Homeಕರೋನಾ ತಲ್ಲಣಮೊದಲ ಬಾರಿಗೆ ಒಂದೇ ದಿನದಲ್ಲಿ 1.07 ಲಕ್ಷ ಕೊರೊನಾ ಪ್ರಕರಣ ದಾಖಲು

ಮೊದಲ ಬಾರಿಗೆ ಒಂದೇ ದಿನದಲ್ಲಿ 1.07 ಲಕ್ಷ ಕೊರೊನಾ ಪ್ರಕರಣ ದಾಖಲು

- Advertisement -
- Advertisement -

ಕೊರೊನಾ ಎರಡನೆ ಅಲೆ ದೇಶದಾದ್ಯಂತ ಪ್ರಾರಂಭವಾಗಿದ್ದು, ಕೇಂದ್ರ ಸರ್ಕಾರ ಮುಂದಿನ ನಾಲ್ಕು ವಾರಗಳು “ಬಹಳ ನಿರ್ಣಾಯಕ” ಎಂದು ಈಗಾಗಲೆ ಎಚ್ಚರಿಸಿದೆ. ಮಂಗಳವಾರ 1.07 ಲಕ್ಷ ಜನರು ಕೊರೊನಾ ಸೋಂಕಿಗೆ ಒಳಗಾಗುವುದರ ಮೂಲಕ ಒಂದೇ ದಿನದಲ್ಲಿ ದೇಶವು ಅತೀ ಹೆಚ್ಚು ಪ್ರಕರಣ ದಾಖಲಿಸಿದೆ.

ಕೊರೊನಾ ಕಳೆದ ವರ್ಷಕ್ಕಿಂತ ವೇಗವಾಗಿ ಹರಡುತ್ತಿದೆ ಎಂದು ಕೇಂದ್ರವು ಎಚ್ಚರಿಸಿದ್ದು, ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್, ರೋಗವನ್ನು ಎದುರಿಸಲು ಮಾಸ್ಕ್‌ ಧರಿಸುವಂತಹ ಕ್ರಮಗಳಿಗೆ ಜನರು ‘ತಿಲಾಂಜಲಿ’ ನೀಡಿದ್ದಾರೆ ಎಂದು ತೋರುತ್ತದೆ ಎಂದು ಹೇಳಿದ್ದಾರೆ.

ದೇಶದಾದ್ಯಂತ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದೆಯಾದರೂ, ಅದೂ ಎಲ್ಲಾ ವಯೋಮಾನದವರಿಗೆ ನೀಡುವ ಕ್ರಮವನ್ನು ಸರ್ಕಾರ ಇನ್ನೂ ಕೈಗೊಂಡಿಲ್ಲ. ಪ್ರಸ್ತುತ, 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ತೆಗೆದುಕೊಳ್ಳಲು ಅನುಮತಿ ಇದೆ.

ಇದನ್ನೂ ಓದಿ: ಕೊರೊನಾ: ಬೆಂಗಳೂರು ವಿವಿ 15 ದಿನ ರಜೆ; ಸಾರಿಗೆ ಮುಷ್ಕರ ಹಿನ್ನಲೆ ಪರೀಕ್ಷೆ ಮುಂದೂಡಿಕೆ

ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಘೋಷಿಸಿದ ದೈನಂದಿನ ಸಂಖ್ಯೆಗಳ ಪ್ರಕಾರ, ಮಂಗಳವಾರ ವರದಿಯಾದ ಹೊಸ ಪ್ರಕರಣಗಳ ಪ್ರಮಾಣವು 1.07 ಲಕ್ಷಗಳನ್ನು ದಾಟಿದೆ. ದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಇದು ಎರಡನೇ ಬಾರಿಗೆ 1 ಲಕ್ಷಕ್ಕಿಂತಲೂ ಹೆಚ್ಚಿನ ಸೋಂಕಿತ ಪ್ರಕರಣಗಳು ದಾಖಲಾಗಿದೆ.

ಪ್ರಕರಣಗಳಲ್ಲಿ ತೀವ್ರ ಏರಿಕೆಯೊಂದಿಗೆ ದೇಶದಲ್ಲಿ ಸಾಂಕ್ರಾಮಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಜನಸಂಖ್ಯೆಯ ಹೆಚ್ಚಿನ ಭಾಗವು ಇನ್ನೂ ವೈರಸ್‌ಗೆ ತುತ್ತಾಗಿದೆ ಎಂದು ಎನ್‌ಐಟಿಐ ಆಯೋಗ್ ಸದಸ್ಯ (ಆರೋಗ್ಯ) ಡಾ.ವಿ.ಕೆ. ಪಾಲ್ ಹೇಳಿದ್ದಾರೆ.

“ಎರಡನೇ ತರಂಗವನ್ನು ನಿಯಂತ್ರಿಸಲು ಜನರ ಭಾಗವಹಿಸುವಿಕೆ ಅತ್ಯಗತ್ಯ. ಮುಂದಿನ ನಾಲ್ಕು ವಾರಗಳು ಬಹಳ ನಿರ್ಣಾಯಕವಾಗಲಿವೆ. ಇಡೀ ದೇಶವು ಒಗ್ಗೂಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ಮಾಡಬೇಕಾಗಿದೆ. ಸಾಂಕ್ರಾಮಿಕದ ತೀವ್ರತೆಯು ಹೆಚ್ಚಾಗಿದೆ ಮತ್ತು ಇದು ಕಳೆದ ಬಾರಿಗಿಂತ ವೇಗವಾಗಿ ಹರಡುತ್ತಿದೆ. ಕೆಲವು ರಾಜ್ಯಗಳ ಸ್ಥಿತಿ ತೀರಾ ಕೆಟ್ಟದಾಗಿದೆ” ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಇದುವರೆಗೂ 1.27 ಕೋಟಿ ಕೊರೊನಾ ಸೋಂಕು ವರದಿಯಾಗಿದ್ದು, 1.17 ಕೋಟಿ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದಾಗಿ ದೇಶದಲ್ಲಿ 1.66 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯು ತಿಳಿಸಿದೆ.

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...