Homeರಾಷ್ಟ್ರೀಯ₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

- Advertisement -
- Advertisement -

ಟ್ವಿಟರ್‌‌ಗೆ ಪರ್ಯಾಯವಾಗಿ ರಚನೆಯಾಗಿದ್ದ ಭಾರತೀಯ ಮೂಲದ ‘ಕೂ’ ಅಪ್ಲಿಕೇಷನ್‌‌ ಆದಾಯ ಗಳಿಕೆಯ ವಿಚಾರದಲ್ಲಿ ಸುದ್ದಿಯಾಗಿದೆ. 2022ರ ಆರ್ಥಿಕ ವರ್ಷದಲ್ಲಿ 202 ಕೋಟಿ ರೂ.ಗಳನ್ನು ವೆಚ್ಚ ಮಾಡಿರುವ ‘ಕೂ’ ಅಪ್ಲಿಕೇಷನ್‌, ಕೇವಲ 14 ಲಕ್ಷ ರೂಗಳನ್ನು ಗಳಿಸಿದೆ ಎಂದು ವರದಿಯಾಗಿದೆ.

ಈ ಹಿಂದಿನ ಆರ್ಥಿಕ ವರ್ಷಗಳಿಗೆ ಹೋಲಿಸಿದರೆ 2022ರಲ್ಲಿ ‘ಕೂ’ ಅಪ್ಲಿಕೇಷನ್‌‌ನ ಒಟ್ಟಾರೆ ನಷ್ಟದಲ್ಲಿ ಸುಮಾರು 6 ಪಟ್ಟು ಏರಿಕೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಕಂಪನಿಯು 2021 ರಲ್ಲಿ 8 ಲಕ್ಷ ಆದಾಯ ಗಳಿಸಿತ್ತು. ಇದೀಗ 2022 ರಲ್ಲಿ 14 ಲಕ್ಷ ರೂ.ಗೆ ಏರಿಯೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕೂ’ ಪ್ಲಾಟ್‌ಫಾರ್ಮ್ ಅನ್ನು 2020 ರಲ್ಲಿ ಸ್ಥಾಪಿಸಲಾಗಿತ್ತು. ಈ ಅಪ್ಲಿಕೇಷನ್‌ ಬಳಕೆದಾರರಿಗೆ ಪಠ್ಯ, ಆಡಿಯೋ ಮತ್ತು ವೀಡಿಯೊಗಳ ಮೂಲಕ ಸಂವಹನ ನಡೆಸಲು ಅನುಮತಿಸುತ್ತದೆ. ಅಪ್ಲಿಕೇಶನ್ ಪ್ರಸ್ತುತ ಕೆಲವು ವಿದೇಶಿ ಭಾಷೆಗಳನ್ನು ಒಳಗೊಂಡಂತೆ 11 ಸ್ಥಳೀಯ ಭಾಷೆಗಳಲ್ಲಿ ಲಭ್ಯವಿದೆ.

ಕಳೆದ ವರ್ಷ ‘ಕೂ’ ಬ್ರೆಜಿಲ್‌ನಲ್ಲಿ ಪೋರ್ಚುಗೀಸ್ ಭಾಷೆಯಲ್ಲಿ ಕೂಡಾ ಪ್ರಾರಂಭವಾಗಿದೆ. ಅಂಡ್ರಾಯಿಡ್‌ ಮತ್ತು IOS ಆಪರೇಟಿಂಗ್ ಸಿಸ್ಟಂಗಳಲ್ಲಿ ಒಟ್ಟು ಸರಿಸುಮಾರು 6 ಕೋಟಿ ಜನರು ಈ ಅಪ್ಲಿಕೇಶನ್ ಅನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಅಪ್ಲಿಕೇಷನ್‌ನ ನಿರ್ವಹಣಾ ಆದಾಯವು ಕೇವಲ 14 ಲಕ್ಷವಿದ್ದು, ಕಂಪನಿಯು ಬಡ್ಡಿ ಮತ್ತು ಹೂಡಿಕೆಗಳ ಮೇಲಿನ ಲಾಭ ಮತ್ತು ಇತರ ಕಾರ್ಯಾಚರಣೆಯೇತರ ಆದಾಯದಿಂದ 4.74 ಕೋಟಿ ರೂಪಾಯಿಗಳನ್ನು ಗಳಿಸಿದ್ದು, 2022 ರಲ್ಲಿ ಅದರ ಒಟ್ಟಾರೆ ಆದಾಯವನ್ನು 4.88 ಕೋಟಿಯಾಗಿದೆ.

ಆದಾಗ್ಯೂ, ಜಾಹೀರಾತು ಮತ್ತು ಪ್ರಚಾರದ ಚಟುವಟಿಕೆಗಳು, ಉದ್ಯೋಗಿ ಪ್ರಯೋಜನಗಳು, ಕಾನೂನು ಮತ್ತು ವೃತ್ತಿಪರ ಶುಲ್ಕ, ಸಾಫ್ಟ್‌ವೇರ್, ಪರವಾನಗಿ, ಕ್ಲೌಡ್ ಸರ್ವರ್, ಅಪ್ಲಿಕೇಶನ್ ಎಂಬೆಡ್‌ಗಳು ಮತ್ತು ಇತರ ಸಂವಹನ-ಸಂಬಂಧಿತ ವೆಚ್ಚಗಳ ಮೊತ್ತ 202 ಕೋಟಿ ರೂ. ಆಗಿದೆ ಎಂದು ವರದಿ ಉಲ್ಲೇಖಿಸಿದೆ.

ಅಪ್ಲಿಕೇಷನ್ ಆರಂಭವಾದಾಗ ಇದನ್ನು ರಾಷ್ಟ್ರೀಯವಾದಿ ಟ್ವಿಟರ್‌ ಎಂದು ಕರೆಯಲಾಗಿತ್ತು. ಆದರೆ ಕಳದ ವರ್ಷದ ಅಕ್ಟೋಬರ್‌ನಲ್ಲಿ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದ್ದು, ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ ಎಂದು ಅದರ ಸಂಸ್ಥಾಪಕ ಹೇಳಿಕೊಂಡಿದ್ದರು.

https://mobile.twitter.com/Ravisutanjani/status/1613544678640717824

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...