Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ...

ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ…

- Advertisement -
- Advertisement -

 ಗೌರಿ ಲಂಕೇಶ್

30 ಏಪ್ರಿಲ್, 2008 (`ಕಂಡಹಾಗೆ’ ಸಂಪಾದಕೀಯದಿಂದ)

ಮೊನ್ನೆ ಪ್ರಿಯಾಂಕ ಗಾಂಧಿ, ತನ್ನ ತಂದೆ ರಾಜೀವ್ ಗಾಂಧಿಯನ್ನು ಕೊಂದವರ ತಂಡದಲ್ಲಿದ್ದ, ಈಗ ಆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ನಳಿನಿ ಎಂಬಾಕೆಯನ್ನು ವೆಲ್ಲೂರ್ ಜೈಲಿನಲ್ಲಿ ಭೇಟಿಯಾಗಿದ್ದರ ಸುದ್ದಿ ಹೊರಬೀಳುತ್ತಿದ್ದಂತೆ ಹಲವಾರು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾದವು. ಅವುಗಳಲ್ಲಿ ಬಿಜೆಪಿ ಪಕ್ಷದವರ ಪ್ರತಿಕ್ರಿಯೆಯಂತೂ ತಮಾಷೆಯಾಗಿತ್ತು. ಮೊದಮೊದಲು ಆಕೆ ಹೀಗೇಕೆ ಮಾಡಿದಳು ಎಂದು ನಮಗೆ ಅರ್ಥವೇ ಆಗುತ್ತಿಲ್ಲ ಎಂದ ಬಿಜೆಪಿಯ ವಕ್ತಾರ. ಆದರೂ ಈ ಬಗ್ಗೆ ನಿಮಗೊಂದು ಅಭಿಪ್ರಾಯ ಇರಲೇಬೇಕಲ್ಲಾ ಎಂದು ಒತ್ತಾಯಿಸಿದಾಗ “ವೈಯಕ್ತಿಕ ವಿಷಯಗಳ ಬಗ್ಗೆ ನಾವು ಮಾತಾಡುವುದಿಲ್ಲ” ಎಂದ. ಹೇಳಿಕೇಳಿ, ಅವಕಾಶ ಸಿಕ್ಕಾಗಲೆಲ್ಲ ಸೋನಿಯಾ ಗಾಂಧಿ ಮತ್ತವರ ಮಕ್ಕಳ ಮೇಲೆ ಕಾರಿಕೊಂಡು ಬೀಳುವುದು ಆವರ ಜಾಯಮಾನ, ಆದರೆ ಪ್ರಿಯಾಂಕ-ನಳಿನಿ ಭೇಟಿಯ ಹಿಂದೆ ಯಾವ ರಾಜಕೀಯವೂ ಇರಲಿಲ್ಲ ಎಂದು ಗೊತ್ತಾಗಿ ಬಿಜೆಪಿಗಳು ಸುಮ್ಮನಾದರು.

