Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ...

ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ…

- Advertisement -
- Advertisement -

 ಗೌರಿ ಲಂಕೇಶ್

30 ಏಪ್ರಿಲ್, 2008 (`ಕಂಡಹಾಗೆ’ ಸಂಪಾದಕೀಯದಿಂದ)

ಮೊನ್ನೆ ಪ್ರಿಯಾಂಕ ಗಾಂಧಿ, ತನ್ನ ತಂದೆ ರಾಜೀವ್ ಗಾಂಧಿಯನ್ನು ಕೊಂದವರ ತಂಡದಲ್ಲಿದ್ದ, ಈಗ ಆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ನಳಿನಿ ಎಂಬಾಕೆಯನ್ನು ವೆಲ್ಲೂರ್ ಜೈಲಿನಲ್ಲಿ ಭೇಟಿಯಾಗಿದ್ದರ ಸುದ್ದಿ ಹೊರಬೀಳುತ್ತಿದ್ದಂತೆ ಹಲವಾರು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾದವು. ಅವುಗಳಲ್ಲಿ ಬಿಜೆಪಿ ಪಕ್ಷದವರ ಪ್ರತಿಕ್ರಿಯೆಯಂತೂ ತಮಾಷೆಯಾಗಿತ್ತು. ಮೊದಮೊದಲು ಆಕೆ ಹೀಗೇಕೆ ಮಾಡಿದಳು ಎಂದು ನಮಗೆ ಅರ್ಥವೇ ಆಗುತ್ತಿಲ್ಲ ಎಂದ ಬಿಜೆಪಿಯ ವಕ್ತಾರ. ಆದರೂ ಈ ಬಗ್ಗೆ ನಿಮಗೊಂದು ಅಭಿಪ್ರಾಯ ಇರಲೇಬೇಕಲ್ಲಾ ಎಂದು ಒತ್ತಾಯಿಸಿದಾಗ “ವೈಯಕ್ತಿಕ ವಿಷಯಗಳ ಬಗ್ಗೆ ನಾವು ಮಾತಾಡುವುದಿಲ್ಲ” ಎಂದ. ಹೇಳಿಕೇಳಿ, ಅವಕಾಶ ಸಿಕ್ಕಾಗಲೆಲ್ಲ ಸೋನಿಯಾ ಗಾಂಧಿ ಮತ್ತವರ ಮಕ್ಕಳ ಮೇಲೆ ಕಾರಿಕೊಂಡು ಬೀಳುವುದು ಆವರ ಜಾಯಮಾನ, ಆದರೆ ಪ್ರಿಯಾಂಕ-ನಳಿನಿ ಭೇಟಿಯ ಹಿಂದೆ ಯಾವ ರಾಜಕೀಯವೂ ಇರಲಿಲ್ಲ ಎಂದು ಗೊತ್ತಾಗಿ ಬಿಜೆಪಿಗಳು ಸುಮ್ಮನಾದರು.

