Homeರಾಷ್ಟ್ರೀಯ₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

- Advertisement -
- Advertisement -

ಟ್ವಿಟರ್‌‌ಗೆ ಪರ್ಯಾಯವಾಗಿ ರಚನೆಯಾಗಿದ್ದ ಭಾರತೀಯ ಮೂಲದ ‘ಕೂ’ ಅಪ್ಲಿಕೇಷನ್‌‌ ಆದಾಯ ಗಳಿಕೆಯ ವಿಚಾರದಲ್ಲಿ ಸುದ್ದಿಯಾಗಿದೆ. 2022ರ ಆರ್ಥಿಕ ವರ್ಷದಲ್ಲಿ 202 ಕೋಟಿ ರೂ.ಗಳನ್ನು ವೆಚ್ಚ ಮಾಡಿರುವ ‘ಕೂ’ ಅಪ್ಲಿಕೇಷನ್‌, ಕೇವಲ 14 ಲಕ್ಷ ರೂಗಳನ್ನು ಗಳಿಸಿದೆ ಎಂದು ವರದಿಯಾಗಿದೆ.

ಈ ಹಿಂದಿನ ಆರ್ಥಿಕ ವರ್ಷಗಳಿಗೆ ಹೋಲಿಸಿದರೆ 2022ರಲ್ಲಿ ‘ಕೂ’ ಅಪ್ಲಿಕೇಷನ್‌‌ನ ಒಟ್ಟಾರೆ ನಷ್ಟದಲ್ಲಿ ಸುಮಾರು 6 ಪಟ್ಟು ಏರಿಕೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಕಂಪನಿಯು 2021 ರಲ್ಲಿ 8 ಲಕ್ಷ ಆದಾಯ ಗಳಿಸಿತ್ತು. ಇದೀಗ 2022 ರಲ್ಲಿ 14 ಲಕ್ಷ ರೂ.ಗೆ ಏರಿಯೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕೂ’ ಪ್ಲಾಟ್‌ಫಾರ್ಮ್ ಅನ್ನು 2020 ರಲ್ಲಿ ಸ್ಥಾಪಿಸಲಾಗಿತ್ತು. ಈ ಅಪ್ಲಿಕೇಷನ್‌ ಬಳಕೆದಾರರಿಗೆ ಪಠ್ಯ, ಆಡಿಯೋ ಮತ್ತು ವೀಡಿಯೊಗಳ ಮೂಲಕ ಸಂವಹನ ನಡೆಸಲು ಅನುಮತಿಸುತ್ತದೆ. ಅಪ್ಲಿಕೇಶನ್ ಪ್ರಸ್ತುತ ಕೆಲವು ವಿದೇಶಿ ಭಾಷೆಗಳನ್ನು ಒಳಗೊಂಡಂತೆ 11 ಸ್ಥಳೀಯ ಭಾಷೆಗಳಲ್ಲಿ ಲಭ್ಯವಿದೆ.

ಕಳೆದ ವರ್ಷ ‘ಕೂ’ ಬ್ರೆಜಿಲ್‌ನಲ್ಲಿ ಪೋರ್ಚುಗೀಸ್ ಭಾಷೆಯಲ್ಲಿ ಕೂಡಾ ಪ್ರಾರಂಭವಾಗಿದೆ. ಅಂಡ್ರಾಯಿಡ್‌ ಮತ್ತು IOS ಆಪರೇಟಿಂಗ್ ಸಿಸ್ಟಂಗಳಲ್ಲಿ ಒಟ್ಟು ಸರಿಸುಮಾರು 6 ಕೋಟಿ ಜನರು ಈ ಅಪ್ಲಿಕೇಶನ್ ಅನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಅಪ್ಲಿಕೇಷನ್‌ನ ನಿರ್ವಹಣಾ ಆದಾಯವು ಕೇವಲ 14 ಲಕ್ಷವಿದ್ದು, ಕಂಪನಿಯು ಬಡ್ಡಿ ಮತ್ತು ಹೂಡಿಕೆಗಳ ಮೇಲಿನ ಲಾಭ ಮತ್ತು ಇತರ ಕಾರ್ಯಾಚರಣೆಯೇತರ ಆದಾಯದಿಂದ 4.74 ಕೋಟಿ ರೂಪಾಯಿಗಳನ್ನು ಗಳಿಸಿದ್ದು, 2022 ರಲ್ಲಿ ಅದರ ಒಟ್ಟಾರೆ ಆದಾಯವನ್ನು 4.88 ಕೋಟಿಯಾಗಿದೆ.

ಆದಾಗ್ಯೂ, ಜಾಹೀರಾತು ಮತ್ತು ಪ್ರಚಾರದ ಚಟುವಟಿಕೆಗಳು, ಉದ್ಯೋಗಿ ಪ್ರಯೋಜನಗಳು, ಕಾನೂನು ಮತ್ತು ವೃತ್ತಿಪರ ಶುಲ್ಕ, ಸಾಫ್ಟ್‌ವೇರ್, ಪರವಾನಗಿ, ಕ್ಲೌಡ್ ಸರ್ವರ್, ಅಪ್ಲಿಕೇಶನ್ ಎಂಬೆಡ್‌ಗಳು ಮತ್ತು ಇತರ ಸಂವಹನ-ಸಂಬಂಧಿತ ವೆಚ್ಚಗಳ ಮೊತ್ತ 202 ಕೋಟಿ ರೂ. ಆಗಿದೆ ಎಂದು ವರದಿ ಉಲ್ಲೇಖಿಸಿದೆ.

ಅಪ್ಲಿಕೇಷನ್ ಆರಂಭವಾದಾಗ ಇದನ್ನು ರಾಷ್ಟ್ರೀಯವಾದಿ ಟ್ವಿಟರ್‌ ಎಂದು ಕರೆಯಲಾಗಿತ್ತು. ಆದರೆ ಕಳದ ವರ್ಷದ ಅಕ್ಟೋಬರ್‌ನಲ್ಲಿ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದ್ದು, ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ ಎಂದು ಅದರ ಸಂಸ್ಥಾಪಕ ಹೇಳಿಕೊಂಡಿದ್ದರು.

https://mobile.twitter.com/Ravisutanjani/status/1613544678640717824

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...