Homeರಾಷ್ಟ್ರೀಯ₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

- Advertisement -
- Advertisement -

ಟ್ವಿಟರ್‌‌ಗೆ ಪರ್ಯಾಯವಾಗಿ ರಚನೆಯಾಗಿದ್ದ ಭಾರತೀಯ ಮೂಲದ ‘ಕೂ’ ಅಪ್ಲಿಕೇಷನ್‌‌ ಆದಾಯ ಗಳಿಕೆಯ ವಿಚಾರದಲ್ಲಿ ಸುದ್ದಿಯಾಗಿದೆ. 2022ರ ಆರ್ಥಿಕ ವರ್ಷದಲ್ಲಿ 202 ಕೋಟಿ ರೂ.ಗಳನ್ನು ವೆಚ್ಚ ಮಾಡಿರುವ ‘ಕೂ’ ಅಪ್ಲಿಕೇಷನ್‌, ಕೇವಲ 14 ಲಕ್ಷ ರೂಗಳನ್ನು ಗಳಿಸಿದೆ ಎಂದು ವರದಿಯಾಗಿದೆ.

ಈ ಹಿಂದಿನ ಆರ್ಥಿಕ ವರ್ಷಗಳಿಗೆ ಹೋಲಿಸಿದರೆ 2022ರಲ್ಲಿ ‘ಕೂ’ ಅಪ್ಲಿಕೇಷನ್‌‌ನ ಒಟ್ಟಾರೆ ನಷ್ಟದಲ್ಲಿ ಸುಮಾರು 6 ಪಟ್ಟು ಏರಿಕೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಕಂಪನಿಯು 2021 ರಲ್ಲಿ 8 ಲಕ್ಷ ಆದಾಯ ಗಳಿಸಿತ್ತು. ಇದೀಗ 2022 ರಲ್ಲಿ 14 ಲಕ್ಷ ರೂ.ಗೆ ಏರಿಯೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕೂ’ ಪ್ಲಾಟ್‌ಫಾರ್ಮ್ ಅನ್ನು 2020 ರಲ್ಲಿ ಸ್ಥಾಪಿಸಲಾಗಿತ್ತು. ಈ ಅಪ್ಲಿಕೇಷನ್‌ ಬಳಕೆದಾರರಿಗೆ ಪಠ್ಯ, ಆಡಿಯೋ ಮತ್ತು ವೀಡಿಯೊಗಳ ಮೂಲಕ ಸಂವಹನ ನಡೆಸಲು ಅನುಮತಿಸುತ್ತದೆ. ಅಪ್ಲಿಕೇಶನ್ ಪ್ರಸ್ತುತ ಕೆಲವು ವಿದೇಶಿ ಭಾಷೆಗಳನ್ನು ಒಳಗೊಂಡಂತೆ 11 ಸ್ಥಳೀಯ ಭಾಷೆಗಳಲ್ಲಿ ಲಭ್ಯವಿದೆ.

ಕಳೆದ ವರ್ಷ ‘ಕೂ’ ಬ್ರೆಜಿಲ್‌ನಲ್ಲಿ ಪೋರ್ಚುಗೀಸ್ ಭಾಷೆಯಲ್ಲಿ ಕೂಡಾ ಪ್ರಾರಂಭವಾಗಿದೆ. ಅಂಡ್ರಾಯಿಡ್‌ ಮತ್ತು IOS ಆಪರೇಟಿಂಗ್ ಸಿಸ್ಟಂಗಳಲ್ಲಿ ಒಟ್ಟು ಸರಿಸುಮಾರು 6 ಕೋಟಿ ಜನರು ಈ ಅಪ್ಲಿಕೇಶನ್ ಅನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಅಪ್ಲಿಕೇಷನ್‌ನ ನಿರ್ವಹಣಾ ಆದಾಯವು ಕೇವಲ 14 ಲಕ್ಷವಿದ್ದು, ಕಂಪನಿಯು ಬಡ್ಡಿ ಮತ್ತು ಹೂಡಿಕೆಗಳ ಮೇಲಿನ ಲಾಭ ಮತ್ತು ಇತರ ಕಾರ್ಯಾಚರಣೆಯೇತರ ಆದಾಯದಿಂದ 4.74 ಕೋಟಿ ರೂಪಾಯಿಗಳನ್ನು ಗಳಿಸಿದ್ದು, 2022 ರಲ್ಲಿ ಅದರ ಒಟ್ಟಾರೆ ಆದಾಯವನ್ನು 4.88 ಕೋಟಿಯಾಗಿದೆ.

ಆದಾಗ್ಯೂ, ಜಾಹೀರಾತು ಮತ್ತು ಪ್ರಚಾರದ ಚಟುವಟಿಕೆಗಳು, ಉದ್ಯೋಗಿ ಪ್ರಯೋಜನಗಳು, ಕಾನೂನು ಮತ್ತು ವೃತ್ತಿಪರ ಶುಲ್ಕ, ಸಾಫ್ಟ್‌ವೇರ್, ಪರವಾನಗಿ, ಕ್ಲೌಡ್ ಸರ್ವರ್, ಅಪ್ಲಿಕೇಶನ್ ಎಂಬೆಡ್‌ಗಳು ಮತ್ತು ಇತರ ಸಂವಹನ-ಸಂಬಂಧಿತ ವೆಚ್ಚಗಳ ಮೊತ್ತ 202 ಕೋಟಿ ರೂ. ಆಗಿದೆ ಎಂದು ವರದಿ ಉಲ್ಲೇಖಿಸಿದೆ.

ಅಪ್ಲಿಕೇಷನ್ ಆರಂಭವಾದಾಗ ಇದನ್ನು ರಾಷ್ಟ್ರೀಯವಾದಿ ಟ್ವಿಟರ್‌ ಎಂದು ಕರೆಯಲಾಗಿತ್ತು. ಆದರೆ ಕಳದ ವರ್ಷದ ಅಕ್ಟೋಬರ್‌ನಲ್ಲಿ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದ್ದು, ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ ಎಂದು ಅದರ ಸಂಸ್ಥಾಪಕ ಹೇಳಿಕೊಂಡಿದ್ದರು.

https://mobile.twitter.com/Ravisutanjani/status/1613544678640717824

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...