Homeಕರೋನಾ ತಲ್ಲಣಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ.

- Advertisement -
- Advertisement -

ಭಾರತದ ಮೊದಲ ಸ್ಥಳೀಯ ಕೊರೊನಾ ಲಸಿಕೆ, ಕೊವಾಕ್ಸಿನ್‌ ಕ್ಲಿನಿಕಲ್ ಪ್ರಯೋಗಗಳಿಗಾಗಿ ಏಮ್ಸ್ ದಾಖಲಾಗಲು ಮುಂದಾದವರಲ್ಲಿ ಸುಮಾರು 20% ರಷ್ಟು ಜನರು ಈಗಾಗಲೇ ಕೊರೊನಾ ವೈರಸ್ ವಿರುದ್ಧ ಪ್ರತಿಕಾಯಗಳನ್ನು (antibodies) ಹೊಂದಿದ್ದಾರೆಂದು ತಿಳಿದುಬಂದಿದೆ. ಹಾಗಾಗಿ ಅವರು ಪ್ರಯೋಗಗಳಿಗೆ ಅನರ್ಹರಾಗಿದ್ದಾರೆ.

ಏಮ್ಸ್ ಲಸಿಕೆ ಪ್ರಯೋಗಕ್ಕೆ ಭಾಗವಹಿಸುವವರನ್ನು ದಾಖಲಿಸಲು ಪ್ರಾರಂಭಿಸಿದ ಎರಡು ವಾರಗಳ ನಂತರ, ಸಂಸ್ಥೆಯು 80 ಕ್ಕೂ ಹೆಚ್ಚು ಸ್ವಯಂಸೇವಕರನ್ನು ಪರೀಕ್ಷಿಸಿದೆ. ಆದರೆ ಕೇವಲ 16 ಜನರನ್ನು ಮಾತ್ರ ಪ್ರಯೋಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೃದಯ, ಮೂತ್ರಪಿಂಡ, ಪಿತ್ತಜನಕಾಂಗ ಅಥವಾ ಶ್ವಾಸಕೋಶದ ಕಾಯಿಲೆ ಮತ್ತು ಅನಿಯಂತ್ರಿತ ಮಧುಮೇಹ ಅಥವಾ ಅಧಿಕ ರಕ್ತದೊತ್ತಡವಿಲ್ಲದ 18 ರಿಂದ 55 ವರ್ಷದೊಳಗಿನವರು ಅಧ್ಯಯನಕ್ಕೆ ಅರ್ಹರಾಗಿದ್ದಾರೆ.

ನೇಮಕಾತಿಗೆ ಮುಂಚಿತವಾಗಿ ಸ್ವಯಂಸೇವಕರ ಮೇಲೆ ಯಕೃತ್ತು, ಮೂತ್ರಪಿಂಡದ ಕಾರ್ಯಕೊರೊನಾ ಪರೀಕ್ಷೆ ಮತ್ತು ಕ್ಷಿಪ್ರ ಪ್ರತಿಕಾಯ ಪರೀಕ್ಷೆಗಳಂತಹ (rapid antibody tests) ವಾಡಿಕೆಯ ತನಿಖೆ ನಡೆಸಲಾಗುತ್ತದೆ.

ನಾವು ಆರೋಗ್ಯವಂತ ಸ್ವಯಂಸೇವಕರನ್ನು ಮಾತ್ರ ನೇಮಿಸಿಕೊಳ್ಳುವುದರಿಂದ ಅನರ್ಹರ ಪ್ರಮಾಣ ತುಂಬಾ ಹೆಚ್ಚಾಗಿದೆ. ನೊಂದಾಯಿಸಿಕೊಂಡ ಸ್ವಯಂಸೇವಕರಲ್ಲಿ ನಾವು ಸುಮಾರು 20%  ಪ್ರತಿಕಾಯ (ಆಂಟಿಬಾಡಿ) ಹೊಂದಿರುವವರನ್ನು ಕಂಡುಕೊಂಡಿದ್ದೇವೆ. ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮಾನವ ಪ್ರಯೋಗಗಳಲ್ಲಿ ಭಾಗವಹಿಸಲು ವೈದ್ಯಕೀಯ ಸಂಸ್ಥೆಯು ಈವರೆಗೆ 3,500 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಜುಲೈ 24 ರಂದು, 30 ವರ್ಷದ ಯುವಕನಿಗೆ ಕೋವಾಕ್ಸಿನ್‌ನ ಮೊದಲ ಪ್ರಮಾಣವನ್ನು ನೀಡಲಾಯಿತು. ಇಂಟ್ರಾಮಸ್ಕುಲರ್ ಇಂಜೆಕ್ಷನ್ ಮೂಲಕ ಅವರಿಗೆ 0.5 ಮಿಲಿ ನೀಡಲಾಯಿತು.

“ಲಸಿಕೆ ನೀಡಿ ಮೊದಲ ವಾರವನ್ನು ಪೂರ್ಣಗೊಳಿಸಲಾಗಿದೆ. ಮತ್ತು ಇಲ್ಲಿಯವರೆಗೆ ಯಾವುದೇ ಅಸ್ವಸ್ಥತೆಯನ್ನು ವರದಿ ಮಾಡಿಲ್ಲ. ಲಸಿಕೆಯ ಮುಂದಿನ ಪ್ರಮಾಣವನ್ನು ನೀಡುವ ಮೊದಲು ಮುಂದಿನ ಶುಕ್ರವಾರದವರೆಗೆ ನಾವು ಅವರನ್ನು ಮೇಲ್ವಿಚಾರಣೆ ಮಾಡುತ್ತೇವೆ” ಎಂದು ವೈದ್ಯರು ಹೇಳಿದರು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಔಷಧ ಕಂಪನಿ ಭಾರತ್ ಬಯೋಟೆಕ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈ ಮೊದಲು I ಮತ್ತು IIನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ಅನುಮೋದಿಸಿತು.


ಇದನ್ನೂ ಓದಿ: 370 ನೇ ವಿಧಿ ರದ್ಧತಿಯ ಮೊದಲ ವಾರ್ಷಿಕೋತ್ಸವಕ್ಕೆ ಮುಂಚೆಯೇ ಶ್ರೀನಗರದಲ್ಲಿ ಮತ್ತೆ ಕರ್ಫ್ಯೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...