Homeಚಳವಳಿರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ರೈತ ಹೋರಾಟ: ಸುಗ್ಗಿಗೆ ಹೊರಟ ಟ್ಯ್ರಾಲಿಗಳು, ನಿರ್ಮಾಣಗೊಂಡ ಹುಲ್ಲಿನ ಗುಡಿಸಲುಗಳು

ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿದ್ದು, ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

- Advertisement -
- Advertisement -

ರೈತ ವಿರೋಧಿ, ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದಾಗಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧಗೊಳಿಸಬೇಕು ಎಂದು ದೆಹಲಿಯ ನಾಲ್ಕು ಗಡಿಗಳಲ್ಲಿ ಪಂಜಾಬ್‌, ಹರಿಯಾಣ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಐತಿಹಾಸಿಕ ರೈತ ಹೋರಾಟಕ್ಕೆ 130 ದಿನಗಳಾಗಿದೆ.

ವಿಶ್ವದ ಗಮನ ಸೆಳೆದಿರುವ ರೈತ ಹೋರಾಟದ ವಿಶೇಷತೆಗಳಲ್ಲಿ ಟ್ರ್ಯಾಲಿಗಳು ಕೂಡ ಒಂದು. ತಣ್ಣಗೆ ಕೊರೆಯುವ ದೆಹಲಿಯ ಚಳಿಯಿಂದ ರಕ್ಷಣೆ ಪಡೆಯಲು ರೈತರು ಟ್ಯ್ರಾಲಿಗಳನ್ನು ಆಶ್ರಯಿಸಿದ್ದರು. ಆದರೆ ಈಗ ಬಿರು ಬೇಸಿಗೆಯಿದೆ. ಟ್ಯ್ರಾಲಿಗಳಲ್ಲಿ ಇರುವುದು ನಿಜಕ್ಕೂ ಕಷ್ಟ. ಜೊತೆಗೆ ವರ್ಷವಿಡೀ ಬೆಳೆ ಬೆಳೆಯುವ ಪಂಜಾಬ್, ಹರಿಯಾಣದಲ್ಲಿ ಈಗ ಗೋದಿ ಕೊಯ್ಲಿನ ಸಮಯ. ಬಿತ್ತನೆ ಮುಗಿಸಿ ಟ್ರ್ಯಾಲಿಗಳೊಂದಿಗೆ ಬಂದಿದ್ದ ರೈತರು ಈಗ ಸುಗ್ಗಿ ಮಾಡಲು ಟ್ರ್ಯಾಲಿಗಳನ್ನು ತಮ್ಮ ಹಳ್ಳಿಗೆ ವಾಪಸ್ಸು ಕಳುಹಿಸುತ್ತಿದ್ದಾರೆ.

ನವೆಂಬರ್‌ನಿಂದ ಜೊತೆಗಿದ್ದು ಮನೆಗಳಾಂತಾಗಿದ್ದ ಟ್ಯ್ರಾಲಿಗಳ ಜಾಗದಲ್ಲಿ ರೈತರು ಈಗ ಬಿದಿರಿನ, ಹುಲ್ಲಿನ ಶೆಡ್‌ಗಳನ್ನು ನಿರ್ಮಿಸುತ್ತಿದ್ದಾರೆ. ಸುಡುವ ಬಿಸಿಲಿನಿಂದ ಕಾಪಾಡಲು ಈ ಶೆಡ್‌ಗಳು ಸಹಕಾರಿಯಾಗಿವೆ. ಈ ಬೇಸಿಗೆ ಕಾಲಕ್ಕೆ ಟ್ಯ್ರಾಲಿಗಳಿಗಿಂತ ಈ ಶೆಡ್‌ಗಳೇ ಹೆಚ್ಚು ತಂಪಾಗಿರುತ್ತವೆ. ಜೊತೆಗೆ ಈಗಾಗಲೇ ನಿರ್ಮಾಣಗೊಂಡಿರುವ ಹಲವು ಶೆಡ್‌ಗಳಲ್ಲಿ, ಎಸಿ, ಕೂಲರ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಪಂಜಾಬ್‌ನ ರೂಪರ್‌ ಜಿಲ್ಲೆಯ ಬೆಹ್ರಾಂಪುರ ಗ್ರಾಮದ ರೈತರು ಸಿಂಘು ಗಡಿಯಲ್ಲಿ ಎರಡು ವಾರದ ಹಿಂದೆಯೇ ಒಣಹುಲ್ಲಿನ ಚಾವಣಿ, ಹೂಕುಂಡಗಳು, ಕರ್ಟನ್‌ಗಳು ಹಾಗೂ ಭಗತ್‌ಸಿಂಗ್‌ನ ಫೋಟೊ ಇರುವ ಗುಡಿಸಲನ್ನು ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿದ ಅದೇ ಗ್ರಾಮದ ಗುರ್ಮೀತ್‌ ಸಿಂಗ್‌, ‘ನಾವು ತಂದಿದ್ದರಲ್ಲಿ ಎರಡು ಟ್ರ್ಯಾಲಿಗಳನ್ನು ಸುಗ್ಗಿಗಾಗಿ ಹಳ್ಳಿಗೆ ಕಳಿಸಿದ್ದೇವೆ. ಈಗ ನಿರ್ಮಿಸಿರುವ ಗುಡಿಸಲು ತಣ್ಣಗಿದ್ದು, ಕಬ್ಬಿಣ ಮತ್ತು ಟಾರ್ಪಲಿನ್‌ನಿಂದ ಉಂಟಾಗುತ್ತಿದ್ದ ಹಬೆ ಈಗಿಲ್ಲ ಎಂದಿದ್ದಾರೆ.

