Homeಫ್ಯಾಕ್ಟ್‌ಚೆಕ್Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ದಿನಾಂಕ ಸಮೀಪಿಸುತ್ತಿದೆ. ಜನವರಿ 22, 2024ರಂದು ಈ ಕಾರ್ಯಕ್ರಮ ನಡೆಯಲಿದೆ. ಈ ನಡುವೆ 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಪ್ರಿಂಟ್ ಮಾಡಿದೆ ಎಂಬ ಸುದ್ದಿ ಹಬ್ಬಿದೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ‘ಮಹಾತ್ಮ ಗಾಂಧಿಯ ಫೋಟೋ ಬದಲು ರಾಮನ ಫೋಟೋ ಮತ್ತು ಕೆಂಪು ಕೋಟೆಯ ಫೋಟೋ ಬದಲು ರಾಮ ಮಂದಿರ ಫೋಟೋ’ ಇರುವ 500 ರೂಪಾಯಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಳ್ಳಲಾಗ್ತಿದೆ.

ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗ್ತಿರುವ ಫೋಟೋ

‘Manoj Dhareshwar’ (ಮನೋಜ್ ಧರೇಶ್ವರ್) ಎಂಬ ಫೇಸ್‌ಬುಕ್ ಬಳಕೆದಾರ ಜನವರಿ 16,2024ರಂದು ತಮ್ಮ ಖಾತೆಯಲ್ಲಿ ಈ ಫೋಟೋ ಮತ್ತು ಸುದ್ದಿ ಹಂಚಿಕೊಂಡಿದ್ದರು.

ಮತ್ತೋರ್ವ ಫೇಸ್‌ಬುಕ್ ಬಳಕೆದಾರ ‘DrxRJ Gupta’ಎಂಬವರು ಕೂಡ ಜನವರಿ 8,2024ರಂದು ಇದೇ ರೀತಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಂಡು “ಮೋದಿ ಸರ್ಕಾರದ ನಿರ್ಧಾರ, ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲು ನಿರ್ಧರಿಸಲಾಗಿದೆ” ಎಂದು ಬರೆದುಕೊಂಡಿದ್ದರು.

‘karatagi_troll_market’_ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 10ರಂದು 500 ರೂಪಾಯಿ ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲಾಗಿದೆ ಎಂದು ಫೋಟೋ ಹಂಚಿಕೊಳ್ಳಲಾಗಿತ್ತು. ಇದಕ್ಕೆ ಹಲವರು “ಸರಿಯಾದ ನಿರ್ಧಾರ, ಜೈಶ್ರೀರಾಂ” ಎಂಬ ಕಾಮೆಂಟ್‌ಗಳನ್ನು ಹಾಕಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದೆ. ಈ ವೇಳೆ ಕರೆನ್ಸಿ ನೋಟುಗಳಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ಪ್ರಿಂಟ್ ಮಾಡುವ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಆಗಲಿ, ಭಾರತ ಸರ್ಕಾರವಾಗಲಿ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಥವಾ ಇತರ ಅಧಿಕಾರಿಗಳು ಈ ಕುರಿತು ಯಾವುದೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿಯ ಕುರಿತು ನಾವು ಆರ್‌ಬಿಐ ವಕ್ತಾರ ಯೋಗಿಶ್ ದಯಾಳ್ ಅವರನ್ನು ಮಾತನಾಡಿಸಿದಾಗ ಅವರು, “ಈ ಬಗ್ಗೆ ಆರ್‌ಬಿಐಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾಗಿ ಖ್ಯಾತ ಸುಳ್ಳು ಸುದ್ದಿ ಪತ್ತೆ ವೆಬ್‌ಸೈಟ್ Boom (ಬೂಮ್) ವರದಿ ಮಾಡಿದೆ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಇದುವರೆಗೆ (ಜನವರಿ16,2024) 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ಮಹಾತ್ಮ ಗಾಂಧಿ ಮತ್ತು ಕೆಂಪುಕೋಟೆಯ ಫೋಟೋಗಳು ಹಾಗೆಯೇ ಇದೆ. ಯಾವುದೇ ಬದಲಾವಣೆ ಆಗಿಲ್ಲ. ಈ ಕುರಿತ ಸ್ಕ್ರೀನ್ ಶಾಟ್‌ಗಳು ಇಲ್ಲಿದೆ.

ಲಭ್ಯವಿರುವ ಖಚಿತ ಮೂಲಗಳನ್ನು ಮತ್ತು ಮಾಹಿತಿಗಳನ್ನು ನಾನು ಗೌರಿ.ಕಾಂ ಪರಿಶೀಲಿಸಿ ನೋಡಿದಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿರುವ ರಾಮ ಮತ್ತು ರಾಮ ಮಂದಿರ ಫೋಟೋಗಳಿರುವ ಕರೆನ್ಸಿ ನೋಟಿನ ಫೋಟೋ ಮಾರ್ಪ್‌ ಮಾಡಿರುವಂತದ್ದು, ನಕಲಿ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...