ಪ್ರಿಯಾಂಕ ವಿಷಯಕ್ಕೆ ಬರುವುದಾದರೆ ಆಕೆ ತನ್ನ ಚಿಕ್ಕವಯಸ್ಸಿನಲ್ಲೇ ಹಿಂಸಾಕೃತ್ಯಗಳನ್ನು ಹತ್ತಿರದಿಂದ ನೋಡಿದವಳು. ಮೊದಲು ಆಕೆಯ ಅಜ್ಜಿ ಇಂದಿರಾಗಾಂಧಿಯನ್ನು ಆಕೆಯ ರಕ್ಷಣಾ ದಳದವರೇ ಕೊಂದು ಹಾಕಿದರು. ಅನಂತರ ಆಕೆಯ ತಂದೆಯನ್ನು ಆತ್ಮಹತ್ಯಾ ದಾಳಿಯಲ್ಲಿ ಕೊಂದು ಹಾಕಲಾಯಿತು. ಈಗ ಪ್ರತಿಕ್ಷಣ ರಕ್ಷಣಾದಳದವರಿಂದ ಸುತ್ತುವರೆದಿರುವ, ಗಾಜಿನ ಅರಮನೆಯಲ್ಲಿ ಬದುಕನ್ನು ಸಾಗಿಸುತ್ತಿರುವ, ಹೆಚ್ಚಾಗಿ ಹೊರಗಿನ ಜಗತ್ತಿನೊಂದಿಗೆ ಸಂಪರ್ಕ ಸಾಧ್ಯವಿರದ ಸ್ಥಿತಿಯಲ್ಲಿರುವ ಯುವತಿ ಪ್ರಿಯಾಂಕ. ಅಂತಹ ಪರಿಸ್ಥಿತಿಯಲ್ಲೂ ಆಕೆ ತನ್ನ ಮಾನವೀಯತೆಯನ್ನು ಉಳಿಸಿಕೊಂಡು ಸಹಜವಾಗಿ ಬದುಕಲು ಯತ್ನಿಸುತ್ತಿದ್ದಾಳೆ ಎಂಬುದಕ್ಕೆ ನಳಿನಿ ಭೇಟಿ ಪ್ರಕರಣವೇ ಸಾಕ್ಷಿ.

ಯಾವುದೇ ಪ್ರಚಾರವಿಲ್ಲದೆ, ಯಾರ ಗಮನಕ್ಕೂ ಬಾರದ ಪ್ರಿಯಾಂಕ ತನ್ನ ತಂದೆಯ ಸಾವಿಗೆ ಕಾರಣವಾಗಿದ್ದ ನಳಿನಿಯನ್ನು ಭೇಟಿಯಾಗಿದ್ದ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಪ್ರಿಯಾಂಕ ಯಾಕೆ ಆಕೆಯನ್ನು ಭೇಟಿಯಾದಳು? ಅವರಿಬ್ಬರ ನಡುವೆ ಯಾವ ಮಾತುಕತೆ ನಡೆಯಿತು? ಎಲ್ಲಕ್ಕಿಂತ ಮುಖ್ಯವಾಗಿ ಆಕೆಯನ್ನು ಭೇಟಿ ಆಗುವ ಬಯಕೆ ಪ್ರಿಯಾಂಕಳಲ್ಲಿ ಮೂಡಿದ್ದು ಯಾಕೆ ಎಂಬೆಲ್ಲಾ ಪ್ರಶ್ನೆಗಳು ಉದ್ಭವಿಸಿದವು.

ಅವುಗಳಿಗೆಲ್ಲಾ ಪ್ರಿಯಾಂಕ ಉತ್ತರಿಸಿದ್ದು ಹೀಗೆ “ಅದು ವೈಯಕ್ತಿಕ ವಿಷಯ. ನಾನು ಸ್ವಇಚ್ಛೆಯಿಂದಲೇ ಆಕೆಯನ್ನು ಭೇಟಿಯಾದೆ. ನನ್ನ ಬದುಕಿನಲ್ಲಿ ಸಂಭವಿಸಿರುವ ಹಿಂಸೆ ಮತ್ತು ಸಾಮರಸ್ಯವನ್ನು ಪಡೆಯಲು ನಾವು ಆಯ್ಕೆ ಮಾಡಿಕೊಂಡ ಮಾರ್ಗ ಅದು. ನನಗೆ ಕೋಪ, ದ್ವೇಷ ಮತ್ತು ಹಿಂಸೆಯಲ್ಲಿ ನಂಬಿಕೆ ಇಲ್ಲ. ಮತ್ತು ಅಂತಹ ಭಾವನೆಗಳು ನನ್ನ ಬದುಕನ್ನೇ ಸ್ವಾಧೀನಪಡಿಸಿಕೊಳ್ಳಲು ನಾನು ಎಂದೂ ಬಿಡುವುದಿಲ್ಲ.”

