Homeಫ್ಯಾಕ್ಟ್‌ಚೆಕ್Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ದಿನಾಂಕ ಸಮೀಪಿಸುತ್ತಿದೆ. ಜನವರಿ 22, 2024ರಂದು ಈ ಕಾರ್ಯಕ್ರಮ ನಡೆಯಲಿದೆ. ಈ ನಡುವೆ 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಪ್ರಿಂಟ್ ಮಾಡಿದೆ ಎಂಬ ಸುದ್ದಿ ಹಬ್ಬಿದೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ‘ಮಹಾತ್ಮ ಗಾಂಧಿಯ ಫೋಟೋ ಬದಲು ರಾಮನ ಫೋಟೋ ಮತ್ತು ಕೆಂಪು ಕೋಟೆಯ ಫೋಟೋ ಬದಲು ರಾಮ ಮಂದಿರ ಫೋಟೋ’ ಇರುವ 500 ರೂಪಾಯಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಳ್ಳಲಾಗ್ತಿದೆ.

ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗ್ತಿರುವ ಫೋಟೋ

‘Manoj Dhareshwar’ (ಮನೋಜ್ ಧರೇಶ್ವರ್) ಎಂಬ ಫೇಸ್‌ಬುಕ್ ಬಳಕೆದಾರ ಜನವರಿ 16,2024ರಂದು ತಮ್ಮ ಖಾತೆಯಲ್ಲಿ ಈ ಫೋಟೋ ಮತ್ತು ಸುದ್ದಿ ಹಂಚಿಕೊಂಡಿದ್ದರು.

ಮತ್ತೋರ್ವ ಫೇಸ್‌ಬುಕ್ ಬಳಕೆದಾರ ‘DrxRJ Gupta’ಎಂಬವರು ಕೂಡ ಜನವರಿ 8,2024ರಂದು ಇದೇ ರೀತಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಂಡು “ಮೋದಿ ಸರ್ಕಾರದ ನಿರ್ಧಾರ, ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲು ನಿರ್ಧರಿಸಲಾಗಿದೆ” ಎಂದು ಬರೆದುಕೊಂಡಿದ್ದರು.

‘karatagi_troll_market’_ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 10ರಂದು 500 ರೂಪಾಯಿ ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲಾಗಿದೆ ಎಂದು ಫೋಟೋ ಹಂಚಿಕೊಳ್ಳಲಾಗಿತ್ತು. ಇದಕ್ಕೆ ಹಲವರು “ಸರಿಯಾದ ನಿರ್ಧಾರ, ಜೈಶ್ರೀರಾಂ” ಎಂಬ ಕಾಮೆಂಟ್‌ಗಳನ್ನು ಹಾಕಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದೆ. ಈ ವೇಳೆ ಕರೆನ್ಸಿ ನೋಟುಗಳಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ಪ್ರಿಂಟ್ ಮಾಡುವ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಆಗಲಿ, ಭಾರತ ಸರ್ಕಾರವಾಗಲಿ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಥವಾ ಇತರ ಅಧಿಕಾರಿಗಳು ಈ ಕುರಿತು ಯಾವುದೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿಯ ಕುರಿತು ನಾವು ಆರ್‌ಬಿಐ ವಕ್ತಾರ ಯೋಗಿಶ್ ದಯಾಳ್ ಅವರನ್ನು ಮಾತನಾಡಿಸಿದಾಗ ಅವರು, “ಈ ಬಗ್ಗೆ ಆರ್‌ಬಿಐಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾಗಿ ಖ್ಯಾತ ಸುಳ್ಳು ಸುದ್ದಿ ಪತ್ತೆ ವೆಬ್‌ಸೈಟ್ Boom (ಬೂಮ್) ವರದಿ ಮಾಡಿದೆ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಇದುವರೆಗೆ (ಜನವರಿ16,2024) 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ಮಹಾತ್ಮ ಗಾಂಧಿ ಮತ್ತು ಕೆಂಪುಕೋಟೆಯ ಫೋಟೋಗಳು ಹಾಗೆಯೇ ಇದೆ. ಯಾವುದೇ ಬದಲಾವಣೆ ಆಗಿಲ್ಲ. ಈ ಕುರಿತ ಸ್ಕ್ರೀನ್ ಶಾಟ್‌ಗಳು ಇಲ್ಲಿದೆ.

ಲಭ್ಯವಿರುವ ಖಚಿತ ಮೂಲಗಳನ್ನು ಮತ್ತು ಮಾಹಿತಿಗಳನ್ನು ನಾನು ಗೌರಿ.ಕಾಂ ಪರಿಶೀಲಿಸಿ ನೋಡಿದಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿರುವ ರಾಮ ಮತ್ತು ರಾಮ ಮಂದಿರ ಫೋಟೋಗಳಿರುವ ಕರೆನ್ಸಿ ನೋಟಿನ ಫೋಟೋ ಮಾರ್ಪ್‌ ಮಾಡಿರುವಂತದ್ದು, ನಕಲಿ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...