Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ...

ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ…

- Advertisement -
- Advertisement -

 ಗೌರಿ ಲಂಕೇಶ್

30 ಏಪ್ರಿಲ್, 2008 (`ಕಂಡಹಾಗೆ’ ಸಂಪಾದಕೀಯದಿಂದ)

ಮೊನ್ನೆ ಪ್ರಿಯಾಂಕ ಗಾಂಧಿ, ತನ್ನ ತಂದೆ ರಾಜೀವ್ ಗಾಂಧಿಯನ್ನು ಕೊಂದವರ ತಂಡದಲ್ಲಿದ್ದ, ಈಗ ಆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ನಳಿನಿ ಎಂಬಾಕೆಯನ್ನು ವೆಲ್ಲೂರ್ ಜೈಲಿನಲ್ಲಿ ಭೇಟಿಯಾಗಿದ್ದರ ಸುದ್ದಿ ಹೊರಬೀಳುತ್ತಿದ್ದಂತೆ ಹಲವಾರು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾದವು. ಅವುಗಳಲ್ಲಿ ಬಿಜೆಪಿ ಪಕ್ಷದವರ ಪ್ರತಿಕ್ರಿಯೆಯಂತೂ ತಮಾಷೆಯಾಗಿತ್ತು. ಮೊದಮೊದಲು ಆಕೆ ಹೀಗೇಕೆ ಮಾಡಿದಳು ಎಂದು ನಮಗೆ ಅರ್ಥವೇ ಆಗುತ್ತಿಲ್ಲ ಎಂದ ಬಿಜೆಪಿಯ ವಕ್ತಾರ. ಆದರೂ ಈ ಬಗ್ಗೆ ನಿಮಗೊಂದು ಅಭಿಪ್ರಾಯ ಇರಲೇಬೇಕಲ್ಲಾ ಎಂದು ಒತ್ತಾಯಿಸಿದಾಗ “ವೈಯಕ್ತಿಕ ವಿಷಯಗಳ ಬಗ್ಗೆ ನಾವು ಮಾತಾಡುವುದಿಲ್ಲ” ಎಂದ. ಹೇಳಿಕೇಳಿ, ಅವಕಾಶ ಸಿಕ್ಕಾಗಲೆಲ್ಲ ಸೋನಿಯಾ ಗಾಂಧಿ ಮತ್ತವರ ಮಕ್ಕಳ ಮೇಲೆ ಕಾರಿಕೊಂಡು ಬೀಳುವುದು ಆವರ ಜಾಯಮಾನ, ಆದರೆ ಪ್ರಿಯಾಂಕ-ನಳಿನಿ ಭೇಟಿಯ ಹಿಂದೆ ಯಾವ ರಾಜಕೀಯವೂ ಇರಲಿಲ್ಲ ಎಂದು ಗೊತ್ತಾಗಿ ಬಿಜೆಪಿಗಳು ಸುಮ್ಮನಾದರು.