ಇಂಗ್ಲಿಷ್‍ನಲ್ಲಿ ಒಂದು ಹೇಳಿಕೆ ಇದೆ: “ಟು ಎರ್ ಈಸ್ ಹ್ಯೂಮನ್, ಟು ಫರ್‍ಗೀವ್ ಈಸ್ ಡಿವೈನ್” ಅಂತ. ಹಾಗೆ ಪ್ರಿಯಾಂಕ ಕೂಡ ಸಾಮಾನ್ಯ ಮನುಷ್ಯಳಂತಿದ್ದು ನಳಿನಿ ಬಗ್ಗೆ ಮರೆಯಬಹುದಿತ್ತು. ಅಥವಾ ನಳಿನಿ ಮಾಡಿದ ತಪ್ಪಿಗೆ ಸರಿಯಾದ ಶಿಕ್ಷೆ ಆಗಿದೆ ಎಂದು ಸುಮ್ಮನಿರಬಹುದಿತ್ತು. ಆದರೆ ಪ್ರಿಯಾಂಕ ಮರೆಯಲಿಲ್ಲ, ಸುಮ್ಮನಿರಲಿಲ್ಲ. ಬದಲಾಗಿ ನಳಿನಿಯನ್ನು ಭೇಟಿಯಾಗಿ, ಅವಳೊಂದಿಗೆ ಸಾಮಾನ್ಯ ಯುವತಿಯರಂತೆ ಬಾಣಂತನ, ಮಕ್ಕಳ ಬಗ್ಗೆ ಚರ್ಚಿಸಿ, ಒಂದು ಉಡುಗೊರೆಯನ್ನು ನೀಡುವ ಮೂಲಕ ಪ್ರಿಯಾಂಕ ತನ್ನ ಎಲ್ಲಾ ದುಃಖ ಮತ್ತು ನೋವುಗಳೊಂದಿಗೆ ಮುಖಾಮುಖಿಯಾಗಿ ತನ್ನ ಮನಸ್ಸಿನಲ್ಲೇ ಅವುಗಳಿಗೆ ಒಂದು ಅಂತ್ಯ ಕಂಡುಕೊಂಡಿದ್ದಾಳಲ್ಲದೆ ತನ್ನ ಮಾನವೀಯತೆಯನ್ನು ಮೆರೆದಿದ್ದಾಳೆ. ಅಂದಹಾಗೆ ರಾಜೀವ್‍ಗಾಂಧಿಯ ಹತ್ಯೆಗೆ ಸಂಬಂಧಪಟ್ಟಂತೆ ನ್ಯಾಯಾಲಯ ನಳನಿಗೆ ಮತ್ತಾಕೆಯ ಗಂಡ ಮುರುಗನ್, ಇಬ್ಬರಿಗೂ ಮರಣದಂಡನೆ ವಿಧಿಸಿತ್ತು. ಆದರೆ ತೀರ್ಪು ಬರುವ ಮುನ್ನವೇ ನಳಿನಿಗೆ ಜೈಲಿನಲ್ಲೇ ಒಂದು ಹೆಣ್ಣುಮಗು ಹುಟ್ಟಿತ್ತು. ಆಗ ನಳಿನಿ ಮತ್ತು ಮುರುಗನ್ ಇಬ್ಬರೂ ಗಲ್ಲಿಗೇರಿಸಲ್ಪಟ್ಟರೆ ಅವರ ಮಗಳು ಅನಾಥೆಯಾಗುತ್ತಾಳೆಂಬ ಕಾರಣಕ್ಕೆ ನಳನಿಗೆ ಮರಣದಂಡನೆ ವಿಧಿಸಬಾರದೆಂದು ರಾಷ್ಟ್ರಪತಿಯವರಿಗೆ ಅಹವಾಲು ಸಲ್ಲಿಸಿದ್ದು ಬೇರಾರು ಅಲ್ಲ. ಮುರುಗನ್ ಮತ್ತು ನಳಿನಿಯ ಕೃತ್ಯದಿಂದ ತನ್ನ ಪ್ರೀತಿಯ ಗಂಡನನ್ನೇ ಕಳೆದುಕೊಂಡಿದ್ದ ಸೋನಿಯಾಗಾಂಧಿ!

