Homeಫ್ಯಾಕ್ಟ್‌ಚೆಕ್Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ದಿನಾಂಕ ಸಮೀಪಿಸುತ್ತಿದೆ. ಜನವರಿ 22, 2024ರಂದು ಈ ಕಾರ್ಯಕ್ರಮ ನಡೆಯಲಿದೆ. ಈ ನಡುವೆ 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಪ್ರಿಂಟ್ ಮಾಡಿದೆ ಎಂಬ ಸುದ್ದಿ ಹಬ್ಬಿದೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ‘ಮಹಾತ್ಮ ಗಾಂಧಿಯ ಫೋಟೋ ಬದಲು ರಾಮನ ಫೋಟೋ ಮತ್ತು ಕೆಂಪು ಕೋಟೆಯ ಫೋಟೋ ಬದಲು ರಾಮ ಮಂದಿರ ಫೋಟೋ’ ಇರುವ 500 ರೂಪಾಯಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಳ್ಳಲಾಗ್ತಿದೆ.

ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗ್ತಿರುವ ಫೋಟೋ

‘Manoj Dhareshwar’ (ಮನೋಜ್ ಧರೇಶ್ವರ್) ಎಂಬ ಫೇಸ್‌ಬುಕ್ ಬಳಕೆದಾರ ಜನವರಿ 16,2024ರಂದು ತಮ್ಮ ಖಾತೆಯಲ್ಲಿ ಈ ಫೋಟೋ ಮತ್ತು ಸುದ್ದಿ ಹಂಚಿಕೊಂಡಿದ್ದರು.

ಮತ್ತೋರ್ವ ಫೇಸ್‌ಬುಕ್ ಬಳಕೆದಾರ ‘DrxRJ Gupta’ಎಂಬವರು ಕೂಡ ಜನವರಿ 8,2024ರಂದು ಇದೇ ರೀತಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಂಡು “ಮೋದಿ ಸರ್ಕಾರದ ನಿರ್ಧಾರ, ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲು ನಿರ್ಧರಿಸಲಾಗಿದೆ” ಎಂದು ಬರೆದುಕೊಂಡಿದ್ದರು.

‘karatagi_troll_market’_ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 10ರಂದು 500 ರೂಪಾಯಿ ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲಾಗಿದೆ ಎಂದು ಫೋಟೋ ಹಂಚಿಕೊಳ್ಳಲಾಗಿತ್ತು. ಇದಕ್ಕೆ ಹಲವರು “ಸರಿಯಾದ ನಿರ್ಧಾರ, ಜೈಶ್ರೀರಾಂ” ಎಂಬ ಕಾಮೆಂಟ್‌ಗಳನ್ನು ಹಾಕಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದೆ. ಈ ವೇಳೆ ಕರೆನ್ಸಿ ನೋಟುಗಳಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ಪ್ರಿಂಟ್ ಮಾಡುವ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಆಗಲಿ, ಭಾರತ ಸರ್ಕಾರವಾಗಲಿ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಥವಾ ಇತರ ಅಧಿಕಾರಿಗಳು ಈ ಕುರಿತು ಯಾವುದೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿಯ ಕುರಿತು ನಾವು ಆರ್‌ಬಿಐ ವಕ್ತಾರ ಯೋಗಿಶ್ ದಯಾಳ್ ಅವರನ್ನು ಮಾತನಾಡಿಸಿದಾಗ ಅವರು, “ಈ ಬಗ್ಗೆ ಆರ್‌ಬಿಐಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾಗಿ ಖ್ಯಾತ ಸುಳ್ಳು ಸುದ್ದಿ ಪತ್ತೆ ವೆಬ್‌ಸೈಟ್ Boom (ಬೂಮ್) ವರದಿ ಮಾಡಿದೆ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಇದುವರೆಗೆ (ಜನವರಿ16,2024) 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ಮಹಾತ್ಮ ಗಾಂಧಿ ಮತ್ತು ಕೆಂಪುಕೋಟೆಯ ಫೋಟೋಗಳು ಹಾಗೆಯೇ ಇದೆ. ಯಾವುದೇ ಬದಲಾವಣೆ ಆಗಿಲ್ಲ. ಈ ಕುರಿತ ಸ್ಕ್ರೀನ್ ಶಾಟ್‌ಗಳು ಇಲ್ಲಿದೆ.

ಲಭ್ಯವಿರುವ ಖಚಿತ ಮೂಲಗಳನ್ನು ಮತ್ತು ಮಾಹಿತಿಗಳನ್ನು ನಾನು ಗೌರಿ.ಕಾಂ ಪರಿಶೀಲಿಸಿ ನೋಡಿದಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿರುವ ರಾಮ ಮತ್ತು ರಾಮ ಮಂದಿರ ಫೋಟೋಗಳಿರುವ ಕರೆನ್ಸಿ ನೋಟಿನ ಫೋಟೋ ಮಾರ್ಪ್‌ ಮಾಡಿರುವಂತದ್ದು, ನಕಲಿ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...