Homeಚಳವಳಿ​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆ 2019 ಅನ್ನು “ವಿಭಜಕ, ತಾರತಮ್ಯದಿಂದ ಕೂಡಿದ ಮತ್ತು ಅಸಂವಿಧಾನಿಕ” ಎಂದು ಕರೆದಿರುವ ಬರಹಗಾರರು, ಕಲಾವಿದರು, ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 600 ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳು ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಸ್ತಾವಿತ ಕಾನೂನನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಮನವಿಗೆ ಸಹಿ ಹಾಕಿದವರಲ್ಲಿ ಬರಹಗಾರರಾದ ನಯನತಾರಾ ಸಾಹಗಲ್, ಅಶೋಕ್ ವಾಜಪೇಯಿ, ಅರುಂಧತಿ ರಾಯ್, ಪಾಲ್ ಜಕಾರಿಯಾ, ಅಮಿತಾವ್ ಘೋಷ್ ಮತ್ತು ಶಶಿ ದೇಶಪಾಂಡೆ ಸೇರಿದ್ದಾರೆ. ಕಲಾವಿದರಾದ ಟಿ.ಎಂ.ಕೃಷ್ಣ, ಅತುಲ್ ದೋಡಿಯಾ, ವಿವಾನ್ ಸುಂದರಂ, ಸುಧೀರ್ ಪಟ್ವರ್ಧನ್, ಗುಲಮ್ಮೊಹಮ್ಮದ್ ಶೇಖ್ ಮತ್ತು ನಿಲಿಮಾ ಶೇಖ್ ಇದ್ದಾರೆ. ಚಲನಚಿತ್ರ ನಿರ್ಮಾಪಕರಾದ ಅಪರ್ಣ ಸೇನ್, ನಂದಿತಾ ದಾಸ್ ಮತ್ತು ಆನಂದ್ ಪಟವರ್ಧನ್ ಪ್ರಮುಖರಾಗಿದ್ದಾರೆ. ವಿದ್ವಾಂಸರಾದ ರೋಮಿಲಾ ಥಾಪರ್, ಪ್ರಭಾತ್ ಪಟ್ನಾಯಕ್, ರಾಮಚಂದ್ರ ಗುಹಾ, ಗೀತಾ ಕಪೂರ್, ಅಕೀಲ್ ಬಿಲ್ಗ್ರಾಮಿ ಮತ್ತು ಜೋಯಾ ಹಸನ್ ವಿರೋಧಕ್ಕೆ ದನಿಗೂಡಿಸಿದ್ದರೆ. ಕಾರ್ಯಕರ್ತರಾದ ಟೀಸ್ತಾ ಸೆಟಲ್ವಾಡ್, ಹರ್ಷ್ ಮಂದಿರ್, ಅರುಣಾ ರಾಯ್ ಮತ್ತು ಬೆಜವಾಡ ವಿಲ್ಸನ್ ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಎಪಿ ಶಾ, ಯೋಗೇಂದ್ರ ಯಾದವ್, ಜಿ.ಎನ್. ದೇವಿ, ನಂದಿನಿ ಸುಂದರ್ ಮತ್ತು ವಜಾಹತ್ ಹಬೀಬುಲ್ಲಾ ಸೇರಿದಂತೆ ಇತರರು ಪ್ರಮುಖರಾಗಿದ್ದಾರೆ.

ಭಾರತದ ಸಂವಿಧಾನವು “ಲಿಂಗ, ಜಾತಿ, ಧರ್ಮ, ವರ್ಗ, ಸಮುದಾಯ ಅಥವಾ ಭಾಷೆಯ ಬೇಧವಿಲ್ಲದೆ ಸಮಾನತೆಯ ಮೂಲಭೂತ ಅಂಶಗಳನ್ನು ಒತ್ತಾಯಿಸುತ್ತದೆ” ಎಂದು ಪ್ರತಿಪಾದಿಸಿದ ಬುದ್ಧಿಜೀವಿಗಳು, ಪೌರತ್ವ ತಿದ್ದುಪಡಿ ಮಸೂದೆ ಮತ್ತು “ರಾಷ್ಟ್ರವ್ಯಾಪಿ ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕ ಪೌರತ್ವ ನೋಂದಣಿ)ಯು ದೇಶಾದ್ಯಂತ ಜನರಿಗೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಆರೋಪಿಸಿದ್ದರೆ. ಇದು ಭಾರತೀಯ ಗಣರಾಜ್ಯದ ಸ್ವರೂಪವನ್ನು ಮೂಲಭೂತವಾಗಿ ಮತ್ತೆಂದೂ ಸರಿಪಡಿಸಲಾಗದಂತೆ ಹಾನಿಗೊಳಿಸುತ್ತದೆ ಎಂದು ದೂರಿದ್ದಾರೆ.

“ಇದಕ್ಕಾಗಿಯೇ ಎಲ್ಲಾ ಆತ್ಮಸಾಕ್ಷಿಯ ನಾಗರಿಕರು ಸರ್ಕಾರವು ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಬೇಕೆಂದು ಕರೆ ನೀಡಿರುವ ಅವರು, ಸರ್ಕಾರವು ಸಂವಿಧಾನಕ್ಕೆ ದ್ರೋಹ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಪರಿಚಯಿಸಿದ ಪೌರತ್ವ ತಿದ್ದುಪಡಿ ಮುಸೂದೆಯನ್ನು ಸೋಮವಾರ ಮಧ್ಯರಾತ್ರಿ ಸುಮಾರು 12 ಗಂಟೆಗಳ ಚರ್ಚೆಯ ನಡುವೆ ಲೋಕಸಭೆಯು ಅಂಗೀಕರಿಸಿದೆ. ಪ್ರತಿಪಕ್ಷಗಳು ಪ್ರಸ್ತಾವಿತ ಕಾನೂನಿಗೆ ವಿರುದ್ಧವಾಗಿ ಮತಚಲಾಯಿಸಿದರು. ಅದು ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ಭಾರತೀಯ ರಾಷ್ಟ್ರೀಯತೆಯನ್ನು ವಿಭಜಿಸಲು ಕಾರಣವಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

2015 ರ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಅಕ್ರಮ ವಲಸೆ ಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಮಸೂದೆಯಲ್ಲಿ ಪ್ರಸ್ತಾಪವಿದೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...