Homeಮುಖಪುಟ1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

- Advertisement -
- Advertisement -

ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 1.84 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿ ದಾಖಲೆ ಸೃಷ್ಟಿಸಿವೆ. ದಿನದಲ್ಲಿ 1027 ಸಾವುಗಳು ಸಂಭವಿಸಿವೆ. ಈ ನಡುವೆಯೇ ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ ಜರುಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ಮುಂಜಾನೆ ಕುಂಭಮೇಳದ ಮೂರನೇ ಮತ್ತು ಅತಿದೊಡ್ಡ ‘ಶಾಹಿ ಸ್ನಾನ’ದ ಸಂದರ್ಭದಲ್ಲಿ ಭಕ್ತರು ಹರಿದ್ವಾರದ ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವರು. ಪ್ರಮುಖ ಘಟನೆಗಳ ವೇಳಾಪಟ್ಟಿ ಪ್ರಕಾರ, ನಾಲ್ಕು ‘ಶಾಹಿ ಸ್ನಾನ’ ಮತ್ತು ಒಂಬತ್ತು ‘ಗಂಗಾ ಸ್ನಾನ’ಗಳು ಈ ವರ್ಷ ಹರಿದ್ವಾರದಲ್ಲಿ ನಡೆಯಲಿದೆ.

ಮಾರ್ಚ್ 11 ರಂದು ಮಹಾಶಿವರಾತ್ರಿಯಂದು ಮೊದಲ ಶಾಹಿ ಸ್ನಾನ ನಡೆದರೆ, ಎರಡನೆಯದು ಏಪ್ರಿಲ್ 12ರ ಸೋಮವಾರ ಸೋಮವತಿ ಅಮಾವಾಸ್ಯೆಯಲ್ಲಿ ನಡೆಯಿತು. ಇಂದು ಮೂರನೇ ಮತ್ತು ಅತಿ ದೊಡ್ಡ ಶಾಹಿ ಸ್ನಾನ ಜರುಗಲಿದೆ. ಹಿಂದೂಗಳ ಪವಿತ್ರ ಆಚರಣೆ ಎಂದು ಕರೆಯಲ್ಪಡುವ ಕುಂಭಮೇಳ ಪ್ರತಿ ವರ್ಷ ಮೂರ್ನಾಲ್ಕು ತಿಂಗಳು ನಡೆಯುತ್ತಿತ್ತು. ಈ ವರ್ಷ ಸಾಂಕ್ರಾಮಿಕದ ಕಾರಣದಿಂದಾಗಿ ಒಂದು ತಿಂಗಳಿಗೆ ಸೀಮಿತಗೊಳಿಸಲಾಗಿದೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಭಕ್ತರು ಮಾಸ್ಕ್ ಧರಿಸಲಿಲ್ಲ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಸಾಧ್ಯವೆಂದು ಕಂಡುಬಂದಿದೆ. ಉತ್ತರಾಖಂಡ ಸರ್ಕಾರದ ಹೇಳಿಕೆಯ ಪ್ರಕಾರ ಸುಮಾರು 35 ಲಕ್ಷ ಜನರು ಭಾಗವಹಿಸಿದ್ದರು ಎನ್ನಲಾಗಿದೆ.

ಇನ್ನೊಂದೆಡೆ ದಿನನಿತ್ಯದ ಪ್ರಕರಣಗಳಲ್ಲಿ ಬಹುದೊಡ್ಡ ಏರಿಕೆಯಾಗಿದೆ. ಕಳೆದ ಆರು ತಿಂಗಳಲ್ಲಿಯೇ ಅತ್ಯಂತ ಹೆಚ್ಚಿನ ಸಾವುಗಳು (1,027) ಸಹ ನಿನ್ನೆ ಒಂದು ದಿನದಲ್ಲಿ ವರದಿಯಾಗಿವೆ. ಒಟ್ಟಾರೆಯಾಗಿ ಭಾರತವು 1.38 ಕೋಟಿ ಪ್ರಕರಣಗಳನ್ನು ದಾಖಲಿಸಿದ್ದು, 1,72,085 ಸಾವುಗಳನ್ನು ಕಂಡಿದೆ.

ಇದೇ ಸಂದರ್ಭದಲ್ಲಿ ಕಳೆದ ವರ್ಷದ ಮಾರ್ಚ್ ಮಧ್ಯಭಾಗದಲ್ಲಿ ತಬ್ಲಿಗಿಗಳು ಹಮ್ಮಿಕೊಂಡಿದ್ದ ಮರ್ಕಜ್ ಮತ್ತು ಈಗಿನ ಕುಂಭಮೇಳಕ್ಕೂ ಹೋಲಿಸುವುದು ಸರಿಯಲ್ಲ ಎಂದು ಉತ್ತರಖಂಡ ಸಿಎಂ ತಿರತ್ ಸಿಂಗ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರ್ಕಜ್‌ನಲ್ಲಿ ಕಿರಿದಾದ ಜಾಗದಲ್ಲಿ, ಕಟ್ಟಡದ ಒಳಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಅದರಲ್ಲಿ ವಿದೇಶಿಯರೂ ಭಾಗವಹಿಸಿದ್ದರು. ಆದರೆ ಕುಂಭಮೇಳವನ್ನು ವಿಶಾಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಮತ್ತು ನಮ್ಮ ಭಕ್ತರು ಮಾತ್ರ ಭಾಗವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ವ್ಯಾಪಕ ವಿರೋಧಗಳು ಕೇಳಿಬಂದಿದ್ದು, ಕಳೆದ ವರ್ಷ ಸಾಂಕ್ರಾಮಿಕ ಇನ್ನು ಆರಂಭಿಕ ಹಂತದಲ್ಲಿತ್ತು. ಸರ್ಕಾರಕ್ಕೆ ಅದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ ಮತ್ತು ಕೇವಲ 3 ಸಾವಿರ ಜನ ಅಲ್ಲಿ ಭಾಗವಹಿಸಿದ್ದರು. ಆದರೆ ಈಗ ಕೊರೊನಾ ಎಂತಹ ಅಪಾಯಕಾರಿ ಸಾಂಕ್ರಾಮಿಕ ಎಂದು ನಮಗೆ ತಿಳಿದಿದೆ, ಆದರೂ ಕುಂಭಮೇಳದಲ್ಲಿ 35 ಲಕ್ಷ ಜನ ಭಾಗವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...