Homeಕರ್ನಾಟಕ'ಮತಗಳ್ಳತನ' ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

‘ಮತಗಳ್ಳತನ’ ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

- Advertisement -
- Advertisement -

ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನದ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಶನಿವಾರ (ನ.8) ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಸಹಿ ಸಂಗ್ರಹ ಅಭಿಯಾನವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಈ ಅಭಿಯಾನ ಇನ್ನೂ ಆಗದ ಪ್ರದೇಶಗಳಲ್ಲಿ ಇನ್ನು 3–4 ದಿನ ಕಾಲಾವಕಾಶ ನೀಡಿ ಮುಂದುವರೆಸಲು ಸೂಚಿಸಲಾಗುವುದು. ಈ ಅಭಿಯಾನದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿರುವ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ಜೊತೆ ಈ ಸಹಿ ಸಂಗ್ರಹಿಸಿರುವ ಅರ್ಜಿಗಳನ್ನು ವಿಮಾನದಲ್ಲಿ ದೆಹಲಿಗೆ ತಲುಪಿಸಲಾಗುವುದು ಎಂದರು.

ಇದೇ 25ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ವತಿಯಿಂದ ಬೃಹತ್ ಸಮಾವೇಶ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಮತಪತ್ರದ ಮೂಲಕ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ

ಚುನಾವಣಾ ಅಕ್ರಮದ ತನಿಖೆಗೆ ಪೂರಕ ದಾಖಲೆ ನೀಡಿ ಎಂದು ಮಾಹಿತಿ ಕೇಳಿದರೆ, ಚುನಾವಣಾ ಆಯೋಗ ನಮ್ಮ ಬಳಿಯೇ ಸಾಕ್ಷಿ ಕೇಳುತ್ತಿದೆ. ಹೀಗಾಗಿ ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆಸಿದ್ದೇವೆ. ಸಹಿ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಎಐಸಿಸಿಯವರು ತಿಳಿಸಿದ್ದು, ಇದರ ಯಶಸ್ಸು ಬಿಎಲ್ಎಗಳು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳದ್ದಾಗಿದೆ. ಈ ಹೋರಾಟ ಹಮ್ಮಿಕೊಂಡಿರುವ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರಿಗೆ ಅಭಿನಂದಿಸುತ್ತೇನೆ” ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಂದೋಲನ

ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ದೇಶದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ, ಮತದಾನದ ಹಕ್ಕು ಕಾಪಾಡಲು ಸಹಿ ಸಂಗ್ರಹದ ಮೂಲಕ ಬೃಹತ್ ಆಂದೋಲನ ನಡೆಸಲಾಗುತ್ತಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾನದ ಅಧ್ಯಯನ ಮಾಡಿದಾಗ, ಅಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಒಂದೇ ಮನೆಯಲ್ಲಿ 80ಕ್ಕೂ ಹೆಚ್ಚು ಮತಗಳನ್ನು ಸೇರಿಸಲಾಗಿತ್ತು. ಒಂದು ಬಾರ್‌ನಲ್ಲಿ 70-80 ಮತದಾರರಿರುವುದನ್ನು ದಾಖಲೆ ಸಮೇತ ಬಹಿರಂಗಪಡಿಸಿ ರಾಹುಲ್ ಗಾಂಧಿ ಅವರು ದೇಶದ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳು ಈ ಅಕ್ರಮದ ಬಗ್ಗೆ ಬೆಳಕು ಚೆಲ್ಲಿ ಇಲ್ಲಿಂದ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದರು. ಈ ಅಕ್ರಮ ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ. ಗಾಂಧಿ ನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಅನೇಕ ಕ್ಷೇತ್ರಗಳಿವೆ. ಒಂದು ಕ್ಷೇತ್ರದಲ್ಲಿ ಇರುವ ಮತದಾರರ ಸಂಖ್ಯೆ ಅಷ್ಟೇ ಇದ್ದರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಅಲ್ಪಸಂಖ್ಯಾತರು, ಪರಿಶಿಷ್ಟರು, ಹಿಂದುಳಿದ ವರ್ಗದ ಕುಟುಂಬಗಳ ಸದಸ್ಯರ ಮತವನ್ನು ಬೇರೆ ಬೇರೆ ಬೂತ್‌ಗಳಿಗೆ ಹಾಕಿ ವರ್ಗಾವಣೆ ಮಾಡಿರುವ ಷಡ್ಯಂತ್ರ ಬಯಲಾಗಿದೆ ಎಂದು ವಿವರಿಸಿದರು.