ಪ್ರಿಯಾಂಕ ವಿಷಯಕ್ಕೆ ಬರುವುದಾದರೆ ಆಕೆ ತನ್ನ ಚಿಕ್ಕವಯಸ್ಸಿನಲ್ಲೇ ಹಿಂಸಾಕೃತ್ಯಗಳನ್ನು ಹತ್ತಿರದಿಂದ ನೋಡಿದವಳು. ಮೊದಲು ಆಕೆಯ ಅಜ್ಜಿ ಇಂದಿರಾಗಾಂಧಿಯನ್ನು ಆಕೆಯ ರಕ್ಷಣಾ ದಳದವರೇ ಕೊಂದು ಹಾಕಿದರು. ಅನಂತರ ಆಕೆಯ ತಂದೆಯನ್ನು ಆತ್ಮಹತ್ಯಾ ದಾಳಿಯಲ್ಲಿ ಕೊಂದು ಹಾಕಲಾಯಿತು. ಈಗ ಪ್ರತಿಕ್ಷಣ ರಕ್ಷಣಾದಳದವರಿಂದ ಸುತ್ತುವರೆದಿರುವ, ಗಾಜಿನ ಅರಮನೆಯಲ್ಲಿ ಬದುಕನ್ನು ಸಾಗಿಸುತ್ತಿರುವ, ಹೆಚ್ಚಾಗಿ ಹೊರಗಿನ ಜಗತ್ತಿನೊಂದಿಗೆ ಸಂಪರ್ಕ ಸಾಧ್ಯವಿರದ ಸ್ಥಿತಿಯಲ್ಲಿರುವ ಯುವತಿ ಪ್ರಿಯಾಂಕ. ಅಂತಹ ಪರಿಸ್ಥಿತಿಯಲ್ಲೂ ಆಕೆ ತನ್ನ ಮಾನವೀಯತೆಯನ್ನು ಉಳಿಸಿಕೊಂಡು ಸಹಜವಾಗಿ ಬದುಕಲು ಯತ್ನಿಸುತ್ತಿದ್ದಾಳೆ ಎಂಬುದಕ್ಕೆ ನಳಿನಿ ಭೇಟಿ ಪ್ರಕರಣವೇ ಸಾಕ್ಷಿ.

ಯಾವುದೇ ಪ್ರಚಾರವಿಲ್ಲದೆ, ಯಾರ ಗಮನಕ್ಕೂ ಬಾರದ ಪ್ರಿಯಾಂಕ ತನ್ನ ತಂದೆಯ ಸಾವಿಗೆ ಕಾರಣವಾಗಿದ್ದ ನಳಿನಿಯನ್ನು ಭೇಟಿಯಾಗಿದ್ದ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಪ್ರಿಯಾಂಕ ಯಾಕೆ ಆಕೆಯನ್ನು ಭೇಟಿಯಾದಳು? ಅವರಿಬ್ಬರ ನಡುವೆ ಯಾವ ಮಾತುಕತೆ ನಡೆಯಿತು? ಎಲ್ಲಕ್ಕಿಂತ ಮುಖ್ಯವಾಗಿ ಆಕೆಯನ್ನು ಭೇಟಿ ಆಗುವ ಬಯಕೆ ಪ್ರಿಯಾಂಕಳಲ್ಲಿ ಮೂಡಿದ್ದು ಯಾಕೆ ಎಂಬೆಲ್ಲಾ ಪ್ರಶ್ನೆಗಳು ಉದ್ಭವಿಸಿದವು.

ಅವುಗಳಿಗೆಲ್ಲಾ ಪ್ರಿಯಾಂಕ ಉತ್ತರಿಸಿದ್ದು ಹೀಗೆ “ಅದು ವೈಯಕ್ತಿಕ ವಿಷಯ. ನಾನು ಸ್ವಇಚ್ಛೆಯಿಂದಲೇ ಆಕೆಯನ್ನು ಭೇಟಿಯಾದೆ. ನನ್ನ ಬದುಕಿನಲ್ಲಿ ಸಂಭವಿಸಿರುವ ಹಿಂಸೆ ಮತ್ತು ಸಾಮರಸ್ಯವನ್ನು ಪಡೆಯಲು ನಾವು ಆಯ್ಕೆ ಮಾಡಿಕೊಂಡ ಮಾರ್ಗ ಅದು. ನನಗೆ ಕೋಪ, ದ್ವೇಷ ಮತ್ತು ಹಿಂಸೆಯಲ್ಲಿ ನಂಬಿಕೆ ಇಲ್ಲ. ಮತ್ತು ಅಂತಹ ಭಾವನೆಗಳು ನನ್ನ ಬದುಕನ್ನೇ ಸ್ವಾಧೀನಪಡಿಸಿಕೊಳ್ಳಲು ನಾನು ಎಂದೂ ಬಿಡುವುದಿಲ್ಲ.”

