Homeಕರೋನಾ ತಲ್ಲಣಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ.

- Advertisement -
- Advertisement -

ಭಾರತದ ಮೊದಲ ಸ್ಥಳೀಯ ಕೊರೊನಾ ಲಸಿಕೆ, ಕೊವಾಕ್ಸಿನ್‌ ಕ್ಲಿನಿಕಲ್ ಪ್ರಯೋಗಗಳಿಗಾಗಿ ಏಮ್ಸ್ ದಾಖಲಾಗಲು ಮುಂದಾದವರಲ್ಲಿ ಸುಮಾರು 20% ರಷ್ಟು ಜನರು ಈಗಾಗಲೇ ಕೊರೊನಾ ವೈರಸ್ ವಿರುದ್ಧ ಪ್ರತಿಕಾಯಗಳನ್ನು (antibodies) ಹೊಂದಿದ್ದಾರೆಂದು ತಿಳಿದುಬಂದಿದೆ. ಹಾಗಾಗಿ ಅವರು ಪ್ರಯೋಗಗಳಿಗೆ ಅನರ್ಹರಾಗಿದ್ದಾರೆ.

ಏಮ್ಸ್ ಲಸಿಕೆ ಪ್ರಯೋಗಕ್ಕೆ ಭಾಗವಹಿಸುವವರನ್ನು ದಾಖಲಿಸಲು ಪ್ರಾರಂಭಿಸಿದ ಎರಡು ವಾರಗಳ ನಂತರ, ಸಂಸ್ಥೆಯು 80 ಕ್ಕೂ ಹೆಚ್ಚು ಸ್ವಯಂಸೇವಕರನ್ನು ಪರೀಕ್ಷಿಸಿದೆ. ಆದರೆ ಕೇವಲ 16 ಜನರನ್ನು ಮಾತ್ರ ಪ್ರಯೋಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೃದಯ, ಮೂತ್ರಪಿಂಡ, ಪಿತ್ತಜನಕಾಂಗ ಅಥವಾ ಶ್ವಾಸಕೋಶದ ಕಾಯಿಲೆ ಮತ್ತು ಅನಿಯಂತ್ರಿತ ಮಧುಮೇಹ ಅಥವಾ ಅಧಿಕ ರಕ್ತದೊತ್ತಡವಿಲ್ಲದ 18 ರಿಂದ 55 ವರ್ಷದೊಳಗಿನವರು ಅಧ್ಯಯನಕ್ಕೆ ಅರ್ಹರಾಗಿದ್ದಾರೆ.

ನೇಮಕಾತಿಗೆ ಮುಂಚಿತವಾಗಿ ಸ್ವಯಂಸೇವಕರ ಮೇಲೆ ಯಕೃತ್ತು, ಮೂತ್ರಪಿಂಡದ ಕಾರ್ಯಕೊರೊನಾ ಪರೀಕ್ಷೆ ಮತ್ತು ಕ್ಷಿಪ್ರ ಪ್ರತಿಕಾಯ ಪರೀಕ್ಷೆಗಳಂತಹ (rapid antibody tests) ವಾಡಿಕೆಯ ತನಿಖೆ ನಡೆಸಲಾಗುತ್ತದೆ.

ನಾವು ಆರೋಗ್ಯವಂತ ಸ್ವಯಂಸೇವಕರನ್ನು ಮಾತ್ರ ನೇಮಿಸಿಕೊಳ್ಳುವುದರಿಂದ ಅನರ್ಹರ ಪ್ರಮಾಣ ತುಂಬಾ ಹೆಚ್ಚಾಗಿದೆ. ನೊಂದಾಯಿಸಿಕೊಂಡ ಸ್ವಯಂಸೇವಕರಲ್ಲಿ ನಾವು ಸುಮಾರು 20%  ಪ್ರತಿಕಾಯ (ಆಂಟಿಬಾಡಿ) ಹೊಂದಿರುವವರನ್ನು ಕಂಡುಕೊಂಡಿದ್ದೇವೆ. ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮಾನವ ಪ್ರಯೋಗಗಳಲ್ಲಿ ಭಾಗವಹಿಸಲು ವೈದ್ಯಕೀಯ ಸಂಸ್ಥೆಯು ಈವರೆಗೆ 3,500 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಜುಲೈ 24 ರಂದು, 30 ವರ್ಷದ ಯುವಕನಿಗೆ ಕೋವಾಕ್ಸಿನ್‌ನ ಮೊದಲ ಪ್ರಮಾಣವನ್ನು ನೀಡಲಾಯಿತು. ಇಂಟ್ರಾಮಸ್ಕುಲರ್ ಇಂಜೆಕ್ಷನ್ ಮೂಲಕ ಅವರಿಗೆ 0.5 ಮಿಲಿ ನೀಡಲಾಯಿತು.

“ಲಸಿಕೆ ನೀಡಿ ಮೊದಲ ವಾರವನ್ನು ಪೂರ್ಣಗೊಳಿಸಲಾಗಿದೆ. ಮತ್ತು ಇಲ್ಲಿಯವರೆಗೆ ಯಾವುದೇ ಅಸ್ವಸ್ಥತೆಯನ್ನು ವರದಿ ಮಾಡಿಲ್ಲ. ಲಸಿಕೆಯ ಮುಂದಿನ ಪ್ರಮಾಣವನ್ನು ನೀಡುವ ಮೊದಲು ಮುಂದಿನ ಶುಕ್ರವಾರದವರೆಗೆ ನಾವು ಅವರನ್ನು ಮೇಲ್ವಿಚಾರಣೆ ಮಾಡುತ್ತೇವೆ” ಎಂದು ವೈದ್ಯರು ಹೇಳಿದರು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಔಷಧ ಕಂಪನಿ ಭಾರತ್ ಬಯೋಟೆಕ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈ ಮೊದಲು I ಮತ್ತು IIನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ಅನುಮೋದಿಸಿತು.


ಇದನ್ನೂ ಓದಿ: 370 ನೇ ವಿಧಿ ರದ್ಧತಿಯ ಮೊದಲ ವಾರ್ಷಿಕೋತ್ಸವಕ್ಕೆ ಮುಂಚೆಯೇ ಶ್ರೀನಗರದಲ್ಲಿ ಮತ್ತೆ ಕರ್ಫ್ಯೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...