‘ಗೋದಿ ಕೊಯ್ಲಿನ ಕಾರಣಕ್ಕೆ ಪ್ರತಿಭಟನಾ ಗಡಿಗಳಲ್ಲಿರುವವರ ಸಂಖ್ಯೆ ಕಡಿಮೆಯಿದ್ದು, ಸುಗ್ಗಿಯ ನಂತರ ರೈತರೆಲ್ಲರೂ ಮತ್ತೆ ಸೇರಲಿದ್ದಾರೆ. ಪ್ರಸ್ತುತ ಪಂಜಾಬಿನ ಪ್ರತಿ ಗ್ರಾಮದಿಂದ 10 ಜನ ರೈತರು ಪ್ರತಿಭಟನೆಯಲ್ಲಿದ್ದಾರೆ’ ಎಂದು ಲೂಧಿಯಾನ ಜಿಲ್ಲೆ ಜತನ ಗ್ರಾಮದ ರಾಜ್ವಿಂದರ್‌ ಸಿಂಗ್‌ ತಿಳಿಸಿದರು.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

‘ಪ್ರತಿಭಟನೆ ಆರಂಭದಿಂದಲೂ ಹಳ್ಳಿಗೆ 20-30 ಜನ ರೈತರು ಈ ಹೋರಾಟಕ್ಕೆ ಬಂದು ಒಂದು ವಾರದಿಂದ ಹತ್ತು ದಿನಗಳವರೆಗೆ ಇಲ್ಲಿಗೆ ಬಂದಿರುತ್ತಿದ್ದರು. ನಾವು ಇದೇ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದೇವೆ. ಈಗ ಸುಗ್ಗಿಯ ಕಾರಣದಿಂದ ಜನರ ಸಂಖ್ಯೆ ಕಡಿಮೆ ಇದೆ ಅಷ್ಟೆ. ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಈ ಹೋರಾಟ ನಿಲ್ಲಿಸುವ ಮಾತೇ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ವಿಂದರ್‌ ಸೇರಿದಂತೆ ಮೂರು ಜನರು ರೈತ ಹೋರಾಟ ಶುರುವಾದಂದಿನಿಂದ ಗಡಿಗಳಲ್ಲಿಯೇ ಇದ್ದು ಹೋರಾಟದ ಆಗು-ಹೋಗುಗಳನ್ನು ನೋಡಿಕೊಳ್ಳುತ್ತಿರುವುದರಿಂದ ಅವರ ಹೊಲದ ಸುಗ್ಗಿಯನ್ನು ಗ್ರಾಮದ ರೈತರೇ ನೋಡಿಕೊಳ್ಳುವುದಾಗಿ ಗ್ರಾಮದ ಸರ್‌ಪಂಚ್‌ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ: ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...