ಪ್ರಿಯಾಂಕ ವಿಷಯಕ್ಕೆ ಬರುವುದಾದರೆ ಆಕೆ ತನ್ನ ಚಿಕ್ಕವಯಸ್ಸಿನಲ್ಲೇ ಹಿಂಸಾಕೃತ್ಯಗಳನ್ನು ಹತ್ತಿರದಿಂದ ನೋಡಿದವಳು. ಮೊದಲು ಆಕೆಯ ಅಜ್ಜಿ ಇಂದಿರಾಗಾಂಧಿಯನ್ನು ಆಕೆಯ ರಕ್ಷಣಾ ದಳದವರೇ ಕೊಂದು ಹಾಕಿದರು. ಅನಂತರ ಆಕೆಯ ತಂದೆಯನ್ನು ಆತ್ಮಹತ್ಯಾ ದಾಳಿಯಲ್ಲಿ ಕೊಂದು ಹಾಕಲಾಯಿತು. ಈಗ ಪ್ರತಿಕ್ಷಣ ರಕ್ಷಣಾದಳದವರಿಂದ ಸುತ್ತುವರೆದಿರುವ, ಗಾಜಿನ ಅರಮನೆಯಲ್ಲಿ ಬದುಕನ್ನು ಸಾಗಿಸುತ್ತಿರುವ, ಹೆಚ್ಚಾಗಿ ಹೊರಗಿನ ಜಗತ್ತಿನೊಂದಿಗೆ ಸಂಪರ್ಕ ಸಾಧ್ಯವಿರದ ಸ್ಥಿತಿಯಲ್ಲಿರುವ ಯುವತಿ ಪ್ರಿಯಾಂಕ. ಅಂತಹ ಪರಿಸ್ಥಿತಿಯಲ್ಲೂ ಆಕೆ ತನ್ನ ಮಾನವೀಯತೆಯನ್ನು ಉಳಿಸಿಕೊಂಡು ಸಹಜವಾಗಿ ಬದುಕಲು ಯತ್ನಿಸುತ್ತಿದ್ದಾಳೆ ಎಂಬುದಕ್ಕೆ ನಳಿನಿ ಭೇಟಿ ಪ್ರಕರಣವೇ ಸಾಕ್ಷಿ.

ಯಾವುದೇ ಪ್ರಚಾರವಿಲ್ಲದೆ, ಯಾರ ಗಮನಕ್ಕೂ ಬಾರದ ಪ್ರಿಯಾಂಕ ತನ್ನ ತಂದೆಯ ಸಾವಿಗೆ ಕಾರಣವಾಗಿದ್ದ ನಳಿನಿಯನ್ನು ಭೇಟಿಯಾಗಿದ್ದ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಪ್ರಿಯಾಂಕ ಯಾಕೆ ಆಕೆಯನ್ನು ಭೇಟಿಯಾದಳು? ಅವರಿಬ್ಬರ ನಡುವೆ ಯಾವ ಮಾತುಕತೆ ನಡೆಯಿತು? ಎಲ್ಲಕ್ಕಿಂತ ಮುಖ್ಯವಾಗಿ ಆಕೆಯನ್ನು ಭೇಟಿ ಆಗುವ ಬಯಕೆ ಪ್ರಿಯಾಂಕಳಲ್ಲಿ ಮೂಡಿದ್ದು ಯಾಕೆ ಎಂಬೆಲ್ಲಾ ಪ್ರಶ್ನೆಗಳು ಉದ್ಭವಿಸಿದವು.

ಅವುಗಳಿಗೆಲ್ಲಾ ಪ್ರಿಯಾಂಕ ಉತ್ತರಿಸಿದ್ದು ಹೀಗೆ “ಅದು ವೈಯಕ್ತಿಕ ವಿಷಯ. ನಾನು ಸ್ವಇಚ್ಛೆಯಿಂದಲೇ ಆಕೆಯನ್ನು ಭೇಟಿಯಾದೆ. ನನ್ನ ಬದುಕಿನಲ್ಲಿ ಸಂಭವಿಸಿರುವ ಹಿಂಸೆ ಮತ್ತು ಸಾಮರಸ್ಯವನ್ನು ಪಡೆಯಲು ನಾವು ಆಯ್ಕೆ ಮಾಡಿಕೊಂಡ ಮಾರ್ಗ ಅದು. ನನಗೆ ಕೋಪ, ದ್ವೇಷ ಮತ್ತು ಹಿಂಸೆಯಲ್ಲಿ ನಂಬಿಕೆ ಇಲ್ಲ. ಮತ್ತು ಅಂತಹ ಭಾವನೆಗಳು ನನ್ನ ಬದುಕನ್ನೇ ಸ್ವಾಧೀನಪಡಿಸಿಕೊಳ್ಳಲು ನಾನು ಎಂದೂ ಬಿಡುವುದಿಲ್ಲ.”

