Homeಕರೋನಾ ತಲ್ಲಣಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ.

- Advertisement -
- Advertisement -

ಭಾರತದ ಮೊದಲ ಸ್ಥಳೀಯ ಕೊರೊನಾ ಲಸಿಕೆ, ಕೊವಾಕ್ಸಿನ್‌ ಕ್ಲಿನಿಕಲ್ ಪ್ರಯೋಗಗಳಿಗಾಗಿ ಏಮ್ಸ್ ದಾಖಲಾಗಲು ಮುಂದಾದವರಲ್ಲಿ ಸುಮಾರು 20% ರಷ್ಟು ಜನರು ಈಗಾಗಲೇ ಕೊರೊನಾ ವೈರಸ್ ವಿರುದ್ಧ ಪ್ರತಿಕಾಯಗಳನ್ನು (antibodies) ಹೊಂದಿದ್ದಾರೆಂದು ತಿಳಿದುಬಂದಿದೆ. ಹಾಗಾಗಿ ಅವರು ಪ್ರಯೋಗಗಳಿಗೆ ಅನರ್ಹರಾಗಿದ್ದಾರೆ.

ಏಮ್ಸ್ ಲಸಿಕೆ ಪ್ರಯೋಗಕ್ಕೆ ಭಾಗವಹಿಸುವವರನ್ನು ದಾಖಲಿಸಲು ಪ್ರಾರಂಭಿಸಿದ ಎರಡು ವಾರಗಳ ನಂತರ, ಸಂಸ್ಥೆಯು 80 ಕ್ಕೂ ಹೆಚ್ಚು ಸ್ವಯಂಸೇವಕರನ್ನು ಪರೀಕ್ಷಿಸಿದೆ. ಆದರೆ ಕೇವಲ 16 ಜನರನ್ನು ಮಾತ್ರ ಪ್ರಯೋಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೃದಯ, ಮೂತ್ರಪಿಂಡ, ಪಿತ್ತಜನಕಾಂಗ ಅಥವಾ ಶ್ವಾಸಕೋಶದ ಕಾಯಿಲೆ ಮತ್ತು ಅನಿಯಂತ್ರಿತ ಮಧುಮೇಹ ಅಥವಾ ಅಧಿಕ ರಕ್ತದೊತ್ತಡವಿಲ್ಲದ 18 ರಿಂದ 55 ವರ್ಷದೊಳಗಿನವರು ಅಧ್ಯಯನಕ್ಕೆ ಅರ್ಹರಾಗಿದ್ದಾರೆ.

ನೇಮಕಾತಿಗೆ ಮುಂಚಿತವಾಗಿ ಸ್ವಯಂಸೇವಕರ ಮೇಲೆ ಯಕೃತ್ತು, ಮೂತ್ರಪಿಂಡದ ಕಾರ್ಯಕೊರೊನಾ ಪರೀಕ್ಷೆ ಮತ್ತು ಕ್ಷಿಪ್ರ ಪ್ರತಿಕಾಯ ಪರೀಕ್ಷೆಗಳಂತಹ (rapid antibody tests) ವಾಡಿಕೆಯ ತನಿಖೆ ನಡೆಸಲಾಗುತ್ತದೆ.

ನಾವು ಆರೋಗ್ಯವಂತ ಸ್ವಯಂಸೇವಕರನ್ನು ಮಾತ್ರ ನೇಮಿಸಿಕೊಳ್ಳುವುದರಿಂದ ಅನರ್ಹರ ಪ್ರಮಾಣ ತುಂಬಾ ಹೆಚ್ಚಾಗಿದೆ. ನೊಂದಾಯಿಸಿಕೊಂಡ ಸ್ವಯಂಸೇವಕರಲ್ಲಿ ನಾವು ಸುಮಾರು 20%  ಪ್ರತಿಕಾಯ (ಆಂಟಿಬಾಡಿ) ಹೊಂದಿರುವವರನ್ನು ಕಂಡುಕೊಂಡಿದ್ದೇವೆ. ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮಾನವ ಪ್ರಯೋಗಗಳಲ್ಲಿ ಭಾಗವಹಿಸಲು ವೈದ್ಯಕೀಯ ಸಂಸ್ಥೆಯು ಈವರೆಗೆ 3,500 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಜುಲೈ 24 ರಂದು, 30 ವರ್ಷದ ಯುವಕನಿಗೆ ಕೋವಾಕ್ಸಿನ್‌ನ ಮೊದಲ ಪ್ರಮಾಣವನ್ನು ನೀಡಲಾಯಿತು. ಇಂಟ್ರಾಮಸ್ಕುಲರ್ ಇಂಜೆಕ್ಷನ್ ಮೂಲಕ ಅವರಿಗೆ 0.5 ಮಿಲಿ ನೀಡಲಾಯಿತು.

“ಲಸಿಕೆ ನೀಡಿ ಮೊದಲ ವಾರವನ್ನು ಪೂರ್ಣಗೊಳಿಸಲಾಗಿದೆ. ಮತ್ತು ಇಲ್ಲಿಯವರೆಗೆ ಯಾವುದೇ ಅಸ್ವಸ್ಥತೆಯನ್ನು ವರದಿ ಮಾಡಿಲ್ಲ. ಲಸಿಕೆಯ ಮುಂದಿನ ಪ್ರಮಾಣವನ್ನು ನೀಡುವ ಮೊದಲು ಮುಂದಿನ ಶುಕ್ರವಾರದವರೆಗೆ ನಾವು ಅವರನ್ನು ಮೇಲ್ವಿಚಾರಣೆ ಮಾಡುತ್ತೇವೆ” ಎಂದು ವೈದ್ಯರು ಹೇಳಿದರು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಔಷಧ ಕಂಪನಿ ಭಾರತ್ ಬಯೋಟೆಕ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈ ಮೊದಲು I ಮತ್ತು IIನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ಅನುಮೋದಿಸಿತು.


ಇದನ್ನೂ ಓದಿ: 370 ನೇ ವಿಧಿ ರದ್ಧತಿಯ ಮೊದಲ ವಾರ್ಷಿಕೋತ್ಸವಕ್ಕೆ ಮುಂಚೆಯೇ ಶ್ರೀನಗರದಲ್ಲಿ ಮತ್ತೆ ಕರ್ಫ್ಯೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...