Homeಕರ್ನಾಟಕ'ಮತಗಳ್ಳತನ' ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

‘ಮತಗಳ್ಳತನ’ ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

- Advertisement -
- Advertisement -

ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನದ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಶನಿವಾರ (ನ.8) ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಸಹಿ ಸಂಗ್ರಹ ಅಭಿಯಾನವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಈ ಅಭಿಯಾನ ಇನ್ನೂ ಆಗದ ಪ್ರದೇಶಗಳಲ್ಲಿ ಇನ್ನು 3–4 ದಿನ ಕಾಲಾವಕಾಶ ನೀಡಿ ಮುಂದುವರೆಸಲು ಸೂಚಿಸಲಾಗುವುದು. ಈ ಅಭಿಯಾನದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿರುವ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ಜೊತೆ ಈ ಸಹಿ ಸಂಗ್ರಹಿಸಿರುವ ಅರ್ಜಿಗಳನ್ನು ವಿಮಾನದಲ್ಲಿ ದೆಹಲಿಗೆ ತಲುಪಿಸಲಾಗುವುದು ಎಂದರು.

ಇದೇ 25ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ವತಿಯಿಂದ ಬೃಹತ್ ಸಮಾವೇಶ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಮತಪತ್ರದ ಮೂಲಕ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ

ಚುನಾವಣಾ ಅಕ್ರಮದ ತನಿಖೆಗೆ ಪೂರಕ ದಾಖಲೆ ನೀಡಿ ಎಂದು ಮಾಹಿತಿ ಕೇಳಿದರೆ, ಚುನಾವಣಾ ಆಯೋಗ ನಮ್ಮ ಬಳಿಯೇ ಸಾಕ್ಷಿ ಕೇಳುತ್ತಿದೆ. ಹೀಗಾಗಿ ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆಸಿದ್ದೇವೆ. ಸಹಿ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಎಐಸಿಸಿಯವರು ತಿಳಿಸಿದ್ದು, ಇದರ ಯಶಸ್ಸು ಬಿಎಲ್ಎಗಳು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳದ್ದಾಗಿದೆ. ಈ ಹೋರಾಟ ಹಮ್ಮಿಕೊಂಡಿರುವ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರಿಗೆ ಅಭಿನಂದಿಸುತ್ತೇನೆ” ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಂದೋಲನ

ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ದೇಶದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ, ಮತದಾನದ ಹಕ್ಕು ಕಾಪಾಡಲು ಸಹಿ ಸಂಗ್ರಹದ ಮೂಲಕ ಬೃಹತ್ ಆಂದೋಲನ ನಡೆಸಲಾಗುತ್ತಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾನದ ಅಧ್ಯಯನ ಮಾಡಿದಾಗ, ಅಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಒಂದೇ ಮನೆಯಲ್ಲಿ 80ಕ್ಕೂ ಹೆಚ್ಚು ಮತಗಳನ್ನು ಸೇರಿಸಲಾಗಿತ್ತು. ಒಂದು ಬಾರ್‌ನಲ್ಲಿ 70-80 ಮತದಾರರಿರುವುದನ್ನು ದಾಖಲೆ ಸಮೇತ ಬಹಿರಂಗಪಡಿಸಿ ರಾಹುಲ್ ಗಾಂಧಿ ಅವರು ದೇಶದ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳು ಈ ಅಕ್ರಮದ ಬಗ್ಗೆ ಬೆಳಕು ಚೆಲ್ಲಿ ಇಲ್ಲಿಂದ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದರು. ಈ ಅಕ್ರಮ ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ. ಗಾಂಧಿ ನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರಗಳಿವೆ. ಒಂದು ಕ್ಷೇತ್ರದಲ್ಲಿ ಇರುವ ಮತದಾರರ ಸಂಖ್ಯೆ ಅಷ್ಟೇ ಇದ್ದರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಅಲ್ಪಸಂಖ್ಯಾತರು, ಪರಿಶಿಷ್ಟರು, ಹಿಂದುಳಿದ ವರ್ಗದ ಕುಟುಂಬಗಳ ಸದಸ್ಯರ ಮತವನ್ನು ಬೇರೆ ಬೇರೆ ಬೂತ್‌ಗಳಿಗೆ ಹಾಕಿ ವರ್ಗಾವಣೆ ಮಾಡಿರುವ ಷಡ್ಯಂತ್ರ ಬಯಲಾಗಿದೆ ಎಂದು ವಿವರಿಸಿದರು.

