Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...