Homeಚಳವಳಿರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿದ್ದು, ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

- Advertisement -
- Advertisement -

ರೈತ ವಿರೋಧಿ, ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದಾಗಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧಗೊಳಿಸಬೇಕು ಎಂದು ದೆಹಲಿಯ ನಾಲ್ಕು ಗಡಿಗಳಲ್ಲಿ ಪಂಜಾಬ್‌, ಹರಿಯಾಣ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಐತಿಹಾಸಿಕ ರೈತ ಹೋರಾಟಕ್ಕೆ 130 ದಿನಗಳಾಗಿದೆ.

ವಿಶ್ವದ ಗಮನ ಸೆಳೆದಿರುವ ರೈತ ಹೋರಾಟದ ವಿಶೇಷತೆಗಳಲ್ಲಿ ಟ್ರ್ಯಾಲಿಗಳು ಕೂಡ ಒಂದು. ತಣ್ಣಗೆ ಕೊರೆಯುವ ದೆಹಲಿಯ ಚಳಿಯಿಂದ ರಕ್ಷಣೆ ಪಡೆಯಲು ರೈತರು ಟ್ಯ್ರಾಲಿಗಳನ್ನು ಆಶ್ರಯಿಸಿದ್ದರು. ಆದರೆ ಈಗ ಬಿರು ಬೇಸಿಗೆಯಿದೆ. ಟ್ಯ್ರಾಲಿಗಳಲ್ಲಿ ಇರುವುದು ನಿಜಕ್ಕೂ ಕಷ್ಟ. ಜೊತೆಗೆ ವರ್ಷವಿಡೀ ಬೆಳೆ ಬೆಳೆಯುವ ಪಂಜಾಬ್, ಹರಿಯಾಣದಲ್ಲಿ ಈಗ ಗೋದಿ ಕೊಯ್ಲಿನ ಸಮಯ. ಬಿತ್ತನೆ ಮುಗಿಸಿ ಟ್ರ್ಯಾಲಿಗಳೊಂದಿಗೆ ಬಂದಿದ್ದ ರೈತರು ಈಗ ಸುಗ್ಗಿ ಮಾಡಲು ಟ್ರ್ಯಾಲಿಗಳನ್ನು ತಮ್ಮ ಹಳ್ಳಿಗೆ ವಾಪಸ್ಸು ಕಳುಹಿಸುತ್ತಿದ್ದಾರೆ.

ನವೆಂಬರ್‌ನಿಂದ ಜೊತೆಗಿದ್ದು ಮನೆಗಳಾಂತಾಗಿದ್ದ ಟ್ಯ್ರಾಲಿಗಳ ಜಾಗದಲ್ಲಿ ರೈತರು ಈಗ ಬಿದಿರಿನ, ಹುಲ್ಲಿನ ಶೆಡ್‌ಗಳನ್ನು ನಿರ್ಮಿಸುತ್ತಿದ್ದಾರೆ. ಸುಡುವ ಬಿಸಿಲಿನಿಂದ ಕಾಪಾಡಲು ಈ ಶೆಡ್‌ಗಳು ಸಹಕಾರಿಯಾಗಿವೆ. ಈ ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿರುತ್ತವೆ. ಜೊತೆಗೆ ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಪಂಜಾಬ್‌ನ ರೂಪರ್‌ ಜಿಲ್ಲೆಯ ಬೆಹ್ರಾಂಪುರ ಗ್ರಾಮದ ರೈತರು ಸಿಂಘು ಗಡಿಯಲ್ಲಿ ಎರಡು ವಾರದ ಹಿಂದೆಯೇ ಒಣಹುಲ್ಲಿನ ಚಾವಣಿ, ಹೂಕುಂಡಗಳು, ಕರ್ಟನ್‌ಗಳು ಹಾಗೂ ಭಗತ್‌ಸಿಂಗ್‌ನ ಫೋಟೊ ಇರುವ ಗುಡಿಸಲನ್ನು ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿದ ಅದೇ ಗ್ರಾಮದ ಗುರ್ಮೀತ್‌ ಸಿಂಗ್‌, ‘ನಾವು ತಂದಿದ್ದರಲ್ಲಿ ಎರಡು ಟ್ರ್ಯಾಲಿಗಳನ್ನು ಸುಗ್ಗಿಗಾಗಿ ಹಳ್ಳಿಗೆ ಕಳಿಸಿದ್ದೇವೆ. ಈಗ ನಿರ್ಮಿಸಿರುವ ಗುಡಿಸಲು ತಣ್ಣಗಿದ್ದು, ಕಬ್ಬಿಣ ಮತ್ತು ಟಾರ್ಪಲಿನ್‌ನಿಂದ ಉಂಟಾಗುತ್ತಿದ್ದ ಹಬೆ ಈಗಿಲ್ಲ ಎಂದಿದ್ದಾರೆ.

‘ಗೋದಿ ಕೊಯ್ಲಿನ ಕಾರಣಕ್ಕೆ ಪ್ರತಿಭಟನಾ ಗಡಿಗಳಲ್ಲಿರುವವರ ಸಂಖ್ಯೆ ಕಡಿಮೆಯಿದ್ದು, ಸುಗ್ಗಿಯ ನಂತರ ರೈತರೆಲ್ಲರೂ ಮತ್ತೆ ಸೇರಲಿದ್ದಾರೆ. ಪ್ರಸ್ತುತ ಪಂಜಾಬಿನ ಪ್ರತಿ ಗ್ರಾಮದಿಂದ 10 ಜನ ರೈತರು ಪ್ರತಿಭಟನೆಯಲ್ಲಿದ್ದಾರೆ’ ಎಂದು ಲೂಧಿಯಾನ ಜಿಲ್ಲೆ ಜತನ ಗ್ರಾಮದ ರಾಜ್ವಿಂದರ್‌ ಸಿಂಗ್‌ ತಿಳಿಸಿದರು.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

‘ಪ್ರತಿಭಟನೆ ಆರಂಭದಿಂದಲೂ ಹಳ್ಳಿಗೆ 20-30 ಜನ ರೈತರು ಈ ಹೋರಾಟಕ್ಕೆ ಬಂದು ಒಂದು ವಾರದಿಂದ ಹತ್ತು ದಿನಗಳವರೆಗೆ ಇಲ್ಲಿಗೆ ಬಂದಿರುತ್ತಿದ್ದರು. ನಾವು ಇದೇ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದೇವೆ. ಈಗ ಸುಗ್ಗಿಯ ಕಾರಣದಿಂದ ಜನರ ಸಂಖ್ಯೆ ಕಡಿಮೆ ಇದೆ ಅಷ್ಟೆ. ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಈ ಹೋರಾಟ ನಿಲ್ಲಿಸುವ ಮಾತೇ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ವಿಂದರ್‌ ಸೇರಿದಂತೆ ಮೂರು ಜನರು ರೈತ ಹೋರಾಟ ಶುರುವಾದಂದಿನಿಂದ ಗಡಿಗಳಲ್ಲಿಯೇ ಇದ್ದು ಹೋರಾಟದ ಆಗು-ಹೋಗುಗಳನ್ನು ನೋಡಿಕೊಳ್ಳುತ್ತಿರುವುದರಿಂದ ಅವರ ಹೊಲದ ಸುಗ್ಗಿಯನ್ನು ಗ್ರಾಮದ ರೈತರೇ ನೋಡಿಕೊಳ್ಳುವುದಾಗಿ ಗ್ರಾಮದ ಸರ್‌ಪಂಚ್‌ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...