ಆಳಂದ ಕ್ಷೇತ್ರದ ಅಕ್ರಮದ ತನಿಖೆಯ ವರದಿ ಶೀಘ್ರ :

ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕರು ಚುನಾವಣೆಗೂ ಮುನ್ನವೇ ಅಕ್ರಮದ ಬಗ್ಗೆ ದೂರು ನೀಡಿ ಆಯೋಗದ ಗಮನ ಸೆಳೆಯುತ್ತಾರೆ. ನಂತರ ಈ ಅಕ್ರಮದ ಬಗ್ಗೆ ತನಿಖೆ ಆರಂಭವಾಗುತ್ತದೆ. ಚುನಾವಣಾ ಆಯೋಗವು ಅಧಿಕೃತ ದೂರು ದಾಖಲಿಸಿಕೊಳ್ಳುತ್ತದೆ. ಆಳಂದದಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಮತದಾರಪಟ್ಟಿಯಿಂದ ಹೆಸರು ಕೈ ಬಿಡುವಂತೆ ನಕಲಿ ಅರ್ಜಿ ಸಲ್ಲಿಸಲಾಗಿತ್ತು. ಕೇವಲ 17 ನಿಮಿಷಗಳಲ್ಲಿ 14 ಮತಗಳನ್ನು ಬೆಳಗಿನ ಜಾವದಲ್ಲಿ ತೆಗೆದುಹಾಕಲಾಗಿರುತ್ತದೆ. ಈ ರೀತಿ 6 ಸಾವಿರ ಮತ ತೆಗೆಯಲು ಪ್ರಯತ್ನಿಸುತ್ತಾರೆ. ಈ ವಿಚಾರವಾಗಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಈ ತನಿಖೆ ಮೂಲಕ ಹೊರ ರಾಜ್ಯದವರು ಹಾಗೂ ಅವರ ದೂರವಾಣಿ ಸಂಖ್ಯೆ ಮೂಲಕ ಮತಗಳನ್ನು ತೆಗೆಸಲು ಷಡ್ಯಂತ್ರ ಮಾಡಲಾಗಿತ್ತು ಎಂಬುವುದು ತಿಳಿದು ಬಂದಿದೆ ಎಂದರು.

ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗ ಕೆಲಸ ಮಾಡಬೇಕಾಗುತ್ತದೆ. 256 ಬೂತ್‌ಗಳಲ್ಲಿ 7,250 ಮತಗಳನ್ನು ಫಾರಂ 7 ದುರುಪಯೋಗದ ಮೂಲಕ ಡಿಲೀಟ್ ಮಾಡಿಸಿದ್ದರು. ಉತ್ತರ ಪ್ರದೇಶ, ಬಿಹಾರ, ದೆಹಲಿ, ಜಾರ್ಖಂಡ್ ರಾಜ್ಯಗಳ ಜನರ ಮೊಬೈಲ್‌ನಿಂದ ಈ ಅರ್ಜಿ ಸಲ್ಲಿಕೆಯಾಗುತ್ತವೆ. ಈ ಮತದಾರ ಪಟ್ಟಿಯಿಂದ ಹೆಸರು ರದ್ದಾದ 151 ಮತದಾರರು ಫೆ.23ರಂದು ದೂರು ನೀಡುತ್ತಾರೆ. ಅಂದೇ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗುತ್ತದೆ. ಈ ಪ್ರಕರಣದ ತನಿಖೆ ವೇಳೆ ತನಿಖಾಧಿಕಾರಿಗಳು ತಮಗೆ ಬೇಕಾದ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ 12 ಬಾರಿ ಪತ್ರ ಬರೆದಿದ್ದರೂ ಚುನಾವಣಾ ಆಯೋಗವು ಯಾವುದೇ ಮಾಹಿತಿ ನೀಡಿಲ್ಲ. ತನಿಖಾಧಿಕಾರಿಗಳು ಹೊರ ರಾಜ್ಯದ 9 ಮೊಬೈಲ್ ಸಂಖ್ಯೆಗಳನ್ನು ಪತ್ತೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರು ಮತದಾರ ಪಟ್ಟಿ ಸೇರಿದಂತೆ ಅನೇಕ ದಾಖಲೆಗಳನ್ನು ಸುಟ್ಟು ಹಾಕಿರುವ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ಪ್ರಕರಣದಲ್ಲಿ ಒಂದು ಮತ ಡಿಲೀಟ್ ಆದರೆ ಅದಕ್ಕೆ 80 ರೂಪಾಯಿ ಹಣ ನೀಡಲಾಗಿದೆ ಎಂಬ ಅಂಶವೂ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಚಿಲುಮೆ ಸಂಸ್ಥೆಯನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬುದನ್ನು ನಾವು ಬೆಳಕಿಗೆ ತಂದಿದ್ದೆವು. ಈ ಪ್ರಕರಣದ ತನಿಖಾ ವರದಿ ಶೀಘ್ರದಲ್ಲೇ ಬರಲಿದೆ ಎಂದು ಹೇಳಿದರು.