ಆಳಂದ ಕ್ಷೇತ್ರದ ಅಕ್ರಮದ ತನಿಖೆಯ ವರದಿ ಶೀಘ್ರ :

ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕರು ಚುನಾವಣೆಗೂ ಮುನ್ನವೇ ಅಕ್ರಮದ ಬಗ್ಗೆ ದೂರು ನೀಡಿ ಆಯೋಗದ ಗಮನ ಸೆಳೆಯುತ್ತಾರೆ. ನಂತರ ಈ ಅಕ್ರಮದ ಬಗ್ಗೆ ತನಿಖೆ ಆರಂಭವಾಗುತ್ತದೆ. ಚುನಾವಣಾ ಆಯೋಗವು ಅಧಿಕೃತ ದೂರು ದಾಖಲಿಸಿಕೊಳ್ಳುತ್ತದೆ. ಆಳಂದದಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಮತದಾರಪಟ್ಟಿಯಿಂದ ಹೆಸರು ಕೈ ಬಿಡುವಂತೆ ನಕಲಿ ಅರ್ಜಿ ಸಲ್ಲಿಸಲಾಗಿತ್ತು. ಕೇವಲ 17 ನಿಮಿಷಗಳಲ್ಲಿ 14 ಮತಗಳನ್ನು ಬೆಳಗಿನ ಜಾವದಲ್ಲಿ ತೆಗೆದುಹಾಕಲಾಗಿರುತ್ತದೆ. ಈ ರೀತಿ 6 ಸಾವಿರ ಮತ ತೆಗೆಯಲು ಪ್ರಯತ್ನಿಸುತ್ತಾರೆ. ಈ ವಿಚಾರವಾಗಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಈ ತನಿಖೆ ಮೂಲಕ ಹೊರ ರಾಜ್ಯದವರು ಹಾಗೂ ಅವರ ದೂರವಾಣಿ ಸಂಖ್ಯೆ ಮೂಲಕ ಮತಗಳನ್ನು ತೆಗೆಸಲು ಷಡ್ಯಂತ್ರ ಮಾಡಲಾಗಿತ್ತು ಎಂಬುವುದು ತಿಳಿದು ಬಂದಿದೆ ಎಂದರು.

ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗ ಕೆಲಸ ಮಾಡಬೇಕಾಗುತ್ತದೆ. 256 ಬೂತ್‌ಗಳಲ್ಲಿ 7,250 ಮತಗಳನ್ನು ಫಾರಂ 7 ದುರುಪಯೋಗದ ಮೂಲಕ ಡಿಲೀಟ್ ಮಾಡಿಸಿದ್ದರು. ಉತ್ತರ ಪ್ರದೇಶ, ಬಿಹಾರ, ದೆಹಲಿ, ಜಾರ್ಖಂಡ್ ರಾಜ್ಯಗಳ ಜನರ ಮೊಬೈಲ್‌ನಿಂದ ಈ ಅರ್ಜಿ ಸಲ್ಲಿಕೆಯಾಗುತ್ತವೆ. ಈ ಮತದಾರ ಪಟ್ಟಿಯಿಂದ ಹೆಸರು ರದ್ದಾದ 151 ಮತದಾರರು ಫೆ.23ರಂದು ದೂರು ನೀಡುತ್ತಾರೆ. ಅಂದೇ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗುತ್ತದೆ. ಈ ಪ್ರಕರಣದ ತನಿಖೆ ವೇಳೆ ತನಿಖಾಧಿಕಾರಿಗಳು ತಮಗೆ ಬೇಕಾದ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ 12 ಬಾರಿ ಪತ್ರ ಬರೆದಿದ್ದರೂ ಚುನಾವಣಾ ಆಯೋಗವು ಯಾವುದೇ ಮಾಹಿತಿ ನೀಡಿಲ್ಲ. ತನಿಖಾಧಿಕಾರಿಗಳು ಹೊರ ರಾಜ್ಯದ 9 ಮೊಬೈಲ್ ಸಂಖ್ಯೆಗಳನ್ನು ಪತ್ತೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರು ಮತದಾರ ಪಟ್ಟಿ ಸೇರಿದಂತೆ ಅನೇಕ ದಾಖಲೆಗಳನ್ನು ಸುಟ್ಟು ಹಾಕಿರುವ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ಪ್ರಕರಣದಲ್ಲಿ ಒಂದು ಮತ ಡಿಲೀಟ್ ಆದರೆ ಅದಕ್ಕೆ 80 ರೂಪಾಯಿ ಹಣ ನೀಡಲಾಗಿದೆ ಎಂಬ ಅಂಶವೂ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಚಿಲುಮೆ ಸಂಸ್ಥೆಯನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬುದನ್ನು ನಾವು ಬೆಳಕಿಗೆ ತಂದಿದ್ದೆವು. ಈ ಪ್ರಕರಣದ ತನಿಖಾ ವರದಿ ಶೀಘ್ರದಲ್ಲೇ ಬರಲಿದೆ ಎಂದು ಹೇಳಿದರು.

