್ನ ಆಡಳಿತಾವಧಿಯಲ್ಲಿ ಮತ್ತೆ ಸೃಷ್ಟಿಸಬಾರದು. ರೈತ ಸಂಘಕ್ಕೆ ರೈತರ ಸಾಲಮನ್ನಾ ಧ್ಯಾನ ಬಿಟ್ಟರೆ ಇತರೆ ವಿಚಾರಗಳ ಬಗ್ಗೆ ಅವರು ಲಕ್ಷ್ಯ ಕೊಡುವುದಿಲ್ಲ. ರೈತರ ಸಂಘಟನೆಗಳ ನಾಯಕತ್ವದಲ್ಲಿ ಬಹಳಷ್ಟು ಮಂದಿ ಜಮೀನ್ದಾರರು. ಇವರು ರೈತಸಂಘಕ್ಕೂ ಸದಸ್ಯರು, ಬೇರೆ ಬೇರೆ ರಾಜಕೀಯ ಪಾರ್ಟಿಗಳಿಗೂ ಸದಸ್ಯರು. ರೈತ ಸಂಘಟನೆಗಳಲ್ಲಿ ನುಸುಳಿರುವ ಈ ಪಟ್ಟ ಭದ್ರ ಹಿತಾಸಕ್ತಿಗಳು, ರೈತ ಸಂಘಕ್ಕೆ ಸದಸ್ಯರಾಗುವ ಏಕೈಕ ಉದ್ದೇಶ, ಸಾಲಮನ್ನಾ ಮೊದಲುಗೊಂಡು ರೈತರ ಹೆಸರಿನಲ್ಲಿ ದೊರಕಬಹುದಾದ ಎಲ್ಲ ಸೌಕರ್ಯಗಳನ್ನೂ ತಮ್ಮದಾಗಿಸಿಕೊಳ್ಳುವುದಲ್ಲದೆ ಬೇರೇನೂ ಇಲ್ಲ. ಈ ವ್ಯವಸ್ಥೆಯಲ್ಲಿ ಸರ್ಕಾರದಿಂದ ಬಡ ರೈತರಿಗೆ ಪುಡಿಕಾಸು ಸಿಕ್ಕಿದರೆ ಈ ಛದ್ಮ ವೇಷದ ಸ್ವಾರ್ಥಿ ಜಮೀನ್ದಾರರಿಗೆ ದೊಚಲು ಸಿಗುವುದು ಸಿಂಹಪಾಲು.
ಪ್ರತಿವರ್ಷ ಸ್ವಾರ್ಥಿಗಳ ಕಿಸೆತುಂಬುವ ಈ ಸಾಲಮನ್ನಾ ಪ್ರಹಸನವನ್ನು ಈ ಸರ್ಕಾರ ಕೊನೆಗಾಣಿಸಿ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಲೆ ನಿರ್ಧರಿಸಬೇಕು. ರೈತರು ಬೆಳೆದ ಬೆಳೆ ನೇರವಾಗಿ ಗ್ರಾಹಕನಿಗೆ ದೊರಕುವಂತೆ ಮಾಡಿ ದಳ್ಳಾಳಿಗಳ ಹಾವಳಿಯಿಂದ ರೈತರನ್ನು ಪಾರು ಮಾಡಬೇಕು.
ರೈತ ಸಂಘಕ್ಕೆ ಒಂದು ಸೂಚನೆ. ರೈತ ಸಂಘ ಒಂದು ರಾಜಕೀಯ ಪಕ್ಷವಾಗಿಯೂ ಬೆಳೆಯಬೇಕು. ಹಾಗೆಯೇ ಅದು ಒಂದು ರೈತರ ಹಿತಕಾಯುವ ಹೋರಾಟ ಸಮಿತಿಯಾಗಿಯೂ ಕೆಲಸ ಮಾಡಬೇಕು. ರೈತ ಸಂಘಕ್ಕೆ ಸೇರುವವರು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸದಸ್ಯರಾಗಿರಬಾರದು ಎಂಬ ನಿಯಮವನ್ನು ಜಾರಿಗೆ ತರಬೇಕು. ಹೀಗಾದಾಗ ಒಂದಲ್ಲ ಒಂದು ದಿನ ಕರ್ನಾಟಕದಲ್ಲಿ ರೈತರ ರಾಜ್ಯ ಸ್ಥಾಪನೆಯಾಗುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ರಾಜ್ಯದ ರೈತ ಸಂಘ ಗಂಭೀರವಾಗಿ ವಿಚಾರ ಮಾಡಿ ಕೂಡಲೇ ಒಂದು ನಿರ್ಧಾರಕ್ಕೆ ಬರಬೇಕು.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...