Homeಚಳವಳಿರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿದ್ದು, ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

- Advertisement -
- Advertisement -

ರೈತ ವಿರೋಧಿ, ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದಾಗಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧಗೊಳಿಸಬೇಕು ಎಂದು ದೆಹಲಿಯ ನಾಲ್ಕು ಗಡಿಗಳಲ್ಲಿ ಪಂಜಾಬ್‌, ಹರಿಯಾಣ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಐತಿಹಾಸಿಕ ರೈತ ಹೋರಾಟಕ್ಕೆ 130 ದಿನಗಳಾಗಿದೆ.

ವಿಶ್ವದ ಗಮನ ಸೆಳೆದಿರುವ ರೈತ ಹೋರಾಟದ ವಿಶೇಷತೆಗಳಲ್ಲಿ ಟ್ರ್ಯಾಲಿಗಳು ಕೂಡ ಒಂದು. ತಣ್ಣಗೆ ಕೊರೆಯುವ ದೆಹಲಿಯ ಚಳಿಯಿಂದ ರಕ್ಷಣೆ ಪಡೆಯಲು ರೈತರು ಟ್ಯ್ರಾಲಿಗಳನ್ನು ಆಶ್ರಯಿಸಿದ್ದರು. ಆದರೆ ಈಗ ಬಿರು ಬೇಸಿಗೆಯಿದೆ. ಟ್ಯ್ರಾಲಿಗಳಲ್ಲಿ ಇರುವುದು ನಿಜಕ್ಕೂ ಕಷ್ಟ. ಜೊತೆಗೆ ವರ್ಷವಿಡೀ ಬೆಳೆ ಬೆಳೆಯುವ ಪಂಜಾಬ್, ಹರಿಯಾಣದಲ್ಲಿ ಈಗ ಗೋದಿ ಕೊಯ್ಲಿನ ಸಮಯ. ಬಿತ್ತನೆ ಮುಗಿಸಿ ಟ್ರ್ಯಾಲಿಗಳೊಂದಿಗೆ ಬಂದಿದ್ದ ರೈತರು ಈಗ ಸುಗ್ಗಿ ಮಾಡಲು ಟ್ರ್ಯಾಲಿಗಳನ್ನು ತಮ್ಮ ಹಳ್ಳಿಗೆ ವಾಪಸ್ಸು ಕಳುಹಿಸುತ್ತಿದ್ದಾರೆ.

ನವೆಂಬರ್‌ನಿಂದ ಜೊತೆಗಿದ್ದು ಮನೆಗಳಾಂತಾಗಿದ್ದ ಟ್ಯ್ರಾಲಿಗಳ ಜಾಗದಲ್ಲಿ ರೈತರು ಈಗ ಬಿದಿರಿನ, ಹುಲ್ಲಿನ ಶೆಡ್‌ಗಳನ್ನು ನಿರ್ಮಿಸುತ್ತಿದ್ದಾರೆ. ಸುಡುವ ಬಿಸಿಲಿನಿಂದ ಕಾಪಾಡಲು ಈ ಶೆಡ್‌ಗಳು ಸಹಕಾರಿಯಾಗಿವೆ. ಈ ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿರುತ್ತವೆ. ಜೊತೆಗೆ ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಪಂಜಾಬ್‌ನ ರೂಪರ್‌ ಜಿಲ್ಲೆಯ ಬೆಹ್ರಾಂಪುರ ಗ್ರಾಮದ ರೈತರು ಸಿಂಘು ಗಡಿಯಲ್ಲಿ ಎರಡು ವಾರದ ಹಿಂದೆಯೇ ಒಣಹುಲ್ಲಿನ ಚಾವಣಿ, ಹೂಕುಂಡಗಳು, ಕರ್ಟನ್‌ಗಳು ಹಾಗೂ ಭಗತ್‌ಸಿಂಗ್‌ನ ಫೋಟೊ ಇರುವ ಗುಡಿಸಲನ್ನು ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿದ ಅದೇ ಗ್ರಾಮದ ಗುರ್ಮೀತ್‌ ಸಿಂಗ್‌, ‘ನಾವು ತಂದಿದ್ದರಲ್ಲಿ ಎರಡು ಟ್ರ್ಯಾಲಿಗಳನ್ನು ಸುಗ್ಗಿಗಾಗಿ ಹಳ್ಳಿಗೆ ಕಳಿಸಿದ್ದೇವೆ. ಈಗ ನಿರ್ಮಿಸಿರುವ ಗುಡಿಸಲು ತಣ್ಣಗಿದ್ದು, ಕಬ್ಬಿಣ ಮತ್ತು ಟಾರ್ಪಲಿನ್‌ನಿಂದ ಉಂಟಾಗುತ್ತಿದ್ದ ಹಬೆ ಈಗಿಲ್ಲ ಎಂದಿದ್ದಾರೆ.

‘ಗೋದಿ ಕೊಯ್ಲಿನ ಕಾರಣಕ್ಕೆ ಪ್ರತಿಭಟನಾ ಗಡಿಗಳಲ್ಲಿರುವವರ ಸಂಖ್ಯೆ ಕಡಿಮೆಯಿದ್ದು, ಸುಗ್ಗಿಯ ನಂತರ ರೈತರೆಲ್ಲರೂ ಮತ್ತೆ ಸೇರಲಿದ್ದಾರೆ. ಪ್ರಸ್ತುತ ಪಂಜಾಬಿನ ಪ್ರತಿ ಗ್ರಾಮದಿಂದ 10 ಜನ ರೈತರು ಪ್ರತಿಭಟನೆಯಲ್ಲಿದ್ದಾರೆ’ ಎಂದು ಲೂಧಿಯಾನ ಜಿಲ್ಲೆ ಜತನ ಗ್ರಾಮದ ರಾಜ್ವಿಂದರ್‌ ಸಿಂಗ್‌ ತಿಳಿಸಿದರು.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

‘ಪ್ರತಿಭಟನೆ ಆರಂಭದಿಂದಲೂ ಹಳ್ಳಿಗೆ 20-30 ಜನ ರೈತರು ಈ ಹೋರಾಟಕ್ಕೆ ಬಂದು ಒಂದು ವಾರದಿಂದ ಹತ್ತು ದಿನಗಳವರೆಗೆ ಇಲ್ಲಿಗೆ ಬಂದಿರುತ್ತಿದ್ದರು. ನಾವು ಇದೇ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದೇವೆ. ಈಗ ಸುಗ್ಗಿಯ ಕಾರಣದಿಂದ ಜನರ ಸಂಖ್ಯೆ ಕಡಿಮೆ ಇದೆ ಅಷ್ಟೆ. ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಈ ಹೋರಾಟ ನಿಲ್ಲಿಸುವ ಮಾತೇ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ವಿಂದರ್‌ ಸೇರಿದಂತೆ ಮೂರು ಜನರು ರೈತ ಹೋರಾಟ ಶುರುವಾದಂದಿನಿಂದ ಗಡಿಗಳಲ್ಲಿಯೇ ಇದ್ದು ಹೋರಾಟದ ಆಗು-ಹೋಗುಗಳನ್ನು ನೋಡಿಕೊಳ್ಳುತ್ತಿರುವುದರಿಂದ ಅವರ ಹೊಲದ ಸುಗ್ಗಿಯನ್ನು ಗ್ರಾಮದ ರೈತರೇ ನೋಡಿಕೊಳ್ಳುವುದಾಗಿ ಗ್ರಾಮದ ಸರ್‌ಪಂಚ್‌ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...