Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

0
ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ....