Homeಮುಖಪುಟಮೂರನೇ ಹೆಣ್ಣು ಮಗು ಹೆತ್ತ ಮಹಿಳೆಯರಿಗೆ ₹50 ಸಾವಿರ; ಗಂಡು ಮಗುವಿಗೆ ಹಸು ಉಡುಗೊರೆ; ಆಂಧ್ರ...

ಮೂರನೇ ಹೆಣ್ಣು ಮಗು ಹೆತ್ತ ಮಹಿಳೆಯರಿಗೆ ₹50 ಸಾವಿರ; ಗಂಡು ಮಗುವಿಗೆ ಹಸು ಉಡುಗೊರೆ; ಆಂಧ್ರ ಸಂಸದರ ಭರವಸೆ

- Advertisement -
- Advertisement -

ತೆಲುಗು ದೇಶಂ ಪಕ್ಷದ ವಿಜಯನಗರಂ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು ಮೂರನೇ ಮಗುವನ್ನು ಹೆತ್ತ ಮಹಿಳೆಯರಿಗೆ ಪ್ರೋತ್ಸಾಹ ಧನ ಘೋಷಿಸಿದ್ದಾರೆ; ಹೆಣ್ಣು ಮಗುವಿಗೆ ₹50,000 ಮತ್ತು ಗಂಡು ಮಗುವಿಗೆ ಜಜ್ಮ ನೀಡಿದರೆ ಹಸು ಎಂದು ಹೇಳಿದ್ದಾರೆ. ಅಪ್ಪಲನಾಯ್ಡು ಅವರ ಈ ಕೊಡುಗೆ ರಾಜ್ಯಾದ್ಯಂತ ಗಮನ ಸೆಳೆದಿದ್ದು, ಅನೇಕರು ಈ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಹೇಳಿಕೆಗಳನ್ನು ಅನುಸರಿಸಿ ಈ ಘೋಷಣೆ ಮಾಡಲಾಗಿದೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಯ್ಡು ಅವರು ಮಕ್ಕಳ ಸಂಖ್ಯೆಯನ್ನು ಲೆಕ್ಕಿಸದೆ ಎಲ್ಲ ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆ ನೀಡಲಾಗುವುದು ಎಂದು ಘೋಷಿಸಿದರು.

“ಎಲ್ಲ ಮಹಿಳೆಯರು ಸಾಧ್ಯವಾದಷ್ಟು ಮಕ್ಕಳನ್ನು ಹೊಂದಬೇಕು’ ಎಂದು ಮುಖ್ಯಮಂತ್ರಿ ಹೇಳಿದರು. ಎಲ್ಲ ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆ ಅನ್ವಯಿಸುತ್ತದೆಯೇ ಎಂದು ಕಾನ್‌ಸ್ಟೆಬಲ್ ಒಬ್ಬರು ಶುಕ್ರವಾರ ಗೃಹ ಸಚಿವರನ್ನು ಕೇಳಿದರು. ಮೊದಲ ಎರಡು ಹೆರಿಗೆಗಳಿಗೆ ಮಾತ್ರವಲ್ಲದೆ ಎಲ್ಲ ಹೆರಿಗೆಗಳಿಗೂ ಹೆರಿಗೆ ರಜೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಶನಿವಾರ ಸ್ಪಷ್ಟಪಡಿಸಿದರು.

ಇಲ್ಲಿಯವರೆಗೆ, ಮಹಿಳಾ ಉದ್ಯೋಗಿಗಳು ಎರಡು ಹೆರಿಗೆಗಳಿಗೆ ಮಾತ್ರ ಪೂರ್ಣ ವೇತನದೊಂದಿಗೆ ಆರು ತಿಂಗಳ ಹೆರಿಗೆ ರಜೆಯನ್ನು ಪಡೆಯುತ್ತಿದ್ದರು. ಈ ಪ್ರಯೋಜನವು ಈಗ ಎಲ್ಲ ಹೆರಿಗೆಗಳಿಗೆ ಅನ್ವಯಿಸುತ್ತದೆ ಎಂದು ಮುಖ್ಯಮಂತ್ರಿ ಘೋಷಿಸಿದರು.

ಇದರ ನಂತರ, ವಿಜಯನಗರಂ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಮೂರನೇ ಮಗುವನ್ನು ಹೊಂದಿರುವವರಿಗೆ ಪ್ರೋತ್ಸಾಹ ಧನವನ್ನು ಘೋಷಿಸಿದರು. ಅಂತರರಾಷ್ಟ್ರೀಯ ಮಹಿಳಾ ದಿನದಂದು ವಿಜಯನಗರಂನ ರಾಜೀವ್ ಸ್ಪೋರ್ಟ್ಸ್ ಕಾಂಪೌಂಡ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಒಬ್ಬ ಮಹಿಳೆ ಮೂರನೇ ಮಗುವಿಗೆ, ಅಂದರೆ ಹೆಣ್ಣು ಮಗುವಿಗೆ ಜನ್ಮ ನೀಡಿದರೆ, ನನ್ನ ಸಂಬಳದಿಂದ ಆಕೆಗೆ ₹50,000 ನೀಡಲಾಗುತ್ತದೆ. ಗಂಡು ಮಗುವಾಗಿದ್ದರೆ, ಆಕೆಗೆ ಹಸುವನ್ನು ಹಸ್ತಾಂತರಿಸಲಾಗುತ್ತದೆ” ಎಂದು ಹೇಳಿದರು.

ಈ ಘೋಷಣೆಯು ಸಾಮಾಜಿಕ ಮಾಧ್ಯಮದಲ್ಲಿ, ವಿಶೇಷವಾಗಿ ವಾಟ್ಸಾಪ್‌ನಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ರಣಸ್ಥಳಂ ಮಂಡಲದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಅವರ ಬೆಂಬಲಿಗರು ಇದನ್ನು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

ಎನ್‌ಇಪಿ-ಕ್ಷೇತ್ರ ಪುನರ್‌ವಿಂಗಡಣೆ ನಿರ್ಣಯದ ಕುರಿತು ಸಭೆ ನಡೆಸಿದ ಡಿಎಂಕೆ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...