Homeಮುಖಪುಟಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

ಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

- Advertisement -
- Advertisement -

ಬಿಹಾರದ ಮಹಾಘಟಬಂಧನ್‌ನ ಅತಿದೊಡ್ಡ ಪಕ್ಷವಾಗಿರುವ ಆರ್‌ಜೆಡಿ ಶನಿವಾರ ಲೋಕಸಭೆ ಚುನಾವಣೆಗೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಕ್ಷಾ ಬಂಧನದಂದು ಬಡ ಕುಟುಂಬಗಳ ಸಹೋದರಿಯರಿಗೆ ವರ್ಷಕ್ಕೆ ₹1 ಲಕ್ಷ ಮತ್ತು ಪ್ರತಿ ವರ್ಷ 1 ಕೋಟಿ ಸರ್ಕಾರಿ ಉದ್ಯೋಗ ಸೃಷ್ಟಿ ಭರವಸೆ ನೀಡಿದೆ.

ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಆರ್‌ಜೆಡಿಯ ಚುನಾವಣಾ ಪ್ರಣಾಳಿಕೆ ‘ಪರಿವರ್ತನ್ ಪತ್ರ’ವನ್ನು ಬಿಡುಗಡೆ ಮಾಡಿ, “2024ರ ಚುನಾವಣೆಗೆ ಪಕ್ಷವು 24 ‘ಜನ ವಚನ’ಗಳನ್ನು ಘೋಷಣೆ ಮಾಡುತ್ತಿದೆ; ಪಕ್ಷವು ನಮ್ಮ ಬದ್ಧತೆಯನ್ನು ಪೂರೈಸುತ್ತದೆ” ಎಂದು ಹೇಳಿದರು.

“ಇಂಡಿಯಾ ಬಣವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಆರ್‌ಜೆಡಿ ದೇಶಾದ್ಯಂತ ನಿರುದ್ಯೋಗಿ ಯುವಕರಿಗೆ 1 ಕೋಟಿ ಸರ್ಕಾರಿ ಉದ್ಯೋಗಗಳನ್ನು ಪಡೆಯುವುದನ್ನು ಖಾತ್ರಿಪಡಿಸುತ್ತದೆ. ಈ ಪ್ರಕ್ರಿಯೆಯು ಈ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಾರಂಭವಾಗಲಿದೆ. ಅದು ‘ಬೆರೋಜ್‌ಗಾರಿ ಸೆ ಆಜಾದಿ’ಯಂತಿರುತ್ತದೆ” ಸುದ್ದಿಗಾರರಿಗೆ ತಿಳಿಸಿದರು.

“ನಿರುದ್ಯೋಗ ನಮ್ಮ ದೊಡ್ಡ ಶತ್ರು ಆದರೆ ಬಿಜೆಪಿ ನಾಯಕರು ಅದರ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಅವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು … ಆದರೆ ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ” ಎಂದು ಅವರು ಹೇಳಿದರು.

“ಈ ವರ್ಷದ ರಕ್ಷಾ ಬಂಧನದ ಸಂದರ್ಭದಲ್ಲಿ, ನಾವು ಬಡ ಕುಟುಂಬಗಳಿಗೆ ಸೇರಿದ ನಮ್ಮ ಸಹೋದರಿಯರಿಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿಗಳನ್ನು ನೀಡಲು ಪ್ರಾರಂಭಿಸುತ್ತೇವೆ” ಎಂದು ಆರ್‌ಜೆಡಿ ನಾಯಕ ಹೇಳಿದರು.

ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ₹500 ಕ್ಕೆ ನೀಡುವುದಾಗಿ ಭರವಸೆ ನೀಡಲಾಯಿತು.

“ಬಿಹಾರದಲ್ಲಿ ಉತ್ತಮ ಸಂಪರ್ಕಕ್ಕಾಗಿ, ನಾವು ಪೂರ್ಣಿಯಾ, ಭಾಗಲ್ಪುರ್, ಮುಜಾಫರ್‌ಪುರ, ಗೋಪಾಲ್‌ಗಂಜ್ ಮತ್ತು ರಕ್ಸಾಲ್‌ನಲ್ಲಿ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸುತ್ತೇವೆ. ಜೊತೆಗೆ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ₹1.60 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಅನ್ನು ಮಂಜೂರು ಮಾಡುತ್ತೇವೆ. ತಿಂಗಳಿಗೆ ಉಚಿತ ವಿದ್ಯುತ್ ನೀಡಲಾಗುವುದು, ಬಿಹಾರದ ಜನರು ಸಹ 200 ಯೂನಿಟ್ ಪಡೆಯುತ್ತಾರೆ” ಎಂದು ಹೇಳಿದರು.

ಕೇಂದ್ರದಲ್ಲಿ ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಸಶಸ್ತ್ರ ಪಡೆಗಳಲ್ಲಿ ಗುತ್ತಿಗೆ ಉದ್ಯೋಗದ ಅಗ್ನಿವೀರ್ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಭರಚಸೆ ನೀಡಿದ್ದಾರೆ.

ಇದನ್ನೂ ಓದಿ; ಹೇಮಂತ್ ಸೊರೆನ್ ಬಂಧನ ಖಂಡಿಸಿ ಪ್ರತಿಭಟಿಸಿದ ಆದಿವಾಸಿಗಳ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...