Homeಚಳವಳಿರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿದ್ದು, ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

- Advertisement -
- Advertisement -

ರೈತ ವಿರೋಧಿ, ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದಾಗಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧಗೊಳಿಸಬೇಕು ಎಂದು ದೆಹಲಿಯ ನಾಲ್ಕು ಗಡಿಗಳಲ್ಲಿ ಪಂಜಾಬ್‌, ಹರಿಯಾಣ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಐತಿಹಾಸಿಕ ರೈತ ಹೋರಾಟಕ್ಕೆ 130 ದಿನಗಳಾಗಿದೆ.

ವಿಶ್ವದ ಗಮನ ಸೆಳೆದಿರುವ ರೈತ ಹೋರಾಟದ ವಿಶೇಷತೆಗಳಲ್ಲಿ ಟ್ರ್ಯಾಲಿಗಳು ಕೂಡ ಒಂದು. ತಣ್ಣಗೆ ಕೊರೆಯುವ ದೆಹಲಿಯ ಚಳಿಯಿಂದ ರಕ್ಷಣೆ ಪಡೆಯಲು ರೈತರು ಟ್ಯ್ರಾಲಿಗಳನ್ನು ಆಶ್ರಯಿಸಿದ್ದರು. ಆದರೆ ಈಗ ಬಿರು ಬೇಸಿಗೆಯಿದೆ. ಟ್ಯ್ರಾಲಿಗಳಲ್ಲಿ ಇರುವುದು ನಿಜಕ್ಕೂ ಕಷ್ಟ. ಜೊತೆಗೆ ವರ್ಷವಿಡೀ ಬೆಳೆ ಬೆಳೆಯುವ ಪಂಜಾಬ್, ಹರಿಯಾಣದಲ್ಲಿ ಈಗ ಗೋದಿ ಕೊಯ್ಲಿನ ಸಮಯ. ಬಿತ್ತನೆ ಮುಗಿಸಿ ಟ್ರ್ಯಾಲಿಗಳೊಂದಿಗೆ ಬಂದಿದ್ದ ರೈತರು ಈಗ ಸುಗ್ಗಿ ಮಾಡಲು ಟ್ರ್ಯಾಲಿಗಳನ್ನು ತಮ್ಮ ಹಳ್ಳಿಗೆ ವಾಪಸ್ಸು ಕಳುಹಿಸುತ್ತಿದ್ದಾರೆ.

ನವೆಂಬರ್‌ನಿಂದ ಜೊತೆಗಿದ್ದು ಮನೆಗಳಾಂತಾಗಿದ್ದ ಟ್ಯ್ರಾಲಿಗಳ ಜಾಗದಲ್ಲಿ ರೈತರು ಈಗ ಬಿದಿರಿನ, ಹುಲ್ಲಿನ ಶೆಡ್‌ಗಳನ್ನು ನಿರ್ಮಿಸುತ್ತಿದ್ದಾರೆ. ಸುಡುವ ಬಿಸಿಲಿನಿಂದ ಕಾಪಾಡಲು ಈ ಶೆಡ್‌ಗಳು ಸಹಕಾರಿಯಾಗಿವೆ. ಈ ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿರುತ್ತವೆ. ಜೊತೆಗೆ ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಪಂಜಾಬ್‌ನ ರೂಪರ್‌ ಜಿಲ್ಲೆಯ ಬೆಹ್ರಾಂಪುರ ಗ್ರಾಮದ ರೈತರು ಸಿಂಘು ಗಡಿಯಲ್ಲಿ ಎರಡು ವಾರದ ಹಿಂದೆಯೇ ಒಣಹುಲ್ಲಿನ ಚಾವಣಿ, ಹೂಕುಂಡಗಳು, ಕರ್ಟನ್‌ಗಳು ಹಾಗೂ ಭಗತ್‌ಸಿಂಗ್‌ನ ಫೋಟೊ ಇರುವ ಗುಡಿಸಲನ್ನು ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿದ ಅದೇ ಗ್ರಾಮದ ಗುರ್ಮೀತ್‌ ಸಿಂಗ್‌, ‘ನಾವು ತಂದಿದ್ದರಲ್ಲಿ ಎರಡು ಟ್ರ್ಯಾಲಿಗಳನ್ನು ಸುಗ್ಗಿಗಾಗಿ ಹಳ್ಳಿಗೆ ಕಳಿಸಿದ್ದೇವೆ. ಈಗ ನಿರ್ಮಿಸಿರುವ ಗುಡಿಸಲು ತಣ್ಣಗಿದ್ದು, ಕಬ್ಬಿಣ ಮತ್ತು ಟಾರ್ಪಲಿನ್‌ನಿಂದ ಉಂಟಾಗುತ್ತಿದ್ದ ಹಬೆ ಈಗಿಲ್ಲ ಎಂದಿದ್ದಾರೆ.

‘ಗೋದಿ ಕೊಯ್ಲಿನ ಕಾರಣಕ್ಕೆ ಪ್ರತಿಭಟನಾ ಗಡಿಗಳಲ್ಲಿರುವವರ ಸಂಖ್ಯೆ ಕಡಿಮೆಯಿದ್ದು, ಸುಗ್ಗಿಯ ನಂತರ ರೈತರೆಲ್ಲರೂ ಮತ್ತೆ ಸೇರಲಿದ್ದಾರೆ. ಪ್ರಸ್ತುತ ಪಂಜಾಬಿನ ಪ್ರತಿ ಗ್ರಾಮದಿಂದ 10 ಜನ ರೈತರು ಪ್ರತಿಭಟನೆಯಲ್ಲಿದ್ದಾರೆ’ ಎಂದು ಲೂಧಿಯಾನ ಜಿಲ್ಲೆ ಜತನ ಗ್ರಾಮದ ರಾಜ್ವಿಂದರ್‌ ಸಿಂಗ್‌ ತಿಳಿಸಿದರು.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

‘ಪ್ರತಿಭಟನೆ ಆರಂಭದಿಂದಲೂ ಹಳ್ಳಿಗೆ 20-30 ಜನ ರೈತರು ಈ ಹೋರಾಟಕ್ಕೆ ಬಂದು ಒಂದು ವಾರದಿಂದ ಹತ್ತು ದಿನಗಳವರೆಗೆ ಇಲ್ಲಿಗೆ ಬಂದಿರುತ್ತಿದ್ದರು. ನಾವು ಇದೇ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದೇವೆ. ಈಗ ಸುಗ್ಗಿಯ ಕಾರಣದಿಂದ ಜನರ ಸಂಖ್ಯೆ ಕಡಿಮೆ ಇದೆ ಅಷ್ಟೆ. ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಈ ಹೋರಾಟ ನಿಲ್ಲಿಸುವ ಮಾತೇ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ವಿಂದರ್‌ ಸೇರಿದಂತೆ ಮೂರು ಜನರು ರೈತ ಹೋರಾಟ ಶುರುವಾದಂದಿನಿಂದ ಗಡಿಗಳಲ್ಲಿಯೇ ಇದ್ದು ಹೋರಾಟದ ಆಗು-ಹೋಗುಗಳನ್ನು ನೋಡಿಕೊಳ್ಳುತ್ತಿರುವುದರಿಂದ ಅವರ ಹೊಲದ ಸುಗ್ಗಿಯನ್ನು ಗ್ರಾಮದ ರೈತರೇ ನೋಡಿಕೊಳ್ಳುವುದಾಗಿ ಗ್ರಾಮದ ಸರ್‌ಪಂಚ್‌ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...