Homeಚಳವಳಿರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿದ್ದು, ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

- Advertisement -
- Advertisement -

ರೈತ ವಿರೋಧಿ, ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದಾಗಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧಗೊಳಿಸಬೇಕು ಎಂದು ದೆಹಲಿಯ ನಾಲ್ಕು ಗಡಿಗಳಲ್ಲಿ ಪಂಜಾಬ್‌, ಹರಿಯಾಣ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಐತಿಹಾಸಿಕ ರೈತ ಹೋರಾಟಕ್ಕೆ 130 ದಿನಗಳಾಗಿದೆ.

ವಿಶ್ವದ ಗಮನ ಸೆಳೆದಿರುವ ರೈತ ಹೋರಾಟದ ವಿಶೇಷತೆಗಳಲ್ಲಿ ಟ್ರ್ಯಾಲಿಗಳು ಕೂಡ ಒಂದು. ತಣ್ಣಗೆ ಕೊರೆಯುವ ದೆಹಲಿಯ ಚಳಿಯಿಂದ ರಕ್ಷಣೆ ಪಡೆಯಲು ರೈತರು ಟ್ಯ್ರಾಲಿಗಳನ್ನು ಆಶ್ರಯಿಸಿದ್ದರು. ಆದರೆ ಈಗ ಬಿರು ಬೇಸಿಗೆಯಿದೆ. ಟ್ಯ್ರಾಲಿಗಳಲ್ಲಿ ಇರುವುದು ನಿಜಕ್ಕೂ ಕಷ್ಟ. ಜೊತೆಗೆ ವರ್ಷವಿಡೀ ಬೆಳೆ ಬೆಳೆಯುವ ಪಂಜಾಬ್, ಹರಿಯಾಣದಲ್ಲಿ ಈಗ ಗೋದಿ ಕೊಯ್ಲಿನ ಸಮಯ. ಬಿತ್ತನೆ ಮುಗಿಸಿ ಟ್ರ್ಯಾಲಿಗಳೊಂದಿಗೆ ಬಂದಿದ್ದ ರೈತರು ಈಗ ಸುಗ್ಗಿ ಮಾಡಲು ಟ್ರ್ಯಾಲಿಗಳನ್ನು ತಮ್ಮ ಹಳ್ಳಿಗೆ ವಾಪಸ್ಸು ಕಳುಹಿಸುತ್ತಿದ್ದಾರೆ.

ನವೆಂಬರ್‌ನಿಂದ ಜೊತೆಗಿದ್ದು ಮನೆಗಳಾಂತಾಗಿದ್ದ ಟ್ಯ್ರಾಲಿಗಳ ಜಾಗದಲ್ಲಿ ರೈತರು ಈಗ ಬಿದಿರಿನ, ಹುಲ್ಲಿನ ಶೆಡ್‌ಗಳನ್ನು ನಿರ್ಮಿಸುತ್ತಿದ್ದಾರೆ. ಸುಡುವ ಬಿಸಿಲಿನಿಂದ ಕಾಪಾಡಲು ಈ ಶೆಡ್‌ಗಳು ಸಹಕಾರಿಯಾಗಿವೆ. ಈ ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿರುತ್ತವೆ. ಜೊತೆಗೆ ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಪಂಜಾಬ್‌ನ ರೂಪರ್‌ ಜಿಲ್ಲೆಯ ಬೆಹ್ರಾಂಪುರ ಗ್ರಾಮದ ರೈತರು ಸಿಂಘು ಗಡಿಯಲ್ಲಿ ಎರಡು ವಾರದ ಹಿಂದೆಯೇ ಒಣಹುಲ್ಲಿನ ಚಾವಣಿ, ಹೂಕುಂಡಗಳು, ಕರ್ಟನ್‌ಗಳು ಹಾಗೂ ಭಗತ್‌ಸಿಂಗ್‌ನ ಫೋಟೊ ಇರುವ ಗುಡಿಸಲನ್ನು ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿದ ಅದೇ ಗ್ರಾಮದ ಗುರ್ಮೀತ್‌ ಸಿಂಗ್‌, ‘ನಾವು ತಂದಿದ್ದರಲ್ಲಿ ಎರಡು ಟ್ರ್ಯಾಲಿಗಳನ್ನು ಸುಗ್ಗಿಗಾಗಿ ಹಳ್ಳಿಗೆ ಕಳಿಸಿದ್ದೇವೆ. ಈಗ ನಿರ್ಮಿಸಿರುವ ಗುಡಿಸಲು ತಣ್ಣಗಿದ್ದು, ಕಬ್ಬಿಣ ಮತ್ತು ಟಾರ್ಪಲಿನ್‌ನಿಂದ ಉಂಟಾಗುತ್ತಿದ್ದ ಹಬೆ ಈಗಿಲ್ಲ ಎಂದಿದ್ದಾರೆ.

‘ಗೋದಿ ಕೊಯ್ಲಿನ ಕಾರಣಕ್ಕೆ ಪ್ರತಿಭಟನಾ ಗಡಿಗಳಲ್ಲಿರುವವರ ಸಂಖ್ಯೆ ಕಡಿಮೆಯಿದ್ದು, ಸುಗ್ಗಿಯ ನಂತರ ರೈತರೆಲ್ಲರೂ ಮತ್ತೆ ಸೇರಲಿದ್ದಾರೆ. ಪ್ರಸ್ತುತ ಪಂಜಾಬಿನ ಪ್ರತಿ ಗ್ರಾಮದಿಂದ 10 ಜನ ರೈತರು ಪ್ರತಿಭಟನೆಯಲ್ಲಿದ್ದಾರೆ’ ಎಂದು ಲೂಧಿಯಾನ ಜಿಲ್ಲೆ ಜತನ ಗ್ರಾಮದ ರಾಜ್ವಿಂದರ್‌ ಸಿಂಗ್‌ ತಿಳಿಸಿದರು.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

‘ಪ್ರತಿಭಟನೆ ಆರಂಭದಿಂದಲೂ ಹಳ್ಳಿಗೆ 20-30 ಜನ ರೈತರು ಈ ಹೋರಾಟಕ್ಕೆ ಬಂದು ಒಂದು ವಾರದಿಂದ ಹತ್ತು ದಿನಗಳವರೆಗೆ ಇಲ್ಲಿಗೆ ಬಂದಿರುತ್ತಿದ್ದರು. ನಾವು ಇದೇ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದೇವೆ. ಈಗ ಸುಗ್ಗಿಯ ಕಾರಣದಿಂದ ಜನರ ಸಂಖ್ಯೆ ಕಡಿಮೆ ಇದೆ ಅಷ್ಟೆ. ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಈ ಹೋರಾಟ ನಿಲ್ಲಿಸುವ ಮಾತೇ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ವಿಂದರ್‌ ಸೇರಿದಂತೆ ಮೂರು ಜನರು ರೈತ ಹೋರಾಟ ಶುರುವಾದಂದಿನಿಂದ ಗಡಿಗಳಲ್ಲಿಯೇ ಇದ್ದು ಹೋರಾಟದ ಆಗು-ಹೋಗುಗಳನ್ನು ನೋಡಿಕೊಳ್ಳುತ್ತಿರುವುದರಿಂದ ಅವರ ಹೊಲದ ಸುಗ್ಗಿಯನ್ನು ಗ್ರಾಮದ ರೈತರೇ ನೋಡಿಕೊಳ್ಳುವುದಾಗಿ ಗ್ರಾಮದ ಸರ್‌ಪಂಚ್‌ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...