ಮೊದಲು ದಾಖಲೆ ನೀಡಲಿ :

ಮತಗಳ್ಳತನ ಆರೋಪಗಳ ಬಗ್ಗೆ ಕಾಂಗ್ರೆಸ್ ಎಲ್ಲೂ ಅಫಿಡವಿಟ್ ಸಲ್ಲಿಸಿಲ್ಲ ಚುನಾವಣಾ ಆಯೋಗ, ನ್ಯಾಯಾಲಯದ ಮೆಟ್ಟಿಲೂ ಏರಿಲ್ಲ ಯಾಕೆ ಎಂದು ಕೇಳಿದಾಗ, ನಾವು ಚುನಾವಣಾ ಅಯೋಗದ ಬಳಿ ಪೂರಕ ದಾಖಲೆಗಳನ್ನು ಕೇಳುತ್ತಿದ್ದೇವೆ. ಚುನಾವಣಾ ಆಯೋಗದ ಮಾಹಿತಿ ಸಾರ್ವಜನಿಕರಿಗೆ ಮುಕ್ತವಾಗಿರಬೇಕು. ಅವರು ಅಗತ್ಯ ಮಾಹಿತಿ ನೀಡಬೇಕು. ಆದರೆ ಅವರು ಈ ಮಾಹಿತಿ ನೀಡುತ್ತಿಲ್ಲ. ನಾವು ತನಿಖೆ ಮಾಡಿ ಸಂಗ್ರಹಿಸಿರುವ ಮಾಹಿತಿಗಳನ್ನು ಬಹಿರಂಗಪಡಿಸಿದ್ದೇವೆ. ನಾನೇ ಹೋಗಿ ಮಾಹಿತಿ ನೀಡುವಂತೆ ಅರ್ಜಿ ಕೊಟ್ಟಿದ್ದರೂ ಅವರೇ ನನ್ನ ಬಳಿ ದಾಖಲೆ ಕೇಳುತ್ತಿದ್ದಾರೆ. ಮಾಹಿತಿ ಕೇಳುವ ಹಕ್ಕು ನಮಗಿದೆ. ಆ ಮಾಹಿತಿಗಳನ್ನು ಕೊಡಬೇಕಾಗಿರುವುದು ಅವರ ಕರ್ತವ್ಯ. ಅವರು ಮೊದಲು ದಾಖಲೆ ನೀಡಲಿ. ಆಮೇಲೆ ನಾವು ಅಫಿಡವಿಟ್ ಸಲ್ಲಿಸುತ್ತೇವೆ ಎಂದರು.

ನಿಮ್ಮ ಆರೋಪಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕೇಳಿದಾಗ, ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. 300 ಸಂಸದರು ಕೇಂದ್ರ ಚುನಾವಣಾ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇವತ್ತಿನವರೆಗೂ ಅದರ ಬಗ್ಗೆ ಆಯೋಗ ಪ್ರತಿಕ್ರಿಯೆ ನೀಡಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿಲ್ಲ. ಹೊಸದಾಗಿ ಎಸ್ಐಆರ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿದರೆ ಯಾರ ಹೆಸರು ಆಚೆ ಬರಲಿದೆ ಎಂದು ಆಯೋಗದವರಿಗೂ ಗೊತ್ತಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಸವಾರಿ ಸಮಯದಲ್ಲಿ ಕಾಲು ಹಿಡಿಯಲು ಪ್ರಯತ್ನಿಸಿದ ರಾಪಿಡೋ ಚಾಲಕ: ಯುವತಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...