Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...