Homeಮುಖಪುಟ೫೦:೫೦ ಸಮಾನ ಅಧಿಕಾರ ಹಂಚಿಕೆಗೆ ಶಿವಸೇನೆ ಪಟ್ಟು: ಸಿಎಂ ಹುದ್ದೆ ಮೇಲೆ ಕಣ್ಣು..!

೫೦:೫೦ ಸಮಾನ ಅಧಿಕಾರ ಹಂಚಿಕೆಗೆ ಶಿವಸೇನೆ ಪಟ್ಟು: ಸಿಎಂ ಹುದ್ದೆ ಮೇಲೆ ಕಣ್ಣು..!

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ಒಟ್ಟು ೨೮೮ ಸ್ಥಾನ ಹೊಂದಿರುವ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಹಾಗೂ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಮಹಾಘಟಬಂಧನ್‌ ೧೫೮ ಕ್ಷೇತ್ರಗಳನ್ನು ಬಾಚಿಕೊಂಡಿದೆ. ಇತ್ತ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿ ೧೦೦ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇತರೆ -೩೦ ಸ್ಥಾನ ಗೆದ್ದು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಈಗ ಮಹಾರಾಷ್ಟ್ರದಲ್ಲಿ ಸಿಎಂ ಸ್ಥಾನ ಯಾವ ಪಕ್ಷಕ್ಕೆ ಹೋಗಲಿದೆ ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಶಿವಸೇನೆ ಮಾತ್ರ ಚುನಾವಣೆ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಗೆ ಬದ್ಧರಾಗಿದ್ದು, ೫೦-೫೦ ಸಮಾನ ಅಧಿಕಾರ ಹಂಚಿಕೆಗೆ ಪಟ್ಟು ಹಿಡಿದಿದೆ. ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಮೈತ್ರಿಯ ನಿಯಮ ಮತ್ತು ರೂಪುರೇಷೆಗಳನ್ನು ನಾವೇ ನಿರ್ಧರಿಸುತ್ತೇವೆಂದು ಕಡ್ಡಿ ತುಂಡಾದಂತೆ ಹೇಳಿದೆ. ಈಗ ಮಹಾರಾಷ್ಟ್ರದಲ್ಲಿ ಸಿಎಂ ಗದ್ದುಗೆ ಯಾವ ಪಕ್ಷಕ್ಕೆ ಹೋಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಮತ್ತು ಶಿವಸೇನೆ ಮಹಾಮೈತ್ರಿ ಬಹುಮತ ಗಳಿಸುತ್ತಿದ್ದಂತೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಅಧಿಕಾರದ ಸಮಾನ ಹಂಚಿಕೆಯಾಗಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಶಿವಸೇನೆಯ ಹಿರಿಯ ನಾಯಕ ಸಂಜಯ್‌ ರಾವತ್ ಮಾತನಾಡಿ, ಚುನಾವಣೆಗೆ ಮೊದಲು ಮಾಡಿಕೊಂಡಿದ್ದ ಮೈತ್ರಿಯಂತೆಯೇ ಸಾಗುತ್ತೇವೆ. ಸರ್ಕಾರದಲ್ಲಿ ಸಮಪಾಲು ಕೋರಿದ್ದೆವು. ಈಗ ೫೦:೫೦ ಸೂತ್ರದಂತೆ ಸರ್ಕಾರ ರಚನೆ ಆಗುತ್ತದೆ. ಪಕ್ಷದ ಸಾಧನೆ ತೆಗೆದು ಹಾಕುವಂಥದ್ದಲ್ಲ. ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ತಿಳಿಸಿದರು.

ಈ ಮಧ್ಯೆ ಲೋಕಸಭೆ ಮಾಜಿ ಸ್ಪೀಕರ್‌ ಡಾ.ಮನೋಹರ್‌ ಜೋಶಿ ಪ್ರತಿಕ್ರಿಯಿಸಿ, ಮಹಾರಾಷ್ಟ್ರದ ಮುಂದಿನ ಸಿಎಂ ಹುದ್ದೆ ಶಿವಸೇನೆಗೆ ಸಿಗಲಿದೆ ಎಂದಿದ್ದಾರೆ. ಅಲ್ಲದೇ ಕಳೆದ ೨೦೧೪ರ ಚುನಾವಣೆಯಲ್ಲಿ ೧೨೨ ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ, ಈ ಬಾರಿ ೧೦೨ ಸ್ಥಾನಗಳಲ್ಲಿ ವಿಜಯಿಯಾಗಿದೆ. ಇನ್ನು ಶಿವಸೇನೆ ೫೬ ಸ್ಥಾನಗಳಲ್ಲಿ ಗೆದ್ದಿದ್ದು, ಠಾಕ್ರೆ ಕುಟುಂಬದ ಕುಡಿಯನ್ನು ಸಿಎಂ ಮಾಡುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿ ೧೦೦ ಸ್ಥಾನ ಗೆದ್ದಿದೆ. ಒಟ್ಟಿನಲ್ಲಿ ೨೦೧೪ರಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಮತ್ತು ಶಿವಸೇನೆ, ಈ ಬಾರಿ ಮೈತ್ರಿ ಮೂಲಕ ಚುನಾವಣೆ ಎದುರಿಸಿದರೂ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಬಾರಿ ಬಿಜೆಪಿ ೧೬೪, ಶಿವಸೇನೆ ೧೨೬, ಕಾಂಗ್ರೆಸ್ ೧೪೭, ಎನ್‌ಸಿಪಿ ೧೨೧ ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...