ಇಂಗ್ಲಿಷ್‍ನಲ್ಲಿ ಒಂದು ಹೇಳಿಕೆ ಇದೆ: “ಟು ಎರ್ ಈಸ್ ಹ್ಯೂಮನ್, ಟು ಫರ್‍ಗೀವ್ ಈಸ್ ಡಿವೈನ್” ಅಂತ. ಹಾಗೆ ಪ್ರಿಯಾಂಕ ಕೂಡ ಸಾಮಾನ್ಯ ಮನುಷ್ಯಳಂತಿದ್ದು ನಳಿನಿ ಬಗ್ಗೆ ಮರೆಯಬಹುದಿತ್ತು. ಅಥವಾ ನಳಿನಿ ಮಾಡಿದ ತಪ್ಪಿಗೆ ಸರಿಯಾದ ಶಿಕ್ಷೆ ಆಗಿದೆ ಎಂದು ಸುಮ್ಮನಿರಬಹುದಿತ್ತು. ಆದರೆ ಪ್ರಿಯಾಂಕ ಮರೆಯಲಿಲ್ಲ, ಸುಮ್ಮನಿರಲಿಲ್ಲ. ಬದಲಾಗಿ ನಳಿನಿಯನ್ನು ಭೇಟಿಯಾಗಿ, ಅವಳೊಂದಿಗೆ ಸಾಮಾನ್ಯ ಯುವತಿಯರಂತೆ ಬಾಣಂತನ, ಮಕ್ಕಳ ಬಗ್ಗೆ ಚರ್ಚಿಸಿ, ಒಂದು ಉಡುಗೊರೆಯನ್ನು ನೀಡುವ ಮೂಲಕ ಪ್ರಿಯಾಂಕ ತನ್ನ ಎಲ್ಲಾ ದುಃಖ ಮತ್ತು ನೋವುಗಳೊಂದಿಗೆ ಮುಖಾಮುಖಿಯಾಗಿ ತನ್ನ ಮನಸ್ಸಿನಲ್ಲೇ ಅವುಗಳಿಗೆ ಒಂದು ಅಂತ್ಯ ಕಂಡುಕೊಂಡಿದ್ದಾಳಲ್ಲದೆ ತನ್ನ ಮಾನವೀಯತೆಯನ್ನು ಮೆರೆದಿದ್ದಾಳೆ. ಅಂದಹಾಗೆ ರಾಜೀವ್‍ಗಾಂಧಿಯ ಹತ್ಯೆಗೆ ಸಂಬಂಧಪಟ್ಟಂತೆ ನ್ಯಾಯಾಲಯ ನಳನಿಗೆ ಮತ್ತಾಕೆಯ ಗಂಡ ಮುರುಗನ್, ಇಬ್ಬರಿಗೂ ಮರಣದಂಡನೆ ವಿಧಿಸಿತ್ತು. ಆದರೆ ತೀರ್ಪು ಬರುವ ಮುನ್ನವೇ ನಳಿನಿಗೆ ಜೈಲಿನಲ್ಲೇ ಒಂದು ಹೆಣ್ಣುಮಗು ಹುಟ್ಟಿತ್ತು. ಆಗ ನಳಿನಿ ಮತ್ತು ಮುರುಗನ್ ಇಬ್ಬರೂ ಗಲ್ಲಿಗೇರಿಸಲ್ಪಟ್ಟರೆ ಅವರ ಮಗಳು ಅನಾಥೆಯಾಗುತ್ತಾಳೆಂಬ ಕಾರಣಕ್ಕೆ ನಳನಿಗೆ ಮರಣದಂಡನೆ ವಿಧಿಸಬಾರದೆಂದು ರಾಷ್ಟ್ರಪತಿಯವರಿಗೆ ಅಹವಾಲು ಸಲ್ಲಿಸಿದ್ದು ಬೇರಾರು ಅಲ್ಲ. ಮುರುಗನ್ ಮತ್ತು ನಳಿನಿಯ ಕೃತ್ಯದಿಂದ ತನ್ನ ಪ್ರೀತಿಯ ಗಂಡನನ್ನೇ ಕಳೆದುಕೊಂಡಿದ್ದ ಸೋನಿಯಾಗಾಂಧಿ!