ಇಂಗ್ಲಿಷ್‍ನಲ್ಲಿ ಒಂದು ಹೇಳಿಕೆ ಇದೆ: “ಟು ಎರ್ ಈಸ್ ಹ್ಯೂಮನ್, ಟು ಫರ್‍ಗೀವ್ ಈಸ್ ಡಿವೈನ್” ಅಂತ. ಹಾಗೆ ಪ್ರಿಯಾಂಕ ಕೂಡ ಸಾಮಾನ್ಯ ಮನುಷ್ಯಳಂತಿದ್ದು ನಳಿನಿ ಬಗ್ಗೆ ಮರೆಯಬಹುದಿತ್ತು. ಅಥವಾ ನಳಿನಿ ಮಾಡಿದ ತಪ್ಪಿಗೆ ಸರಿಯಾದ ಶಿಕ್ಷೆ ಆಗಿದೆ ಎಂದು ಸುಮ್ಮನಿರಬಹುದಿತ್ತು. ಆದರೆ ಪ್ರಿಯಾಂಕ ಮರೆಯಲಿಲ್ಲ, ಸುಮ್ಮನಿರಲಿಲ್ಲ. ಬದಲಾಗಿ ನಳಿನಿಯನ್ನು ಭೇಟಿಯಾಗಿ, ಅವಳೊಂದಿಗೆ ಸಾಮಾನ್ಯ ಯುವತಿಯರಂತೆ ಬಾಣಂತನ, ಮಕ್ಕಳ ಬಗ್ಗೆ ಚರ್ಚಿಸಿ, ಒಂದು ಉಡುಗೊರೆಯನ್ನು ನೀಡುವ ಮೂಲಕ ಪ್ರಿಯಾಂಕ ತನ್ನ ಎಲ್ಲಾ ದುಃಖ ಮತ್ತು ನೋವುಗಳೊಂದಿಗೆ ಮುಖಾಮುಖಿಯಾಗಿ ತನ್ನ ಮನಸ್ಸಿನಲ್ಲೇ ಅವುಗಳಿಗೆ ಒಂದು ಅಂತ್ಯ ಕಂಡುಕೊಂಡಿದ್ದಾಳಲ್ಲದೆ ತನ್ನ ಮಾನವೀಯತೆಯನ್ನು ಮೆರೆದಿದ್ದಾಳೆ. ಅಂದಹಾಗೆ ರಾಜೀವ್‍ಗಾಂಧಿಯ ಹತ್ಯೆಗೆ ಸಂಬಂಧಪಟ್ಟಂತೆ ನ್ಯಾಯಾಲಯ ನಳನಿಗೆ ಮತ್ತಾಕೆಯ ಗಂಡ ಮುರುಗನ್, ಇಬ್ಬರಿಗೂ ಮರಣದಂಡನೆ ವಿಧಿಸಿತ್ತು. ಆದರೆ ತೀರ್ಪು ಬರುವ ಮುನ್ನವೇ ನಳಿನಿಗೆ ಜೈಲಿನಲ್ಲೇ ಒಂದು ಹೆಣ್ಣುಮಗು ಹುಟ್ಟಿತ್ತು. ಆಗ ನಳಿನಿ ಮತ್ತು ಮುರುಗನ್ ಇಬ್ಬರೂ ಗಲ್ಲಿಗೇರಿಸಲ್ಪಟ್ಟರೆ ಅವರ ಮಗಳು ಅನಾಥೆಯಾಗುತ್ತಾಳೆಂಬ ಕಾರಣಕ್ಕೆ ನಳನಿಗೆ ಮರಣದಂಡನೆ ವಿಧಿಸಬಾರದೆಂದು ರಾಷ್ಟ್ರಪತಿಯವರಿಗೆ ಅಹವಾಲು ಸಲ್ಲಿಸಿದ್ದು ಬೇರಾರು ಅಲ್ಲ. ಮುರುಗನ್ ಮತ್ತು ನಳಿನಿಯ ಕೃತ್ಯದಿಂದ ತನ್ನ ಪ್ರೀತಿಯ ಗಂಡನನ್ನೇ ಕಳೆದುಕೊಂಡಿದ್ದ ಸೋನಿಯಾಗಾಂಧಿ!