ಮೊದಲು ದಾಖಲೆ ನೀಡಲಿ :

ಮತಗಳ್ಳತನ ಆರೋಪಗಳ ಬಗ್ಗೆ ಕಾಂಗ್ರೆಸ್ ಎಲ್ಲೂ ಅಫಿಡವಿಟ್ ಸಲ್ಲಿಸಿಲ್ಲ ಚುನಾವಣಾ ಆಯೋಗ, ನ್ಯಾಯಾಲಯದ ಮೆಟ್ಟಿಲೂ ಏರಿಲ್ಲ ಯಾಕೆ ಎಂದು ಕೇಳಿದಾಗ, ನಾವು ಚುನಾವಣಾ ಅಯೋಗದ ಬಳಿ ಪೂರಕ ದಾಖಲೆಗಳನ್ನು ಕೇಳುತ್ತಿದ್ದೇವೆ. ಚುನಾವಣಾ ಆಯೋಗದ ಮಾಹಿತಿ ಸಾರ್ವಜನಿಕರಿಗೆ ಮುಕ್ತವಾಗಿರಬೇಕು. ಅವರು ಅಗತ್ಯ ಮಾಹಿತಿ ನೀಡಬೇಕು. ಆದರೆ ಅವರು ಈ ಮಾಹಿತಿ ನೀಡುತ್ತಿಲ್ಲ. ನಾವು ತನಿಖೆ ಮಾಡಿ ಸಂಗ್ರಹಿಸಿರುವ ಮಾಹಿತಿಗಳನ್ನು ಬಹಿರಂಗಪಡಿಸಿದ್ದೇವೆ. ನಾನೇ ಹೋಗಿ ಮಾಹಿತಿ ನೀಡುವಂತೆ ಅರ್ಜಿ ಕೊಟ್ಟಿದ್ದರೂ ಅವರೇ ನನ್ನ ಬಳಿ ದಾಖಲೆ ಕೇಳುತ್ತಿದ್ದಾರೆ. ಮಾಹಿತಿ ಕೇಳುವ ಹಕ್ಕು ನಮಗಿದೆ. ಆ ಮಾಹಿತಿಗಳನ್ನು ಕೊಡಬೇಕಾಗಿರುವುದು ಅವರ ಕರ್ತವ್ಯ. ಅವರು ಮೊದಲು ದಾಖಲೆ ನೀಡಲಿ. ಆಮೇಲೆ ನಾವು ಅಫಿಡವಿಟ್ ಸಲ್ಲಿಸುತ್ತೇವೆ ಎಂದರು.

ನಿಮ್ಮ ಆರೋಪಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕೇಳಿದಾಗ, ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. 300 ಸಂಸದರು ಕೇಂದ್ರ ಚುನಾವಣಾ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇವತ್ತಿನವರೆಗೂ ಅದರ ಬಗ್ಗೆ ಆಯೋಗ ಪ್ರತಿಕ್ರಿಯೆ ನೀಡಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿಲ್ಲ. ಹೊಸದಾಗಿ ಎಸ್ಐಆರ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿದರೆ ಯಾರ ಹೆಸರು ಆಚೆ ಬರಲಿದೆ ಎಂದು ಆಯೋಗದವರಿಗೂ ಗೊತ್ತಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಸವಾರಿ ಸಮಯದಲ್ಲಿ ಕಾಲು ಹಿಡಿಯಲು ಪ್ರಯತ್ನಿಸಿದ ರಾಪಿಡೋ ಚಾಲಕ: ಯುವತಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...