ಸೋನಿಯಾ ಗಾಂಧಿಯ ಈ ಕಾಳಜಿಯಿಂದಲೇ ತನ್ನ ಪ್ರಾಣ ಉಳಿಸಿಕೊಂಡ ನಳಿನಿ ಅಂದಿನಿಂದ ಸೋನಿಯಾರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾಳೆ. ಆಕೆ ಬರೆದ ಪತ್ರಗಳಲ್ಲಿ ಸೋನಿಯಾರನ್ನು ‘ಪ್ರೀತಿಯ ತಾಯಿ’ ಎಂದೇ ಸಂಬೋಧಿಸಿದ್ದಾಳೆ.

ಆದರೆ ವಿಪರ್ಯಾಸ ನೋಡಿ.

ಮಾತೆಯರ ಹೆಸರಲ್ಲಿ ‘ಸೌಂದರ್ಯ ಲಹರಿ’ ಎಂಬ ಅಶ್ಲೀಲ ಶ್ಲೋಕಗಳನ್ನು ಸಾಮೂಹಿಕವಾಗಿ ಮಹಿಳೆಯರಿಂದ ಪಠಿಸುವ ಚೆಡ್ಡಿಗಳಿಗೆ ಇಟಲಿಯಲ್ಲಿ ಜನಿಸಿದ್ದರೂ ಈಗ ಭಾರತೀಯರಾಗಿರುವ ಸೋನಿಯಾರ ಮಾತೃತ್ವ ಅರ್ಥವಾಗುವುದಿಲ್ಲ. ಅಷ್ಟೇ ಅಲ್ಲ, ಸೋನಿಯಾ ಗಾಂಧಿ ಭಾರತದ ಪ್ರಧಾನಿಯಾದರೆ ತನ್ನ ಗಂಡ ಬದುಕಿರುವಾಗಲೇ ತಾನು ವಿಧವೆಯಂತೆ ಜೀವಿಸುತ್ತೇನೆ ಎಂದು ಸುಷ್ಮಾ ಸ್ವರಾಜ್‍ನಂತಹ ತಲೆ ಕೆಟ್ಟ ಹೆಂಗಸರು ಪ್ರತಿಭಟಿಸುತ್ತಾರೆ.

ಒಂದೆಡೆ, ತನ್ನ ಗಂಡನನ್ನು ಕಳೆದುಕೊಂಡಿದ್ದರೂ, ಆತನನ್ನು ಕೊಂದವರ ಮಗಳ ಬಗ್ಗೆ ತಾಯಿ ವಾತ್ಸಲ್ಯ ತೋರುವ ಸೋನಿಯಾ. ಇನ್ನೊಂದೆಡೆ, ಗರ್ಭವತಿಯರ ಹೊಟ್ಟೆಯನ್ನೇ ತ್ರಿಶೂಲಗಳಿಂದ ಬಗೆದು ಅದರಲ್ಲಿನ ಭ್ರೂಣವನ್ನು ಹಿಡಿದು ಸಂಭ್ರಮಿಸುವ ಬಿಜೆಪಿಗಳು.

ಇವರ ನಡುವೆ ಯಾರು ಈ ದೇಶಕ್ಕೆ ಹಿತವರು?

ಬರೀ ಟೊಳ್ಳುತನ, ಢೋಂಗಿತನ ತುಂಬಿರುವ ಇಂದಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ಪ್ರಿಯಾಂಕಳ ಗಟ್ಟಿತನ ಆಶಾದಾಯಕವಾಗಿದೆ ಎಂಬುದನ್ನು ಬಿಜೆಪಿಗಳ ಹೊರತಾಗಿ ಎಲ್ಲರೂ ನಂಬುತ್ತಾರೆ. ಹ್ಯಾಟ್ಸ್ ಆಫ್ ಟು ಪ್ರಿಯಾಂಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...