ಸೋನಿಯಾ ಗಾಂಧಿಯ ಈ ಕಾಳಜಿಯಿಂದಲೇ ತನ್ನ ಪ್ರಾಣ ಉಳಿಸಿಕೊಂಡ ನಳಿನಿ ಅಂದಿನಿಂದ ಸೋನಿಯಾರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾಳೆ. ಆಕೆ ಬರೆದ ಪತ್ರಗಳಲ್ಲಿ ಸೋನಿಯಾರನ್ನು ‘ಪ್ರೀತಿಯ ತಾಯಿ’ ಎಂದೇ ಸಂಬೋಧಿಸಿದ್ದಾಳೆ.

ಆದರೆ ವಿಪರ್ಯಾಸ ನೋಡಿ.

ಮಾತೆಯರ ಹೆಸರಲ್ಲಿ ‘ಸೌಂದರ್ಯ ಲಹರಿ’ ಎಂಬ ಅಶ್ಲೀಲ ಶ್ಲೋಕಗಳನ್ನು ಸಾಮೂಹಿಕವಾಗಿ ಮಹಿಳೆಯರಿಂದ ಪಠಿಸುವ ಚೆಡ್ಡಿಗಳಿಗೆ ಇಟಲಿಯಲ್ಲಿ ಜನಿಸಿದ್ದರೂ ಈಗ ಭಾರತೀಯರಾಗಿರುವ ಸೋನಿಯಾರ ಮಾತೃತ್ವ ಅರ್ಥವಾಗುವುದಿಲ್ಲ. ಅಷ್ಟೇ ಅಲ್ಲ, ಸೋನಿಯಾ ಗಾಂಧಿ ಭಾರತದ ಪ್ರಧಾನಿಯಾದರೆ ತನ್ನ ಗಂಡ ಬದುಕಿರುವಾಗಲೇ ತಾನು ವಿಧವೆಯಂತೆ ಜೀವಿಸುತ್ತೇನೆ ಎಂದು ಸುಷ್ಮಾ ಸ್ವರಾಜ್‍ನಂತಹ ತಲೆ ಕೆಟ್ಟ ಹೆಂಗಸರು ಪ್ರತಿಭಟಿಸುತ್ತಾರೆ.

ಒಂದೆಡೆ, ತನ್ನ ಗಂಡನನ್ನು ಕಳೆದುಕೊಂಡಿದ್ದರೂ, ಆತನನ್ನು ಕೊಂದವರ ಮಗಳ ಬಗ್ಗೆ ತಾಯಿ ವಾತ್ಸಲ್ಯ ತೋರುವ ಸೋನಿಯಾ. ಇನ್ನೊಂದೆಡೆ, ಗರ್ಭವತಿಯರ ಹೊಟ್ಟೆಯನ್ನೇ ತ್ರಿಶೂಲಗಳಿಂದ ಬಗೆದು ಅದರಲ್ಲಿನ ಭ್ರೂಣವನ್ನು ಹಿಡಿದು ಸಂಭ್ರಮಿಸುವ ಬಿಜೆಪಿಗಳು.

ಇವರ ನಡುವೆ ಯಾರು ಈ ದೇಶಕ್ಕೆ ಹಿತವರು?

ಬರೀ ಟೊಳ್ಳುತನ, ಢೋಂಗಿತನ ತುಂಬಿರುವ ಇಂದಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ಪ್ರಿಯಾಂಕಳ ಗಟ್ಟಿತನ ಆಶಾದಾಯಕವಾಗಿದೆ ಎಂಬುದನ್ನು ಬಿಜೆಪಿಗಳ ಹೊರತಾಗಿ ಎಲ್ಲರೂ ನಂಬುತ್ತಾರೆ. ಹ್ಯಾಟ್ಸ್ ಆಫ್ ಟು ಪ್ರಿಯಾಂಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...