Homeಕರೋನಾ ತಲ್ಲಣಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ.

- Advertisement -
- Advertisement -

ಭಾರತದ ಮೊದಲ ಸ್ಥಳೀಯ ಕೊರೊನಾ ಲಸಿಕೆ, ಕೊವಾಕ್ಸಿನ್‌ ಕ್ಲಿನಿಕಲ್ ಪ್ರಯೋಗಗಳಿಗಾಗಿ ಏಮ್ಸ್ ದಾಖಲಾಗಲು ಮುಂದಾದವರಲ್ಲಿ ಸುಮಾರು 20% ರಷ್ಟು ಜನರು ಈಗಾಗಲೇ ಕೊರೊನಾ ವೈರಸ್ ವಿರುದ್ಧ ಪ್ರತಿಕಾಯಗಳನ್ನು (antibodies) ಹೊಂದಿದ್ದಾರೆಂದು ತಿಳಿದುಬಂದಿದೆ. ಹಾಗಾಗಿ ಅವರು ಪ್ರಯೋಗಗಳಿಗೆ ಅನರ್ಹರಾಗಿದ್ದಾರೆ.

ಏಮ್ಸ್ ಲಸಿಕೆ ಪ್ರಯೋಗಕ್ಕೆ ಭಾಗವಹಿಸುವವರನ್ನು ದಾಖಲಿಸಲು ಪ್ರಾರಂಭಿಸಿದ ಎರಡು ವಾರಗಳ ನಂತರ, ಸಂಸ್ಥೆಯು 80 ಕ್ಕೂ ಹೆಚ್ಚು ಸ್ವಯಂಸೇವಕರನ್ನು ಪರೀಕ್ಷಿಸಿದೆ. ಆದರೆ ಕೇವಲ 16 ಜನರನ್ನು ಮಾತ್ರ ಪ್ರಯೋಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೃದಯ, ಮೂತ್ರಪಿಂಡ, ಪಿತ್ತಜನಕಾಂಗ ಅಥವಾ ಶ್ವಾಸಕೋಶದ ಕಾಯಿಲೆ ಮತ್ತು ಅನಿಯಂತ್ರಿತ ಮಧುಮೇಹ ಅಥವಾ ಅಧಿಕ ರಕ್ತದೊತ್ತಡವಿಲ್ಲದ 18 ರಿಂದ 55 ವರ್ಷದೊಳಗಿನವರು ಅಧ್ಯಯನಕ್ಕೆ ಅರ್ಹರಾಗಿದ್ದಾರೆ.

ನೇಮಕಾತಿಗೆ ಮುಂಚಿತವಾಗಿ ಸ್ವಯಂಸೇವಕರ ಮೇಲೆ ಯಕೃತ್ತು, ಮೂತ್ರಪಿಂಡದ ಕಾರ್ಯಕೊರೊನಾ ಪರೀಕ್ಷೆ ಮತ್ತು ಕ್ಷಿಪ್ರ ಪ್ರತಿಕಾಯ ಪರೀಕ್ಷೆಗಳಂತಹ (rapid antibody tests) ವಾಡಿಕೆಯ ತನಿಖೆ ನಡೆಸಲಾಗುತ್ತದೆ.

ನಾವು ಆರೋಗ್ಯವಂತ ಸ್ವಯಂಸೇವಕರನ್ನು ಮಾತ್ರ ನೇಮಿಸಿಕೊಳ್ಳುವುದರಿಂದ ಅನರ್ಹರ ಪ್ರಮಾಣ ತುಂಬಾ ಹೆಚ್ಚಾಗಿದೆ. ನೊಂದಾಯಿಸಿಕೊಂಡ ಸ್ವಯಂಸೇವಕರಲ್ಲಿ ನಾವು ಸುಮಾರು 20%  ಪ್ರತಿಕಾಯ (ಆಂಟಿಬಾಡಿ) ಹೊಂದಿರುವವರನ್ನು ಕಂಡುಕೊಂಡಿದ್ದೇವೆ. ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮಾನವ ಪ್ರಯೋಗಗಳಲ್ಲಿ ಭಾಗವಹಿಸಲು ವೈದ್ಯಕೀಯ ಸಂಸ್ಥೆಯು ಈವರೆಗೆ 3,500 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಜುಲೈ 24 ರಂದು, 30 ವರ್ಷದ ಯುವಕನಿಗೆ ಕೋವಾಕ್ಸಿನ್‌ನ ಮೊದಲ ಪ್ರಮಾಣವನ್ನು ನೀಡಲಾಯಿತು. ಇಂಟ್ರಾಮಸ್ಕುಲರ್ ಇಂಜೆಕ್ಷನ್ ಮೂಲಕ ಅವರಿಗೆ 0.5 ಮಿಲಿ ನೀಡಲಾಯಿತು.

“ಲಸಿಕೆ ನೀಡಿ ಮೊದಲ ವಾರವನ್ನು ಪೂರ್ಣಗೊಳಿಸಲಾಗಿದೆ. ಮತ್ತು ಇಲ್ಲಿಯವರೆಗೆ ಯಾವುದೇ ಅಸ್ವಸ್ಥತೆಯನ್ನು ವರದಿ ಮಾಡಿಲ್ಲ. ಲಸಿಕೆಯ ಮುಂದಿನ ಪ್ರಮಾಣವನ್ನು ನೀಡುವ ಮೊದಲು ಮುಂದಿನ ಶುಕ್ರವಾರದವರೆಗೆ ನಾವು ಅವರನ್ನು ಮೇಲ್ವಿಚಾರಣೆ ಮಾಡುತ್ತೇವೆ” ಎಂದು ವೈದ್ಯರು ಹೇಳಿದರು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಔಷಧ ಕಂಪನಿ ಭಾರತ್ ಬಯೋಟೆಕ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈ ಮೊದಲು I ಮತ್ತು IIನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ಅನುಮೋದಿಸಿತು.


ಇದನ್ನೂ ಓದಿ: 370 ನೇ ವಿಧಿ ರದ್ಧತಿಯ ಮೊದಲ ವಾರ್ಷಿಕೋತ್ಸವಕ್ಕೆ ಮುಂಚೆಯೇ ಶ್ರೀನಗರದಲ್ಲಿ ಮತ್ತೆ ಕರ್ಫ್ಯೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...