ಸೋನಿಯಾ ಗಾಂಧಿಯ ಈ ಕಾಳಜಿಯಿಂದಲೇ ತನ್ನ ಪ್ರಾಣ ಉಳಿಸಿಕೊಂಡ ನಳಿನಿ ಅಂದಿನಿಂದ ಸೋನಿಯಾರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾಳೆ. ಆಕೆ ಬರೆದ ಪತ್ರಗಳಲ್ಲಿ ಸೋನಿಯಾರನ್ನು ‘ಪ್ರೀತಿಯ ತಾಯಿ’ ಎಂದೇ ಸಂಬೋಧಿಸಿದ್ದಾಳೆ.

ಆದರೆ ವಿಪರ್ಯಾಸ ನೋಡಿ.

ಮಾತೆಯರ ಹೆಸರಲ್ಲಿ ‘ಸೌಂದರ್ಯ ಲಹರಿ’ ಎಂಬ ಅಶ್ಲೀಲ ಶ್ಲೋಕಗಳನ್ನು ಸಾಮೂಹಿಕವಾಗಿ ಮಹಿಳೆಯರಿಂದ ಪಠಿಸುವ ಚೆಡ್ಡಿಗಳಿಗೆ ಇಟಲಿಯಲ್ಲಿ ಜನಿಸಿದ್ದರೂ ಈಗ ಭಾರತೀಯರಾಗಿರುವ ಸೋನಿಯಾರ ಮಾತೃತ್ವ ಅರ್ಥವಾಗುವುದಿಲ್ಲ. ಅಷ್ಟೇ ಅಲ್ಲ, ಸೋನಿಯಾ ಗಾಂಧಿ ಭಾರತದ ಪ್ರಧಾನಿಯಾದರೆ ತನ್ನ ಗಂಡ ಬದುಕಿರುವಾಗಲೇ ತಾನು ವಿಧವೆಯಂತೆ ಜೀವಿಸುತ್ತೇನೆ ಎಂದು ಸುಷ್ಮಾ ಸ್ವರಾಜ್‍ನಂತಹ ತಲೆ ಕೆಟ್ಟ ಹೆಂಗಸರು ಪ್ರತಿಭಟಿಸುತ್ತಾರೆ.

ಒಂದೆಡೆ, ತನ್ನ ಗಂಡನನ್ನು ಕಳೆದುಕೊಂಡಿದ್ದರೂ, ಆತನನ್ನು ಕೊಂದವರ ಮಗಳ ಬಗ್ಗೆ ತಾಯಿ ವಾತ್ಸಲ್ಯ ತೋರುವ ಸೋನಿಯಾ. ಇನ್ನೊಂದೆಡೆ, ಗರ್ಭವತಿಯರ ಹೊಟ್ಟೆಯನ್ನೇ ತ್ರಿಶೂಲಗಳಿಂದ ಬಗೆದು ಅದರಲ್ಲಿನ ಭ್ರೂಣವನ್ನು ಹಿಡಿದು ಸಂಭ್ರಮಿಸುವ ಬಿಜೆಪಿಗಳು.

ಇವರ ನಡುವೆ ಯಾರು ಈ ದೇಶಕ್ಕೆ ಹಿತವರು?

ಬರೀ ಟೊಳ್ಳುತನ, ಢೋಂಗಿತನ ತುಂಬಿರುವ ಇಂದಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ಪ್ರಿಯಾಂಕಳ ಗಟ್ಟಿತನ ಆಶಾದಾಯಕವಾಗಿದೆ ಎಂಬುದನ್ನು ಬಿಜೆಪಿಗಳ ಹೊರತಾಗಿ ಎಲ್ಲರೂ ನಂಬುತ್ತಾರೆ. ಹ್ಯಾಟ್ಸ್ ಆಫ್ ಟು ಪ್ರಿಯಾಂಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...